Homeಫ್ಯಾಕ್ಟ್‌ಚೆಕ್Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಪುರ ಗ್ರಾಮದ ಕಲ್ಲೇಶ್ವರ ರಥಕ್ಕೆ ಬೆಂಕಿ ಇಟ್ಟ ಘಟನೆ ಮಾರ್ಚ್‌ 11ರಂದು ಸೋಮವಾರ ನಡೆದಿತ್ತು. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮುಸ್ಲಿಂ ಸಮುದಾಯಕ್ಕೆ ಸೇರಿದವನು ಎಂಬ ರೀತಿಯಲ್ಲಿ ಸುದ್ದಿ ಹರಿಬಿಟ್ಟು ಘಟನೆಗೆ ಕೋಮು ಬಣ್ಣ ಬಳಿಯುವ ಪ್ರಯತ್ನವನ್ನು ಬಿಜೆಪಿ ಹಾಗೂ ಬಲಪಂಥೀಯ ಮಾಧ್ಯಮಗಳು ಮಾಡಿವೆ.

ಬಲಪಂಥೀಯ ಮಾಧ್ಯಮ ‘ಪೋಸ್ಟ್ ಕಾರ್ಡ್’ ಘಟನೆ ಕುರಿತು ಪೋಸ್ಟರ್ ಒಂದನ್ನು ಹರಿಬಿಟ್ಟಿದ್ದು, ಅದರಲ್ಲಿ “ತುಮಕೂರು ಜಿಲ್ಲೆಯ ನಿಟ್ಟೂರಿನ 800 ವರ್ಷಗಳ ಇತಿಹಾಸ ಇರುವ ಶ್ರೀ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ರಥಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಹಿಂದುಗಳು ಮೌನವಾದಷ್ಟು ಅವರ ಅಟ್ಟಹಾಸ ಜಾಸ್ತಿಯಾಗುತ್ತದೆ” ಎಂದು ಬರೆಯಲಾಗಿದೆ.

ಇದೇ ಪ್ರತಿಪಾದನೆಯನ್ನು ರಾಜ್ಯ ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲೂ ಮಾಡಲಾಗಿದ್ದು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಹಿಂದೂ ಧರ್ಮೀಯರ ಮೇಲೆ ಹಾಗೂ ಹಿಂದೂ ದೇವಾಲಯಗಳ ಮೇಲೆ ದಾಳಿ ನಿತ್ಯ ನಿರಂತರ. ಮತಾಂಧ ಖಿಲ್ಜಿ, ಘಜ್ನಿ, ಘೋರಿ ಕಾಲದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದ ಮಾದರಿಯಲ್ಲಿ ತುಮಕೂರಿನ ಗುಬ್ಬಿಯ ನಿಟ್ಟೂರುಪುರದ 800 ವರ್ಷಗಳ ಇತಿಹಾಸ ಹೊಂದಿರುವ ಕಲ್ಲೇಶ್ವರ ಸ್ವಾಮಿಯ ರಥಕ್ಕೆ ಮಟ ಮಟ ಮಧ್ಯಾಹ್ನವೇ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ, ಇದು ನಿಮ್ಮ ಓಲೈಕೆ ಹಾಗೂ ಅರಾಜಕತೆಯ ಆಡಳಿತದ ದುಷ್ಪರಿಣಾಮ. ಹಿಂದೂ ಧರ್ಮ, ಹಿಂದೂ ದೇವಾಲಯ, ಹಿಂದೂಗಳ ಮೇಲಿನ ನಿಮಗೇಕೆ ಈ ಪರಿ ಅಸಡ್ಡೆ. ಹಿಂದೂಗಳಿಗೆ ನಿಮ್ಮ ಆಡಳಿತದಲ್ಲಿ ರಕ್ಷಣೆ ಇಲ್ಲವೇ..?” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಹಿಂದುತ್ವ ಮುಖಂಡ ಪುನೀತ್ ಕೆರೆಹಳ್ಳಿ “ನಿನ್ನೆ ರಾಮೇಶ್ವರ ಕೆಫೆ, ಇಂದು ಕಲ್ಲೇಶ್ವರ ಸ್ವಾಮಿ ರಥ. ಗುಬ್ಬಿ ತಾಲೂಕು ಪುರ ಗ್ರಾಮದ ಕಲ್ಲೇಶ್ವರ ದೇವಾಲಯದ ರಥಕ್ಕೆ ಬೆಂಕಿ ಹಾಕಿದ ಜಿಹಾದಿ ಮನಸ್ಥಿತಿಗಳು” ಎಂದು ಶೀರ್ಷಿಕೆ ಕೊಟ್ಟು ಘಟನೆಯ ವಿಡಿಯೋ ಹಂಚಿಕೊಂಡಿದ್ದ.


ಪೋಸ್ಟ್ ಲಿಂಕ್ ಇಲ್ಲಿದೆ

ಮೇಲಿನ ಮೂರೂ ಪೋಸ್ಟ್‌ಗಳಲ್ಲಿ ರಥಕ್ಕೆ ಬೆಂಕಿ ಹಚ್ಚಿದವರು ಮುಸ್ಲಿಮರು ಎಂದು ಪರೋಕ್ಷವಾಗಿ ಬಿಂಬಿಸುವ ಪ್ರಯತ್ನ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ರಥಕ್ಕೆ ಬೆಂಕಿ ಹಚ್ಚಿರುವ ಆರೋಪಿಯ ಬಂಧನದ ಕುರಿತು ತುಮಕೂರು ಪೊಲೀಸರು ಮಾರ್ಚ್‌ 11ರಂದು ಪ್ರಕಟನೆ ಹೊರಡಿಸಿದ್ದು, “11 ಮಾರ್ಚ್ 2024ರಂದು ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಪುರ ಗ್ರಾಮದ ದೇವಾಲಯ ಶ್ರೀ ಕಲ್ಲೇಶ್ವರ ಸ್ವಾಮಿ ರಥಕ್ಕೆ ಉದಾರಿ ಬಿನ್ ರಾಧೇಶಾಂ ಘೋರಕಪುರ ಎಂಬ ವ್ಯಕ್ತಿಯು ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಕಿ ಹಚ್ಚಿದ್ದಾನೆ. ಈ ಘಟನೆಯಿಂದಾಗಿ ರಥವು ಬೆಂಕಿಯಲ್ಲಿ ಸಂಪೂರ್ಣ ಸುಟ್ಟು ಹೋಗಿದೆ. ರಥವು ಇದ್ದ ಜಾಗದಲ್ಲೇ ಬೆಂಕಿ ಹಚ್ಚಿರುವ ಉದಾರಿ ಬಿನ್ ರಾಧೇಶಾಂ ಎಂಬ ವ್ಯಕ್ತಿಯನ್ನು ಪುರ ಗ್ರಾಮಸ್ಥರು ಮತ್ತು ಭಕ್ತಾದಿಗಳು ವಶಕ್ಕೆ ಪಡೆದಿದ್ದಾರೆ ಮತ್ತು ಪೋಲಿಸರಿಗೆ ಒಪ್ಪಿಸಿದ್ದಾರೆ. ಈ ರಥವು ಸುಟ್ಟಿರುವುದರಿಂದ 20 ಲಕ್ಷದಷ್ಟು ನಷ್ಟವಾಗಿದೆ” ಎಂದು ಹೇಳಿದ್ದಾರೆ.

ಉದಾರಿ ಬಿನ್ ರಾಧೇಶಾಂ 35 ವಯಸ್ಸಿನವರಾಗಿದ್ದು, ಉತ್ತರ ಪ್ರದೇಶದ ಘೋರಕಪುರದವರಾಗಿದ್ದಾರೆ. ಸದ್ಯ ಪೋಲಿಸರು ಅವರನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿರುವುದಾಗಿ ತುಮಕೂರು ಜಿಲ್ಲಾ ಪೋಲಿಸ್ ಕಛೇರಿ ಸ್ಪಷ್ಟಪಡಿಸಿದೆ.

ಮಾರ್ಚ್ 12ರಂದು ತುಮಕೂರು ಎಸ್‌ಪಿ ಕೂಡ ಆರೋಪಿಯ ಬಂಧನದ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, “ಜಿಲ್ಲೆಯ ಗುಬ್ಬಿ ತಾಲೂಕಿನ ಪುರ ಗ್ರಾಮದ ಶ್ರೀಕಲ್ಲೇಶ್ವರ ಸ್ವಾಮಿ ರಥಕ್ಕೆ ಬೆಂಕಿ ಹಚ್ಚಿದವನ ಬಂಧನದ ಬಗ್ಗೆ ಪತ್ರಿಕಾ ಪ್ರಕಟಣೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದರು.

ಪೊಲೀಸರ ಸ್ಪಷ್ಟನೆ ಪ್ರಕಾರ, ರಥಕ್ಕೆ ಬೆಂಕಿ ಹಚ್ಚಿದ ಆರೋಪಿ ಹಿಂದೂ ಧರ್ಮಕ್ಕೆ ಸೇರಿದವನೇ ಹೊರತು ಮುಸ್ಲಿಮನಲ್ಲ ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...