Homeಫ್ಯಾಕ್ಟ್‌ಚೆಕ್Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಪುರ ಗ್ರಾಮದ ಕಲ್ಲೇಶ್ವರ ರಥಕ್ಕೆ ಬೆಂಕಿ ಇಟ್ಟ ಘಟನೆ ಮಾರ್ಚ್‌ 11ರಂದು ಸೋಮವಾರ ನಡೆದಿತ್ತು. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮುಸ್ಲಿಂ ಸಮುದಾಯಕ್ಕೆ ಸೇರಿದವನು ಎಂಬ ರೀತಿಯಲ್ಲಿ ಸುದ್ದಿ ಹರಿಬಿಟ್ಟು ಘಟನೆಗೆ ಕೋಮು ಬಣ್ಣ ಬಳಿಯುವ ಪ್ರಯತ್ನವನ್ನು ಬಿಜೆಪಿ ಹಾಗೂ ಬಲಪಂಥೀಯ ಮಾಧ್ಯಮಗಳು ಮಾಡಿವೆ.

ಬಲಪಂಥೀಯ ಮಾಧ್ಯಮ ‘ಪೋಸ್ಟ್ ಕಾರ್ಡ್’ ಘಟನೆ ಕುರಿತು ಪೋಸ್ಟರ್ ಒಂದನ್ನು ಹರಿಬಿಟ್ಟಿದ್ದು, ಅದರಲ್ಲಿ “ತುಮಕೂರು ಜಿಲ್ಲೆಯ ನಿಟ್ಟೂರಿನ 800 ವರ್ಷಗಳ ಇತಿಹಾಸ ಇರುವ ಶ್ರೀ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ರಥಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಹಿಂದುಗಳು ಮೌನವಾದಷ್ಟು ಅವರ ಅಟ್ಟಹಾಸ ಜಾಸ್ತಿಯಾಗುತ್ತದೆ” ಎಂದು ಬರೆಯಲಾಗಿದೆ.

ಇದೇ ಪ್ರತಿಪಾದನೆಯನ್ನು ರಾಜ್ಯ ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲೂ ಮಾಡಲಾಗಿದ್ದು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಹಿಂದೂ ಧರ್ಮೀಯರ ಮೇಲೆ ಹಾಗೂ ಹಿಂದೂ ದೇವಾಲಯಗಳ ಮೇಲೆ ದಾಳಿ ನಿತ್ಯ ನಿರಂತರ. ಮತಾಂಧ ಖಿಲ್ಜಿ, ಘಜ್ನಿ, ಘೋರಿ ಕಾಲದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದ ಮಾದರಿಯಲ್ಲಿ ತುಮಕೂರಿನ ಗುಬ್ಬಿಯ ನಿಟ್ಟೂರುಪುರದ 800 ವರ್ಷಗಳ ಇತಿಹಾಸ ಹೊಂದಿರುವ ಕಲ್ಲೇಶ್ವರ ಸ್ವಾಮಿಯ ರಥಕ್ಕೆ ಮಟ ಮಟ ಮಧ್ಯಾಹ್ನವೇ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ, ಇದು ನಿಮ್ಮ ಓಲೈಕೆ ಹಾಗೂ ಅರಾಜಕತೆಯ ಆಡಳಿತದ ದುಷ್ಪರಿಣಾಮ. ಹಿಂದೂ ಧರ್ಮ, ಹಿಂದೂ ದೇವಾಲಯ, ಹಿಂದೂಗಳ ಮೇಲಿನ ನಿಮಗೇಕೆ ಈ ಪರಿ ಅಸಡ್ಡೆ. ಹಿಂದೂಗಳಿಗೆ ನಿಮ್ಮ ಆಡಳಿತದಲ್ಲಿ ರಕ್ಷಣೆ ಇಲ್ಲವೇ..?” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಹಿಂದುತ್ವ ಮುಖಂಡ ಪುನೀತ್ ಕೆರೆಹಳ್ಳಿ “ನಿನ್ನೆ ರಾಮೇಶ್ವರ ಕೆಫೆ, ಇಂದು ಕಲ್ಲೇಶ್ವರ ಸ್ವಾಮಿ ರಥ. ಗುಬ್ಬಿ ತಾಲೂಕು ಪುರ ಗ್ರಾಮದ ಕಲ್ಲೇಶ್ವರ ದೇವಾಲಯದ ರಥಕ್ಕೆ ಬೆಂಕಿ ಹಾಕಿದ ಜಿಹಾದಿ ಮನಸ್ಥಿತಿಗಳು” ಎಂದು ಶೀರ್ಷಿಕೆ ಕೊಟ್ಟು ಘಟನೆಯ ವಿಡಿಯೋ ಹಂಚಿಕೊಂಡಿದ್ದ.


ಪೋಸ್ಟ್ ಲಿಂಕ್ ಇಲ್ಲಿದೆ

ಮೇಲಿನ ಮೂರೂ ಪೋಸ್ಟ್‌ಗಳಲ್ಲಿ ರಥಕ್ಕೆ ಬೆಂಕಿ ಹಚ್ಚಿದವರು ಮುಸ್ಲಿಮರು ಎಂದು ಪರೋಕ್ಷವಾಗಿ ಬಿಂಬಿಸುವ ಪ್ರಯತ್ನ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ರಥಕ್ಕೆ ಬೆಂಕಿ ಹಚ್ಚಿರುವ ಆರೋಪಿಯ ಬಂಧನದ ಕುರಿತು ತುಮಕೂರು ಪೊಲೀಸರು ಮಾರ್ಚ್‌ 11ರಂದು ಪ್ರಕಟನೆ ಹೊರಡಿಸಿದ್ದು, “11 ಮಾರ್ಚ್ 2024ರಂದು ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಪುರ ಗ್ರಾಮದ ದೇವಾಲಯ ಶ್ರೀ ಕಲ್ಲೇಶ್ವರ ಸ್ವಾಮಿ ರಥಕ್ಕೆ ಉದಾರಿ ಬಿನ್ ರಾಧೇಶಾಂ ಘೋರಕಪುರ ಎಂಬ ವ್ಯಕ್ತಿಯು ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಕಿ ಹಚ್ಚಿದ್ದಾನೆ. ಈ ಘಟನೆಯಿಂದಾಗಿ ರಥವು ಬೆಂಕಿಯಲ್ಲಿ ಸಂಪೂರ್ಣ ಸುಟ್ಟು ಹೋಗಿದೆ. ರಥವು ಇದ್ದ ಜಾಗದಲ್ಲೇ ಬೆಂಕಿ ಹಚ್ಚಿರುವ ಉದಾರಿ ಬಿನ್ ರಾಧೇಶಾಂ ಎಂಬ ವ್ಯಕ್ತಿಯನ್ನು ಪುರ ಗ್ರಾಮಸ್ಥರು ಮತ್ತು ಭಕ್ತಾದಿಗಳು ವಶಕ್ಕೆ ಪಡೆದಿದ್ದಾರೆ ಮತ್ತು ಪೋಲಿಸರಿಗೆ ಒಪ್ಪಿಸಿದ್ದಾರೆ. ಈ ರಥವು ಸುಟ್ಟಿರುವುದರಿಂದ 20 ಲಕ್ಷದಷ್ಟು ನಷ್ಟವಾಗಿದೆ” ಎಂದು ಹೇಳಿದ್ದಾರೆ.

ಉದಾರಿ ಬಿನ್ ರಾಧೇಶಾಂ 35 ವಯಸ್ಸಿನವರಾಗಿದ್ದು, ಉತ್ತರ ಪ್ರದೇಶದ ಘೋರಕಪುರದವರಾಗಿದ್ದಾರೆ. ಸದ್ಯ ಪೋಲಿಸರು ಅವರನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿರುವುದಾಗಿ ತುಮಕೂರು ಜಿಲ್ಲಾ ಪೋಲಿಸ್ ಕಛೇರಿ ಸ್ಪಷ್ಟಪಡಿಸಿದೆ.

ಮಾರ್ಚ್ 12ರಂದು ತುಮಕೂರು ಎಸ್‌ಪಿ ಕೂಡ ಆರೋಪಿಯ ಬಂಧನದ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, “ಜಿಲ್ಲೆಯ ಗುಬ್ಬಿ ತಾಲೂಕಿನ ಪುರ ಗ್ರಾಮದ ಶ್ರೀಕಲ್ಲೇಶ್ವರ ಸ್ವಾಮಿ ರಥಕ್ಕೆ ಬೆಂಕಿ ಹಚ್ಚಿದವನ ಬಂಧನದ ಬಗ್ಗೆ ಪತ್ರಿಕಾ ಪ್ರಕಟಣೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದರು.

ಪೊಲೀಸರ ಸ್ಪಷ್ಟನೆ ಪ್ರಕಾರ, ರಥಕ್ಕೆ ಬೆಂಕಿ ಹಚ್ಚಿದ ಆರೋಪಿ ಹಿಂದೂ ಧರ್ಮಕ್ಕೆ ಸೇರಿದವನೇ ಹೊರತು ಮುಸ್ಲಿಮನಲ್ಲ ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...