Homeಫ್ಯಾಕ್ಟ್‌ಚೆಕ್Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಪುರ ಗ್ರಾಮದ ಕಲ್ಲೇಶ್ವರ ರಥಕ್ಕೆ ಬೆಂಕಿ ಇಟ್ಟ ಘಟನೆ ಮಾರ್ಚ್‌ 11ರಂದು ಸೋಮವಾರ ನಡೆದಿತ್ತು. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮುಸ್ಲಿಂ ಸಮುದಾಯಕ್ಕೆ ಸೇರಿದವನು ಎಂಬ ರೀತಿಯಲ್ಲಿ ಸುದ್ದಿ ಹರಿಬಿಟ್ಟು ಘಟನೆಗೆ ಕೋಮು ಬಣ್ಣ ಬಳಿಯುವ ಪ್ರಯತ್ನವನ್ನು ಬಿಜೆಪಿ ಹಾಗೂ ಬಲಪಂಥೀಯ ಮಾಧ್ಯಮಗಳು ಮಾಡಿವೆ.

ಬಲಪಂಥೀಯ ಮಾಧ್ಯಮ ‘ಪೋಸ್ಟ್ ಕಾರ್ಡ್’ ಘಟನೆ ಕುರಿತು ಪೋಸ್ಟರ್ ಒಂದನ್ನು ಹರಿಬಿಟ್ಟಿದ್ದು, ಅದರಲ್ಲಿ “ತುಮಕೂರು ಜಿಲ್ಲೆಯ ನಿಟ್ಟೂರಿನ 800 ವರ್ಷಗಳ ಇತಿಹಾಸ ಇರುವ ಶ್ರೀ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ರಥಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಹಿಂದುಗಳು ಮೌನವಾದಷ್ಟು ಅವರ ಅಟ್ಟಹಾಸ ಜಾಸ್ತಿಯಾಗುತ್ತದೆ” ಎಂದು ಬರೆಯಲಾಗಿದೆ.

ಇದೇ ಪ್ರತಿಪಾದನೆಯನ್ನು ರಾಜ್ಯ ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲೂ ಮಾಡಲಾಗಿದ್ದು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಹಿಂದೂ ಧರ್ಮೀಯರ ಮೇಲೆ ಹಾಗೂ ಹಿಂದೂ ದೇವಾಲಯಗಳ ಮೇಲೆ ದಾಳಿ ನಿತ್ಯ ನಿರಂತರ. ಮತಾಂಧ ಖಿಲ್ಜಿ, ಘಜ್ನಿ, ಘೋರಿ ಕಾಲದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದ ಮಾದರಿಯಲ್ಲಿ ತುಮಕೂರಿನ ಗುಬ್ಬಿಯ ನಿಟ್ಟೂರುಪುರದ 800 ವರ್ಷಗಳ ಇತಿಹಾಸ ಹೊಂದಿರುವ ಕಲ್ಲೇಶ್ವರ ಸ್ವಾಮಿಯ ರಥಕ್ಕೆ ಮಟ ಮಟ ಮಧ್ಯಾಹ್ನವೇ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ, ಇದು ನಿಮ್ಮ ಓಲೈಕೆ ಹಾಗೂ ಅರಾಜಕತೆಯ ಆಡಳಿತದ ದುಷ್ಪರಿಣಾಮ. ಹಿಂದೂ ಧರ್ಮ, ಹಿಂದೂ ದೇವಾಲಯ, ಹಿಂದೂಗಳ ಮೇಲಿನ ನಿಮಗೇಕೆ ಈ ಪರಿ ಅಸಡ್ಡೆ. ಹಿಂದೂಗಳಿಗೆ ನಿಮ್ಮ ಆಡಳಿತದಲ್ಲಿ ರಕ್ಷಣೆ ಇಲ್ಲವೇ..?” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಹಿಂದುತ್ವ ಮುಖಂಡ ಪುನೀತ್ ಕೆರೆಹಳ್ಳಿ “ನಿನ್ನೆ ರಾಮೇಶ್ವರ ಕೆಫೆ, ಇಂದು ಕಲ್ಲೇಶ್ವರ ಸ್ವಾಮಿ ರಥ. ಗುಬ್ಬಿ ತಾಲೂಕು ಪುರ ಗ್ರಾಮದ ಕಲ್ಲೇಶ್ವರ ದೇವಾಲಯದ ರಥಕ್ಕೆ ಬೆಂಕಿ ಹಾಕಿದ ಜಿಹಾದಿ ಮನಸ್ಥಿತಿಗಳು” ಎಂದು ಶೀರ್ಷಿಕೆ ಕೊಟ್ಟು ಘಟನೆಯ ವಿಡಿಯೋ ಹಂಚಿಕೊಂಡಿದ್ದ.


ಪೋಸ್ಟ್ ಲಿಂಕ್ ಇಲ್ಲಿದೆ

ಮೇಲಿನ ಮೂರೂ ಪೋಸ್ಟ್‌ಗಳಲ್ಲಿ ರಥಕ್ಕೆ ಬೆಂಕಿ ಹಚ್ಚಿದವರು ಮುಸ್ಲಿಮರು ಎಂದು ಪರೋಕ್ಷವಾಗಿ ಬಿಂಬಿಸುವ ಪ್ರಯತ್ನ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ರಥಕ್ಕೆ ಬೆಂಕಿ ಹಚ್ಚಿರುವ ಆರೋಪಿಯ ಬಂಧನದ ಕುರಿತು ತುಮಕೂರು ಪೊಲೀಸರು ಮಾರ್ಚ್‌ 11ರಂದು ಪ್ರಕಟನೆ ಹೊರಡಿಸಿದ್ದು, “11 ಮಾರ್ಚ್ 2024ರಂದು ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಪುರ ಗ್ರಾಮದ ದೇವಾಲಯ ಶ್ರೀ ಕಲ್ಲೇಶ್ವರ ಸ್ವಾಮಿ ರಥಕ್ಕೆ ಉದಾರಿ ಬಿನ್ ರಾಧೇಶಾಂ ಘೋರಕಪುರ ಎಂಬ ವ್ಯಕ್ತಿಯು ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಕಿ ಹಚ್ಚಿದ್ದಾನೆ. ಈ ಘಟನೆಯಿಂದಾಗಿ ರಥವು ಬೆಂಕಿಯಲ್ಲಿ ಸಂಪೂರ್ಣ ಸುಟ್ಟು ಹೋಗಿದೆ. ರಥವು ಇದ್ದ ಜಾಗದಲ್ಲೇ ಬೆಂಕಿ ಹಚ್ಚಿರುವ ಉದಾರಿ ಬಿನ್ ರಾಧೇಶಾಂ ಎಂಬ ವ್ಯಕ್ತಿಯನ್ನು ಪುರ ಗ್ರಾಮಸ್ಥರು ಮತ್ತು ಭಕ್ತಾದಿಗಳು ವಶಕ್ಕೆ ಪಡೆದಿದ್ದಾರೆ ಮತ್ತು ಪೋಲಿಸರಿಗೆ ಒಪ್ಪಿಸಿದ್ದಾರೆ. ಈ ರಥವು ಸುಟ್ಟಿರುವುದರಿಂದ 20 ಲಕ್ಷದಷ್ಟು ನಷ್ಟವಾಗಿದೆ” ಎಂದು ಹೇಳಿದ್ದಾರೆ.

ಉದಾರಿ ಬಿನ್ ರಾಧೇಶಾಂ 35 ವಯಸ್ಸಿನವರಾಗಿದ್ದು, ಉತ್ತರ ಪ್ರದೇಶದ ಘೋರಕಪುರದವರಾಗಿದ್ದಾರೆ. ಸದ್ಯ ಪೋಲಿಸರು ಅವರನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿರುವುದಾಗಿ ತುಮಕೂರು ಜಿಲ್ಲಾ ಪೋಲಿಸ್ ಕಛೇರಿ ಸ್ಪಷ್ಟಪಡಿಸಿದೆ.

ಮಾರ್ಚ್ 12ರಂದು ತುಮಕೂರು ಎಸ್‌ಪಿ ಕೂಡ ಆರೋಪಿಯ ಬಂಧನದ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, “ಜಿಲ್ಲೆಯ ಗುಬ್ಬಿ ತಾಲೂಕಿನ ಪುರ ಗ್ರಾಮದ ಶ್ರೀಕಲ್ಲೇಶ್ವರ ಸ್ವಾಮಿ ರಥಕ್ಕೆ ಬೆಂಕಿ ಹಚ್ಚಿದವನ ಬಂಧನದ ಬಗ್ಗೆ ಪತ್ರಿಕಾ ಪ್ರಕಟಣೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದರು.

ಪೊಲೀಸರ ಸ್ಪಷ್ಟನೆ ಪ್ರಕಾರ, ರಥಕ್ಕೆ ಬೆಂಕಿ ಹಚ್ಚಿದ ಆರೋಪಿ ಹಿಂದೂ ಧರ್ಮಕ್ಕೆ ಸೇರಿದವನೇ ಹೊರತು ಮುಸ್ಲಿಮನಲ್ಲ ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...