Homeಫ್ಯಾಕ್ಟ್‌ಚೆಕ್Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಪುರ ಗ್ರಾಮದ ಕಲ್ಲೇಶ್ವರ ರಥಕ್ಕೆ ಬೆಂಕಿ ಇಟ್ಟ ಘಟನೆ ಮಾರ್ಚ್‌ 11ರಂದು ಸೋಮವಾರ ನಡೆದಿತ್ತು. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮುಸ್ಲಿಂ ಸಮುದಾಯಕ್ಕೆ ಸೇರಿದವನು ಎಂಬ ರೀತಿಯಲ್ಲಿ ಸುದ್ದಿ ಹರಿಬಿಟ್ಟು ಘಟನೆಗೆ ಕೋಮು ಬಣ್ಣ ಬಳಿಯುವ ಪ್ರಯತ್ನವನ್ನು ಬಿಜೆಪಿ ಹಾಗೂ ಬಲಪಂಥೀಯ ಮಾಧ್ಯಮಗಳು ಮಾಡಿವೆ.

ಬಲಪಂಥೀಯ ಮಾಧ್ಯಮ ‘ಪೋಸ್ಟ್ ಕಾರ್ಡ್’ ಘಟನೆ ಕುರಿತು ಪೋಸ್ಟರ್ ಒಂದನ್ನು ಹರಿಬಿಟ್ಟಿದ್ದು, ಅದರಲ್ಲಿ “ತುಮಕೂರು ಜಿಲ್ಲೆಯ ನಿಟ್ಟೂರಿನ 800 ವರ್ಷಗಳ ಇತಿಹಾಸ ಇರುವ ಶ್ರೀ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ರಥಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಹಿಂದುಗಳು ಮೌನವಾದಷ್ಟು ಅವರ ಅಟ್ಟಹಾಸ ಜಾಸ್ತಿಯಾಗುತ್ತದೆ” ಎಂದು ಬರೆಯಲಾಗಿದೆ.

ಇದೇ ಪ್ರತಿಪಾದನೆಯನ್ನು ರಾಜ್ಯ ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲೂ ಮಾಡಲಾಗಿದ್ದು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಹಿಂದೂ ಧರ್ಮೀಯರ ಮೇಲೆ ಹಾಗೂ ಹಿಂದೂ ದೇವಾಲಯಗಳ ಮೇಲೆ ದಾಳಿ ನಿತ್ಯ ನಿರಂತರ. ಮತಾಂಧ ಖಿಲ್ಜಿ, ಘಜ್ನಿ, ಘೋರಿ ಕಾಲದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದ ಮಾದರಿಯಲ್ಲಿ ತುಮಕೂರಿನ ಗುಬ್ಬಿಯ ನಿಟ್ಟೂರುಪುರದ 800 ವರ್ಷಗಳ ಇತಿಹಾಸ ಹೊಂದಿರುವ ಕಲ್ಲೇಶ್ವರ ಸ್ವಾಮಿಯ ರಥಕ್ಕೆ ಮಟ ಮಟ ಮಧ್ಯಾಹ್ನವೇ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ, ಇದು ನಿಮ್ಮ ಓಲೈಕೆ ಹಾಗೂ ಅರಾಜಕತೆಯ ಆಡಳಿತದ ದುಷ್ಪರಿಣಾಮ. ಹಿಂದೂ ಧರ್ಮ, ಹಿಂದೂ ದೇವಾಲಯ, ಹಿಂದೂಗಳ ಮೇಲಿನ ನಿಮಗೇಕೆ ಈ ಪರಿ ಅಸಡ್ಡೆ. ಹಿಂದೂಗಳಿಗೆ ನಿಮ್ಮ ಆಡಳಿತದಲ್ಲಿ ರಕ್ಷಣೆ ಇಲ್ಲವೇ..?” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಹಿಂದುತ್ವ ಮುಖಂಡ ಪುನೀತ್ ಕೆರೆಹಳ್ಳಿ “ನಿನ್ನೆ ರಾಮೇಶ್ವರ ಕೆಫೆ, ಇಂದು ಕಲ್ಲೇಶ್ವರ ಸ್ವಾಮಿ ರಥ. ಗುಬ್ಬಿ ತಾಲೂಕು ಪುರ ಗ್ರಾಮದ ಕಲ್ಲೇಶ್ವರ ದೇವಾಲಯದ ರಥಕ್ಕೆ ಬೆಂಕಿ ಹಾಕಿದ ಜಿಹಾದಿ ಮನಸ್ಥಿತಿಗಳು” ಎಂದು ಶೀರ್ಷಿಕೆ ಕೊಟ್ಟು ಘಟನೆಯ ವಿಡಿಯೋ ಹಂಚಿಕೊಂಡಿದ್ದ.


ಪೋಸ್ಟ್ ಲಿಂಕ್ ಇಲ್ಲಿದೆ

ಮೇಲಿನ ಮೂರೂ ಪೋಸ್ಟ್‌ಗಳಲ್ಲಿ ರಥಕ್ಕೆ ಬೆಂಕಿ ಹಚ್ಚಿದವರು ಮುಸ್ಲಿಮರು ಎಂದು ಪರೋಕ್ಷವಾಗಿ ಬಿಂಬಿಸುವ ಪ್ರಯತ್ನ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ರಥಕ್ಕೆ ಬೆಂಕಿ ಹಚ್ಚಿರುವ ಆರೋಪಿಯ ಬಂಧನದ ಕುರಿತು ತುಮಕೂರು ಪೊಲೀಸರು ಮಾರ್ಚ್‌ 11ರಂದು ಪ್ರಕಟನೆ ಹೊರಡಿಸಿದ್ದು, “11 ಮಾರ್ಚ್ 2024ರಂದು ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಪುರ ಗ್ರಾಮದ ದೇವಾಲಯ ಶ್ರೀ ಕಲ್ಲೇಶ್ವರ ಸ್ವಾಮಿ ರಥಕ್ಕೆ ಉದಾರಿ ಬಿನ್ ರಾಧೇಶಾಂ ಘೋರಕಪುರ ಎಂಬ ವ್ಯಕ್ತಿಯು ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಕಿ ಹಚ್ಚಿದ್ದಾನೆ. ಈ ಘಟನೆಯಿಂದಾಗಿ ರಥವು ಬೆಂಕಿಯಲ್ಲಿ ಸಂಪೂರ್ಣ ಸುಟ್ಟು ಹೋಗಿದೆ. ರಥವು ಇದ್ದ ಜಾಗದಲ್ಲೇ ಬೆಂಕಿ ಹಚ್ಚಿರುವ ಉದಾರಿ ಬಿನ್ ರಾಧೇಶಾಂ ಎಂಬ ವ್ಯಕ್ತಿಯನ್ನು ಪುರ ಗ್ರಾಮಸ್ಥರು ಮತ್ತು ಭಕ್ತಾದಿಗಳು ವಶಕ್ಕೆ ಪಡೆದಿದ್ದಾರೆ ಮತ್ತು ಪೋಲಿಸರಿಗೆ ಒಪ್ಪಿಸಿದ್ದಾರೆ. ಈ ರಥವು ಸುಟ್ಟಿರುವುದರಿಂದ 20 ಲಕ್ಷದಷ್ಟು ನಷ್ಟವಾಗಿದೆ” ಎಂದು ಹೇಳಿದ್ದಾರೆ.

ಉದಾರಿ ಬಿನ್ ರಾಧೇಶಾಂ 35 ವಯಸ್ಸಿನವರಾಗಿದ್ದು, ಉತ್ತರ ಪ್ರದೇಶದ ಘೋರಕಪುರದವರಾಗಿದ್ದಾರೆ. ಸದ್ಯ ಪೋಲಿಸರು ಅವರನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿರುವುದಾಗಿ ತುಮಕೂರು ಜಿಲ್ಲಾ ಪೋಲಿಸ್ ಕಛೇರಿ ಸ್ಪಷ್ಟಪಡಿಸಿದೆ.

ಮಾರ್ಚ್ 12ರಂದು ತುಮಕೂರು ಎಸ್‌ಪಿ ಕೂಡ ಆರೋಪಿಯ ಬಂಧನದ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, “ಜಿಲ್ಲೆಯ ಗುಬ್ಬಿ ತಾಲೂಕಿನ ಪುರ ಗ್ರಾಮದ ಶ್ರೀಕಲ್ಲೇಶ್ವರ ಸ್ವಾಮಿ ರಥಕ್ಕೆ ಬೆಂಕಿ ಹಚ್ಚಿದವನ ಬಂಧನದ ಬಗ್ಗೆ ಪತ್ರಿಕಾ ಪ್ರಕಟಣೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದರು.

ಪೊಲೀಸರ ಸ್ಪಷ್ಟನೆ ಪ್ರಕಾರ, ರಥಕ್ಕೆ ಬೆಂಕಿ ಹಚ್ಚಿದ ಆರೋಪಿ ಹಿಂದೂ ಧರ್ಮಕ್ಕೆ ಸೇರಿದವನೇ ಹೊರತು ಮುಸ್ಲಿಮನಲ್ಲ ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...