Homeಫ್ಯಾಕ್ಟ್‌ಚೆಕ್Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಪುರ ಗ್ರಾಮದ ಕಲ್ಲೇಶ್ವರ ರಥಕ್ಕೆ ಬೆಂಕಿ ಇಟ್ಟ ಘಟನೆ ಮಾರ್ಚ್‌ 11ರಂದು ಸೋಮವಾರ ನಡೆದಿತ್ತು. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮುಸ್ಲಿಂ ಸಮುದಾಯಕ್ಕೆ ಸೇರಿದವನು ಎಂಬ ರೀತಿಯಲ್ಲಿ ಸುದ್ದಿ ಹರಿಬಿಟ್ಟು ಘಟನೆಗೆ ಕೋಮು ಬಣ್ಣ ಬಳಿಯುವ ಪ್ರಯತ್ನವನ್ನು ಬಿಜೆಪಿ ಹಾಗೂ ಬಲಪಂಥೀಯ ಮಾಧ್ಯಮಗಳು ಮಾಡಿವೆ.

ಬಲಪಂಥೀಯ ಮಾಧ್ಯಮ ‘ಪೋಸ್ಟ್ ಕಾರ್ಡ್’ ಘಟನೆ ಕುರಿತು ಪೋಸ್ಟರ್ ಒಂದನ್ನು ಹರಿಬಿಟ್ಟಿದ್ದು, ಅದರಲ್ಲಿ “ತುಮಕೂರು ಜಿಲ್ಲೆಯ ನಿಟ್ಟೂರಿನ 800 ವರ್ಷಗಳ ಇತಿಹಾಸ ಇರುವ ಶ್ರೀ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ರಥಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಹಿಂದುಗಳು ಮೌನವಾದಷ್ಟು ಅವರ ಅಟ್ಟಹಾಸ ಜಾಸ್ತಿಯಾಗುತ್ತದೆ” ಎಂದು ಬರೆಯಲಾಗಿದೆ.

ಇದೇ ಪ್ರತಿಪಾದನೆಯನ್ನು ರಾಜ್ಯ ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲೂ ಮಾಡಲಾಗಿದ್ದು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಹಿಂದೂ ಧರ್ಮೀಯರ ಮೇಲೆ ಹಾಗೂ ಹಿಂದೂ ದೇವಾಲಯಗಳ ಮೇಲೆ ದಾಳಿ ನಿತ್ಯ ನಿರಂತರ. ಮತಾಂಧ ಖಿಲ್ಜಿ, ಘಜ್ನಿ, ಘೋರಿ ಕಾಲದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದ ಮಾದರಿಯಲ್ಲಿ ತುಮಕೂರಿನ ಗುಬ್ಬಿಯ ನಿಟ್ಟೂರುಪುರದ 800 ವರ್ಷಗಳ ಇತಿಹಾಸ ಹೊಂದಿರುವ ಕಲ್ಲೇಶ್ವರ ಸ್ವಾಮಿಯ ರಥಕ್ಕೆ ಮಟ ಮಟ ಮಧ್ಯಾಹ್ನವೇ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ, ಇದು ನಿಮ್ಮ ಓಲೈಕೆ ಹಾಗೂ ಅರಾಜಕತೆಯ ಆಡಳಿತದ ದುಷ್ಪರಿಣಾಮ. ಹಿಂದೂ ಧರ್ಮ, ಹಿಂದೂ ದೇವಾಲಯ, ಹಿಂದೂಗಳ ಮೇಲಿನ ನಿಮಗೇಕೆ ಈ ಪರಿ ಅಸಡ್ಡೆ. ಹಿಂದೂಗಳಿಗೆ ನಿಮ್ಮ ಆಡಳಿತದಲ್ಲಿ ರಕ್ಷಣೆ ಇಲ್ಲವೇ..?” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಹಿಂದುತ್ವ ಮುಖಂಡ ಪುನೀತ್ ಕೆರೆಹಳ್ಳಿ “ನಿನ್ನೆ ರಾಮೇಶ್ವರ ಕೆಫೆ, ಇಂದು ಕಲ್ಲೇಶ್ವರ ಸ್ವಾಮಿ ರಥ. ಗುಬ್ಬಿ ತಾಲೂಕು ಪುರ ಗ್ರಾಮದ ಕಲ್ಲೇಶ್ವರ ದೇವಾಲಯದ ರಥಕ್ಕೆ ಬೆಂಕಿ ಹಾಕಿದ ಜಿಹಾದಿ ಮನಸ್ಥಿತಿಗಳು” ಎಂದು ಶೀರ್ಷಿಕೆ ಕೊಟ್ಟು ಘಟನೆಯ ವಿಡಿಯೋ ಹಂಚಿಕೊಂಡಿದ್ದ.


ಪೋಸ್ಟ್ ಲಿಂಕ್ ಇಲ್ಲಿದೆ

ಮೇಲಿನ ಮೂರೂ ಪೋಸ್ಟ್‌ಗಳಲ್ಲಿ ರಥಕ್ಕೆ ಬೆಂಕಿ ಹಚ್ಚಿದವರು ಮುಸ್ಲಿಮರು ಎಂದು ಪರೋಕ್ಷವಾಗಿ ಬಿಂಬಿಸುವ ಪ್ರಯತ್ನ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ರಥಕ್ಕೆ ಬೆಂಕಿ ಹಚ್ಚಿರುವ ಆರೋಪಿಯ ಬಂಧನದ ಕುರಿತು ತುಮಕೂರು ಪೊಲೀಸರು ಮಾರ್ಚ್‌ 11ರಂದು ಪ್ರಕಟನೆ ಹೊರಡಿಸಿದ್ದು, “11 ಮಾರ್ಚ್ 2024ರಂದು ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಪುರ ಗ್ರಾಮದ ದೇವಾಲಯ ಶ್ರೀ ಕಲ್ಲೇಶ್ವರ ಸ್ವಾಮಿ ರಥಕ್ಕೆ ಉದಾರಿ ಬಿನ್ ರಾಧೇಶಾಂ ಘೋರಕಪುರ ಎಂಬ ವ್ಯಕ್ತಿಯು ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಕಿ ಹಚ್ಚಿದ್ದಾನೆ. ಈ ಘಟನೆಯಿಂದಾಗಿ ರಥವು ಬೆಂಕಿಯಲ್ಲಿ ಸಂಪೂರ್ಣ ಸುಟ್ಟು ಹೋಗಿದೆ. ರಥವು ಇದ್ದ ಜಾಗದಲ್ಲೇ ಬೆಂಕಿ ಹಚ್ಚಿರುವ ಉದಾರಿ ಬಿನ್ ರಾಧೇಶಾಂ ಎಂಬ ವ್ಯಕ್ತಿಯನ್ನು ಪುರ ಗ್ರಾಮಸ್ಥರು ಮತ್ತು ಭಕ್ತಾದಿಗಳು ವಶಕ್ಕೆ ಪಡೆದಿದ್ದಾರೆ ಮತ್ತು ಪೋಲಿಸರಿಗೆ ಒಪ್ಪಿಸಿದ್ದಾರೆ. ಈ ರಥವು ಸುಟ್ಟಿರುವುದರಿಂದ 20 ಲಕ್ಷದಷ್ಟು ನಷ್ಟವಾಗಿದೆ” ಎಂದು ಹೇಳಿದ್ದಾರೆ.

ಉದಾರಿ ಬಿನ್ ರಾಧೇಶಾಂ 35 ವಯಸ್ಸಿನವರಾಗಿದ್ದು, ಉತ್ತರ ಪ್ರದೇಶದ ಘೋರಕಪುರದವರಾಗಿದ್ದಾರೆ. ಸದ್ಯ ಪೋಲಿಸರು ಅವರನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿರುವುದಾಗಿ ತುಮಕೂರು ಜಿಲ್ಲಾ ಪೋಲಿಸ್ ಕಛೇರಿ ಸ್ಪಷ್ಟಪಡಿಸಿದೆ.

ಮಾರ್ಚ್ 12ರಂದು ತುಮಕೂರು ಎಸ್‌ಪಿ ಕೂಡ ಆರೋಪಿಯ ಬಂಧನದ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, “ಜಿಲ್ಲೆಯ ಗುಬ್ಬಿ ತಾಲೂಕಿನ ಪುರ ಗ್ರಾಮದ ಶ್ರೀಕಲ್ಲೇಶ್ವರ ಸ್ವಾಮಿ ರಥಕ್ಕೆ ಬೆಂಕಿ ಹಚ್ಚಿದವನ ಬಂಧನದ ಬಗ್ಗೆ ಪತ್ರಿಕಾ ಪ್ರಕಟಣೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದರು.

ಪೊಲೀಸರ ಸ್ಪಷ್ಟನೆ ಪ್ರಕಾರ, ರಥಕ್ಕೆ ಬೆಂಕಿ ಹಚ್ಚಿದ ಆರೋಪಿ ಹಿಂದೂ ಧರ್ಮಕ್ಕೆ ಸೇರಿದವನೇ ಹೊರತು ಮುಸ್ಲಿಮನಲ್ಲ ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...