Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಭಾರತೀಯ ಸೈನ್ಯದ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ ಎಂಬುದು ಸುಳ್ಳು ಸುದ್ದಿ

ಫ್ಯಾಕ್ಟ್‌ಚೆಕ್: ಭಾರತೀಯ ಸೈನ್ಯದ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ ಎಂಬುದು ಸುಳ್ಳು ಸುದ್ದಿ

- Advertisement -
- Advertisement -

ಕೇಂದ್ರ ಸರ್ಕಾರದ ವಿವಿಧ ನೀತಿಗಳ ವಿರುದ್ಧ ದೆಹಲಿಯಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸದಸ್ಯರು ನಡೆಸಿದ ಪ್ರತಿಭಟನೆಯ ಎರಡು ಚಿತ್ರಗಳನ್ನು ಭಾರತೀಯ ಸೈನ್ಯದ ವಿರುದ್ಧ ಪ್ರತಿಭಟನೆ ಎಂದು ವಾಟ್ಸಾಪ್ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಸೋಮವಾರ ರಾತ್ರಿ ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ಗಡಿ ಉದ್ವಿಗ್ನತೆ ಹೆಚ್ಚಾದ ನಂತರ ಕಮಾಂಡಿಂಗ್ ಅಧಿಕಾರಿ ಸೇರಿದಂತೆ ಇಪ್ಪತ್ತು ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಂತದಲ್ಲಿ ಸಾವಿನ ಸಂಖ್ಯೆ ನಿಖರವಾಗಿಲ್ಲವಾದರೂ ಚೀನಾದ ಸೈನಿಕರು ಸಹ ಸಾವುನೋವುಗಳನ್ನು ಅನುಭವಿಸಿದ್ದಾರೆ ಎಂದು ವರದಿಯಾಗಿದೆ.

ಚೀನಾದ ಸೈನಿಕರ ಸಾವಿನ ಪ್ರತೀಕಾರಕ್ಕಾಗಿ ಸಿಪಿಐ (ಎಂ) ಪ್ರತಿಭಟನೆ ನಡೆಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿದೆ.

भारतीय लष्कराने चीनच्या ५ सैनिकांना उडवल्यानंतर कम्युनिस्ट पार्टी ऑफ इंडियाच्या नेत्यांनी ❌? लष्कराविरोधात दिल्लीत रॅली काढून घोषणाबाजी केली. सीताराम येचुरी, वृंदा करात, प्रकाश करात आदि..

Posted by Bharat Sumati Hiralal Raut on Tuesday, June 16, 2020

ಅದೇ ರೀತಿ ಕರ್ನಾಟಕದ ಪ್ರವಾಸೋಧ್ಯಮ ಇಲಾಖೆ ಸಚಿವರಾದ ಸಿ.ಟಿ ರವಿಯವರು ಸಹ ಅದೇ ಅ‍ರ್ಥದಲ್ಲಿ ಚೀನಿಯರ ರಕ್ಷಣೆಗೆ ಬರುವ ಕಮ್ಮೀಸ್‌ (ಕಮ್ಯುನಿಸ್ಟರನ್ನು ಹೀಯಾಳಿಸುವ ಪದ) ಎಂದು ಟ್ವೀಟ್‌ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್‌:

ಸಿಪಿಐ (ಎಂ) ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ಪರಿಶೀಲಿಸಿದಾಗ ಪ್ರತಿಭಟನೆಯ ಚಿತ್ರಗಳು ಕಾಣುತ್ತವೆ. ಅದರಲ್ಲಿ ‘ಮೋದಿ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಅಖಿಲ ಭಾರತ ಪ್ರತಿಭಟನೆ’ ಎಂಬ ಶೀರ್ಷಿಕೆಯೊಂದಿಗೆ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

ಸಿಪಿಐ (ಎಂ) ಜೂನ್ 16 ರ ಮಂಗಳವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಿತು ಎಂದು ದಿ ಹಿಂದೂ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ. ತಕ್ಷಣದ ನಗದು ವರ್ಗಾವಣೆ, ಆಹಾರದ ಉಚಿತ ವಿತರಣೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯ ವ್ಯಾಪ್ತಿಯನ್ನು ಮರು ಮೌಲ್ಯಮಾಪನ ಮಾಡುವ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಪ್ರತಿಭಟನೆ ನಡೆದಿದೆ ಎಂದು ಪತ್ರಿಕಾ ವರದಿಗಳು ತಿಳಿಸಿವೆ.

ಸಿಪಿಐ (ಎಂ)ನ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಫೋಟೊವನ್ನು ಜೂಮ್‌ ಮಾಡಿ ನೋಡಿದಾಗ ಅವರ ಕೈಯಲ್ಲಿನ ಭಿತ್ತಿಫಲಕದಲ್ಲಿ ‘ಆದಾಯ ತೆರಿಗೆ ಆವರಣದ ಹೊರಗಿನ ಎಲ್ಲರಿಗೂ ಮೂರು ತಿಂಗಳವರೆಗೆ 7500 ರೂಗಳನ್ನು ತಕ್ಷಣ ಪಾವತಿಸಿ’ ಎಂದು ಬರೆಯಲಾಗಿದೆ.

ಅದೇ ರೀತಿ ಬೃಂದಾ ಕಾರಟ್‌ ಅವರು ಹಿಡಿದಿರುವ ಪೋಸ್ಟರ್‌ನಲ್ಲಿ ‘ಅಗತ್ಯವಿರುವ ಎಲ್ಲ ವ್ಯಕ್ತಿಗಳಿಗೆ ಆರು ತಿಂಗಳವರೆಗೆ ತಿಂಗಳಿಗೆ 10 ಕಿ.ಗ್ರಾಂ ಆಹಾರ ಧಾನ್ಯಗಳನ್ನು ಉಚಿತವಾಗಿ ಒದಗಿಸಬೇಕು’ ಎಂದು ಬರೆಯಲಾಗಿದೆ.

ಅಲ್ಲದೇ ಅದೇ ದಿನ ಸೀತಾರಾಮ್ ಯೆಚೂರಿ ಅವರು ಟ್ವೀಟ್ ಮಾಡಿ ಪ್ರಾಣ ಕಳೆದುಕೊಂಡ ಅಧಿಕಾರಿ ಮತ್ತು ಭಾರತೀಯ ಸೈನಿಕರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಾಗಾಗಿ ಮೇಲಿನ ಆರೋಪವು ಸುಳ್ಳು ಎಂದು ಸಾಬೀತಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಸೋನಿಯಾ ಗಾಂಧಿ ಕಾಲಿಗೆ ಬಿದ್ದ ಮನಮೋಹನ್‌ ಸಿಂಗ್?‌ ಈ ಘಟನೆ ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...