Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಭಾರತೀಯ ಸೈನ್ಯದ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ ಎಂಬುದು ಸುಳ್ಳು ಸುದ್ದಿ

ಫ್ಯಾಕ್ಟ್‌ಚೆಕ್: ಭಾರತೀಯ ಸೈನ್ಯದ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ ಎಂಬುದು ಸುಳ್ಳು ಸುದ್ದಿ

- Advertisement -
- Advertisement -

ಕೇಂದ್ರ ಸರ್ಕಾರದ ವಿವಿಧ ನೀತಿಗಳ ವಿರುದ್ಧ ದೆಹಲಿಯಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸದಸ್ಯರು ನಡೆಸಿದ ಪ್ರತಿಭಟನೆಯ ಎರಡು ಚಿತ್ರಗಳನ್ನು ಭಾರತೀಯ ಸೈನ್ಯದ ವಿರುದ್ಧ ಪ್ರತಿಭಟನೆ ಎಂದು ವಾಟ್ಸಾಪ್ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಸೋಮವಾರ ರಾತ್ರಿ ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ಗಡಿ ಉದ್ವಿಗ್ನತೆ ಹೆಚ್ಚಾದ ನಂತರ ಕಮಾಂಡಿಂಗ್ ಅಧಿಕಾರಿ ಸೇರಿದಂತೆ ಇಪ್ಪತ್ತು ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಂತದಲ್ಲಿ ಸಾವಿನ ಸಂಖ್ಯೆ ನಿಖರವಾಗಿಲ್ಲವಾದರೂ ಚೀನಾದ ಸೈನಿಕರು ಸಹ ಸಾವುನೋವುಗಳನ್ನು ಅನುಭವಿಸಿದ್ದಾರೆ ಎಂದು ವರದಿಯಾಗಿದೆ.

ಚೀನಾದ ಸೈನಿಕರ ಸಾವಿನ ಪ್ರತೀಕಾರಕ್ಕಾಗಿ ಸಿಪಿಐ (ಎಂ) ಪ್ರತಿಭಟನೆ ನಡೆಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿದೆ.

भारतीय लष्कराने चीनच्या ५ सैनिकांना उडवल्यानंतर कम्युनिस्ट पार्टी ऑफ इंडियाच्या नेत्यांनी ❌? लष्कराविरोधात दिल्लीत रॅली काढून घोषणाबाजी केली. सीताराम येचुरी, वृंदा करात, प्रकाश करात आदि..

Posted by Bharat Sumati Hiralal Raut on Tuesday, June 16, 2020

ಅದೇ ರೀತಿ ಕರ್ನಾಟಕದ ಪ್ರವಾಸೋಧ್ಯಮ ಇಲಾಖೆ ಸಚಿವರಾದ ಸಿ.ಟಿ ರವಿಯವರು ಸಹ ಅದೇ ಅ‍ರ್ಥದಲ್ಲಿ ಚೀನಿಯರ ರಕ್ಷಣೆಗೆ ಬರುವ ಕಮ್ಮೀಸ್‌ (ಕಮ್ಯುನಿಸ್ಟರನ್ನು ಹೀಯಾಳಿಸುವ ಪದ) ಎಂದು ಟ್ವೀಟ್‌ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್‌:

ಸಿಪಿಐ (ಎಂ) ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ಪರಿಶೀಲಿಸಿದಾಗ ಪ್ರತಿಭಟನೆಯ ಚಿತ್ರಗಳು ಕಾಣುತ್ತವೆ. ಅದರಲ್ಲಿ ‘ಮೋದಿ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಅಖಿಲ ಭಾರತ ಪ್ರತಿಭಟನೆ’ ಎಂಬ ಶೀರ್ಷಿಕೆಯೊಂದಿಗೆ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

ಸಿಪಿಐ (ಎಂ) ಜೂನ್ 16 ರ ಮಂಗಳವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಿತು ಎಂದು ದಿ ಹಿಂದೂ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ. ತಕ್ಷಣದ ನಗದು ವರ್ಗಾವಣೆ, ಆಹಾರದ ಉಚಿತ ವಿತರಣೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯ ವ್ಯಾಪ್ತಿಯನ್ನು ಮರು ಮೌಲ್ಯಮಾಪನ ಮಾಡುವ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಪ್ರತಿಭಟನೆ ನಡೆದಿದೆ ಎಂದು ಪತ್ರಿಕಾ ವರದಿಗಳು ತಿಳಿಸಿವೆ.

ಸಿಪಿಐ (ಎಂ)ನ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಫೋಟೊವನ್ನು ಜೂಮ್‌ ಮಾಡಿ ನೋಡಿದಾಗ ಅವರ ಕೈಯಲ್ಲಿನ ಭಿತ್ತಿಫಲಕದಲ್ಲಿ ‘ಆದಾಯ ತೆರಿಗೆ ಆವರಣದ ಹೊರಗಿನ ಎಲ್ಲರಿಗೂ ಮೂರು ತಿಂಗಳವರೆಗೆ 7500 ರೂಗಳನ್ನು ತಕ್ಷಣ ಪಾವತಿಸಿ’ ಎಂದು ಬರೆಯಲಾಗಿದೆ.

ಅದೇ ರೀತಿ ಬೃಂದಾ ಕಾರಟ್‌ ಅವರು ಹಿಡಿದಿರುವ ಪೋಸ್ಟರ್‌ನಲ್ಲಿ ‘ಅಗತ್ಯವಿರುವ ಎಲ್ಲ ವ್ಯಕ್ತಿಗಳಿಗೆ ಆರು ತಿಂಗಳವರೆಗೆ ತಿಂಗಳಿಗೆ 10 ಕಿ.ಗ್ರಾಂ ಆಹಾರ ಧಾನ್ಯಗಳನ್ನು ಉಚಿತವಾಗಿ ಒದಗಿಸಬೇಕು’ ಎಂದು ಬರೆಯಲಾಗಿದೆ.

ಅಲ್ಲದೇ ಅದೇ ದಿನ ಸೀತಾರಾಮ್ ಯೆಚೂರಿ ಅವರು ಟ್ವೀಟ್ ಮಾಡಿ ಪ್ರಾಣ ಕಳೆದುಕೊಂಡ ಅಧಿಕಾರಿ ಮತ್ತು ಭಾರತೀಯ ಸೈನಿಕರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಾಗಾಗಿ ಮೇಲಿನ ಆರೋಪವು ಸುಳ್ಳು ಎಂದು ಸಾಬೀತಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಸೋನಿಯಾ ಗಾಂಧಿ ಕಾಲಿಗೆ ಬಿದ್ದ ಮನಮೋಹನ್‌ ಸಿಂಗ್?‌ ಈ ಘಟನೆ ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...