Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಭಾರತೀಯ ಸೈನ್ಯದ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ ಎಂಬುದು ಸುಳ್ಳು ಸುದ್ದಿ

ಫ್ಯಾಕ್ಟ್‌ಚೆಕ್: ಭಾರತೀಯ ಸೈನ್ಯದ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ ಎಂಬುದು ಸುಳ್ಳು ಸುದ್ದಿ

- Advertisement -
- Advertisement -

ಕೇಂದ್ರ ಸರ್ಕಾರದ ವಿವಿಧ ನೀತಿಗಳ ವಿರುದ್ಧ ದೆಹಲಿಯಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸದಸ್ಯರು ನಡೆಸಿದ ಪ್ರತಿಭಟನೆಯ ಎರಡು ಚಿತ್ರಗಳನ್ನು ಭಾರತೀಯ ಸೈನ್ಯದ ವಿರುದ್ಧ ಪ್ರತಿಭಟನೆ ಎಂದು ವಾಟ್ಸಾಪ್ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಸೋಮವಾರ ರಾತ್ರಿ ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ಗಡಿ ಉದ್ವಿಗ್ನತೆ ಹೆಚ್ಚಾದ ನಂತರ ಕಮಾಂಡಿಂಗ್ ಅಧಿಕಾರಿ ಸೇರಿದಂತೆ ಇಪ್ಪತ್ತು ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಂತದಲ್ಲಿ ಸಾವಿನ ಸಂಖ್ಯೆ ನಿಖರವಾಗಿಲ್ಲವಾದರೂ ಚೀನಾದ ಸೈನಿಕರು ಸಹ ಸಾವುನೋವುಗಳನ್ನು ಅನುಭವಿಸಿದ್ದಾರೆ ಎಂದು ವರದಿಯಾಗಿದೆ.

ಚೀನಾದ ಸೈನಿಕರ ಸಾವಿನ ಪ್ರತೀಕಾರಕ್ಕಾಗಿ ಸಿಪಿಐ (ಎಂ) ಪ್ರತಿಭಟನೆ ನಡೆಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿದೆ.

भारतीय लष्कराने चीनच्या ५ सैनिकांना उडवल्यानंतर कम्युनिस्ट पार्टी ऑफ इंडियाच्या नेत्यांनी ❌? लष्कराविरोधात दिल्लीत रॅली काढून घोषणाबाजी केली. सीताराम येचुरी, वृंदा करात, प्रकाश करात आदि..

Posted by Bharat Sumati Hiralal Raut on Tuesday, June 16, 2020

ಅದೇ ರೀತಿ ಕರ್ನಾಟಕದ ಪ್ರವಾಸೋಧ್ಯಮ ಇಲಾಖೆ ಸಚಿವರಾದ ಸಿ.ಟಿ ರವಿಯವರು ಸಹ ಅದೇ ಅ‍ರ್ಥದಲ್ಲಿ ಚೀನಿಯರ ರಕ್ಷಣೆಗೆ ಬರುವ ಕಮ್ಮೀಸ್‌ (ಕಮ್ಯುನಿಸ್ಟರನ್ನು ಹೀಯಾಳಿಸುವ ಪದ) ಎಂದು ಟ್ವೀಟ್‌ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್‌:

ಸಿಪಿಐ (ಎಂ) ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ಪರಿಶೀಲಿಸಿದಾಗ ಪ್ರತಿಭಟನೆಯ ಚಿತ್ರಗಳು ಕಾಣುತ್ತವೆ. ಅದರಲ್ಲಿ ‘ಮೋದಿ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಅಖಿಲ ಭಾರತ ಪ್ರತಿಭಟನೆ’ ಎಂಬ ಶೀರ್ಷಿಕೆಯೊಂದಿಗೆ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

ಸಿಪಿಐ (ಎಂ) ಜೂನ್ 16 ರ ಮಂಗಳವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಿತು ಎಂದು ದಿ ಹಿಂದೂ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ. ತಕ್ಷಣದ ನಗದು ವರ್ಗಾವಣೆ, ಆಹಾರದ ಉಚಿತ ವಿತರಣೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯ ವ್ಯಾಪ್ತಿಯನ್ನು ಮರು ಮೌಲ್ಯಮಾಪನ ಮಾಡುವ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಪ್ರತಿಭಟನೆ ನಡೆದಿದೆ ಎಂದು ಪತ್ರಿಕಾ ವರದಿಗಳು ತಿಳಿಸಿವೆ.

ಸಿಪಿಐ (ಎಂ)ನ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಫೋಟೊವನ್ನು ಜೂಮ್‌ ಮಾಡಿ ನೋಡಿದಾಗ ಅವರ ಕೈಯಲ್ಲಿನ ಭಿತ್ತಿಫಲಕದಲ್ಲಿ ‘ಆದಾಯ ತೆರಿಗೆ ಆವರಣದ ಹೊರಗಿನ ಎಲ್ಲರಿಗೂ ಮೂರು ತಿಂಗಳವರೆಗೆ 7500 ರೂಗಳನ್ನು ತಕ್ಷಣ ಪಾವತಿಸಿ’ ಎಂದು ಬರೆಯಲಾಗಿದೆ.

ಅದೇ ರೀತಿ ಬೃಂದಾ ಕಾರಟ್‌ ಅವರು ಹಿಡಿದಿರುವ ಪೋಸ್ಟರ್‌ನಲ್ಲಿ ‘ಅಗತ್ಯವಿರುವ ಎಲ್ಲ ವ್ಯಕ್ತಿಗಳಿಗೆ ಆರು ತಿಂಗಳವರೆಗೆ ತಿಂಗಳಿಗೆ 10 ಕಿ.ಗ್ರಾಂ ಆಹಾರ ಧಾನ್ಯಗಳನ್ನು ಉಚಿತವಾಗಿ ಒದಗಿಸಬೇಕು’ ಎಂದು ಬರೆಯಲಾಗಿದೆ.

ಅಲ್ಲದೇ ಅದೇ ದಿನ ಸೀತಾರಾಮ್ ಯೆಚೂರಿ ಅವರು ಟ್ವೀಟ್ ಮಾಡಿ ಪ್ರಾಣ ಕಳೆದುಕೊಂಡ ಅಧಿಕಾರಿ ಮತ್ತು ಭಾರತೀಯ ಸೈನಿಕರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಾಗಾಗಿ ಮೇಲಿನ ಆರೋಪವು ಸುಳ್ಳು ಎಂದು ಸಾಬೀತಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಸೋನಿಯಾ ಗಾಂಧಿ ಕಾಲಿಗೆ ಬಿದ್ದ ಮನಮೋಹನ್‌ ಸಿಂಗ್?‌ ಈ ಘಟನೆ ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...