Homeಫ್ಯಾಕ್ಟ್‌ಚೆಕ್FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

- Advertisement -
- Advertisement -

ಉತ್ತರ ಪ್ರದೇಶದ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಟೋಲ್ ಕಟ್ಟುವಂತೆ ಕೇಳಿದ್ದಕ್ಕೆ ಟೋಲ್ ಪ್ಲಾಝಾವನ್ನು ಜೆಸಿಬಿ ಮೂಲಕ ಧ್ವಂಸಗೈದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತ ವಿಡಿಯೋ, ಪೋಟೋಗಳನ್ನು ಹಂಚಿಕೊಂಡಿರುವ ಅನೇಕ ಜನರು ಬಂಧಿತ ಆರೋಪಿ ಮುಸ್ಲಿಂ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಘಟನೆಯ ವಿಡಿಯೋ ಮತ್ತು ಆರೋಪಿಯನ್ನು ಪೊಲೀಸರು ಬಂಧಿಸಿರುವ ಫೋಟೋವನ್ನು ಹಂಚಿಕೊಂಡಿದ್ದ ಟೈಮ್ಸ್ ನೌ ವಾಹಿನಿಯ ನಿರೂಪಕ ಪ್ರಾಣೇಶ್ ಕುಮಾರ್ ರಾಯ್ ” ಮೊಹಮ್ಮದ್ ಸಾಜಿದ್ ಎಂಬ ಬುಲ್ಡೋಝರ್ ಚಾಲಕನೊಂದಿಗೆ ಟೋಲ್ ಕಟ್ಟುವಂತೆ ಕೇಳಿದ್ದಕ್ಕೆ, ಬುಲ್ಡೋಝರ್ ಮೂಲಕ ಟೋಲ್‌ ಪ್ಲಾಝಾವನ್ನು ಧ್ವಂಸಗೈದಿದ್ದಾನೆ. ಯುಪಿ ಪೊಲೀಸರು ಈತನನ್ನು ಜೈಲಿಗಟ್ಟಿ” ಎಂದು ಬರೆದುಕೊಂಡಿದ್ದರು. ಬಳಿಕ ಅವರು ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ಎಸ್‌ಕೆ ಚಕ್ರವರ್ತಿ ಎಂಬ ಮತ್ತೋರ್ವ ಎಕ್ಸ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು ಮೊಹಮ್ಮದ್ ಸಾಜಿದ್‌ನ ದಾದಾಗಿರಿ. ಎಂ.ಡಿ ಸಾಜಿದ್ ಅಲೀ ಎಂಬಾತ ಟೋಲ್‌ ಕಟ್ಟುವಂತೆ ಕೇಳಿದ್ದಕ್ಕೆ ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ್ದಾನೆ. ಗಂಟೆಯೊಳಗೆ ಆತನ ಬುಲ್ಡೋಝರ್ ವಶಕ್ಕೆ ಪಡೆಯಲಾಗಿದೆ. ಸಾಜಿದ್ ಅಲೀ ವಿರುದ್ದ ಐಪಿಸಿ ಸೆಕ್ಷನ್ 307ರ ಅಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಎಕ್ಸ್‌ ಬಳಕೆದಾರರು ಘಟನೆಯ ವಿಡಿಯೋ ಹಂಚಿಕೊಂಡು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಬುಲ್ಡೋಝರ್ ಕಾರ್ಯಾಚರಣೆಯನ್ನು ನೆನಪಿಸಿದ್ದಾರೆ. ಆರೋಪಿಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಧ್ವಂಸಗೈಯ್ಯುವ ಸರ್ಕಾರ, ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ ವ್ಯಕ್ತಿಯ ಮನೆಯನ್ನೂ ಕೂಡ ಬುಲ್ಡೋಝರ್‌ನಿಂದ ಧ್ವಂಸಗೈಯ್ಯಲಿದೆ ಎಂದು ಪರೋಕ್ಷವಾಗಿ ಸಂತಸ ವ್ಯಕ್ತಪಡಿಸಿದ್ದಾರೆ. ಆರೋಪಿ ಮುಸ್ಲಿಂ ಎಂದು ಸುದ್ದಿ ಹಬ್ಬಿದ್ದು ಇವರ ಖುಷಿಗೆ ಕಾರಣವಾಗಿದೆ.

ಫ್ಯಾಕ್ಟ್‌ ಚೆಕ್ : ವರದಿಗಳ ಪ್ರಕಾರ, ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ ವ್ಯಕ್ತಿಯ ಹೆಸರು ಧೀರಜ್ ಎಂದು ತಿಳಿದು ಬಂದಿದೆ. ಆದ್ದರಿಂದ ಆತ ಮುಸ್ಲಿಂ ಅಲ್ಲ ಎಂಬುವುದು ಖಚಿತ.

ಘಟನೆಯ ಕುರಿತು ಜೂನ್‌ 11ರಂದು ಡೆಕ್ಕನ್ ಹೆರಾಲ್ಡ್ ವೆಬ್‌ಸೈಟ್‌ ಪ್ರಕಟಿಸಿರುವ ವರದಿಯಲ್ಲಿ ಆರೋಪಿಯ ಹೆಸರು ಧೀರಜ್ ಎಂದು ಉಲ್ಲೇಖಿಸಿದೆ.

ಇಂದು (ಜೂನ್ 12) ಎಕ್ಸ್ ಮೂಲಕ ಬಗ್ಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶದ ಹಾಪುರ್‌ ಎಸ್‌ಪಿ ಅಭಿಶೇಕ್ ವರ್ಮಾ, “ನಿನ್ನೆ ನಡೆದ ಪಿಲಾಖುವಾ ಟೋಲ್ ಪ್ಲಾಝಾ ಘಟನೆಯ ಆರೋಪಿ ಧೀರಜ್‌ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನಿಖೆ ಚುರುಕುಗೊಳಿಸಲಾಗಿದೆ. ಆರೋಪಿ ಅರ್ಹ ಶಿಕ್ಷೆಯನ್ನು ಪಡೆಯಲಿದ್ದಾನೆ” ಎಂದು ತಿಳಿಸಿದ್ದಾರೆ.
ಎಸ್‌ಪಿ ಅಭಿಶೇಕ್ ವರ್ಮಾ ಪ್ರಕಾರ, ಫ್ಯಾಕ್ಟರಿಯೊಂದರ ಕೆಲಸಕ್ಕಾಗಿ ಆರೋಪಿ ಧೀರಜ್ ತನ್ನ ಬುಲ್ಡೋಝರ್ ತೆಗೆದುಕೊಂಡು ಹೋಗಿದ್ದ. ಆತ ಪರವಾನಿಗೆ ಹೊಂದಿರಲಿಲ್ಲ. ಫ್ಯಾಕ್ಟರಿ ಮಾಲೀಕನ ಹೆಸರು ಸಾಜಿದ್. ಬುಲ್ಡೋಝರ್ ಚಾಲಕನ ಹೆಸರು ಧೀರಜ್. ಟೋಲ್ ಪ್ಲಾಝಾ ಧ್ವಂಸಗೈದ ಆರೋಪಿಯ ಹೆಸರು ಧೀರಜ್ ಎಂದಾಗಿದೆ.

ಜೂನ್ 11, 2024ರ ಮಂಗಳವಾರ ಬೆಳಿಗ್ಗೆ ಉತ್ತರ ಪ್ರದೇಶದ ಹಾಪುರ್ ಸಮೀಪದ ಪಿಲಾಖುವಾದ ಚರಾಸಿ ಟೋಲ್ ಪ್ಲಾಝಾದ ಮೇಲೆ ಬುಲ್ಡೋಝರ್‌ನಿಂದ ದಾಳಿ ಮಾಡಲಾಗಿದೆ. ಟೋಲ್ ಸಿಬ್ಬಂದಿ ಹಣ ಕೇಳಿದ್ದಕ್ಕೆ ಕುಡಿದ ಮತ್ತಿನಲ್ಲಿದ್ದ ಬುಲ್ಡೋಝರ್ ಚಾಲಕ ಧೀರಜ್ ದಾಳಿ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಗಮನಿಸಿ : ಅಪರಾಧಿಯನ್ನು ಧರ್ಮದ ಆಧಾರದಲ್ಲಿ ಗುರುತಿಸುವುದು ತಪ್ಪು. ಬುಲ್ಡೋಝರ್ ದಾಳಿಯ ಘಟನೆಗೆ ಕೋಮು ಬಣ್ಣ ಬಳಿದು ಒಂದು ಸಮುದಾಯವನ್ನು ಗುರಿಯಾಗಿಸುತ್ತಿರುವ ಹಿನ್ನೆಲೆ, ನಾವು ಈ ಸುದ್ದಿಯಲ್ಲಿ ಸತ್ಯಾಸತ್ಯತೆ ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದನ್ನೂ ಓದಿ : FACT CHECK : ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...