Homeಫ್ಯಾಕ್ಟ್‌ಚೆಕ್FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

- Advertisement -
- Advertisement -

ಉತ್ತರ ಪ್ರದೇಶದ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಟೋಲ್ ಕಟ್ಟುವಂತೆ ಕೇಳಿದ್ದಕ್ಕೆ ಟೋಲ್ ಪ್ಲಾಝಾವನ್ನು ಜೆಸಿಬಿ ಮೂಲಕ ಧ್ವಂಸಗೈದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತ ವಿಡಿಯೋ, ಪೋಟೋಗಳನ್ನು ಹಂಚಿಕೊಂಡಿರುವ ಅನೇಕ ಜನರು ಬಂಧಿತ ಆರೋಪಿ ಮುಸ್ಲಿಂ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಘಟನೆಯ ವಿಡಿಯೋ ಮತ್ತು ಆರೋಪಿಯನ್ನು ಪೊಲೀಸರು ಬಂಧಿಸಿರುವ ಫೋಟೋವನ್ನು ಹಂಚಿಕೊಂಡಿದ್ದ ಟೈಮ್ಸ್ ನೌ ವಾಹಿನಿಯ ನಿರೂಪಕ ಪ್ರಾಣೇಶ್ ಕುಮಾರ್ ರಾಯ್ ” ಮೊಹಮ್ಮದ್ ಸಾಜಿದ್ ಎಂಬ ಬುಲ್ಡೋಝರ್ ಚಾಲಕನೊಂದಿಗೆ ಟೋಲ್ ಕಟ್ಟುವಂತೆ ಕೇಳಿದ್ದಕ್ಕೆ, ಬುಲ್ಡೋಝರ್ ಮೂಲಕ ಟೋಲ್‌ ಪ್ಲಾಝಾವನ್ನು ಧ್ವಂಸಗೈದಿದ್ದಾನೆ. ಯುಪಿ ಪೊಲೀಸರು ಈತನನ್ನು ಜೈಲಿಗಟ್ಟಿ” ಎಂದು ಬರೆದುಕೊಂಡಿದ್ದರು. ಬಳಿಕ ಅವರು ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ಎಸ್‌ಕೆ ಚಕ್ರವರ್ತಿ ಎಂಬ ಮತ್ತೋರ್ವ ಎಕ್ಸ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು ಮೊಹಮ್ಮದ್ ಸಾಜಿದ್‌ನ ದಾದಾಗಿರಿ. ಎಂ.ಡಿ ಸಾಜಿದ್ ಅಲೀ ಎಂಬಾತ ಟೋಲ್‌ ಕಟ್ಟುವಂತೆ ಕೇಳಿದ್ದಕ್ಕೆ ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ್ದಾನೆ. ಗಂಟೆಯೊಳಗೆ ಆತನ ಬುಲ್ಡೋಝರ್ ವಶಕ್ಕೆ ಪಡೆಯಲಾಗಿದೆ. ಸಾಜಿದ್ ಅಲೀ ವಿರುದ್ದ ಐಪಿಸಿ ಸೆಕ್ಷನ್ 307ರ ಅಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಎಕ್ಸ್‌ ಬಳಕೆದಾರರು ಘಟನೆಯ ವಿಡಿಯೋ ಹಂಚಿಕೊಂಡು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಬುಲ್ಡೋಝರ್ ಕಾರ್ಯಾಚರಣೆಯನ್ನು ನೆನಪಿಸಿದ್ದಾರೆ. ಆರೋಪಿಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಧ್ವಂಸಗೈಯ್ಯುವ ಸರ್ಕಾರ, ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ ವ್ಯಕ್ತಿಯ ಮನೆಯನ್ನೂ ಕೂಡ ಬುಲ್ಡೋಝರ್‌ನಿಂದ ಧ್ವಂಸಗೈಯ್ಯಲಿದೆ ಎಂದು ಪರೋಕ್ಷವಾಗಿ ಸಂತಸ ವ್ಯಕ್ತಪಡಿಸಿದ್ದಾರೆ. ಆರೋಪಿ ಮುಸ್ಲಿಂ ಎಂದು ಸುದ್ದಿ ಹಬ್ಬಿದ್ದು ಇವರ ಖುಷಿಗೆ ಕಾರಣವಾಗಿದೆ.

ಫ್ಯಾಕ್ಟ್‌ ಚೆಕ್ : ವರದಿಗಳ ಪ್ರಕಾರ, ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ ವ್ಯಕ್ತಿಯ ಹೆಸರು ಧೀರಜ್ ಎಂದು ತಿಳಿದು ಬಂದಿದೆ. ಆದ್ದರಿಂದ ಆತ ಮುಸ್ಲಿಂ ಅಲ್ಲ ಎಂಬುವುದು ಖಚಿತ.

ಘಟನೆಯ ಕುರಿತು ಜೂನ್‌ 11ರಂದು ಡೆಕ್ಕನ್ ಹೆರಾಲ್ಡ್ ವೆಬ್‌ಸೈಟ್‌ ಪ್ರಕಟಿಸಿರುವ ವರದಿಯಲ್ಲಿ ಆರೋಪಿಯ ಹೆಸರು ಧೀರಜ್ ಎಂದು ಉಲ್ಲೇಖಿಸಿದೆ.

ಇಂದು (ಜೂನ್ 12) ಎಕ್ಸ್ ಮೂಲಕ ಬಗ್ಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶದ ಹಾಪುರ್‌ ಎಸ್‌ಪಿ ಅಭಿಶೇಕ್ ವರ್ಮಾ, “ನಿನ್ನೆ ನಡೆದ ಪಿಲಾಖುವಾ ಟೋಲ್ ಪ್ಲಾಝಾ ಘಟನೆಯ ಆರೋಪಿ ಧೀರಜ್‌ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನಿಖೆ ಚುರುಕುಗೊಳಿಸಲಾಗಿದೆ. ಆರೋಪಿ ಅರ್ಹ ಶಿಕ್ಷೆಯನ್ನು ಪಡೆಯಲಿದ್ದಾನೆ” ಎಂದು ತಿಳಿಸಿದ್ದಾರೆ.
ಎಸ್‌ಪಿ ಅಭಿಶೇಕ್ ವರ್ಮಾ ಪ್ರಕಾರ, ಫ್ಯಾಕ್ಟರಿಯೊಂದರ ಕೆಲಸಕ್ಕಾಗಿ ಆರೋಪಿ ಧೀರಜ್ ತನ್ನ ಬುಲ್ಡೋಝರ್ ತೆಗೆದುಕೊಂಡು ಹೋಗಿದ್ದ. ಆತ ಪರವಾನಿಗೆ ಹೊಂದಿರಲಿಲ್ಲ. ಫ್ಯಾಕ್ಟರಿ ಮಾಲೀಕನ ಹೆಸರು ಸಾಜಿದ್. ಬುಲ್ಡೋಝರ್ ಚಾಲಕನ ಹೆಸರು ಧೀರಜ್. ಟೋಲ್ ಪ್ಲಾಝಾ ಧ್ವಂಸಗೈದ ಆರೋಪಿಯ ಹೆಸರು ಧೀರಜ್ ಎಂದಾಗಿದೆ.

ಜೂನ್ 11, 2024ರ ಮಂಗಳವಾರ ಬೆಳಿಗ್ಗೆ ಉತ್ತರ ಪ್ರದೇಶದ ಹಾಪುರ್ ಸಮೀಪದ ಪಿಲಾಖುವಾದ ಚರಾಸಿ ಟೋಲ್ ಪ್ಲಾಝಾದ ಮೇಲೆ ಬುಲ್ಡೋಝರ್‌ನಿಂದ ದಾಳಿ ಮಾಡಲಾಗಿದೆ. ಟೋಲ್ ಸಿಬ್ಬಂದಿ ಹಣ ಕೇಳಿದ್ದಕ್ಕೆ ಕುಡಿದ ಮತ್ತಿನಲ್ಲಿದ್ದ ಬುಲ್ಡೋಝರ್ ಚಾಲಕ ಧೀರಜ್ ದಾಳಿ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಗಮನಿಸಿ : ಅಪರಾಧಿಯನ್ನು ಧರ್ಮದ ಆಧಾರದಲ್ಲಿ ಗುರುತಿಸುವುದು ತಪ್ಪು. ಬುಲ್ಡೋಝರ್ ದಾಳಿಯ ಘಟನೆಗೆ ಕೋಮು ಬಣ್ಣ ಬಳಿದು ಒಂದು ಸಮುದಾಯವನ್ನು ಗುರಿಯಾಗಿಸುತ್ತಿರುವ ಹಿನ್ನೆಲೆ, ನಾವು ಈ ಸುದ್ದಿಯಲ್ಲಿ ಸತ್ಯಾಸತ್ಯತೆ ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದನ್ನೂ ಓದಿ : FACT CHECK : ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...