Homeಫ್ಯಾಕ್ಟ್‌ಚೆಕ್FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

- Advertisement -
- Advertisement -

ಉತ್ತರ ಪ್ರದೇಶದ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಟೋಲ್ ಕಟ್ಟುವಂತೆ ಕೇಳಿದ್ದಕ್ಕೆ ಟೋಲ್ ಪ್ಲಾಝಾವನ್ನು ಜೆಸಿಬಿ ಮೂಲಕ ಧ್ವಂಸಗೈದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತ ವಿಡಿಯೋ, ಪೋಟೋಗಳನ್ನು ಹಂಚಿಕೊಂಡಿರುವ ಅನೇಕ ಜನರು ಬಂಧಿತ ಆರೋಪಿ ಮುಸ್ಲಿಂ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಘಟನೆಯ ವಿಡಿಯೋ ಮತ್ತು ಆರೋಪಿಯನ್ನು ಪೊಲೀಸರು ಬಂಧಿಸಿರುವ ಫೋಟೋವನ್ನು ಹಂಚಿಕೊಂಡಿದ್ದ ಟೈಮ್ಸ್ ನೌ ವಾಹಿನಿಯ ನಿರೂಪಕ ಪ್ರಾಣೇಶ್ ಕುಮಾರ್ ರಾಯ್ ” ಮೊಹಮ್ಮದ್ ಸಾಜಿದ್ ಎಂಬ ಬುಲ್ಡೋಝರ್ ಚಾಲಕನೊಂದಿಗೆ ಟೋಲ್ ಕಟ್ಟುವಂತೆ ಕೇಳಿದ್ದಕ್ಕೆ, ಬುಲ್ಡೋಝರ್ ಮೂಲಕ ಟೋಲ್‌ ಪ್ಲಾಝಾವನ್ನು ಧ್ವಂಸಗೈದಿದ್ದಾನೆ. ಯುಪಿ ಪೊಲೀಸರು ಈತನನ್ನು ಜೈಲಿಗಟ್ಟಿ” ಎಂದು ಬರೆದುಕೊಂಡಿದ್ದರು. ಬಳಿಕ ಅವರು ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ಎಸ್‌ಕೆ ಚಕ್ರವರ್ತಿ ಎಂಬ ಮತ್ತೋರ್ವ ಎಕ್ಸ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು ಮೊಹಮ್ಮದ್ ಸಾಜಿದ್‌ನ ದಾದಾಗಿರಿ. ಎಂ.ಡಿ ಸಾಜಿದ್ ಅಲೀ ಎಂಬಾತ ಟೋಲ್‌ ಕಟ್ಟುವಂತೆ ಕೇಳಿದ್ದಕ್ಕೆ ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ್ದಾನೆ. ಗಂಟೆಯೊಳಗೆ ಆತನ ಬುಲ್ಡೋಝರ್ ವಶಕ್ಕೆ ಪಡೆಯಲಾಗಿದೆ. ಸಾಜಿದ್ ಅಲೀ ವಿರುದ್ದ ಐಪಿಸಿ ಸೆಕ್ಷನ್ 307ರ ಅಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಎಕ್ಸ್‌ ಬಳಕೆದಾರರು ಘಟನೆಯ ವಿಡಿಯೋ ಹಂಚಿಕೊಂಡು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಬುಲ್ಡೋಝರ್ ಕಾರ್ಯಾಚರಣೆಯನ್ನು ನೆನಪಿಸಿದ್ದಾರೆ. ಆರೋಪಿಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಧ್ವಂಸಗೈಯ್ಯುವ ಸರ್ಕಾರ, ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ ವ್ಯಕ್ತಿಯ ಮನೆಯನ್ನೂ ಕೂಡ ಬುಲ್ಡೋಝರ್‌ನಿಂದ ಧ್ವಂಸಗೈಯ್ಯಲಿದೆ ಎಂದು ಪರೋಕ್ಷವಾಗಿ ಸಂತಸ ವ್ಯಕ್ತಪಡಿಸಿದ್ದಾರೆ. ಆರೋಪಿ ಮುಸ್ಲಿಂ ಎಂದು ಸುದ್ದಿ ಹಬ್ಬಿದ್ದು ಇವರ ಖುಷಿಗೆ ಕಾರಣವಾಗಿದೆ.

ಫ್ಯಾಕ್ಟ್‌ ಚೆಕ್ : ವರದಿಗಳ ಪ್ರಕಾರ, ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ ವ್ಯಕ್ತಿಯ ಹೆಸರು ಧೀರಜ್ ಎಂದು ತಿಳಿದು ಬಂದಿದೆ. ಆದ್ದರಿಂದ ಆತ ಮುಸ್ಲಿಂ ಅಲ್ಲ ಎಂಬುವುದು ಖಚಿತ.

ಘಟನೆಯ ಕುರಿತು ಜೂನ್‌ 11ರಂದು ಡೆಕ್ಕನ್ ಹೆರಾಲ್ಡ್ ವೆಬ್‌ಸೈಟ್‌ ಪ್ರಕಟಿಸಿರುವ ವರದಿಯಲ್ಲಿ ಆರೋಪಿಯ ಹೆಸರು ಧೀರಜ್ ಎಂದು ಉಲ್ಲೇಖಿಸಿದೆ.

ಇಂದು (ಜೂನ್ 12) ಎಕ್ಸ್ ಮೂಲಕ ಬಗ್ಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶದ ಹಾಪುರ್‌ ಎಸ್‌ಪಿ ಅಭಿಶೇಕ್ ವರ್ಮಾ, “ನಿನ್ನೆ ನಡೆದ ಪಿಲಾಖುವಾ ಟೋಲ್ ಪ್ಲಾಝಾ ಘಟನೆಯ ಆರೋಪಿ ಧೀರಜ್‌ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನಿಖೆ ಚುರುಕುಗೊಳಿಸಲಾಗಿದೆ. ಆರೋಪಿ ಅರ್ಹ ಶಿಕ್ಷೆಯನ್ನು ಪಡೆಯಲಿದ್ದಾನೆ” ಎಂದು ತಿಳಿಸಿದ್ದಾರೆ.
ಎಸ್‌ಪಿ ಅಭಿಶೇಕ್ ವರ್ಮಾ ಪ್ರಕಾರ, ಫ್ಯಾಕ್ಟರಿಯೊಂದರ ಕೆಲಸಕ್ಕಾಗಿ ಆರೋಪಿ ಧೀರಜ್ ತನ್ನ ಬುಲ್ಡೋಝರ್ ತೆಗೆದುಕೊಂಡು ಹೋಗಿದ್ದ. ಆತ ಪರವಾನಿಗೆ ಹೊಂದಿರಲಿಲ್ಲ. ಫ್ಯಾಕ್ಟರಿ ಮಾಲೀಕನ ಹೆಸರು ಸಾಜಿದ್. ಬುಲ್ಡೋಝರ್ ಚಾಲಕನ ಹೆಸರು ಧೀರಜ್. ಟೋಲ್ ಪ್ಲಾಝಾ ಧ್ವಂಸಗೈದ ಆರೋಪಿಯ ಹೆಸರು ಧೀರಜ್ ಎಂದಾಗಿದೆ.

ಜೂನ್ 11, 2024ರ ಮಂಗಳವಾರ ಬೆಳಿಗ್ಗೆ ಉತ್ತರ ಪ್ರದೇಶದ ಹಾಪುರ್ ಸಮೀಪದ ಪಿಲಾಖುವಾದ ಚರಾಸಿ ಟೋಲ್ ಪ್ಲಾಝಾದ ಮೇಲೆ ಬುಲ್ಡೋಝರ್‌ನಿಂದ ದಾಳಿ ಮಾಡಲಾಗಿದೆ. ಟೋಲ್ ಸಿಬ್ಬಂದಿ ಹಣ ಕೇಳಿದ್ದಕ್ಕೆ ಕುಡಿದ ಮತ್ತಿನಲ್ಲಿದ್ದ ಬುಲ್ಡೋಝರ್ ಚಾಲಕ ಧೀರಜ್ ದಾಳಿ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಗಮನಿಸಿ : ಅಪರಾಧಿಯನ್ನು ಧರ್ಮದ ಆಧಾರದಲ್ಲಿ ಗುರುತಿಸುವುದು ತಪ್ಪು. ಬುಲ್ಡೋಝರ್ ದಾಳಿಯ ಘಟನೆಗೆ ಕೋಮು ಬಣ್ಣ ಬಳಿದು ಒಂದು ಸಮುದಾಯವನ್ನು ಗುರಿಯಾಗಿಸುತ್ತಿರುವ ಹಿನ್ನೆಲೆ, ನಾವು ಈ ಸುದ್ದಿಯಲ್ಲಿ ಸತ್ಯಾಸತ್ಯತೆ ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದನ್ನೂ ಓದಿ : FACT CHECK : ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...