Homeಫ್ಯಾಕ್ಟ್‌ಚೆಕ್FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

- Advertisement -
- Advertisement -

ಉತ್ತರ ಪ್ರದೇಶದ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಟೋಲ್ ಕಟ್ಟುವಂತೆ ಕೇಳಿದ್ದಕ್ಕೆ ಟೋಲ್ ಪ್ಲಾಝಾವನ್ನು ಜೆಸಿಬಿ ಮೂಲಕ ಧ್ವಂಸಗೈದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತ ವಿಡಿಯೋ, ಪೋಟೋಗಳನ್ನು ಹಂಚಿಕೊಂಡಿರುವ ಅನೇಕ ಜನರು ಬಂಧಿತ ಆರೋಪಿ ಮುಸ್ಲಿಂ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಘಟನೆಯ ವಿಡಿಯೋ ಮತ್ತು ಆರೋಪಿಯನ್ನು ಪೊಲೀಸರು ಬಂಧಿಸಿರುವ ಫೋಟೋವನ್ನು ಹಂಚಿಕೊಂಡಿದ್ದ ಟೈಮ್ಸ್ ನೌ ವಾಹಿನಿಯ ನಿರೂಪಕ ಪ್ರಾಣೇಶ್ ಕುಮಾರ್ ರಾಯ್ ” ಮೊಹಮ್ಮದ್ ಸಾಜಿದ್ ಎಂಬ ಬುಲ್ಡೋಝರ್ ಚಾಲಕನೊಂದಿಗೆ ಟೋಲ್ ಕಟ್ಟುವಂತೆ ಕೇಳಿದ್ದಕ್ಕೆ, ಬುಲ್ಡೋಝರ್ ಮೂಲಕ ಟೋಲ್‌ ಪ್ಲಾಝಾವನ್ನು ಧ್ವಂಸಗೈದಿದ್ದಾನೆ. ಯುಪಿ ಪೊಲೀಸರು ಈತನನ್ನು ಜೈಲಿಗಟ್ಟಿ” ಎಂದು ಬರೆದುಕೊಂಡಿದ್ದರು. ಬಳಿಕ ಅವರು ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ಎಸ್‌ಕೆ ಚಕ್ರವರ್ತಿ ಎಂಬ ಮತ್ತೋರ್ವ ಎಕ್ಸ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು ಮೊಹಮ್ಮದ್ ಸಾಜಿದ್‌ನ ದಾದಾಗಿರಿ. ಎಂ.ಡಿ ಸಾಜಿದ್ ಅಲೀ ಎಂಬಾತ ಟೋಲ್‌ ಕಟ್ಟುವಂತೆ ಕೇಳಿದ್ದಕ್ಕೆ ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ್ದಾನೆ. ಗಂಟೆಯೊಳಗೆ ಆತನ ಬುಲ್ಡೋಝರ್ ವಶಕ್ಕೆ ಪಡೆಯಲಾಗಿದೆ. ಸಾಜಿದ್ ಅಲೀ ವಿರುದ್ದ ಐಪಿಸಿ ಸೆಕ್ಷನ್ 307ರ ಅಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಎಕ್ಸ್‌ ಬಳಕೆದಾರರು ಘಟನೆಯ ವಿಡಿಯೋ ಹಂಚಿಕೊಂಡು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಬುಲ್ಡೋಝರ್ ಕಾರ್ಯಾಚರಣೆಯನ್ನು ನೆನಪಿಸಿದ್ದಾರೆ. ಆರೋಪಿಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಧ್ವಂಸಗೈಯ್ಯುವ ಸರ್ಕಾರ, ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ ವ್ಯಕ್ತಿಯ ಮನೆಯನ್ನೂ ಕೂಡ ಬುಲ್ಡೋಝರ್‌ನಿಂದ ಧ್ವಂಸಗೈಯ್ಯಲಿದೆ ಎಂದು ಪರೋಕ್ಷವಾಗಿ ಸಂತಸ ವ್ಯಕ್ತಪಡಿಸಿದ್ದಾರೆ. ಆರೋಪಿ ಮುಸ್ಲಿಂ ಎಂದು ಸುದ್ದಿ ಹಬ್ಬಿದ್ದು ಇವರ ಖುಷಿಗೆ ಕಾರಣವಾಗಿದೆ.

ಫ್ಯಾಕ್ಟ್‌ ಚೆಕ್ : ವರದಿಗಳ ಪ್ರಕಾರ, ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ ವ್ಯಕ್ತಿಯ ಹೆಸರು ಧೀರಜ್ ಎಂದು ತಿಳಿದು ಬಂದಿದೆ. ಆದ್ದರಿಂದ ಆತ ಮುಸ್ಲಿಂ ಅಲ್ಲ ಎಂಬುವುದು ಖಚಿತ.

ಘಟನೆಯ ಕುರಿತು ಜೂನ್‌ 11ರಂದು ಡೆಕ್ಕನ್ ಹೆರಾಲ್ಡ್ ವೆಬ್‌ಸೈಟ್‌ ಪ್ರಕಟಿಸಿರುವ ವರದಿಯಲ್ಲಿ ಆರೋಪಿಯ ಹೆಸರು ಧೀರಜ್ ಎಂದು ಉಲ್ಲೇಖಿಸಿದೆ.

ಇಂದು (ಜೂನ್ 12) ಎಕ್ಸ್ ಮೂಲಕ ಬಗ್ಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶದ ಹಾಪುರ್‌ ಎಸ್‌ಪಿ ಅಭಿಶೇಕ್ ವರ್ಮಾ, “ನಿನ್ನೆ ನಡೆದ ಪಿಲಾಖುವಾ ಟೋಲ್ ಪ್ಲಾಝಾ ಘಟನೆಯ ಆರೋಪಿ ಧೀರಜ್‌ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನಿಖೆ ಚುರುಕುಗೊಳಿಸಲಾಗಿದೆ. ಆರೋಪಿ ಅರ್ಹ ಶಿಕ್ಷೆಯನ್ನು ಪಡೆಯಲಿದ್ದಾನೆ” ಎಂದು ತಿಳಿಸಿದ್ದಾರೆ.
ಎಸ್‌ಪಿ ಅಭಿಶೇಕ್ ವರ್ಮಾ ಪ್ರಕಾರ, ಫ್ಯಾಕ್ಟರಿಯೊಂದರ ಕೆಲಸಕ್ಕಾಗಿ ಆರೋಪಿ ಧೀರಜ್ ತನ್ನ ಬುಲ್ಡೋಝರ್ ತೆಗೆದುಕೊಂಡು ಹೋಗಿದ್ದ. ಆತ ಪರವಾನಿಗೆ ಹೊಂದಿರಲಿಲ್ಲ. ಫ್ಯಾಕ್ಟರಿ ಮಾಲೀಕನ ಹೆಸರು ಸಾಜಿದ್. ಬುಲ್ಡೋಝರ್ ಚಾಲಕನ ಹೆಸರು ಧೀರಜ್. ಟೋಲ್ ಪ್ಲಾಝಾ ಧ್ವಂಸಗೈದ ಆರೋಪಿಯ ಹೆಸರು ಧೀರಜ್ ಎಂದಾಗಿದೆ.

ಜೂನ್ 11, 2024ರ ಮಂಗಳವಾರ ಬೆಳಿಗ್ಗೆ ಉತ್ತರ ಪ್ರದೇಶದ ಹಾಪುರ್ ಸಮೀಪದ ಪಿಲಾಖುವಾದ ಚರಾಸಿ ಟೋಲ್ ಪ್ಲಾಝಾದ ಮೇಲೆ ಬುಲ್ಡೋಝರ್‌ನಿಂದ ದಾಳಿ ಮಾಡಲಾಗಿದೆ. ಟೋಲ್ ಸಿಬ್ಬಂದಿ ಹಣ ಕೇಳಿದ್ದಕ್ಕೆ ಕುಡಿದ ಮತ್ತಿನಲ್ಲಿದ್ದ ಬುಲ್ಡೋಝರ್ ಚಾಲಕ ಧೀರಜ್ ದಾಳಿ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಗಮನಿಸಿ : ಅಪರಾಧಿಯನ್ನು ಧರ್ಮದ ಆಧಾರದಲ್ಲಿ ಗುರುತಿಸುವುದು ತಪ್ಪು. ಬುಲ್ಡೋಝರ್ ದಾಳಿಯ ಘಟನೆಗೆ ಕೋಮು ಬಣ್ಣ ಬಳಿದು ಒಂದು ಸಮುದಾಯವನ್ನು ಗುರಿಯಾಗಿಸುತ್ತಿರುವ ಹಿನ್ನೆಲೆ, ನಾವು ಈ ಸುದ್ದಿಯಲ್ಲಿ ಸತ್ಯಾಸತ್ಯತೆ ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದನ್ನೂ ಓದಿ : FACT CHECK : ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...