Homeಫ್ಯಾಕ್ಟ್‌ಚೆಕ್FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

- Advertisement -
- Advertisement -

ಉತ್ತರ ಪ್ರದೇಶದ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಟೋಲ್ ಕಟ್ಟುವಂತೆ ಕೇಳಿದ್ದಕ್ಕೆ ಟೋಲ್ ಪ್ಲಾಝಾವನ್ನು ಜೆಸಿಬಿ ಮೂಲಕ ಧ್ವಂಸಗೈದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತ ವಿಡಿಯೋ, ಪೋಟೋಗಳನ್ನು ಹಂಚಿಕೊಂಡಿರುವ ಅನೇಕ ಜನರು ಬಂಧಿತ ಆರೋಪಿ ಮುಸ್ಲಿಂ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಘಟನೆಯ ವಿಡಿಯೋ ಮತ್ತು ಆರೋಪಿಯನ್ನು ಪೊಲೀಸರು ಬಂಧಿಸಿರುವ ಫೋಟೋವನ್ನು ಹಂಚಿಕೊಂಡಿದ್ದ ಟೈಮ್ಸ್ ನೌ ವಾಹಿನಿಯ ನಿರೂಪಕ ಪ್ರಾಣೇಶ್ ಕುಮಾರ್ ರಾಯ್ ” ಮೊಹಮ್ಮದ್ ಸಾಜಿದ್ ಎಂಬ ಬುಲ್ಡೋಝರ್ ಚಾಲಕನೊಂದಿಗೆ ಟೋಲ್ ಕಟ್ಟುವಂತೆ ಕೇಳಿದ್ದಕ್ಕೆ, ಬುಲ್ಡೋಝರ್ ಮೂಲಕ ಟೋಲ್‌ ಪ್ಲಾಝಾವನ್ನು ಧ್ವಂಸಗೈದಿದ್ದಾನೆ. ಯುಪಿ ಪೊಲೀಸರು ಈತನನ್ನು ಜೈಲಿಗಟ್ಟಿ” ಎಂದು ಬರೆದುಕೊಂಡಿದ್ದರು. ಬಳಿಕ ಅವರು ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ಎಸ್‌ಕೆ ಚಕ್ರವರ್ತಿ ಎಂಬ ಮತ್ತೋರ್ವ ಎಕ್ಸ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು ಮೊಹಮ್ಮದ್ ಸಾಜಿದ್‌ನ ದಾದಾಗಿರಿ. ಎಂ.ಡಿ ಸಾಜಿದ್ ಅಲೀ ಎಂಬಾತ ಟೋಲ್‌ ಕಟ್ಟುವಂತೆ ಕೇಳಿದ್ದಕ್ಕೆ ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ್ದಾನೆ. ಗಂಟೆಯೊಳಗೆ ಆತನ ಬುಲ್ಡೋಝರ್ ವಶಕ್ಕೆ ಪಡೆಯಲಾಗಿದೆ. ಸಾಜಿದ್ ಅಲೀ ವಿರುದ್ದ ಐಪಿಸಿ ಸೆಕ್ಷನ್ 307ರ ಅಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಎಕ್ಸ್‌ ಬಳಕೆದಾರರು ಘಟನೆಯ ವಿಡಿಯೋ ಹಂಚಿಕೊಂಡು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಬುಲ್ಡೋಝರ್ ಕಾರ್ಯಾಚರಣೆಯನ್ನು ನೆನಪಿಸಿದ್ದಾರೆ. ಆರೋಪಿಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಧ್ವಂಸಗೈಯ್ಯುವ ಸರ್ಕಾರ, ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ ವ್ಯಕ್ತಿಯ ಮನೆಯನ್ನೂ ಕೂಡ ಬುಲ್ಡೋಝರ್‌ನಿಂದ ಧ್ವಂಸಗೈಯ್ಯಲಿದೆ ಎಂದು ಪರೋಕ್ಷವಾಗಿ ಸಂತಸ ವ್ಯಕ್ತಪಡಿಸಿದ್ದಾರೆ. ಆರೋಪಿ ಮುಸ್ಲಿಂ ಎಂದು ಸುದ್ದಿ ಹಬ್ಬಿದ್ದು ಇವರ ಖುಷಿಗೆ ಕಾರಣವಾಗಿದೆ.

ಫ್ಯಾಕ್ಟ್‌ ಚೆಕ್ : ವರದಿಗಳ ಪ್ರಕಾರ, ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ ವ್ಯಕ್ತಿಯ ಹೆಸರು ಧೀರಜ್ ಎಂದು ತಿಳಿದು ಬಂದಿದೆ. ಆದ್ದರಿಂದ ಆತ ಮುಸ್ಲಿಂ ಅಲ್ಲ ಎಂಬುವುದು ಖಚಿತ.

ಘಟನೆಯ ಕುರಿತು ಜೂನ್‌ 11ರಂದು ಡೆಕ್ಕನ್ ಹೆರಾಲ್ಡ್ ವೆಬ್‌ಸೈಟ್‌ ಪ್ರಕಟಿಸಿರುವ ವರದಿಯಲ್ಲಿ ಆರೋಪಿಯ ಹೆಸರು ಧೀರಜ್ ಎಂದು ಉಲ್ಲೇಖಿಸಿದೆ.

ಇಂದು (ಜೂನ್ 12) ಎಕ್ಸ್ ಮೂಲಕ ಬಗ್ಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶದ ಹಾಪುರ್‌ ಎಸ್‌ಪಿ ಅಭಿಶೇಕ್ ವರ್ಮಾ, “ನಿನ್ನೆ ನಡೆದ ಪಿಲಾಖುವಾ ಟೋಲ್ ಪ್ಲಾಝಾ ಘಟನೆಯ ಆರೋಪಿ ಧೀರಜ್‌ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನಿಖೆ ಚುರುಕುಗೊಳಿಸಲಾಗಿದೆ. ಆರೋಪಿ ಅರ್ಹ ಶಿಕ್ಷೆಯನ್ನು ಪಡೆಯಲಿದ್ದಾನೆ” ಎಂದು ತಿಳಿಸಿದ್ದಾರೆ.
ಎಸ್‌ಪಿ ಅಭಿಶೇಕ್ ವರ್ಮಾ ಪ್ರಕಾರ, ಫ್ಯಾಕ್ಟರಿಯೊಂದರ ಕೆಲಸಕ್ಕಾಗಿ ಆರೋಪಿ ಧೀರಜ್ ತನ್ನ ಬುಲ್ಡೋಝರ್ ತೆಗೆದುಕೊಂಡು ಹೋಗಿದ್ದ. ಆತ ಪರವಾನಿಗೆ ಹೊಂದಿರಲಿಲ್ಲ. ಫ್ಯಾಕ್ಟರಿ ಮಾಲೀಕನ ಹೆಸರು ಸಾಜಿದ್. ಬುಲ್ಡೋಝರ್ ಚಾಲಕನ ಹೆಸರು ಧೀರಜ್. ಟೋಲ್ ಪ್ಲಾಝಾ ಧ್ವಂಸಗೈದ ಆರೋಪಿಯ ಹೆಸರು ಧೀರಜ್ ಎಂದಾಗಿದೆ.

ಜೂನ್ 11, 2024ರ ಮಂಗಳವಾರ ಬೆಳಿಗ್ಗೆ ಉತ್ತರ ಪ್ರದೇಶದ ಹಾಪುರ್ ಸಮೀಪದ ಪಿಲಾಖುವಾದ ಚರಾಸಿ ಟೋಲ್ ಪ್ಲಾಝಾದ ಮೇಲೆ ಬುಲ್ಡೋಝರ್‌ನಿಂದ ದಾಳಿ ಮಾಡಲಾಗಿದೆ. ಟೋಲ್ ಸಿಬ್ಬಂದಿ ಹಣ ಕೇಳಿದ್ದಕ್ಕೆ ಕುಡಿದ ಮತ್ತಿನಲ್ಲಿದ್ದ ಬುಲ್ಡೋಝರ್ ಚಾಲಕ ಧೀರಜ್ ದಾಳಿ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಗಮನಿಸಿ : ಅಪರಾಧಿಯನ್ನು ಧರ್ಮದ ಆಧಾರದಲ್ಲಿ ಗುರುತಿಸುವುದು ತಪ್ಪು. ಬುಲ್ಡೋಝರ್ ದಾಳಿಯ ಘಟನೆಗೆ ಕೋಮು ಬಣ್ಣ ಬಳಿದು ಒಂದು ಸಮುದಾಯವನ್ನು ಗುರಿಯಾಗಿಸುತ್ತಿರುವ ಹಿನ್ನೆಲೆ, ನಾವು ಈ ಸುದ್ದಿಯಲ್ಲಿ ಸತ್ಯಾಸತ್ಯತೆ ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದನ್ನೂ ಓದಿ : FACT CHECK : ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...