Homeಫ್ಯಾಕ್ಟ್‌ಚೆಕ್FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ಆಗಸ್ಟ್ 14-15 ರ ರಾತ್ರಿ ಕೋಲ್ಕತ್ತಾ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಿಂದ ಮನೆಗೆ ಹಿಂದಿರುಗುವಾಗ ಪಶ್ಚಿಮ ಬಂಗಾಳದ ಬುರ್ದ್ವಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅಂಕಿತಾ ಬೌರಿ ಎಂಬಾಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂಬ ಸುದ್ದಿ ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿತ್ತು.

ರಿದಿಮಾ (@ridhima_z) ಎಂಬ ಎಕ್ಸ್ ಬಳಕೆದಾರರು ಆಗಸ್ಟ್ 16ರಂದು ಹಾಕಿದ ಪೋಸ್ಟ್‌ನಲ್ಲಿ “ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ನಡೆದ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಬುರ್ದ್ವಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅಂಕಿತಾ ಬೌರಿ ಎಂಬಾಕೆಯನ್ನು ಅತ್ಯಾಚಾರಗೈದು ಭೀಕರವಾಗಿ ಕೊಲೆ ಮಾಡಲಾಗಿದೆ. ಬಳಿಕ ಯಾರೂ ಗುರುತು ಹಿಡಿಯಬಾರದು ಎಂದು ಆಕೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ವಿರೂಪಗೊಳಿಸಲಾಗಿದೆ” ಎಂದು ಬರೆದುಕೊಂಡಿದ್ದರು.

ಅಯಾನ್ (@syedayan24) ಎಂಬ ಮತ್ತೊಬ್ಬರು ಎಕ್ಸ್ ಬಳಕೆದಾರರು ಆಗಸ್ಟ್ 16ರಂದು ಹಾಕಿದ ಪೋಸ್ಟ್‌ನಲ್ಲಿ ಮೇಲೆ ನಾವು ಉಲ್ಲೇಖಿಸಿದ ಅದೇ ವಿಷಯವನ್ನು ಬರೆದುಕೊಂಡಿದ್ದರು.

ಅದೇ ರೀತಿ ಒಂದೇ ವಿಷಯವನ್ನು ಅನೇಕ ಎಕ್ಸ್‌ ಬಳಕೆದಾರರು ಆಗಸ್ಟ್ 16ರಂದು ಪೋಸ್ಟ್ ಮಾಡಿದ್ದರು. ಎಕ್ಸ್‌ ಮಾತ್ರವಲ್ಲದೆ ಫೇಸ್‌ಬುಕ್, ವಾಟ್ಸಾಪ್‌ಗಳಲ್ಲೂ ಈ ವಿಷಯ ಹರಿದಾಡಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸುದ್ದಿಯ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ದಿ ಸ್ಟೇಟಸ್‌ಮ್ಯಾನ್ ಸುದ್ದಿ ವೆಬ್‌ಸೈಟ್‌ ಆಗಸ್ಟ್ 16ರಂದು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ಆ ವರದಿಯಲ್ಲಿ “ಬುರ್ದ್ವಾನ್ ವಿಶ್ವವಿದ್ಯಾನಿಲಯದಲ್ಲಿ ತತ್ವಶಾಸ್ತ್ರ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದ ಪ್ರಿಯಾಂಕಾ ಹನ್ಸ್ದಾ ಎಂಬ 25 ವರ್ಷದ ಬುಡಕಟ್ಟು ಯುವತಿಯನ್ನು ಬುರ್ದ್ವಾನ್‌ನ ನಂದೂರ್ ಗ್ರಾಮದಲ್ಲಿ ಕೊಲೆ ಮಾಡಲಾಗಿದೆ. ಆಗಸ್ಟ್ 14 ಮತ್ತು 15ರ ಮಧ್ಯರಾತ್ರಿ ಮನೆಯಿಂದ ಸುಮಾರು 50 ಮೀಟರ್ ದೂರದಲ್ಲಿರುವ ಕೃಷಿ ಭೂಮಿಯಲ್ಲಿ ಆಕೆ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ” ಎಂದು ಹೇಳಲಾಗಿದೆ.

“ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಈ ಕುರಿತು ಸುದ್ದಿ ಹಬ್ಬಿದಾಗ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರಂಭದಲ್ಲಿ ಶಂಕಿಸಲಾಗಿತ್ತು. ಆದರೆ, ಮೃತದೇಹದ ಮರಣೋತ್ತರ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯದ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಪೂರ್ವ ಬುರ್ದ್ವಾನ್‌ನ ಎಸ್‌ಪಿ ಅಮನ್‌ದೀಪ್ ಸಿಂಗ್ ಸ್ಪಷ್ಟಪಡಿಸಿದ್ದಾರೆ” ಎಂದು ಸ್ಟೇಟಸ್‌ಮ್ಯಾನ್ ವರದಿ ಉಲ್ಲೇಖಿಸಿದೆ.

ದಿ ಟೆಲಿಗ್ರಾಫ್‌ನ ಮತ್ತೊಂದು ವರದಿಯೂ ನಮಗೆ ಲಭ್ಯವಾಗಿದ್ದು ಅದರಲ್ಲೂ “ಪೂರ್ವ ಬುರ್ದ್ವಾನ್ ಪೊಲೀಸರು ಸುದ್ದಿಗೋಷ್ಠಿ ನಡೆಸಿ 22 ವರ್ಷದ ಬುಡಕಟ್ಟು ಯುವತಿಯ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ” ಎಂದು ಹೇಳಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹೇಳಿದಂತೆ ಅಂಕಿತಾ ಬೌರಿ ಎಂಬ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಯಾವುದೇ ವರದಿಗಳನ್ನು ನಮಗೆ ಕಂಡು ಬಂದಿಲ್ಲ.

ಆಗಸ್ಟ್ 17ರಂದು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದ ಪುರ್ಬಾ ಬರ್ಧಮಾನ್ (ಪೂರ್ವ ಬುರ್ದ್ವಾನ್) ಪೊಲೀಸರು, ಸಾಮಾಜಿಕ ಜಾಲತಾಣದ ಸುದ್ದಿ ‘ವದಂತಿ’ ಎಂದು ತಿಳಿಸಿದ್ದು, ಅಂಕಿತಾ ಬೌರಿ ಎಂಬ ಯುವತಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಯಾವುದೇ ಘಟನೆ ಬುರ್ದ್ವಾನ್‌ನಲ್ಲಿ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು. ವದಂತಿಗಳನ್ನು ಹರಡದಂತೆ ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದರು.

ಪೂರ್ವ ಬುರ್ದ್ವಾನ್ ಜಿಲ್ಲಾ ಪೊಲೀಸ್‌ನ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲೂ ಸಾಮಾಜಿಕ ಜಾಲತಾಣದ ಸುದ್ದಿಯ ಕುರಿತು ಬಂಗಾಳಿ ಭಾಷೆಯಲ್ಲಿ ಸ್ಪಷ್ಟನೆ ಕೊಡಲಾಗಿತ್ತು. ಅದರಲ್ಲೂ” ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಿರುವ ಘಟನೆ ಖಂಡಿಸಿ ನಡೆದ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಅಂಕಿತಾ ಬೌರಿ ಎಂಬ ಯುವತಿಯನ್ನು ಅತ್ಯಾವಾರವೆಸಗಿ ಕೊಲೆ ಮಾಡಿರುವ ಯಾವುದೇ ಘಟನೆ ಬುರ್ದ್ವಾನ್‌ನಲ್ಲಿ ನಡೆದಿಲ್ಲ. ಇಂತಹ ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪುರ್ಬಾ ಬುರ್ದ್ವಾನ್ ಪೊಲೀಸರು ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಬದ್ಧರಾಗಿದ್ದಾರೆ” ಎಂದು ಹೇಳಲಾಗಿತ್ತು.

ಒಟ್ಟಿನಲ್ಲಿ, ಆಗಸ್ಟ್ 15ರ ರಾತ್ರಿ ಪ್ರತಿಭಟನಾ ಸ್ಥಳದಿಂದ ಹಿಂದಿರುಗುತ್ತಿದ್ದ ಅಂಕಿತಾ ಬೌರಿ ಎಂಬ ವಿದ್ಯಾರ್ಥಿನಿಯನ್ನು ಕ್ರೂರವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ ವೈರಲ್ ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳು ಕಟ್ಟುಕಥೆಯಾಗಿದೆ.

ಆಗಸ್ಟ್ 15 ರಂದು ಬೆಳಗ್ಗೆ ಬುರ್ದ್ವಾನ್ ನಂದೂರ್‌ನ ಕೃಷಿ ಭೂಮಿಯಲ್ಲಿ ಪ್ರಿಯಾಂಕಾ ಹನ್ಸ್ದಾ ಎಂಬ ಆದಿವಾಸಿ ಯುವತಿಯ ಶವ ಪತ್ತೆಯಾಗಿತ್ತು. ಆದರೆ, ಆಕೆಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಅಂಕಿತಾ ಬೌರಿ ಎಂಬ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಯಾವುದೇ ಘಟನೆ ನಡೆದಿಲ್ಲ ಎಂದು ಪೊಲೀಸರೇ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : FACT CHECK : ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರನ್ನು ಪೊಲೀಸರೇ ಮನೆಗೆ ಬಿಡ್ತಾರೆ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...