Homeಫ್ಯಾಕ್ಟ್‌ಚೆಕ್FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ಆಗಸ್ಟ್ 14-15 ರ ರಾತ್ರಿ ಕೋಲ್ಕತ್ತಾ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಿಂದ ಮನೆಗೆ ಹಿಂದಿರುಗುವಾಗ ಪಶ್ಚಿಮ ಬಂಗಾಳದ ಬುರ್ದ್ವಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅಂಕಿತಾ ಬೌರಿ ಎಂಬಾಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂಬ ಸುದ್ದಿ ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿತ್ತು.

ರಿದಿಮಾ (@ridhima_z) ಎಂಬ ಎಕ್ಸ್ ಬಳಕೆದಾರರು ಆಗಸ್ಟ್ 16ರಂದು ಹಾಕಿದ ಪೋಸ್ಟ್‌ನಲ್ಲಿ “ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ನಡೆದ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಬುರ್ದ್ವಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅಂಕಿತಾ ಬೌರಿ ಎಂಬಾಕೆಯನ್ನು ಅತ್ಯಾಚಾರಗೈದು ಭೀಕರವಾಗಿ ಕೊಲೆ ಮಾಡಲಾಗಿದೆ. ಬಳಿಕ ಯಾರೂ ಗುರುತು ಹಿಡಿಯಬಾರದು ಎಂದು ಆಕೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ವಿರೂಪಗೊಳಿಸಲಾಗಿದೆ” ಎಂದು ಬರೆದುಕೊಂಡಿದ್ದರು.

ಅಯಾನ್ (@syedayan24) ಎಂಬ ಮತ್ತೊಬ್ಬರು ಎಕ್ಸ್ ಬಳಕೆದಾರರು ಆಗಸ್ಟ್ 16ರಂದು ಹಾಕಿದ ಪೋಸ್ಟ್‌ನಲ್ಲಿ ಮೇಲೆ ನಾವು ಉಲ್ಲೇಖಿಸಿದ ಅದೇ ವಿಷಯವನ್ನು ಬರೆದುಕೊಂಡಿದ್ದರು.

ಅದೇ ರೀತಿ ಒಂದೇ ವಿಷಯವನ್ನು ಅನೇಕ ಎಕ್ಸ್‌ ಬಳಕೆದಾರರು ಆಗಸ್ಟ್ 16ರಂದು ಪೋಸ್ಟ್ ಮಾಡಿದ್ದರು. ಎಕ್ಸ್‌ ಮಾತ್ರವಲ್ಲದೆ ಫೇಸ್‌ಬುಕ್, ವಾಟ್ಸಾಪ್‌ಗಳಲ್ಲೂ ಈ ವಿಷಯ ಹರಿದಾಡಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸುದ್ದಿಯ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ದಿ ಸ್ಟೇಟಸ್‌ಮ್ಯಾನ್ ಸುದ್ದಿ ವೆಬ್‌ಸೈಟ್‌ ಆಗಸ್ಟ್ 16ರಂದು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ಆ ವರದಿಯಲ್ಲಿ “ಬುರ್ದ್ವಾನ್ ವಿಶ್ವವಿದ್ಯಾನಿಲಯದಲ್ಲಿ ತತ್ವಶಾಸ್ತ್ರ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದ ಪ್ರಿಯಾಂಕಾ ಹನ್ಸ್ದಾ ಎಂಬ 25 ವರ್ಷದ ಬುಡಕಟ್ಟು ಯುವತಿಯನ್ನು ಬುರ್ದ್ವಾನ್‌ನ ನಂದೂರ್ ಗ್ರಾಮದಲ್ಲಿ ಕೊಲೆ ಮಾಡಲಾಗಿದೆ. ಆಗಸ್ಟ್ 14 ಮತ್ತು 15ರ ಮಧ್ಯರಾತ್ರಿ ಮನೆಯಿಂದ ಸುಮಾರು 50 ಮೀಟರ್ ದೂರದಲ್ಲಿರುವ ಕೃಷಿ ಭೂಮಿಯಲ್ಲಿ ಆಕೆ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ” ಎಂದು ಹೇಳಲಾಗಿದೆ.

“ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಈ ಕುರಿತು ಸುದ್ದಿ ಹಬ್ಬಿದಾಗ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರಂಭದಲ್ಲಿ ಶಂಕಿಸಲಾಗಿತ್ತು. ಆದರೆ, ಮೃತದೇಹದ ಮರಣೋತ್ತರ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯದ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಪೂರ್ವ ಬುರ್ದ್ವಾನ್‌ನ ಎಸ್‌ಪಿ ಅಮನ್‌ದೀಪ್ ಸಿಂಗ್ ಸ್ಪಷ್ಟಪಡಿಸಿದ್ದಾರೆ” ಎಂದು ಸ್ಟೇಟಸ್‌ಮ್ಯಾನ್ ವರದಿ ಉಲ್ಲೇಖಿಸಿದೆ.

ದಿ ಟೆಲಿಗ್ರಾಫ್‌ನ ಮತ್ತೊಂದು ವರದಿಯೂ ನಮಗೆ ಲಭ್ಯವಾಗಿದ್ದು ಅದರಲ್ಲೂ “ಪೂರ್ವ ಬುರ್ದ್ವಾನ್ ಪೊಲೀಸರು ಸುದ್ದಿಗೋಷ್ಠಿ ನಡೆಸಿ 22 ವರ್ಷದ ಬುಡಕಟ್ಟು ಯುವತಿಯ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ” ಎಂದು ಹೇಳಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹೇಳಿದಂತೆ ಅಂಕಿತಾ ಬೌರಿ ಎಂಬ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಯಾವುದೇ ವರದಿಗಳನ್ನು ನಮಗೆ ಕಂಡು ಬಂದಿಲ್ಲ.

ಆಗಸ್ಟ್ 17ರಂದು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದ ಪುರ್ಬಾ ಬರ್ಧಮಾನ್ (ಪೂರ್ವ ಬುರ್ದ್ವಾನ್) ಪೊಲೀಸರು, ಸಾಮಾಜಿಕ ಜಾಲತಾಣದ ಸುದ್ದಿ ‘ವದಂತಿ’ ಎಂದು ತಿಳಿಸಿದ್ದು, ಅಂಕಿತಾ ಬೌರಿ ಎಂಬ ಯುವತಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಯಾವುದೇ ಘಟನೆ ಬುರ್ದ್ವಾನ್‌ನಲ್ಲಿ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು. ವದಂತಿಗಳನ್ನು ಹರಡದಂತೆ ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದರು.

ಪೂರ್ವ ಬುರ್ದ್ವಾನ್ ಜಿಲ್ಲಾ ಪೊಲೀಸ್‌ನ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲೂ ಸಾಮಾಜಿಕ ಜಾಲತಾಣದ ಸುದ್ದಿಯ ಕುರಿತು ಬಂಗಾಳಿ ಭಾಷೆಯಲ್ಲಿ ಸ್ಪಷ್ಟನೆ ಕೊಡಲಾಗಿತ್ತು. ಅದರಲ್ಲೂ” ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಿರುವ ಘಟನೆ ಖಂಡಿಸಿ ನಡೆದ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಅಂಕಿತಾ ಬೌರಿ ಎಂಬ ಯುವತಿಯನ್ನು ಅತ್ಯಾವಾರವೆಸಗಿ ಕೊಲೆ ಮಾಡಿರುವ ಯಾವುದೇ ಘಟನೆ ಬುರ್ದ್ವಾನ್‌ನಲ್ಲಿ ನಡೆದಿಲ್ಲ. ಇಂತಹ ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪುರ್ಬಾ ಬುರ್ದ್ವಾನ್ ಪೊಲೀಸರು ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಬದ್ಧರಾಗಿದ್ದಾರೆ” ಎಂದು ಹೇಳಲಾಗಿತ್ತು.

ಒಟ್ಟಿನಲ್ಲಿ, ಆಗಸ್ಟ್ 15ರ ರಾತ್ರಿ ಪ್ರತಿಭಟನಾ ಸ್ಥಳದಿಂದ ಹಿಂದಿರುಗುತ್ತಿದ್ದ ಅಂಕಿತಾ ಬೌರಿ ಎಂಬ ವಿದ್ಯಾರ್ಥಿನಿಯನ್ನು ಕ್ರೂರವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ ವೈರಲ್ ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳು ಕಟ್ಟುಕಥೆಯಾಗಿದೆ.

ಆಗಸ್ಟ್ 15 ರಂದು ಬೆಳಗ್ಗೆ ಬುರ್ದ್ವಾನ್ ನಂದೂರ್‌ನ ಕೃಷಿ ಭೂಮಿಯಲ್ಲಿ ಪ್ರಿಯಾಂಕಾ ಹನ್ಸ್ದಾ ಎಂಬ ಆದಿವಾಸಿ ಯುವತಿಯ ಶವ ಪತ್ತೆಯಾಗಿತ್ತು. ಆದರೆ, ಆಕೆಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಅಂಕಿತಾ ಬೌರಿ ಎಂಬ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಯಾವುದೇ ಘಟನೆ ನಡೆದಿಲ್ಲ ಎಂದು ಪೊಲೀಸರೇ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : FACT CHECK : ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರನ್ನು ಪೊಲೀಸರೇ ಮನೆಗೆ ಬಿಡ್ತಾರೆ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...