Homeಫ್ಯಾಕ್ಟ್‌ಚೆಕ್FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ಆಗಸ್ಟ್ 14-15 ರ ರಾತ್ರಿ ಕೋಲ್ಕತ್ತಾ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಿಂದ ಮನೆಗೆ ಹಿಂದಿರುಗುವಾಗ ಪಶ್ಚಿಮ ಬಂಗಾಳದ ಬುರ್ದ್ವಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅಂಕಿತಾ ಬೌರಿ ಎಂಬಾಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂಬ ಸುದ್ದಿ ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿತ್ತು.

ರಿದಿಮಾ (@ridhima_z) ಎಂಬ ಎಕ್ಸ್ ಬಳಕೆದಾರರು ಆಗಸ್ಟ್ 16ರಂದು ಹಾಕಿದ ಪೋಸ್ಟ್‌ನಲ್ಲಿ “ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ನಡೆದ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಬುರ್ದ್ವಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅಂಕಿತಾ ಬೌರಿ ಎಂಬಾಕೆಯನ್ನು ಅತ್ಯಾಚಾರಗೈದು ಭೀಕರವಾಗಿ ಕೊಲೆ ಮಾಡಲಾಗಿದೆ. ಬಳಿಕ ಯಾರೂ ಗುರುತು ಹಿಡಿಯಬಾರದು ಎಂದು ಆಕೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ವಿರೂಪಗೊಳಿಸಲಾಗಿದೆ” ಎಂದು ಬರೆದುಕೊಂಡಿದ್ದರು.

ಅಯಾನ್ (@syedayan24) ಎಂಬ ಮತ್ತೊಬ್ಬರು ಎಕ್ಸ್ ಬಳಕೆದಾರರು ಆಗಸ್ಟ್ 16ರಂದು ಹಾಕಿದ ಪೋಸ್ಟ್‌ನಲ್ಲಿ ಮೇಲೆ ನಾವು ಉಲ್ಲೇಖಿಸಿದ ಅದೇ ವಿಷಯವನ್ನು ಬರೆದುಕೊಂಡಿದ್ದರು.

ಅದೇ ರೀತಿ ಒಂದೇ ವಿಷಯವನ್ನು ಅನೇಕ ಎಕ್ಸ್‌ ಬಳಕೆದಾರರು ಆಗಸ್ಟ್ 16ರಂದು ಪೋಸ್ಟ್ ಮಾಡಿದ್ದರು. ಎಕ್ಸ್‌ ಮಾತ್ರವಲ್ಲದೆ ಫೇಸ್‌ಬುಕ್, ವಾಟ್ಸಾಪ್‌ಗಳಲ್ಲೂ ಈ ವಿಷಯ ಹರಿದಾಡಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸುದ್ದಿಯ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ದಿ ಸ್ಟೇಟಸ್‌ಮ್ಯಾನ್ ಸುದ್ದಿ ವೆಬ್‌ಸೈಟ್‌ ಆಗಸ್ಟ್ 16ರಂದು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ಆ ವರದಿಯಲ್ಲಿ “ಬುರ್ದ್ವಾನ್ ವಿಶ್ವವಿದ್ಯಾನಿಲಯದಲ್ಲಿ ತತ್ವಶಾಸ್ತ್ರ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದ ಪ್ರಿಯಾಂಕಾ ಹನ್ಸ್ದಾ ಎಂಬ 25 ವರ್ಷದ ಬುಡಕಟ್ಟು ಯುವತಿಯನ್ನು ಬುರ್ದ್ವಾನ್‌ನ ನಂದೂರ್ ಗ್ರಾಮದಲ್ಲಿ ಕೊಲೆ ಮಾಡಲಾಗಿದೆ. ಆಗಸ್ಟ್ 14 ಮತ್ತು 15ರ ಮಧ್ಯರಾತ್ರಿ ಮನೆಯಿಂದ ಸುಮಾರು 50 ಮೀಟರ್ ದೂರದಲ್ಲಿರುವ ಕೃಷಿ ಭೂಮಿಯಲ್ಲಿ ಆಕೆ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ” ಎಂದು ಹೇಳಲಾಗಿದೆ.

“ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಈ ಕುರಿತು ಸುದ್ದಿ ಹಬ್ಬಿದಾಗ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರಂಭದಲ್ಲಿ ಶಂಕಿಸಲಾಗಿತ್ತು. ಆದರೆ, ಮೃತದೇಹದ ಮರಣೋತ್ತರ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯದ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಪೂರ್ವ ಬುರ್ದ್ವಾನ್‌ನ ಎಸ್‌ಪಿ ಅಮನ್‌ದೀಪ್ ಸಿಂಗ್ ಸ್ಪಷ್ಟಪಡಿಸಿದ್ದಾರೆ” ಎಂದು ಸ್ಟೇಟಸ್‌ಮ್ಯಾನ್ ವರದಿ ಉಲ್ಲೇಖಿಸಿದೆ.

ದಿ ಟೆಲಿಗ್ರಾಫ್‌ನ ಮತ್ತೊಂದು ವರದಿಯೂ ನಮಗೆ ಲಭ್ಯವಾಗಿದ್ದು ಅದರಲ್ಲೂ “ಪೂರ್ವ ಬುರ್ದ್ವಾನ್ ಪೊಲೀಸರು ಸುದ್ದಿಗೋಷ್ಠಿ ನಡೆಸಿ 22 ವರ್ಷದ ಬುಡಕಟ್ಟು ಯುವತಿಯ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ” ಎಂದು ಹೇಳಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹೇಳಿದಂತೆ ಅಂಕಿತಾ ಬೌರಿ ಎಂಬ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಯಾವುದೇ ವರದಿಗಳನ್ನು ನಮಗೆ ಕಂಡು ಬಂದಿಲ್ಲ.

ಆಗಸ್ಟ್ 17ರಂದು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದ ಪುರ್ಬಾ ಬರ್ಧಮಾನ್ (ಪೂರ್ವ ಬುರ್ದ್ವಾನ್) ಪೊಲೀಸರು, ಸಾಮಾಜಿಕ ಜಾಲತಾಣದ ಸುದ್ದಿ ‘ವದಂತಿ’ ಎಂದು ತಿಳಿಸಿದ್ದು, ಅಂಕಿತಾ ಬೌರಿ ಎಂಬ ಯುವತಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಯಾವುದೇ ಘಟನೆ ಬುರ್ದ್ವಾನ್‌ನಲ್ಲಿ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು. ವದಂತಿಗಳನ್ನು ಹರಡದಂತೆ ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದರು.

ಪೂರ್ವ ಬುರ್ದ್ವಾನ್ ಜಿಲ್ಲಾ ಪೊಲೀಸ್‌ನ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲೂ ಸಾಮಾಜಿಕ ಜಾಲತಾಣದ ಸುದ್ದಿಯ ಕುರಿತು ಬಂಗಾಳಿ ಭಾಷೆಯಲ್ಲಿ ಸ್ಪಷ್ಟನೆ ಕೊಡಲಾಗಿತ್ತು. ಅದರಲ್ಲೂ” ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಿರುವ ಘಟನೆ ಖಂಡಿಸಿ ನಡೆದ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಅಂಕಿತಾ ಬೌರಿ ಎಂಬ ಯುವತಿಯನ್ನು ಅತ್ಯಾವಾರವೆಸಗಿ ಕೊಲೆ ಮಾಡಿರುವ ಯಾವುದೇ ಘಟನೆ ಬುರ್ದ್ವಾನ್‌ನಲ್ಲಿ ನಡೆದಿಲ್ಲ. ಇಂತಹ ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪುರ್ಬಾ ಬುರ್ದ್ವಾನ್ ಪೊಲೀಸರು ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಬದ್ಧರಾಗಿದ್ದಾರೆ” ಎಂದು ಹೇಳಲಾಗಿತ್ತು.

ಒಟ್ಟಿನಲ್ಲಿ, ಆಗಸ್ಟ್ 15ರ ರಾತ್ರಿ ಪ್ರತಿಭಟನಾ ಸ್ಥಳದಿಂದ ಹಿಂದಿರುಗುತ್ತಿದ್ದ ಅಂಕಿತಾ ಬೌರಿ ಎಂಬ ವಿದ್ಯಾರ್ಥಿನಿಯನ್ನು ಕ್ರೂರವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ ವೈರಲ್ ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳು ಕಟ್ಟುಕಥೆಯಾಗಿದೆ.

ಆಗಸ್ಟ್ 15 ರಂದು ಬೆಳಗ್ಗೆ ಬುರ್ದ್ವಾನ್ ನಂದೂರ್‌ನ ಕೃಷಿ ಭೂಮಿಯಲ್ಲಿ ಪ್ರಿಯಾಂಕಾ ಹನ್ಸ್ದಾ ಎಂಬ ಆದಿವಾಸಿ ಯುವತಿಯ ಶವ ಪತ್ತೆಯಾಗಿತ್ತು. ಆದರೆ, ಆಕೆಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಅಂಕಿತಾ ಬೌರಿ ಎಂಬ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಯಾವುದೇ ಘಟನೆ ನಡೆದಿಲ್ಲ ಎಂದು ಪೊಲೀಸರೇ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : FACT CHECK : ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರನ್ನು ಪೊಲೀಸರೇ ಮನೆಗೆ ಬಿಡ್ತಾರೆ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...