Homeಫ್ಯಾಕ್ಟ್‌ಚೆಕ್FACT CHECK : ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಕಾಂಗ್ರೆಸ್ ಪರಿಹಾರ ನೀಡಲಿದೆ ಎಂಬ ಪೋಸ್ಟ್ ದಿಕ್ಕು...

FACT CHECK : ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಕಾಂಗ್ರೆಸ್ ಪರಿಹಾರ ನೀಡಲಿದೆ ಎಂಬ ಪೋಸ್ಟ್ ದಿಕ್ಕು ತಪ್ಪಿಸುವಂತಿದೆ

- Advertisement -
- Advertisement -

“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತೀಯ ಸೇನೆಯಿಂದ ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಪರಿಹಾರ ನೀಡುತ್ತೇವೆ ಮತ್ತು ಸೆರೆಮನೆಯಲ್ಲಿರುವ ಎಲ್ಲಾ ಉಗ್ರರನ್ನು ಬಿಡುಗಡೆ ಮಾಡುತ್ತೇವೆ” (ಸಗೀರ್ ಸಯೀದ್ ಖಾನ್- ಕಾಂಗ್ರೆಸ್ ನಾಯಕ) ಎಂದು ಬರೆದು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

‘ಕೇಸರಿ ಪಡೆ’ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಪೋಸ್ಟ್‌ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ‘ಸಗೀರ್ ಸಯೀದ್ ಖಾನ್’ ಎಂದು ಬರೆದಿರುವುದರಿಂದ ನಾವು ಆ ವ್ಯಕ್ತಿ ಅಂತಹ ಹೇಳಿಕೆ ಕೊಟ್ಟಿದ್ದಾರೆಯೇ? ಎಂದು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಗೂಗಲ್‌ನಲ್ಲಿ ಕೀ ವರ್ಡ್‌ ಬಳಸಿ ಹುಡುಕಾಡಿದಾಗ 26 ಡಿಸೆಂಬರ್ 2018ರಂದು ‘ರಿಪಬ್ಲಿಕ್ ವರ್ಲ್ಡ್’ ಸುದ್ದಿ ವಾಹಿನಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ್ದ ವಿಡಿಯೋ ದೊರೆತಿದೆ. “Congress Makes Terror Reward Promise In Jammu And Kashmir” ಎಂಬ ಶೀರ್ಷಿಕೆಯ ವಿಡಿಯೋದಲ್ಲಿ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ನಾಯಕರ ಸಗೀರ್ ಸಯೀದ್ ಖಾನ್ ಅವರ ಹೇಳಿಕೆಯಿದೆ.

ವಿಡಿಯೋದಲ್ಲಿ, “ಕಾಶ್ಮೀರವನ್ನು ಸ್ವರ್ಗ ಎಂದು ಕರೆಯಲಾಗುತ್ತಿತ್ತು, ಈಗ ಶವಗಳಿಂದ ತುಂಬಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಲ್ಲಿ ಕೊಲ್ಲಲ್ಪಟ್ಟ ಅಮಾಯಕರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ಮತ್ತು ಒಬ್ಬರಿಗೆ ಉದ್ಯೋಗ ನೀಡಲಾಗುವುದು. ಭಯೋತ್ಪಾದನೆ ಪ್ರಕರಣಗಳಲ್ಲಿ ಕಂಬಿ ಹಿಂದೆ ಬಿದ್ದಿರುವ ಅಮಾಯಕರನ್ನು ಬಿಡುಗಡೆ ಮಾಡಲಾಗುವುದು. ಇಲ್ಲಿನ ಹತ್ಯೆಗಳಿಗೆ ಕಾರಣರಾದ ಬಿಜೆಪಿ ನಾಯಕರು, ಅವರು ಎಷ್ಟೇ ಪ್ರಮುಖರು ಮತ್ತು ಶಕ್ತಿಶಾಲಿಗಳಾಗಿದ್ದರೂ, ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು ಮತ್ತು ಅವರನ್ನು ಗಲ್ಲಿಗೇರಿಸಲಾಗುವುದು. ಏಕೆಂದರೆ ಸೇನೆಯು ಅವರ ಆದೇಶವನ್ನು ಅನುಸರಿಸುತ್ತಿದೆ” ಎಂದು ಸಗೀರ್ ಸಯೀದ್ ಖಾನ್ ಹೇಳಿರುವುದು ಇದೆ.

ಡಿಸೆಂಬರ್ 27, 2018ರಂದು “Congress Leader Sagheer Saeed Khan Lands Party In A Soup” ಎಂಬ ಶೀರ್ಷಿಕೆಯಲ್ಲಿ ಎಬಿಪಿ ನ್ಯೂಸ್ ಕೂಡ ಈ ಕುರಿತ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿತ್ತು. ಅದರಲ್ಲೂ ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆಯ ಹೆಸರಿನಲ್ಲಿ ಕೊಲ್ಲಲ್ಪಟ್ಟ ನಿರ್ದೋಷಿಗಳ ಕುಟುಂಬ ಸದಸ್ಯರಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುತ್ತೇವೆ. ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುತ್ತೇವೆ. ಶಂಕಿತ ಭಯೋತ್ಪಾದಕರನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದು” ಎಂದು ಖಾನ್ ಹೇಳಿರುವುದು ಇದೆ.

ಸಗೀರ್ ಸಯೀದ್ ಹೇಳಿಕೆಯನ್ನು ಕಾಂಗ್ರೆಸ್ ನಿರಾಕರಿಸಿತ್ತು:

ಮಾಧ್ಯಮಗಳಲ್ಲಿ ವರದಿಯಾದ ಸಗೀರ್ ಸಯೀದ್ ಖಾನ್ ಅವರ ಹೇಳಿಕೆಯ ಕುರಿತು ಡಿಸೆಂಬರ್ 26, 2018 ರಂದು ಫೇಸ್‌ಬುಕ್ ಪೋಸ್ಟ್ ಮೂಲಕ ಜಮ್ಮು ಕಾಶ್ಮೀರ ಕಾಂಗ್ರೆಸ್ (ಜೆಕೆಪಿಸಿಸಿ) ಪ್ರತಿಕ್ರಿಯಿಸಿತ್ತು. ಜೆಕೆಪಿಸಿಸಿ ಮುಖ್ಯಸ್ಥ ರವೀಂದರ್ ಶರ್ಮಾ ಅವರು ವಿಡಿಯೋ ಮೂಲಕ ಮಾತನಾಡಿ ಸಗೀರ್ ಸಯೀದ್ ಅವರ ಹೇಳಿಕೆಯನ್ನು ನಿರಾಕರಿಸಿದ್ದರು. ಸಗೀರ್ ಅವರು ಜೆಕೆಪಿಸಿಸಿಯ ಅನುಮತಿ ಇಲ್ಲದೆ ಪಕ್ಷದ ನೀತಿಯ ಬಗ್ಗೆ ಯಾವುದೇ ಹೇಳಿಕೆ ನೀಡಲು ಅನುಮತಿಯಿಲ್ಲ. ಅವರು ಪಕ್ಷದ ವಕ್ತಾರರಲ್ಲ. ಪಕ್ಷದ ಅಲ್ಪಸಂಖ್ಯಾತ ವಿಭಾಗದಿಂದ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.

Congress leader

“ಭಯೋತ್ಪಾದನೆಯನ್ನು ಕಟ್ಟುನಿಟ್ಟಾಗಿ ಎದುರಿಸಬೇಕು ಮತ್ತು ಜನರ ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬುವುದು ಪಕ್ಷದ ನಿಲುವು. ಕೇಂದ್ರ ನಾಯಕತ್ವದ ಅನುಮೋದನೆ ಮತ್ತು ನಾಮನಿರ್ದೇಶಿತ ಅಧಿಕೃತ ವಕ್ತಾರರ ಅನುಮೋದನೆಯಿಲ್ಲದೆ ಈ ವಿಷಯದಲ್ಲಿ ಯಾವುದೇ ಹೇಳಿಕೆ ನೀಡಲು ಯಾರಿಗೂ ಅಧಿಕಾರವಿಲ್ಲ. ಹಾಗಾಗಿ ಸಗೀರ್ ಖಾನ್ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು” ಎಂದು ರವಿಂದರ್ ಶರ್ಮಾ ಹೇಳಿದ್ದರು.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ಅಂಶವೆಂದರೆ, ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಅಲ್ಪ ಸಂಖ್ಯಾತ ವಿಭಾಗದ ಮುಖ್ಯಸ್ಥರಾಗಿದ್ದ ಹಾಜಿ ಸಗೀರ್ ಸಯೀದ್ ಖಾನ್ ಅವರು, ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆಯ ಹೆಸರಿನಲ್ಲಿ ಕೊಲ್ಲಲ್ಪಟ್ಟ ಅಮಾಯಕ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಲಾಗುವುದು ಮತ್ತು ಅವರ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದಿದ್ದರು. ಅಲ್ಲದೆ, ಭಯೋತ್ಪಾದನೆಯ ಹೆಸರಿನಲ್ಲಿ ಬಂಧಿತರಾಗಿರುವ ಅಮಾಯಕನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಅಲ್ಲದೆ, ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಪರಿಹಾರ, ಉದ್ಯೋಗ ನೀಡಲಾಗುವುದು ಮತ್ತು ಉಗ್ರರನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದು ಎಂದು ಹೇಳಿರಲಿಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾದ ವಿಡಿಯೋ 2018ರದ್ದಾಗಿದೆ. ಅಲ್ಲದೆ, ಸಗೀರ್ ಸಯೀದ್ ಅವರ ಹೇಳಿಕೆಯನ್ನು ಕಾಂಗ್ರೆಸ್ ತಿರಸ್ಕರಿಸಿತ್ತು.

ಇದನ್ನೂ ಓದಿ : FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ ಮಾಡಿರುವ ವೈರಲ್ ಪತ್ರ ನಕಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...