Homeಫ್ಯಾಕ್ಟ್‌ಚೆಕ್FACT CHECK : ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಕಾಂಗ್ರೆಸ್ ಪರಿಹಾರ ನೀಡಲಿದೆ ಎಂಬ ಪೋಸ್ಟ್ ದಿಕ್ಕು...

FACT CHECK : ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಕಾಂಗ್ರೆಸ್ ಪರಿಹಾರ ನೀಡಲಿದೆ ಎಂಬ ಪೋಸ್ಟ್ ದಿಕ್ಕು ತಪ್ಪಿಸುವಂತಿದೆ

- Advertisement -
- Advertisement -

“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತೀಯ ಸೇನೆಯಿಂದ ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಪರಿಹಾರ ನೀಡುತ್ತೇವೆ ಮತ್ತು ಸೆರೆಮನೆಯಲ್ಲಿರುವ ಎಲ್ಲಾ ಉಗ್ರರನ್ನು ಬಿಡುಗಡೆ ಮಾಡುತ್ತೇವೆ” (ಸಗೀರ್ ಸಯೀದ್ ಖಾನ್- ಕಾಂಗ್ರೆಸ್ ನಾಯಕ) ಎಂದು ಬರೆದು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

‘ಕೇಸರಿ ಪಡೆ’ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಪೋಸ್ಟ್‌ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ‘ಸಗೀರ್ ಸಯೀದ್ ಖಾನ್’ ಎಂದು ಬರೆದಿರುವುದರಿಂದ ನಾವು ಆ ವ್ಯಕ್ತಿ ಅಂತಹ ಹೇಳಿಕೆ ಕೊಟ್ಟಿದ್ದಾರೆಯೇ? ಎಂದು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಗೂಗಲ್‌ನಲ್ಲಿ ಕೀ ವರ್ಡ್‌ ಬಳಸಿ ಹುಡುಕಾಡಿದಾಗ 26 ಡಿಸೆಂಬರ್ 2018ರಂದು ‘ರಿಪಬ್ಲಿಕ್ ವರ್ಲ್ಡ್’ ಸುದ್ದಿ ವಾಹಿನಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ್ದ ವಿಡಿಯೋ ದೊರೆತಿದೆ. “Congress Makes Terror Reward Promise In Jammu And Kashmir” ಎಂಬ ಶೀರ್ಷಿಕೆಯ ವಿಡಿಯೋದಲ್ಲಿ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ನಾಯಕರ ಸಗೀರ್ ಸಯೀದ್ ಖಾನ್ ಅವರ ಹೇಳಿಕೆಯಿದೆ.

ವಿಡಿಯೋದಲ್ಲಿ, “ಕಾಶ್ಮೀರವನ್ನು ಸ್ವರ್ಗ ಎಂದು ಕರೆಯಲಾಗುತ್ತಿತ್ತು, ಈಗ ಶವಗಳಿಂದ ತುಂಬಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಲ್ಲಿ ಕೊಲ್ಲಲ್ಪಟ್ಟ ಅಮಾಯಕರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ಮತ್ತು ಒಬ್ಬರಿಗೆ ಉದ್ಯೋಗ ನೀಡಲಾಗುವುದು. ಭಯೋತ್ಪಾದನೆ ಪ್ರಕರಣಗಳಲ್ಲಿ ಕಂಬಿ ಹಿಂದೆ ಬಿದ್ದಿರುವ ಅಮಾಯಕರನ್ನು ಬಿಡುಗಡೆ ಮಾಡಲಾಗುವುದು. ಇಲ್ಲಿನ ಹತ್ಯೆಗಳಿಗೆ ಕಾರಣರಾದ ಬಿಜೆಪಿ ನಾಯಕರು, ಅವರು ಎಷ್ಟೇ ಪ್ರಮುಖರು ಮತ್ತು ಶಕ್ತಿಶಾಲಿಗಳಾಗಿದ್ದರೂ, ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು ಮತ್ತು ಅವರನ್ನು ಗಲ್ಲಿಗೇರಿಸಲಾಗುವುದು. ಏಕೆಂದರೆ ಸೇನೆಯು ಅವರ ಆದೇಶವನ್ನು ಅನುಸರಿಸುತ್ತಿದೆ” ಎಂದು ಸಗೀರ್ ಸಯೀದ್ ಖಾನ್ ಹೇಳಿರುವುದು ಇದೆ.

ಡಿಸೆಂಬರ್ 27, 2018ರಂದು “Congress Leader Sagheer Saeed Khan Lands Party In A Soup” ಎಂಬ ಶೀರ್ಷಿಕೆಯಲ್ಲಿ ಎಬಿಪಿ ನ್ಯೂಸ್ ಕೂಡ ಈ ಕುರಿತ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿತ್ತು. ಅದರಲ್ಲೂ ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆಯ ಹೆಸರಿನಲ್ಲಿ ಕೊಲ್ಲಲ್ಪಟ್ಟ ನಿರ್ದೋಷಿಗಳ ಕುಟುಂಬ ಸದಸ್ಯರಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುತ್ತೇವೆ. ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುತ್ತೇವೆ. ಶಂಕಿತ ಭಯೋತ್ಪಾದಕರನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದು” ಎಂದು ಖಾನ್ ಹೇಳಿರುವುದು ಇದೆ.

ಸಗೀರ್ ಸಯೀದ್ ಹೇಳಿಕೆಯನ್ನು ಕಾಂಗ್ರೆಸ್ ನಿರಾಕರಿಸಿತ್ತು:

ಮಾಧ್ಯಮಗಳಲ್ಲಿ ವರದಿಯಾದ ಸಗೀರ್ ಸಯೀದ್ ಖಾನ್ ಅವರ ಹೇಳಿಕೆಯ ಕುರಿತು ಡಿಸೆಂಬರ್ 26, 2018 ರಂದು ಫೇಸ್‌ಬುಕ್ ಪೋಸ್ಟ್ ಮೂಲಕ ಜಮ್ಮು ಕಾಶ್ಮೀರ ಕಾಂಗ್ರೆಸ್ (ಜೆಕೆಪಿಸಿಸಿ) ಪ್ರತಿಕ್ರಿಯಿಸಿತ್ತು. ಜೆಕೆಪಿಸಿಸಿ ಮುಖ್ಯಸ್ಥ ರವೀಂದರ್ ಶರ್ಮಾ ಅವರು ವಿಡಿಯೋ ಮೂಲಕ ಮಾತನಾಡಿ ಸಗೀರ್ ಸಯೀದ್ ಅವರ ಹೇಳಿಕೆಯನ್ನು ನಿರಾಕರಿಸಿದ್ದರು. ಸಗೀರ್ ಅವರು ಜೆಕೆಪಿಸಿಸಿಯ ಅನುಮತಿ ಇಲ್ಲದೆ ಪಕ್ಷದ ನೀತಿಯ ಬಗ್ಗೆ ಯಾವುದೇ ಹೇಳಿಕೆ ನೀಡಲು ಅನುಮತಿಯಿಲ್ಲ. ಅವರು ಪಕ್ಷದ ವಕ್ತಾರರಲ್ಲ. ಪಕ್ಷದ ಅಲ್ಪಸಂಖ್ಯಾತ ವಿಭಾಗದಿಂದ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.

Congress leader

“ಭಯೋತ್ಪಾದನೆಯನ್ನು ಕಟ್ಟುನಿಟ್ಟಾಗಿ ಎದುರಿಸಬೇಕು ಮತ್ತು ಜನರ ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬುವುದು ಪಕ್ಷದ ನಿಲುವು. ಕೇಂದ್ರ ನಾಯಕತ್ವದ ಅನುಮೋದನೆ ಮತ್ತು ನಾಮನಿರ್ದೇಶಿತ ಅಧಿಕೃತ ವಕ್ತಾರರ ಅನುಮೋದನೆಯಿಲ್ಲದೆ ಈ ವಿಷಯದಲ್ಲಿ ಯಾವುದೇ ಹೇಳಿಕೆ ನೀಡಲು ಯಾರಿಗೂ ಅಧಿಕಾರವಿಲ್ಲ. ಹಾಗಾಗಿ ಸಗೀರ್ ಖಾನ್ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು” ಎಂದು ರವಿಂದರ್ ಶರ್ಮಾ ಹೇಳಿದ್ದರು.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ಅಂಶವೆಂದರೆ, ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಅಲ್ಪ ಸಂಖ್ಯಾತ ವಿಭಾಗದ ಮುಖ್ಯಸ್ಥರಾಗಿದ್ದ ಹಾಜಿ ಸಗೀರ್ ಸಯೀದ್ ಖಾನ್ ಅವರು, ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆಯ ಹೆಸರಿನಲ್ಲಿ ಕೊಲ್ಲಲ್ಪಟ್ಟ ಅಮಾಯಕ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಲಾಗುವುದು ಮತ್ತು ಅವರ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದಿದ್ದರು. ಅಲ್ಲದೆ, ಭಯೋತ್ಪಾದನೆಯ ಹೆಸರಿನಲ್ಲಿ ಬಂಧಿತರಾಗಿರುವ ಅಮಾಯಕನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಅಲ್ಲದೆ, ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಪರಿಹಾರ, ಉದ್ಯೋಗ ನೀಡಲಾಗುವುದು ಮತ್ತು ಉಗ್ರರನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದು ಎಂದು ಹೇಳಿರಲಿಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾದ ವಿಡಿಯೋ 2018ರದ್ದಾಗಿದೆ. ಅಲ್ಲದೆ, ಸಗೀರ್ ಸಯೀದ್ ಅವರ ಹೇಳಿಕೆಯನ್ನು ಕಾಂಗ್ರೆಸ್ ತಿರಸ್ಕರಿಸಿತ್ತು.

ಇದನ್ನೂ ಓದಿ : FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ ಮಾಡಿರುವ ವೈರಲ್ ಪತ್ರ ನಕಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...