Homeಫ್ಯಾಕ್ಟ್‌ಚೆಕ್FACT CHECK : ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಕಾಂಗ್ರೆಸ್ ಪರಿಹಾರ ನೀಡಲಿದೆ ಎಂಬ ಪೋಸ್ಟ್ ದಿಕ್ಕು...

FACT CHECK : ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಕಾಂಗ್ರೆಸ್ ಪರಿಹಾರ ನೀಡಲಿದೆ ಎಂಬ ಪೋಸ್ಟ್ ದಿಕ್ಕು ತಪ್ಪಿಸುವಂತಿದೆ

- Advertisement -
- Advertisement -

“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತೀಯ ಸೇನೆಯಿಂದ ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಪರಿಹಾರ ನೀಡುತ್ತೇವೆ ಮತ್ತು ಸೆರೆಮನೆಯಲ್ಲಿರುವ ಎಲ್ಲಾ ಉಗ್ರರನ್ನು ಬಿಡುಗಡೆ ಮಾಡುತ್ತೇವೆ” (ಸಗೀರ್ ಸಯೀದ್ ಖಾನ್- ಕಾಂಗ್ರೆಸ್ ನಾಯಕ) ಎಂದು ಬರೆದು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

‘ಕೇಸರಿ ಪಡೆ’ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಪೋಸ್ಟ್‌ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ‘ಸಗೀರ್ ಸಯೀದ್ ಖಾನ್’ ಎಂದು ಬರೆದಿರುವುದರಿಂದ ನಾವು ಆ ವ್ಯಕ್ತಿ ಅಂತಹ ಹೇಳಿಕೆ ಕೊಟ್ಟಿದ್ದಾರೆಯೇ? ಎಂದು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಗೂಗಲ್‌ನಲ್ಲಿ ಕೀ ವರ್ಡ್‌ ಬಳಸಿ ಹುಡುಕಾಡಿದಾಗ 26 ಡಿಸೆಂಬರ್ 2018ರಂದು ‘ರಿಪಬ್ಲಿಕ್ ವರ್ಲ್ಡ್’ ಸುದ್ದಿ ವಾಹಿನಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ್ದ ವಿಡಿಯೋ ದೊರೆತಿದೆ. “Congress Makes Terror Reward Promise In Jammu And Kashmir” ಎಂಬ ಶೀರ್ಷಿಕೆಯ ವಿಡಿಯೋದಲ್ಲಿ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ನಾಯಕರ ಸಗೀರ್ ಸಯೀದ್ ಖಾನ್ ಅವರ ಹೇಳಿಕೆಯಿದೆ.

ವಿಡಿಯೋದಲ್ಲಿ, “ಕಾಶ್ಮೀರವನ್ನು ಸ್ವರ್ಗ ಎಂದು ಕರೆಯಲಾಗುತ್ತಿತ್ತು, ಈಗ ಶವಗಳಿಂದ ತುಂಬಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಲ್ಲಿ ಕೊಲ್ಲಲ್ಪಟ್ಟ ಅಮಾಯಕರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ಮತ್ತು ಒಬ್ಬರಿಗೆ ಉದ್ಯೋಗ ನೀಡಲಾಗುವುದು. ಭಯೋತ್ಪಾದನೆ ಪ್ರಕರಣಗಳಲ್ಲಿ ಕಂಬಿ ಹಿಂದೆ ಬಿದ್ದಿರುವ ಅಮಾಯಕರನ್ನು ಬಿಡುಗಡೆ ಮಾಡಲಾಗುವುದು. ಇಲ್ಲಿನ ಹತ್ಯೆಗಳಿಗೆ ಕಾರಣರಾದ ಬಿಜೆಪಿ ನಾಯಕರು, ಅವರು ಎಷ್ಟೇ ಪ್ರಮುಖರು ಮತ್ತು ಶಕ್ತಿಶಾಲಿಗಳಾಗಿದ್ದರೂ, ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು ಮತ್ತು ಅವರನ್ನು ಗಲ್ಲಿಗೇರಿಸಲಾಗುವುದು. ಏಕೆಂದರೆ ಸೇನೆಯು ಅವರ ಆದೇಶವನ್ನು ಅನುಸರಿಸುತ್ತಿದೆ” ಎಂದು ಸಗೀರ್ ಸಯೀದ್ ಖಾನ್ ಹೇಳಿರುವುದು ಇದೆ.

ಡಿಸೆಂಬರ್ 27, 2018ರಂದು “Congress Leader Sagheer Saeed Khan Lands Party In A Soup” ಎಂಬ ಶೀರ್ಷಿಕೆಯಲ್ಲಿ ಎಬಿಪಿ ನ್ಯೂಸ್ ಕೂಡ ಈ ಕುರಿತ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿತ್ತು. ಅದರಲ್ಲೂ ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆಯ ಹೆಸರಿನಲ್ಲಿ ಕೊಲ್ಲಲ್ಪಟ್ಟ ನಿರ್ದೋಷಿಗಳ ಕುಟುಂಬ ಸದಸ್ಯರಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುತ್ತೇವೆ. ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುತ್ತೇವೆ. ಶಂಕಿತ ಭಯೋತ್ಪಾದಕರನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದು” ಎಂದು ಖಾನ್ ಹೇಳಿರುವುದು ಇದೆ.

ಸಗೀರ್ ಸಯೀದ್ ಹೇಳಿಕೆಯನ್ನು ಕಾಂಗ್ರೆಸ್ ನಿರಾಕರಿಸಿತ್ತು:

ಮಾಧ್ಯಮಗಳಲ್ಲಿ ವರದಿಯಾದ ಸಗೀರ್ ಸಯೀದ್ ಖಾನ್ ಅವರ ಹೇಳಿಕೆಯ ಕುರಿತು ಡಿಸೆಂಬರ್ 26, 2018 ರಂದು ಫೇಸ್‌ಬುಕ್ ಪೋಸ್ಟ್ ಮೂಲಕ ಜಮ್ಮು ಕಾಶ್ಮೀರ ಕಾಂಗ್ರೆಸ್ (ಜೆಕೆಪಿಸಿಸಿ) ಪ್ರತಿಕ್ರಿಯಿಸಿತ್ತು. ಜೆಕೆಪಿಸಿಸಿ ಮುಖ್ಯಸ್ಥ ರವೀಂದರ್ ಶರ್ಮಾ ಅವರು ವಿಡಿಯೋ ಮೂಲಕ ಮಾತನಾಡಿ ಸಗೀರ್ ಸಯೀದ್ ಅವರ ಹೇಳಿಕೆಯನ್ನು ನಿರಾಕರಿಸಿದ್ದರು. ಸಗೀರ್ ಅವರು ಜೆಕೆಪಿಸಿಸಿಯ ಅನುಮತಿ ಇಲ್ಲದೆ ಪಕ್ಷದ ನೀತಿಯ ಬಗ್ಗೆ ಯಾವುದೇ ಹೇಳಿಕೆ ನೀಡಲು ಅನುಮತಿಯಿಲ್ಲ. ಅವರು ಪಕ್ಷದ ವಕ್ತಾರರಲ್ಲ. ಪಕ್ಷದ ಅಲ್ಪಸಂಖ್ಯಾತ ವಿಭಾಗದಿಂದ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.

Congress leader

“ಭಯೋತ್ಪಾದನೆಯನ್ನು ಕಟ್ಟುನಿಟ್ಟಾಗಿ ಎದುರಿಸಬೇಕು ಮತ್ತು ಜನರ ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬುವುದು ಪಕ್ಷದ ನಿಲುವು. ಕೇಂದ್ರ ನಾಯಕತ್ವದ ಅನುಮೋದನೆ ಮತ್ತು ನಾಮನಿರ್ದೇಶಿತ ಅಧಿಕೃತ ವಕ್ತಾರರ ಅನುಮೋದನೆಯಿಲ್ಲದೆ ಈ ವಿಷಯದಲ್ಲಿ ಯಾವುದೇ ಹೇಳಿಕೆ ನೀಡಲು ಯಾರಿಗೂ ಅಧಿಕಾರವಿಲ್ಲ. ಹಾಗಾಗಿ ಸಗೀರ್ ಖಾನ್ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು” ಎಂದು ರವಿಂದರ್ ಶರ್ಮಾ ಹೇಳಿದ್ದರು.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ಅಂಶವೆಂದರೆ, ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಅಲ್ಪ ಸಂಖ್ಯಾತ ವಿಭಾಗದ ಮುಖ್ಯಸ್ಥರಾಗಿದ್ದ ಹಾಜಿ ಸಗೀರ್ ಸಯೀದ್ ಖಾನ್ ಅವರು, ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆಯ ಹೆಸರಿನಲ್ಲಿ ಕೊಲ್ಲಲ್ಪಟ್ಟ ಅಮಾಯಕ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಲಾಗುವುದು ಮತ್ತು ಅವರ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದಿದ್ದರು. ಅಲ್ಲದೆ, ಭಯೋತ್ಪಾದನೆಯ ಹೆಸರಿನಲ್ಲಿ ಬಂಧಿತರಾಗಿರುವ ಅಮಾಯಕನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಅಲ್ಲದೆ, ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಪರಿಹಾರ, ಉದ್ಯೋಗ ನೀಡಲಾಗುವುದು ಮತ್ತು ಉಗ್ರರನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದು ಎಂದು ಹೇಳಿರಲಿಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾದ ವಿಡಿಯೋ 2018ರದ್ದಾಗಿದೆ. ಅಲ್ಲದೆ, ಸಗೀರ್ ಸಯೀದ್ ಅವರ ಹೇಳಿಕೆಯನ್ನು ಕಾಂಗ್ರೆಸ್ ತಿರಸ್ಕರಿಸಿತ್ತು.

ಇದನ್ನೂ ಓದಿ : FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ ಮಾಡಿರುವ ವೈರಲ್ ಪತ್ರ ನಕಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...