Homeಫ್ಯಾಕ್ಟ್‌ಚೆಕ್FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

- Advertisement -
- Advertisement -

ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಎಕ್ಸ್‌ನಲ್ಲಿ ಕಂಡು ಬಂದಿರುವ  ಪೋಸ್ಟ್‌ನಲ್ಲಿ “ಆಸ್ಟ್ರೇಲಿಯಾದ ಖಗೋಳಶಾಸ್ತ್ರಜ್ಞ 1,28,000 ಅಡಿಗಳಷ್ಟು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪುತ್ತಾನೆ … 1236 ಕಿ.ಮೀ. 4 ನಿಮಿಷ 5 ಸೆಕೆಂಡ್‌ಗಳಲ್ಲಿ ಪ್ರಯಾಣ ಮುಗಿಸಿದೆ… ಭೂಮಿ ಚಲಿಸುತ್ತಿರುವುದನ್ನು ಅವರು ಸ್ಪಷ್ಟವಾಗಿ ನೋಡಿದ್ದಾರೆ… ಅದ್ಭುತವಾದ ವಿಡಿಯೋ, ಇದನ್ನು ನೋಡಿ ಮತ್ತು ದಯವಿಟ್ಟು ನಿಮ್ಮ ಮಕ್ಕಳಿಗೆ ತೋರಿಸಿ” ಎಂದಿದೆ. ಹಲವು ಎಕ್ಸ್‌ ಖಾತೆ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್‌  ಹಂಚಿಕೊಂಡಿದ್ದಾರೆ.

ಫೇಸ್‌ಬುಕ್‌ನ ಹಲವು ಬಳಕೆದಾರರು ಇದೇ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋದ ಕೀ ಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಕೆಲವು ವರದಿಗಳು ಲಭ್ಯವಾಗಿವೆ.

ಅಕ್ಟೋಬರ್ 15, 2012 ಆನ್‌ ಡಿಮ್ಯಾಂಡ್ ನ್ಯೂಸ್‌ ಯೂಟ್ಯೂಬ್‌ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ “Space jump: Felix Baumgartner describes his record-breaking skydive” ಶೀರ್ಷಿಕೆಯಡಿಯಲ್ಲಿ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರು ಬಾಹ್ಯಾಕಾಶದಿಂದ ಸ್ಕೈಡೈವಿಂಗ್‌ ಮಾಡಿದ್ದ ಬಗ್ಗೆ ಹೇಳಲಾಗಿದೆ. ಈ ವಿಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಇದು ವೈರಲ್‌ ವಿಡಿಯೋಗೆ ಸಾಮ್ಯತೆ ಇರುವಂತೆ ಕಂಡು ಬಂದಿದೆ. ಇದನ್ನು ಆಧಾರವಾಗಿಟ್ಟುಕೊಂಡು ಮತ್ತಷ್ಟು ಪರಿಶೀಲಿಸಿದಾಗ ಮಾಹಿತಿ ಲಭ್ಯವಾಗಿದೆ.

ಅಕ್ಟೋಬರ್ 14, 2022ರಂದು ರೆಡ್ ಬುಲ್‌ ಯೂಟ್ಯೂಬ್‌ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ “I Jumped From Space (World Record Supersonic Freefall)” ಶೀರ್ಷಿಕೆಯಿದ್ದು ಫೆಲಿಕ್ಸ್ ಬಾಮ್‌ಗಾರ್ಟ್ನರ್ ಅವರು ಬಾಹ್ಯಾಕಾಶದಿಂದ ನೆಗೆದ ಬಗ್ಗೆ ಮಾಹಿತಿ ಇದೆ. ಈ ವಿಡಿಯೋದ ವಿವರಣೆಯಲ್ಲಿ, “ಬಾಹ್ಯಾಕಾಶದಿಂದ ಜಿಗಿಯಲು *ನಿಜವಾಗಿ* ಏನನಿಸುತ್ತದೆ? 2012 ರಲ್ಲಿ ಫೆಲಿಕ್ಸ್ ಬೌಮ್ಗಗರ್ಟ್ನರ್ ಅವರು ಹೀಲಿಯಂ ಬಲೂನ್ ಅನ್ನು ವಾಯುಮಂಡಲಕ್ಕೆ ತೆಗೆದುಕೊಂಡು ವಿಶೇಷವಾಗಿ ತಯಾರಿಸಿದ ಬಾಹ್ಯಾಕಾಶ ಸೂಟ್‌ನಲ್ಲಿ ಭೂಮಿಗೆ ವಾಪಾಸಾದರು. ಫ್ರೀ ಫಾಲ್‌ನಲ್ಲಿ ಅವರು ಶಬ್ದದ ವೇಗವನ್ನು ಬೇದಿಸಿ ಭೂಮಿಗೆ ಪ್ರವೇಶಿಸಿದರು. ಈ ವೇಳೆ ಅವರು ತಿರುಗಿದ್ದು ಇಡೀ ರೆಡ್ ಬುಲ್ ಸ್ಟ್ರಾಟೋಸ್ ಮಿಷನ್‌ಗೆ ಬೆದರಿಕೆ ಹಾಕಿತು… ಫೆಲಿಕ್ಸ್ ಅವರು ಸಾಧನೆಯನ್ನು ಪ್ರತಿಬಿಂಬಿಸುತ್ತಾರೆ ಮತ್ತು ಬಾಹ್ಯಾಕಾಶದಿಂದ ಜಿಗಿಯಲು ಏನ್ನಿಸಿತು ಎಂಬುದನ್ನು ನಿಜವಾಗಿ ಹಂಚಿಕೊಳ್ಳುತ್ತಾರೆ” ಎಂದಿದೆ.

ಫೆಲಿಕ್ಸ್ ಬಾಮ್‌ಗಾರ್ಟ್ನರ್ ಅವರ ಐತಿಹಾಸಿಕ ನೆಗೆತಕ್ಕೆ 10ವರ್ಷ ಆದ ಬಗ್ಗೆ ಸಿಎನ್‌ಎನ್‌ ಅಕ್ಟೋಬರ್ 14, 2022ರಂದು ವರದಿಯನ್ನು ಪ್ರಕಟಿಸಿದ್ದು, ಅವರ ಬಾಹ್ಯಾಕಾಶ ನೆಗೆತದ ಬಗ್ಗೆ ಮೆಲುಕು ಹಾಕಿದೆ.

ಗಿನ್ನಿಸ್ ವರ್ಲ್ಡ್ ರೆಕಾರ್ಡ್ ತನ್ನ ವೆಬ್‌ ಸೈಟ್ ನಲ್ಲಿ ನೀಡಿದ ಲೇಖನದಲ್ಲಿ, “ಆಸ್ಟ್ರಿಯಾದ ಸ್ಕೈಡೈವರ್ ಫೆಲಿಕ್ಸ್ ಬಾಮ್‌ಗಾರ್ಟ್ನರ್ 38,969.4 ಮೀಟರ್ ಎತ್ತರದಿಂದ ಪ್ಯಾರಾಚೂಟ್ ಜಿಗಿತವನ್ನು ಪೂರ್ಣಗೊಳಿಸಿದ ಮಹತ್ವದ ಕ್ಷಣವನ್ನು ವೀಕ್ಷಿಸಲು ಅಭೂತಪೂರ್ವ ಎಂಟು ಮಿಲಿಯನ್ ಜನರು 14 ಅಕ್ಟೋಬರ್ 2012 ರಂದು ಯೂಟ್ಯೂಬ್‌ ವೀಕ್ಷಣೆ ಮಾಡಿದ್ದಾರೆ. ಈ ಮೂಲಕ ಎಂಟು ವಿಶ್ವ ದಾಖಲೆಗಳನ್ನು ಮತ್ತು ಕೇವಲ ಮೂರು ಗಂಟೆಗಳ ಅಂತರದಲ್ಲಿ ಬಾಹ್ಯಾಕಾಶದ ಧ್ವನಿ ತಡೆಗೋಡೆಯನ್ನು ಮುರಿದಿದ್ದಾರೆ” ಎಂದಿದೆ.

ಇದರೊಂದಿಗೆ ಫೆಲಿಕ್ಸ್ ಬಾಮ್‌ಗಾರ್ಟ್ನರ್ ರಾಷ್ಟ್ರೀಯತೆಯನ್ನು ಪರಿಶೀಲಿಸಲು ಅವರ ವೆಬ್‌ ಸೈಟ್ ವೀಕ್ಷಿಸಿದ್ದೇವೆ. ಇದರಲ್ಲಿ ಅವರ ವಿವರಗಳನ್ನು ನೀಡಲಾಗಿದ್ದು, ಅವರು ಆಸ್ಟ್ರಿಯನ್‌ ಪ್ರಜೆ ಎಂದು ಉಲ್ಲೇಖಿಸಿರುವುದನ್ನು ನೋಡಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂಬ ವಿಡಿಯೋ 2012ರದ್ದಾಗಿದ್ದು, ಅವರು ಆಸ್ಟ್ರೇಲಿಯಾದವರಲ್ಲ ಮತ್ತು ಆಸ್ಟ್ರಿಯನ್ ಪ್ರಜೆ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರಾಗಿದ್ದಾರೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...