Homeಫ್ಯಾಕ್ಟ್‌ಚೆಕ್FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

- Advertisement -
- Advertisement -

ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಎಕ್ಸ್‌ನಲ್ಲಿ ಕಂಡು ಬಂದಿರುವ  ಪೋಸ್ಟ್‌ನಲ್ಲಿ “ಆಸ್ಟ್ರೇಲಿಯಾದ ಖಗೋಳಶಾಸ್ತ್ರಜ್ಞ 1,28,000 ಅಡಿಗಳಷ್ಟು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪುತ್ತಾನೆ … 1236 ಕಿ.ಮೀ. 4 ನಿಮಿಷ 5 ಸೆಕೆಂಡ್‌ಗಳಲ್ಲಿ ಪ್ರಯಾಣ ಮುಗಿಸಿದೆ… ಭೂಮಿ ಚಲಿಸುತ್ತಿರುವುದನ್ನು ಅವರು ಸ್ಪಷ್ಟವಾಗಿ ನೋಡಿದ್ದಾರೆ… ಅದ್ಭುತವಾದ ವಿಡಿಯೋ, ಇದನ್ನು ನೋಡಿ ಮತ್ತು ದಯವಿಟ್ಟು ನಿಮ್ಮ ಮಕ್ಕಳಿಗೆ ತೋರಿಸಿ” ಎಂದಿದೆ. ಹಲವು ಎಕ್ಸ್‌ ಖಾತೆ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್‌  ಹಂಚಿಕೊಂಡಿದ್ದಾರೆ.

ಫೇಸ್‌ಬುಕ್‌ನ ಹಲವು ಬಳಕೆದಾರರು ಇದೇ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋದ ಕೀ ಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಕೆಲವು ವರದಿಗಳು ಲಭ್ಯವಾಗಿವೆ.

ಅಕ್ಟೋಬರ್ 15, 2012 ಆನ್‌ ಡಿಮ್ಯಾಂಡ್ ನ್ಯೂಸ್‌ ಯೂಟ್ಯೂಬ್‌ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ “Space jump: Felix Baumgartner describes his record-breaking skydive” ಶೀರ್ಷಿಕೆಯಡಿಯಲ್ಲಿ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರು ಬಾಹ್ಯಾಕಾಶದಿಂದ ಸ್ಕೈಡೈವಿಂಗ್‌ ಮಾಡಿದ್ದ ಬಗ್ಗೆ ಹೇಳಲಾಗಿದೆ. ಈ ವಿಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಇದು ವೈರಲ್‌ ವಿಡಿಯೋಗೆ ಸಾಮ್ಯತೆ ಇರುವಂತೆ ಕಂಡು ಬಂದಿದೆ. ಇದನ್ನು ಆಧಾರವಾಗಿಟ್ಟುಕೊಂಡು ಮತ್ತಷ್ಟು ಪರಿಶೀಲಿಸಿದಾಗ ಮಾಹಿತಿ ಲಭ್ಯವಾಗಿದೆ.

ಅಕ್ಟೋಬರ್ 14, 2022ರಂದು ರೆಡ್ ಬುಲ್‌ ಯೂಟ್ಯೂಬ್‌ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ “I Jumped From Space (World Record Supersonic Freefall)” ಶೀರ್ಷಿಕೆಯಿದ್ದು ಫೆಲಿಕ್ಸ್ ಬಾಮ್‌ಗಾರ್ಟ್ನರ್ ಅವರು ಬಾಹ್ಯಾಕಾಶದಿಂದ ನೆಗೆದ ಬಗ್ಗೆ ಮಾಹಿತಿ ಇದೆ. ಈ ವಿಡಿಯೋದ ವಿವರಣೆಯಲ್ಲಿ, “ಬಾಹ್ಯಾಕಾಶದಿಂದ ಜಿಗಿಯಲು *ನಿಜವಾಗಿ* ಏನನಿಸುತ್ತದೆ? 2012 ರಲ್ಲಿ ಫೆಲಿಕ್ಸ್ ಬೌಮ್ಗಗರ್ಟ್ನರ್ ಅವರು ಹೀಲಿಯಂ ಬಲೂನ್ ಅನ್ನು ವಾಯುಮಂಡಲಕ್ಕೆ ತೆಗೆದುಕೊಂಡು ವಿಶೇಷವಾಗಿ ತಯಾರಿಸಿದ ಬಾಹ್ಯಾಕಾಶ ಸೂಟ್‌ನಲ್ಲಿ ಭೂಮಿಗೆ ವಾಪಾಸಾದರು. ಫ್ರೀ ಫಾಲ್‌ನಲ್ಲಿ ಅವರು ಶಬ್ದದ ವೇಗವನ್ನು ಬೇದಿಸಿ ಭೂಮಿಗೆ ಪ್ರವೇಶಿಸಿದರು. ಈ ವೇಳೆ ಅವರು ತಿರುಗಿದ್ದು ಇಡೀ ರೆಡ್ ಬುಲ್ ಸ್ಟ್ರಾಟೋಸ್ ಮಿಷನ್‌ಗೆ ಬೆದರಿಕೆ ಹಾಕಿತು… ಫೆಲಿಕ್ಸ್ ಅವರು ಸಾಧನೆಯನ್ನು ಪ್ರತಿಬಿಂಬಿಸುತ್ತಾರೆ ಮತ್ತು ಬಾಹ್ಯಾಕಾಶದಿಂದ ಜಿಗಿಯಲು ಏನ್ನಿಸಿತು ಎಂಬುದನ್ನು ನಿಜವಾಗಿ ಹಂಚಿಕೊಳ್ಳುತ್ತಾರೆ” ಎಂದಿದೆ.

ಫೆಲಿಕ್ಸ್ ಬಾಮ್‌ಗಾರ್ಟ್ನರ್ ಅವರ ಐತಿಹಾಸಿಕ ನೆಗೆತಕ್ಕೆ 10ವರ್ಷ ಆದ ಬಗ್ಗೆ ಸಿಎನ್‌ಎನ್‌ ಅಕ್ಟೋಬರ್ 14, 2022ರಂದು ವರದಿಯನ್ನು ಪ್ರಕಟಿಸಿದ್ದು, ಅವರ ಬಾಹ್ಯಾಕಾಶ ನೆಗೆತದ ಬಗ್ಗೆ ಮೆಲುಕು ಹಾಕಿದೆ.

ಗಿನ್ನಿಸ್ ವರ್ಲ್ಡ್ ರೆಕಾರ್ಡ್ ತನ್ನ ವೆಬ್‌ ಸೈಟ್ ನಲ್ಲಿ ನೀಡಿದ ಲೇಖನದಲ್ಲಿ, “ಆಸ್ಟ್ರಿಯಾದ ಸ್ಕೈಡೈವರ್ ಫೆಲಿಕ್ಸ್ ಬಾಮ್‌ಗಾರ್ಟ್ನರ್ 38,969.4 ಮೀಟರ್ ಎತ್ತರದಿಂದ ಪ್ಯಾರಾಚೂಟ್ ಜಿಗಿತವನ್ನು ಪೂರ್ಣಗೊಳಿಸಿದ ಮಹತ್ವದ ಕ್ಷಣವನ್ನು ವೀಕ್ಷಿಸಲು ಅಭೂತಪೂರ್ವ ಎಂಟು ಮಿಲಿಯನ್ ಜನರು 14 ಅಕ್ಟೋಬರ್ 2012 ರಂದು ಯೂಟ್ಯೂಬ್‌ ವೀಕ್ಷಣೆ ಮಾಡಿದ್ದಾರೆ. ಈ ಮೂಲಕ ಎಂಟು ವಿಶ್ವ ದಾಖಲೆಗಳನ್ನು ಮತ್ತು ಕೇವಲ ಮೂರು ಗಂಟೆಗಳ ಅಂತರದಲ್ಲಿ ಬಾಹ್ಯಾಕಾಶದ ಧ್ವನಿ ತಡೆಗೋಡೆಯನ್ನು ಮುರಿದಿದ್ದಾರೆ” ಎಂದಿದೆ.

ಇದರೊಂದಿಗೆ ಫೆಲಿಕ್ಸ್ ಬಾಮ್‌ಗಾರ್ಟ್ನರ್ ರಾಷ್ಟ್ರೀಯತೆಯನ್ನು ಪರಿಶೀಲಿಸಲು ಅವರ ವೆಬ್‌ ಸೈಟ್ ವೀಕ್ಷಿಸಿದ್ದೇವೆ. ಇದರಲ್ಲಿ ಅವರ ವಿವರಗಳನ್ನು ನೀಡಲಾಗಿದ್ದು, ಅವರು ಆಸ್ಟ್ರಿಯನ್‌ ಪ್ರಜೆ ಎಂದು ಉಲ್ಲೇಖಿಸಿರುವುದನ್ನು ನೋಡಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂಬ ವಿಡಿಯೋ 2012ರದ್ದಾಗಿದ್ದು, ಅವರು ಆಸ್ಟ್ರೇಲಿಯಾದವರಲ್ಲ ಮತ್ತು ಆಸ್ಟ್ರಿಯನ್ ಪ್ರಜೆ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರಾಗಿದ್ದಾರೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...