Homeಫ್ಯಾಕ್ಟ್‌ಚೆಕ್FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

- Advertisement -
- Advertisement -

ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಎಕ್ಸ್‌ನಲ್ಲಿ ಕಂಡು ಬಂದಿರುವ  ಪೋಸ್ಟ್‌ನಲ್ಲಿ “ಆಸ್ಟ್ರೇಲಿಯಾದ ಖಗೋಳಶಾಸ್ತ್ರಜ್ಞ 1,28,000 ಅಡಿಗಳಷ್ಟು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪುತ್ತಾನೆ … 1236 ಕಿ.ಮೀ. 4 ನಿಮಿಷ 5 ಸೆಕೆಂಡ್‌ಗಳಲ್ಲಿ ಪ್ರಯಾಣ ಮುಗಿಸಿದೆ… ಭೂಮಿ ಚಲಿಸುತ್ತಿರುವುದನ್ನು ಅವರು ಸ್ಪಷ್ಟವಾಗಿ ನೋಡಿದ್ದಾರೆ… ಅದ್ಭುತವಾದ ವಿಡಿಯೋ, ಇದನ್ನು ನೋಡಿ ಮತ್ತು ದಯವಿಟ್ಟು ನಿಮ್ಮ ಮಕ್ಕಳಿಗೆ ತೋರಿಸಿ” ಎಂದಿದೆ. ಹಲವು ಎಕ್ಸ್‌ ಖಾತೆ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್‌  ಹಂಚಿಕೊಂಡಿದ್ದಾರೆ.

ಫೇಸ್‌ಬುಕ್‌ನ ಹಲವು ಬಳಕೆದಾರರು ಇದೇ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋದ ಕೀ ಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಕೆಲವು ವರದಿಗಳು ಲಭ್ಯವಾಗಿವೆ.

ಅಕ್ಟೋಬರ್ 15, 2012 ಆನ್‌ ಡಿಮ್ಯಾಂಡ್ ನ್ಯೂಸ್‌ ಯೂಟ್ಯೂಬ್‌ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ “Space jump: Felix Baumgartner describes his record-breaking skydive” ಶೀರ್ಷಿಕೆಯಡಿಯಲ್ಲಿ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರು ಬಾಹ್ಯಾಕಾಶದಿಂದ ಸ್ಕೈಡೈವಿಂಗ್‌ ಮಾಡಿದ್ದ ಬಗ್ಗೆ ಹೇಳಲಾಗಿದೆ. ಈ ವಿಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಇದು ವೈರಲ್‌ ವಿಡಿಯೋಗೆ ಸಾಮ್ಯತೆ ಇರುವಂತೆ ಕಂಡು ಬಂದಿದೆ. ಇದನ್ನು ಆಧಾರವಾಗಿಟ್ಟುಕೊಂಡು ಮತ್ತಷ್ಟು ಪರಿಶೀಲಿಸಿದಾಗ ಮಾಹಿತಿ ಲಭ್ಯವಾಗಿದೆ.

ಅಕ್ಟೋಬರ್ 14, 2022ರಂದು ರೆಡ್ ಬುಲ್‌ ಯೂಟ್ಯೂಬ್‌ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ “I Jumped From Space (World Record Supersonic Freefall)” ಶೀರ್ಷಿಕೆಯಿದ್ದು ಫೆಲಿಕ್ಸ್ ಬಾಮ್‌ಗಾರ್ಟ್ನರ್ ಅವರು ಬಾಹ್ಯಾಕಾಶದಿಂದ ನೆಗೆದ ಬಗ್ಗೆ ಮಾಹಿತಿ ಇದೆ. ಈ ವಿಡಿಯೋದ ವಿವರಣೆಯಲ್ಲಿ, “ಬಾಹ್ಯಾಕಾಶದಿಂದ ಜಿಗಿಯಲು *ನಿಜವಾಗಿ* ಏನನಿಸುತ್ತದೆ? 2012 ರಲ್ಲಿ ಫೆಲಿಕ್ಸ್ ಬೌಮ್ಗಗರ್ಟ್ನರ್ ಅವರು ಹೀಲಿಯಂ ಬಲೂನ್ ಅನ್ನು ವಾಯುಮಂಡಲಕ್ಕೆ ತೆಗೆದುಕೊಂಡು ವಿಶೇಷವಾಗಿ ತಯಾರಿಸಿದ ಬಾಹ್ಯಾಕಾಶ ಸೂಟ್‌ನಲ್ಲಿ ಭೂಮಿಗೆ ವಾಪಾಸಾದರು. ಫ್ರೀ ಫಾಲ್‌ನಲ್ಲಿ ಅವರು ಶಬ್ದದ ವೇಗವನ್ನು ಬೇದಿಸಿ ಭೂಮಿಗೆ ಪ್ರವೇಶಿಸಿದರು. ಈ ವೇಳೆ ಅವರು ತಿರುಗಿದ್ದು ಇಡೀ ರೆಡ್ ಬುಲ್ ಸ್ಟ್ರಾಟೋಸ್ ಮಿಷನ್‌ಗೆ ಬೆದರಿಕೆ ಹಾಕಿತು… ಫೆಲಿಕ್ಸ್ ಅವರು ಸಾಧನೆಯನ್ನು ಪ್ರತಿಬಿಂಬಿಸುತ್ತಾರೆ ಮತ್ತು ಬಾಹ್ಯಾಕಾಶದಿಂದ ಜಿಗಿಯಲು ಏನ್ನಿಸಿತು ಎಂಬುದನ್ನು ನಿಜವಾಗಿ ಹಂಚಿಕೊಳ್ಳುತ್ತಾರೆ” ಎಂದಿದೆ.

ಫೆಲಿಕ್ಸ್ ಬಾಮ್‌ಗಾರ್ಟ್ನರ್ ಅವರ ಐತಿಹಾಸಿಕ ನೆಗೆತಕ್ಕೆ 10ವರ್ಷ ಆದ ಬಗ್ಗೆ ಸಿಎನ್‌ಎನ್‌ ಅಕ್ಟೋಬರ್ 14, 2022ರಂದು ವರದಿಯನ್ನು ಪ್ರಕಟಿಸಿದ್ದು, ಅವರ ಬಾಹ್ಯಾಕಾಶ ನೆಗೆತದ ಬಗ್ಗೆ ಮೆಲುಕು ಹಾಕಿದೆ.

ಗಿನ್ನಿಸ್ ವರ್ಲ್ಡ್ ರೆಕಾರ್ಡ್ ತನ್ನ ವೆಬ್‌ ಸೈಟ್ ನಲ್ಲಿ ನೀಡಿದ ಲೇಖನದಲ್ಲಿ, “ಆಸ್ಟ್ರಿಯಾದ ಸ್ಕೈಡೈವರ್ ಫೆಲಿಕ್ಸ್ ಬಾಮ್‌ಗಾರ್ಟ್ನರ್ 38,969.4 ಮೀಟರ್ ಎತ್ತರದಿಂದ ಪ್ಯಾರಾಚೂಟ್ ಜಿಗಿತವನ್ನು ಪೂರ್ಣಗೊಳಿಸಿದ ಮಹತ್ವದ ಕ್ಷಣವನ್ನು ವೀಕ್ಷಿಸಲು ಅಭೂತಪೂರ್ವ ಎಂಟು ಮಿಲಿಯನ್ ಜನರು 14 ಅಕ್ಟೋಬರ್ 2012 ರಂದು ಯೂಟ್ಯೂಬ್‌ ವೀಕ್ಷಣೆ ಮಾಡಿದ್ದಾರೆ. ಈ ಮೂಲಕ ಎಂಟು ವಿಶ್ವ ದಾಖಲೆಗಳನ್ನು ಮತ್ತು ಕೇವಲ ಮೂರು ಗಂಟೆಗಳ ಅಂತರದಲ್ಲಿ ಬಾಹ್ಯಾಕಾಶದ ಧ್ವನಿ ತಡೆಗೋಡೆಯನ್ನು ಮುರಿದಿದ್ದಾರೆ” ಎಂದಿದೆ.

ಇದರೊಂದಿಗೆ ಫೆಲಿಕ್ಸ್ ಬಾಮ್‌ಗಾರ್ಟ್ನರ್ ರಾಷ್ಟ್ರೀಯತೆಯನ್ನು ಪರಿಶೀಲಿಸಲು ಅವರ ವೆಬ್‌ ಸೈಟ್ ವೀಕ್ಷಿಸಿದ್ದೇವೆ. ಇದರಲ್ಲಿ ಅವರ ವಿವರಗಳನ್ನು ನೀಡಲಾಗಿದ್ದು, ಅವರು ಆಸ್ಟ್ರಿಯನ್‌ ಪ್ರಜೆ ಎಂದು ಉಲ್ಲೇಖಿಸಿರುವುದನ್ನು ನೋಡಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂಬ ವಿಡಿಯೋ 2012ರದ್ದಾಗಿದ್ದು, ಅವರು ಆಸ್ಟ್ರೇಲಿಯಾದವರಲ್ಲ ಮತ್ತು ಆಸ್ಟ್ರಿಯನ್ ಪ್ರಜೆ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರಾಗಿದ್ದಾರೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...