Homeಫ್ಯಾಕ್ಟ್‌ಚೆಕ್FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

- Advertisement -
- Advertisement -

ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಎಕ್ಸ್‌ನಲ್ಲಿ ಕಂಡು ಬಂದಿರುವ  ಪೋಸ್ಟ್‌ನಲ್ಲಿ “ಆಸ್ಟ್ರೇಲಿಯಾದ ಖಗೋಳಶಾಸ್ತ್ರಜ್ಞ 1,28,000 ಅಡಿಗಳಷ್ಟು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪುತ್ತಾನೆ … 1236 ಕಿ.ಮೀ. 4 ನಿಮಿಷ 5 ಸೆಕೆಂಡ್‌ಗಳಲ್ಲಿ ಪ್ರಯಾಣ ಮುಗಿಸಿದೆ… ಭೂಮಿ ಚಲಿಸುತ್ತಿರುವುದನ್ನು ಅವರು ಸ್ಪಷ್ಟವಾಗಿ ನೋಡಿದ್ದಾರೆ… ಅದ್ಭುತವಾದ ವಿಡಿಯೋ, ಇದನ್ನು ನೋಡಿ ಮತ್ತು ದಯವಿಟ್ಟು ನಿಮ್ಮ ಮಕ್ಕಳಿಗೆ ತೋರಿಸಿ” ಎಂದಿದೆ. ಹಲವು ಎಕ್ಸ್‌ ಖಾತೆ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್‌  ಹಂಚಿಕೊಂಡಿದ್ದಾರೆ.

ಫೇಸ್‌ಬುಕ್‌ನ ಹಲವು ಬಳಕೆದಾರರು ಇದೇ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋದ ಕೀ ಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಕೆಲವು ವರದಿಗಳು ಲಭ್ಯವಾಗಿವೆ.

ಅಕ್ಟೋಬರ್ 15, 2012 ಆನ್‌ ಡಿಮ್ಯಾಂಡ್ ನ್ಯೂಸ್‌ ಯೂಟ್ಯೂಬ್‌ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ “Space jump: Felix Baumgartner describes his record-breaking skydive” ಶೀರ್ಷಿಕೆಯಡಿಯಲ್ಲಿ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರು ಬಾಹ್ಯಾಕಾಶದಿಂದ ಸ್ಕೈಡೈವಿಂಗ್‌ ಮಾಡಿದ್ದ ಬಗ್ಗೆ ಹೇಳಲಾಗಿದೆ. ಈ ವಿಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಇದು ವೈರಲ್‌ ವಿಡಿಯೋಗೆ ಸಾಮ್ಯತೆ ಇರುವಂತೆ ಕಂಡು ಬಂದಿದೆ. ಇದನ್ನು ಆಧಾರವಾಗಿಟ್ಟುಕೊಂಡು ಮತ್ತಷ್ಟು ಪರಿಶೀಲಿಸಿದಾಗ ಮಾಹಿತಿ ಲಭ್ಯವಾಗಿದೆ.

ಅಕ್ಟೋಬರ್ 14, 2022ರಂದು ರೆಡ್ ಬುಲ್‌ ಯೂಟ್ಯೂಬ್‌ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ “I Jumped From Space (World Record Supersonic Freefall)” ಶೀರ್ಷಿಕೆಯಿದ್ದು ಫೆಲಿಕ್ಸ್ ಬಾಮ್‌ಗಾರ್ಟ್ನರ್ ಅವರು ಬಾಹ್ಯಾಕಾಶದಿಂದ ನೆಗೆದ ಬಗ್ಗೆ ಮಾಹಿತಿ ಇದೆ. ಈ ವಿಡಿಯೋದ ವಿವರಣೆಯಲ್ಲಿ, “ಬಾಹ್ಯಾಕಾಶದಿಂದ ಜಿಗಿಯಲು *ನಿಜವಾಗಿ* ಏನನಿಸುತ್ತದೆ? 2012 ರಲ್ಲಿ ಫೆಲಿಕ್ಸ್ ಬೌಮ್ಗಗರ್ಟ್ನರ್ ಅವರು ಹೀಲಿಯಂ ಬಲೂನ್ ಅನ್ನು ವಾಯುಮಂಡಲಕ್ಕೆ ತೆಗೆದುಕೊಂಡು ವಿಶೇಷವಾಗಿ ತಯಾರಿಸಿದ ಬಾಹ್ಯಾಕಾಶ ಸೂಟ್‌ನಲ್ಲಿ ಭೂಮಿಗೆ ವಾಪಾಸಾದರು. ಫ್ರೀ ಫಾಲ್‌ನಲ್ಲಿ ಅವರು ಶಬ್ದದ ವೇಗವನ್ನು ಬೇದಿಸಿ ಭೂಮಿಗೆ ಪ್ರವೇಶಿಸಿದರು. ಈ ವೇಳೆ ಅವರು ತಿರುಗಿದ್ದು ಇಡೀ ರೆಡ್ ಬುಲ್ ಸ್ಟ್ರಾಟೋಸ್ ಮಿಷನ್‌ಗೆ ಬೆದರಿಕೆ ಹಾಕಿತು… ಫೆಲಿಕ್ಸ್ ಅವರು ಸಾಧನೆಯನ್ನು ಪ್ರತಿಬಿಂಬಿಸುತ್ತಾರೆ ಮತ್ತು ಬಾಹ್ಯಾಕಾಶದಿಂದ ಜಿಗಿಯಲು ಏನ್ನಿಸಿತು ಎಂಬುದನ್ನು ನಿಜವಾಗಿ ಹಂಚಿಕೊಳ್ಳುತ್ತಾರೆ” ಎಂದಿದೆ.

ಫೆಲಿಕ್ಸ್ ಬಾಮ್‌ಗಾರ್ಟ್ನರ್ ಅವರ ಐತಿಹಾಸಿಕ ನೆಗೆತಕ್ಕೆ 10ವರ್ಷ ಆದ ಬಗ್ಗೆ ಸಿಎನ್‌ಎನ್‌ ಅಕ್ಟೋಬರ್ 14, 2022ರಂದು ವರದಿಯನ್ನು ಪ್ರಕಟಿಸಿದ್ದು, ಅವರ ಬಾಹ್ಯಾಕಾಶ ನೆಗೆತದ ಬಗ್ಗೆ ಮೆಲುಕು ಹಾಕಿದೆ.

ಗಿನ್ನಿಸ್ ವರ್ಲ್ಡ್ ರೆಕಾರ್ಡ್ ತನ್ನ ವೆಬ್‌ ಸೈಟ್ ನಲ್ಲಿ ನೀಡಿದ ಲೇಖನದಲ್ಲಿ, “ಆಸ್ಟ್ರಿಯಾದ ಸ್ಕೈಡೈವರ್ ಫೆಲಿಕ್ಸ್ ಬಾಮ್‌ಗಾರ್ಟ್ನರ್ 38,969.4 ಮೀಟರ್ ಎತ್ತರದಿಂದ ಪ್ಯಾರಾಚೂಟ್ ಜಿಗಿತವನ್ನು ಪೂರ್ಣಗೊಳಿಸಿದ ಮಹತ್ವದ ಕ್ಷಣವನ್ನು ವೀಕ್ಷಿಸಲು ಅಭೂತಪೂರ್ವ ಎಂಟು ಮಿಲಿಯನ್ ಜನರು 14 ಅಕ್ಟೋಬರ್ 2012 ರಂದು ಯೂಟ್ಯೂಬ್‌ ವೀಕ್ಷಣೆ ಮಾಡಿದ್ದಾರೆ. ಈ ಮೂಲಕ ಎಂಟು ವಿಶ್ವ ದಾಖಲೆಗಳನ್ನು ಮತ್ತು ಕೇವಲ ಮೂರು ಗಂಟೆಗಳ ಅಂತರದಲ್ಲಿ ಬಾಹ್ಯಾಕಾಶದ ಧ್ವನಿ ತಡೆಗೋಡೆಯನ್ನು ಮುರಿದಿದ್ದಾರೆ” ಎಂದಿದೆ.

ಇದರೊಂದಿಗೆ ಫೆಲಿಕ್ಸ್ ಬಾಮ್‌ಗಾರ್ಟ್ನರ್ ರಾಷ್ಟ್ರೀಯತೆಯನ್ನು ಪರಿಶೀಲಿಸಲು ಅವರ ವೆಬ್‌ ಸೈಟ್ ವೀಕ್ಷಿಸಿದ್ದೇವೆ. ಇದರಲ್ಲಿ ಅವರ ವಿವರಗಳನ್ನು ನೀಡಲಾಗಿದ್ದು, ಅವರು ಆಸ್ಟ್ರಿಯನ್‌ ಪ್ರಜೆ ಎಂದು ಉಲ್ಲೇಖಿಸಿರುವುದನ್ನು ನೋಡಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂಬ ವಿಡಿಯೋ 2012ರದ್ದಾಗಿದ್ದು, ಅವರು ಆಸ್ಟ್ರೇಲಿಯಾದವರಲ್ಲ ಮತ್ತು ಆಸ್ಟ್ರಿಯನ್ ಪ್ರಜೆ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರಾಗಿದ್ದಾರೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...