Homeಫ್ಯಾಕ್ಟ್‌ಚೆಕ್Fact Check: 'ಜಲ ಜೀವನ್ ಮಿಷನ್‌' ಯೋಜನೆಯಲ್ಲಿ ಕೇಂದ್ರದ್ದಷ್ಟೇ ಅಲ್ಲ, ರಾಜ್ಯದ ಪಾಲೂ ಇದೆ

Fact Check: ‘ಜಲ ಜೀವನ್ ಮಿಷನ್‌’ ಯೋಜನೆಯಲ್ಲಿ ಕೇಂದ್ರದ್ದಷ್ಟೇ ಅಲ್ಲ, ರಾಜ್ಯದ ಪಾಲೂ ಇದೆ

ಜೆಜೆಎಂ ಕೇವಲ ಕೇಂದ್ರದ ಯೋಜನೆ ಎನ್ನಲು ಸಾಧ್ಯವಿಲ್ಲ

- Advertisement -
- Advertisement -

‘ಜಲ ಜೀವನ್ ಮಿಷನ್'(ಜೆಜೆಎಂ) ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ವಿಚಾರದಲ್ಲಿ ರಾಜಕೀಯ ಕಿತ್ತಾಟ ನಡೆಯುತ್ತಿದೆ. ಬಿಜೆಪಿ ಬೆಂಬಲಿಗರು ‘ಮೋದಿ ದುಡ್ಡು ಸಿದ್ದು ಹೆಸರು’ ಎಂಬ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು, ‘ಕೇಂದ್ರದ ಮೋದಿ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯ ನೀರನ್ನು ಸಿದ್ದರಾಮಯ್ಯ ಸರ್ಕಾರ ತನ್ನದೆಂದು ಬಿಂಬಿಸುತ್ತಿದೆ’ ಎಂಬರ್ಥದಲ್ಲಿ ಸುದ್ದಿ ಹಂಚುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಜಲ ಜೀವನ್ ಮಿಷನ್ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭಿಮಾನಿಗಳು ಪರಸ್ಪರ ಕಿತ್ತಾಟದಲ್ಲಿ ನಿರತರಾಗಿದ್ದಾರೆ. ಹಾಗಾಗಿ, ಯೋಜನೆಯ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಜಲ ಜೀವನ್ ಮಿಷನ್ ಯೋಜನೆ ಯಾರದ್ದು? ಇದರ ಉದ್ದೇಶವೇನು? ಈ ಯೋಜನೆಗೆ ಯಾರು ಹಣ ಒದಗಿಸುತ್ತಿದ್ದಾರೆ?, ಯೋಜನೆಯಲ್ಲಿ ಕೇಂದ್ರದ ಪಾಲೆಷ್ಟಿದೆ?, ರಾಜ್ಯದ ಪಾಲೆಷ್ಟಿದೆ? ಇತ್ಯಾದಿ ವಿಷಯಗಳ ಕುರಿತು ನೈಜ ಮಾಹಿತಿಯನ್ನು ನಾವು ಇಲ್ಲಿ ತೆರದಿಟ್ಟಿದ್ದೇವೆ.

ಜಲ ಜೀವನ್ ಮಿಷನ್ ಯೋಜನೆಯ ಕುರಿತು ಮಾಹಿತಿ ಹುಡುಕಿದಾಗ ಕೇಂದ್ರ ಸರ್ಕಾರದ ಅಧಿಕೃತ ಸಂಸ್ಥೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) 21 ಮಾರ್ಚ್ 2022ರಂದು ಜಲ ಜೀವನ್ ಮಿಷನ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು (Share of Union and State Government in JJM)ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ ಮಾಹಿತಿಯೊಂದು ದೊರೆತಿದೆ.

ಪಿಐಬಿ ಪ್ರಕಟನೆಯಲ್ಲಿ ತಿಳಿಸಿದಂತೆ, 2024ರೊಳಗೆ ದೇಶದ ಗ್ರಾಮೀಣ ಪ್ರದೇಶದ ಪ್ರತೀ ಮನೆಗಳಿಗೆ ನಳ್ಳಿ ನೀರು ಒದಗಿಸುವ ಉದ್ದೇಶದಿಂದ ಆಗಸ್ಟ್ 2019ರಲ್ಲಿ ರಾಜ್ಯಗಳ ಸಹಯೋಗದಲ್ಲಿ ಭಾರತ ಸರ್ಕಾರ ಜಾರಿಗೆ ತಂದ ಯೋಜನೆಯಾಗಿದೆ ‘ಜಲ ಜೀವನ್ ಮಿಷನ್’ (ಜೆಜೆಎಂ) ಇದರ ಅಂದಾಜು ವೆಚ್ಚವು ರೂ. 3.60 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಕೇಂದ್ರ ಪಾಲು ರೂ. 2.08 ಲಕ್ಷ ಕೋಟಿ ಆಗಿದೆ.

ಜೆಜೆಎಂ ಯೋಜನೆಗೆ ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಶೇ. 100ರಷ್ಟು ಅನುದಾನ ಒದಗಿಸುತ್ತಿದೆ. ಅಂದರೆ, ಯೋಜನೆಯ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುತ್ತಿದೆ. ಈಶಾನ್ಯ, ಹಿಮಾಲಯ ರಾಜ್ಯಗಳು ಮತ್ತು ಶಾಸಕಾಂಗ ಇರುವ ಕೇಂದ್ರಾಡಳಿತ ಪ್ರದೇಶಗಳಿಗೆ 90:10 ಅನುಪಾತದಲ್ಲಿ, ಅಂದರೆ ಯೋಜನೆಯ ಶೇ. 90ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ಮತ್ತು ಶೇ.10 ಅನುದಾವನ್ನು ಆಯಾ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಭರಿಸುತ್ತಿದೆ. ಕರ್ನಾಟಕ, ಕೇರಳದಂತಹ ಸರ್ಕಾರಗಳು ಇರುವ ರಾಜ್ಯಗಳಲ್ಲಿ 50:50 ಅನುಪಾದಲ್ಲಿ ಅನುದಾನ ಹಂಚಿಕೆಯಾಗುತ್ತಿದೆ. ಅಂದರೆ ಯೋಜನೆಯ ಶೇ. 50ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಉಳಿದ ಶೇ.50ರಷ್ಟು ವೆಚ್ಚವನ್ನು ಆಯಾ ರಾಜ್ಯ ಸರ್ಕಾರಗಳು ಭರಿಸುತ್ತಿವೆ.

ಪೋಸ್ಟ್ ಲಿಂಕ್ ಇಲ್ಲಿದೆ

ಇದಲ್ಲದೆ, ನೀರಿನ ಗುಣಮಟ್ಟ ನಿರ್ವಹಣಾ ವ್ಯವಸ್ಥೆಯಡಿ (WQMS)ಕೇಂದ್ರಾಡಳಿತ ಪ್ರದೇಶಗಳಿಗೆ ಶೇ.100ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಹಿಮಾಲಯ ಹಾಗೂ ಈಶಾನ್ಯ ರಾಜ್ಯಗಳಿಗೆ 90:10 ಅನುಪಾತ ಮತ್ತು ಇತರ ರಾಜ್ಯಗಳಿಗೆ 60:40 ಅನುಪಾತದಲ್ಲಿ ಅನುದಾನ ಹಂಚಿಕೆಯಾಗ್ತಿದೆ.

ಜಲ ಜೀವನ್ ಮಿಷನ್ ಅಡಿಯಲ್ಲಿ ದೇಶದ ಕೆಲ ವಿಶೇಷ ಪ್ರದೇಶಗಳಿಗೆ ಅಲ್ಲಿನ ಪ್ರಾಧಿಕಾರಗಳ ಮೂಲಕ ಪ್ರೋತ್ಸಾಹಧನ ನೀಡಲಾಗುತ್ತಿದೆ. ಉದಾ: ಮರುಭೂಮಿ ಅಭಿವೃದ್ಧಿ ಕಾರ್ಯಕ್ರಮ (ಡಿಡಿಪಿ) ಮತ್ತು ಬರಪೀಡಿತ ಪ್ರದೇಶ ಕಾರ್ಯಕ್ರಮ (ಡಿಪಿಎಪಿ) ಅಡಿಯಲ್ಲಿರುವ ಬರುವ ಭೂಪ್ರದೇಶಗಳಿಗೆ ಶೇ. 30ರಷ್ಟು ಅನುದಾನ, ಎಸ್‌ಸಿ, ಎಸ್‌ಟಿ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ವಾಸಿಸುವ ಜನಸಂಖ್ಯೆಗೆ ಶೇ. 10ರಷ್ಟು ಅನುದಾನ. ನಿಯಮಗಳ ಪ್ರಕಾರ ಅನುದಾನ ಹಂಚಿಕೆ ಮಾಡುವಾಗ ಈ ಪ್ರದೇಶಗಳಿಗೆ ಮೊದಲ ಪ್ರಾಶಸ್ತ್ಯ ನೀಡಬೇಕಾಗಿದೆ.

ಇದಲ್ಲದೆ, ನೀರಿನ ಜೆಇ-ಎಇಎಸ್ (JE-AES-Japanese encephalitis)ಅಂದರೆ, ಡೆಂಗ್ಯೂ, ಹಳದಿ ಜ್ವರ, ವೆಸ್ಟ್ ನೈಲ್ ವೈರಸ್‌ಗಳು ಮತ್ತು ಸೊಳ್ಳೆಯಿಂದ ಬರುವ ರೋಗ ಪೀಡಿತ ಜಿಲ್ಲೆಗಳ ಗ್ರಾಮಗಳು ಮತ್ತು ಸಂಸದರ ಆದರ್ಶ ಗ್ರಾಮಗಳಿಗೆ (Sansad Adarsh GM Yojana (SAGY)ಅನುದಾನ ಒದಗಿಸಲು ಆದ್ಯತೆ ನೀಡಲಾಗುತ್ತಿದೆ. ನರೇಗಾ ಯೋಜನೆಯಡಿ ಪಾರಂಪರಿಕ ಜಲಮೂಲಗಳ ಪುನರುಜ್ಜೀವನಕ್ಕೂ ಜೆಜೆಎಂ ಯೋಜನೆಯಡಿ ಅನುದಾನ ನೀಡಲಾಗುತ್ತಿದೆ. ಉದಾ: ಕಲ್ಯಾಣಿಗಳು, ಬಾವಿಗಳು.

15 ನೇ ಹಣಕಾಸು ಆಯೋಗವು ಗ್ರಾಮೀಣ ಸ್ಥಳೀಯ ಸಂಸ್ಥೆ (RLBs)ಗಳ ಮೂಲಕ, ಸಂಯೋಜಿತ ಜಲಾನಯನ ನಿರ್ವಹಣಾ ಕಾರ್ಯಕ್ರಮ (IWMP),ರಾಜ್ಯ ಯೋಜನೆಗಳು, ಜಿಲ್ಲಾ ಖನಿಜ ಅಭಿವೃದ್ಧಿ ನಿಧಿ, ಸಿಎಸ್‌ಆರ್‌ ನಿಧಿಗಳು, ಸಮುದಾಯ ಕೊಡುಗೆ ಇತ್ಯಾದಿಗಳು ಕೂಡ ಜೆಜೆಎಂಗೆ ಅನುದಾನ ಒದಗಿಸುತ್ತಿದೆ.

ಕೇಂದ್ರ ಜಲಶಕ್ತಿ ಸಚಿವಾಲಯದ ಅಧೀನದಲ್ಲಿ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜಲ ಶಕ್ತಿ ಸಚಿವಾಲಯ ಅಥವಾ ಜಲ ಸಂಪನ್ಮೂಲ ಸಚಿವಾಲಯವನ್ನು ಎರಡನೇ ಮೋದಿ ಸರ್ಕಾರ ಅವಧಿಯಲ್ಲಿ ಮೇ 2019 ರಲ್ಲಿ ರಚಿಸಲಾಗಿದೆ. ಇದು ಜಲಸಂಪನ್ಮೂಲ ಸಚಿವಾಲಯ, ನದಿ ಅಭಿವೃದ್ಧಿ, ಗಂಗಾ ಪುನರುಜ್ಜೀವನ ಮತ್ತು ಕುಡಿಯುವ ನೀರು ಹಾಗೂ ನೈರ್ಮಲ್ಯ ಸಚಿವಾಲಯಗಳ ವಿಲೀನದಿಂದ ರೂಪುಗೊಂಡಿದೆ.

ನಮಗೆ ದೊರೆತ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಾನ ಪಾಲಿದೆ. ಯೋಜನೆಗೆ ಕೇಂದ್ರ ಸರ್ಕಾರ ಶೇ.50ರಷ್ಟು ಹಣವನ್ನು ಒದಗಿಸಿದರೆ, ಇನ್ನುಳಿದ ಶೇ.50ರಷ್ಟು ಹಣವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಹಾಗಾಗಿ, ಇದು ಕೇವಲ ಕೇಂದ್ರ ಸರ್ಕಾರ ಯೋಜನೆಯಲ್ಲ, ರಾಜ್ಯ ಸರ್ಕಾರದ ಯೋಜನೆಯೂ ಹೌದು.

ಇದನ್ನೂ ಓದಿ: Fact Check: ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...