Homeಫ್ಯಾಕ್ಟ್‌ಚೆಕ್Fact Check: 'ಜಲ ಜೀವನ್ ಮಿಷನ್‌' ಯೋಜನೆಯಲ್ಲಿ ಕೇಂದ್ರದ್ದಷ್ಟೇ ಅಲ್ಲ, ರಾಜ್ಯದ ಪಾಲೂ ಇದೆ

Fact Check: ‘ಜಲ ಜೀವನ್ ಮಿಷನ್‌’ ಯೋಜನೆಯಲ್ಲಿ ಕೇಂದ್ರದ್ದಷ್ಟೇ ಅಲ್ಲ, ರಾಜ್ಯದ ಪಾಲೂ ಇದೆ

ಜೆಜೆಎಂ ಕೇವಲ ಕೇಂದ್ರದ ಯೋಜನೆ ಎನ್ನಲು ಸಾಧ್ಯವಿಲ್ಲ

- Advertisement -
- Advertisement -

‘ಜಲ ಜೀವನ್ ಮಿಷನ್'(ಜೆಜೆಎಂ) ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ವಿಚಾರದಲ್ಲಿ ರಾಜಕೀಯ ಕಿತ್ತಾಟ ನಡೆಯುತ್ತಿದೆ. ಬಿಜೆಪಿ ಬೆಂಬಲಿಗರು ‘ಮೋದಿ ದುಡ್ಡು ಸಿದ್ದು ಹೆಸರು’ ಎಂಬ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು, ‘ಕೇಂದ್ರದ ಮೋದಿ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯ ನೀರನ್ನು ಸಿದ್ದರಾಮಯ್ಯ ಸರ್ಕಾರ ತನ್ನದೆಂದು ಬಿಂಬಿಸುತ್ತಿದೆ’ ಎಂಬರ್ಥದಲ್ಲಿ ಸುದ್ದಿ ಹಂಚುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಜಲ ಜೀವನ್ ಮಿಷನ್ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭಿಮಾನಿಗಳು ಪರಸ್ಪರ ಕಿತ್ತಾಟದಲ್ಲಿ ನಿರತರಾಗಿದ್ದಾರೆ. ಹಾಗಾಗಿ, ಯೋಜನೆಯ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಜಲ ಜೀವನ್ ಮಿಷನ್ ಯೋಜನೆ ಯಾರದ್ದು? ಇದರ ಉದ್ದೇಶವೇನು? ಈ ಯೋಜನೆಗೆ ಯಾರು ಹಣ ಒದಗಿಸುತ್ತಿದ್ದಾರೆ?, ಯೋಜನೆಯಲ್ಲಿ ಕೇಂದ್ರದ ಪಾಲೆಷ್ಟಿದೆ?, ರಾಜ್ಯದ ಪಾಲೆಷ್ಟಿದೆ? ಇತ್ಯಾದಿ ವಿಷಯಗಳ ಕುರಿತು ನೈಜ ಮಾಹಿತಿಯನ್ನು ನಾವು ಇಲ್ಲಿ ತೆರದಿಟ್ಟಿದ್ದೇವೆ.

ಜಲ ಜೀವನ್ ಮಿಷನ್ ಯೋಜನೆಯ ಕುರಿತು ಮಾಹಿತಿ ಹುಡುಕಿದಾಗ ಕೇಂದ್ರ ಸರ್ಕಾರದ ಅಧಿಕೃತ ಸಂಸ್ಥೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) 21 ಮಾರ್ಚ್ 2022ರಂದು ಜಲ ಜೀವನ್ ಮಿಷನ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು (Share of Union and State Government in JJM)ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ ಮಾಹಿತಿಯೊಂದು ದೊರೆತಿದೆ.

ಪಿಐಬಿ ಪ್ರಕಟನೆಯಲ್ಲಿ ತಿಳಿಸಿದಂತೆ, 2024ರೊಳಗೆ ದೇಶದ ಗ್ರಾಮೀಣ ಪ್ರದೇಶದ ಪ್ರತೀ ಮನೆಗಳಿಗೆ ನಳ್ಳಿ ನೀರು ಒದಗಿಸುವ ಉದ್ದೇಶದಿಂದ ಆಗಸ್ಟ್ 2019ರಲ್ಲಿ ರಾಜ್ಯಗಳ ಸಹಯೋಗದಲ್ಲಿ ಭಾರತ ಸರ್ಕಾರ ಜಾರಿಗೆ ತಂದ ಯೋಜನೆಯಾಗಿದೆ ‘ಜಲ ಜೀವನ್ ಮಿಷನ್’ (ಜೆಜೆಎಂ) ಇದರ ಅಂದಾಜು ವೆಚ್ಚವು ರೂ. 3.60 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಕೇಂದ್ರ ಪಾಲು ರೂ. 2.08 ಲಕ್ಷ ಕೋಟಿ ಆಗಿದೆ.

ಜೆಜೆಎಂ ಯೋಜನೆಗೆ ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಶೇ. 100ರಷ್ಟು ಅನುದಾನ ಒದಗಿಸುತ್ತಿದೆ. ಅಂದರೆ, ಯೋಜನೆಯ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುತ್ತಿದೆ. ಈಶಾನ್ಯ, ಹಿಮಾಲಯ ರಾಜ್ಯಗಳು ಮತ್ತು ಶಾಸಕಾಂಗ ಇರುವ ಕೇಂದ್ರಾಡಳಿತ ಪ್ರದೇಶಗಳಿಗೆ 90:10 ಅನುಪಾತದಲ್ಲಿ, ಅಂದರೆ ಯೋಜನೆಯ ಶೇ. 90ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ಮತ್ತು ಶೇ.10 ಅನುದಾವನ್ನು ಆಯಾ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಭರಿಸುತ್ತಿದೆ. ಕರ್ನಾಟಕ, ಕೇರಳದಂತಹ ಸರ್ಕಾರಗಳು ಇರುವ ರಾಜ್ಯಗಳಲ್ಲಿ 50:50 ಅನುಪಾದಲ್ಲಿ ಅನುದಾನ ಹಂಚಿಕೆಯಾಗುತ್ತಿದೆ. ಅಂದರೆ ಯೋಜನೆಯ ಶೇ. 50ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಉಳಿದ ಶೇ.50ರಷ್ಟು ವೆಚ್ಚವನ್ನು ಆಯಾ ರಾಜ್ಯ ಸರ್ಕಾರಗಳು ಭರಿಸುತ್ತಿವೆ.

ಪೋಸ್ಟ್ ಲಿಂಕ್ ಇಲ್ಲಿದೆ

ಇದಲ್ಲದೆ, ನೀರಿನ ಗುಣಮಟ್ಟ ನಿರ್ವಹಣಾ ವ್ಯವಸ್ಥೆಯಡಿ (WQMS)ಕೇಂದ್ರಾಡಳಿತ ಪ್ರದೇಶಗಳಿಗೆ ಶೇ.100ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಹಿಮಾಲಯ ಹಾಗೂ ಈಶಾನ್ಯ ರಾಜ್ಯಗಳಿಗೆ 90:10 ಅನುಪಾತ ಮತ್ತು ಇತರ ರಾಜ್ಯಗಳಿಗೆ 60:40 ಅನುಪಾತದಲ್ಲಿ ಅನುದಾನ ಹಂಚಿಕೆಯಾಗ್ತಿದೆ.

ಜಲ ಜೀವನ್ ಮಿಷನ್ ಅಡಿಯಲ್ಲಿ ದೇಶದ ಕೆಲ ವಿಶೇಷ ಪ್ರದೇಶಗಳಿಗೆ ಅಲ್ಲಿನ ಪ್ರಾಧಿಕಾರಗಳ ಮೂಲಕ ಪ್ರೋತ್ಸಾಹಧನ ನೀಡಲಾಗುತ್ತಿದೆ. ಉದಾ: ಮರುಭೂಮಿ ಅಭಿವೃದ್ಧಿ ಕಾರ್ಯಕ್ರಮ (ಡಿಡಿಪಿ) ಮತ್ತು ಬರಪೀಡಿತ ಪ್ರದೇಶ ಕಾರ್ಯಕ್ರಮ (ಡಿಪಿಎಪಿ) ಅಡಿಯಲ್ಲಿರುವ ಬರುವ ಭೂಪ್ರದೇಶಗಳಿಗೆ ಶೇ. 30ರಷ್ಟು ಅನುದಾನ, ಎಸ್‌ಸಿ, ಎಸ್‌ಟಿ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ವಾಸಿಸುವ ಜನಸಂಖ್ಯೆಗೆ ಶೇ. 10ರಷ್ಟು ಅನುದಾನ. ನಿಯಮಗಳ ಪ್ರಕಾರ ಅನುದಾನ ಹಂಚಿಕೆ ಮಾಡುವಾಗ ಈ ಪ್ರದೇಶಗಳಿಗೆ ಮೊದಲ ಪ್ರಾಶಸ್ತ್ಯ ನೀಡಬೇಕಾಗಿದೆ.

ಇದಲ್ಲದೆ, ನೀರಿನ ಜೆಇ-ಎಇಎಸ್ (JE-AES-Japanese encephalitis)ಅಂದರೆ, ಡೆಂಗ್ಯೂ, ಹಳದಿ ಜ್ವರ, ವೆಸ್ಟ್ ನೈಲ್ ವೈರಸ್‌ಗಳು ಮತ್ತು ಸೊಳ್ಳೆಯಿಂದ ಬರುವ ರೋಗ ಪೀಡಿತ ಜಿಲ್ಲೆಗಳ ಗ್ರಾಮಗಳು ಮತ್ತು ಸಂಸದರ ಆದರ್ಶ ಗ್ರಾಮಗಳಿಗೆ (Sansad Adarsh GM Yojana (SAGY)ಅನುದಾನ ಒದಗಿಸಲು ಆದ್ಯತೆ ನೀಡಲಾಗುತ್ತಿದೆ. ನರೇಗಾ ಯೋಜನೆಯಡಿ ಪಾರಂಪರಿಕ ಜಲಮೂಲಗಳ ಪುನರುಜ್ಜೀವನಕ್ಕೂ ಜೆಜೆಎಂ ಯೋಜನೆಯಡಿ ಅನುದಾನ ನೀಡಲಾಗುತ್ತಿದೆ. ಉದಾ: ಕಲ್ಯಾಣಿಗಳು, ಬಾವಿಗಳು.

15 ನೇ ಹಣಕಾಸು ಆಯೋಗವು ಗ್ರಾಮೀಣ ಸ್ಥಳೀಯ ಸಂಸ್ಥೆ (RLBs)ಗಳ ಮೂಲಕ, ಸಂಯೋಜಿತ ಜಲಾನಯನ ನಿರ್ವಹಣಾ ಕಾರ್ಯಕ್ರಮ (IWMP),ರಾಜ್ಯ ಯೋಜನೆಗಳು, ಜಿಲ್ಲಾ ಖನಿಜ ಅಭಿವೃದ್ಧಿ ನಿಧಿ, ಸಿಎಸ್‌ಆರ್‌ ನಿಧಿಗಳು, ಸಮುದಾಯ ಕೊಡುಗೆ ಇತ್ಯಾದಿಗಳು ಕೂಡ ಜೆಜೆಎಂಗೆ ಅನುದಾನ ಒದಗಿಸುತ್ತಿದೆ.

ಕೇಂದ್ರ ಜಲಶಕ್ತಿ ಸಚಿವಾಲಯದ ಅಧೀನದಲ್ಲಿ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜಲ ಶಕ್ತಿ ಸಚಿವಾಲಯ ಅಥವಾ ಜಲ ಸಂಪನ್ಮೂಲ ಸಚಿವಾಲಯವನ್ನು ಎರಡನೇ ಮೋದಿ ಸರ್ಕಾರ ಅವಧಿಯಲ್ಲಿ ಮೇ 2019 ರಲ್ಲಿ ರಚಿಸಲಾಗಿದೆ. ಇದು ಜಲಸಂಪನ್ಮೂಲ ಸಚಿವಾಲಯ, ನದಿ ಅಭಿವೃದ್ಧಿ, ಗಂಗಾ ಪುನರುಜ್ಜೀವನ ಮತ್ತು ಕುಡಿಯುವ ನೀರು ಹಾಗೂ ನೈರ್ಮಲ್ಯ ಸಚಿವಾಲಯಗಳ ವಿಲೀನದಿಂದ ರೂಪುಗೊಂಡಿದೆ.

ನಮಗೆ ದೊರೆತ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಾನ ಪಾಲಿದೆ. ಯೋಜನೆಗೆ ಕೇಂದ್ರ ಸರ್ಕಾರ ಶೇ.50ರಷ್ಟು ಹಣವನ್ನು ಒದಗಿಸಿದರೆ, ಇನ್ನುಳಿದ ಶೇ.50ರಷ್ಟು ಹಣವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಹಾಗಾಗಿ, ಇದು ಕೇವಲ ಕೇಂದ್ರ ಸರ್ಕಾರ ಯೋಜನೆಯಲ್ಲ, ರಾಜ್ಯ ಸರ್ಕಾರದ ಯೋಜನೆಯೂ ಹೌದು.

ಇದನ್ನೂ ಓದಿ: Fact Check: ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...