Homeಫ್ಯಾಕ್ಟ್‌ಚೆಕ್Fact Check: 'ಜಲ ಜೀವನ್ ಮಿಷನ್‌' ಯೋಜನೆಯಲ್ಲಿ ಕೇಂದ್ರದ್ದಷ್ಟೇ ಅಲ್ಲ, ರಾಜ್ಯದ ಪಾಲೂ ಇದೆ

Fact Check: ‘ಜಲ ಜೀವನ್ ಮಿಷನ್‌’ ಯೋಜನೆಯಲ್ಲಿ ಕೇಂದ್ರದ್ದಷ್ಟೇ ಅಲ್ಲ, ರಾಜ್ಯದ ಪಾಲೂ ಇದೆ

ಜೆಜೆಎಂ ಕೇವಲ ಕೇಂದ್ರದ ಯೋಜನೆ ಎನ್ನಲು ಸಾಧ್ಯವಿಲ್ಲ

- Advertisement -
- Advertisement -

‘ಜಲ ಜೀವನ್ ಮಿಷನ್'(ಜೆಜೆಎಂ) ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ವಿಚಾರದಲ್ಲಿ ರಾಜಕೀಯ ಕಿತ್ತಾಟ ನಡೆಯುತ್ತಿದೆ. ಬಿಜೆಪಿ ಬೆಂಬಲಿಗರು ‘ಮೋದಿ ದುಡ್ಡು ಸಿದ್ದು ಹೆಸರು’ ಎಂಬ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು, ‘ಕೇಂದ್ರದ ಮೋದಿ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯ ನೀರನ್ನು ಸಿದ್ದರಾಮಯ್ಯ ಸರ್ಕಾರ ತನ್ನದೆಂದು ಬಿಂಬಿಸುತ್ತಿದೆ’ ಎಂಬರ್ಥದಲ್ಲಿ ಸುದ್ದಿ ಹಂಚುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಜಲ ಜೀವನ್ ಮಿಷನ್ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭಿಮಾನಿಗಳು ಪರಸ್ಪರ ಕಿತ್ತಾಟದಲ್ಲಿ ನಿರತರಾಗಿದ್ದಾರೆ. ಹಾಗಾಗಿ, ಯೋಜನೆಯ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಜಲ ಜೀವನ್ ಮಿಷನ್ ಯೋಜನೆ ಯಾರದ್ದು? ಇದರ ಉದ್ದೇಶವೇನು? ಈ ಯೋಜನೆಗೆ ಯಾರು ಹಣ ಒದಗಿಸುತ್ತಿದ್ದಾರೆ?, ಯೋಜನೆಯಲ್ಲಿ ಕೇಂದ್ರದ ಪಾಲೆಷ್ಟಿದೆ?, ರಾಜ್ಯದ ಪಾಲೆಷ್ಟಿದೆ? ಇತ್ಯಾದಿ ವಿಷಯಗಳ ಕುರಿತು ನೈಜ ಮಾಹಿತಿಯನ್ನು ನಾವು ಇಲ್ಲಿ ತೆರದಿಟ್ಟಿದ್ದೇವೆ.

ಜಲ ಜೀವನ್ ಮಿಷನ್ ಯೋಜನೆಯ ಕುರಿತು ಮಾಹಿತಿ ಹುಡುಕಿದಾಗ ಕೇಂದ್ರ ಸರ್ಕಾರದ ಅಧಿಕೃತ ಸಂಸ್ಥೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) 21 ಮಾರ್ಚ್ 2022ರಂದು ಜಲ ಜೀವನ್ ಮಿಷನ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು (Share of Union and State Government in JJM)ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ ಮಾಹಿತಿಯೊಂದು ದೊರೆತಿದೆ.

ಪಿಐಬಿ ಪ್ರಕಟನೆಯಲ್ಲಿ ತಿಳಿಸಿದಂತೆ, 2024ರೊಳಗೆ ದೇಶದ ಗ್ರಾಮೀಣ ಪ್ರದೇಶದ ಪ್ರತೀ ಮನೆಗಳಿಗೆ ನಳ್ಳಿ ನೀರು ಒದಗಿಸುವ ಉದ್ದೇಶದಿಂದ ಆಗಸ್ಟ್ 2019ರಲ್ಲಿ ರಾಜ್ಯಗಳ ಸಹಯೋಗದಲ್ಲಿ ಭಾರತ ಸರ್ಕಾರ ಜಾರಿಗೆ ತಂದ ಯೋಜನೆಯಾಗಿದೆ ‘ಜಲ ಜೀವನ್ ಮಿಷನ್’ (ಜೆಜೆಎಂ) ಇದರ ಅಂದಾಜು ವೆಚ್ಚವು ರೂ. 3.60 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಕೇಂದ್ರ ಪಾಲು ರೂ. 2.08 ಲಕ್ಷ ಕೋಟಿ ಆಗಿದೆ.

ಜೆಜೆಎಂ ಯೋಜನೆಗೆ ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಶೇ. 100ರಷ್ಟು ಅನುದಾನ ಒದಗಿಸುತ್ತಿದೆ. ಅಂದರೆ, ಯೋಜನೆಯ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುತ್ತಿದೆ. ಈಶಾನ್ಯ, ಹಿಮಾಲಯ ರಾಜ್ಯಗಳು ಮತ್ತು ಶಾಸಕಾಂಗ ಇರುವ ಕೇಂದ್ರಾಡಳಿತ ಪ್ರದೇಶಗಳಿಗೆ 90:10 ಅನುಪಾತದಲ್ಲಿ, ಅಂದರೆ ಯೋಜನೆಯ ಶೇ. 90ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ಮತ್ತು ಶೇ.10 ಅನುದಾವನ್ನು ಆಯಾ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಭರಿಸುತ್ತಿದೆ. ಕರ್ನಾಟಕ, ಕೇರಳದಂತಹ ಸರ್ಕಾರಗಳು ಇರುವ ರಾಜ್ಯಗಳಲ್ಲಿ 50:50 ಅನುಪಾದಲ್ಲಿ ಅನುದಾನ ಹಂಚಿಕೆಯಾಗುತ್ತಿದೆ. ಅಂದರೆ ಯೋಜನೆಯ ಶೇ. 50ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಉಳಿದ ಶೇ.50ರಷ್ಟು ವೆಚ್ಚವನ್ನು ಆಯಾ ರಾಜ್ಯ ಸರ್ಕಾರಗಳು ಭರಿಸುತ್ತಿವೆ.

ಪೋಸ್ಟ್ ಲಿಂಕ್ ಇಲ್ಲಿದೆ

ಇದಲ್ಲದೆ, ನೀರಿನ ಗುಣಮಟ್ಟ ನಿರ್ವಹಣಾ ವ್ಯವಸ್ಥೆಯಡಿ (WQMS)ಕೇಂದ್ರಾಡಳಿತ ಪ್ರದೇಶಗಳಿಗೆ ಶೇ.100ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಹಿಮಾಲಯ ಹಾಗೂ ಈಶಾನ್ಯ ರಾಜ್ಯಗಳಿಗೆ 90:10 ಅನುಪಾತ ಮತ್ತು ಇತರ ರಾಜ್ಯಗಳಿಗೆ 60:40 ಅನುಪಾತದಲ್ಲಿ ಅನುದಾನ ಹಂಚಿಕೆಯಾಗ್ತಿದೆ.

ಜಲ ಜೀವನ್ ಮಿಷನ್ ಅಡಿಯಲ್ಲಿ ದೇಶದ ಕೆಲ ವಿಶೇಷ ಪ್ರದೇಶಗಳಿಗೆ ಅಲ್ಲಿನ ಪ್ರಾಧಿಕಾರಗಳ ಮೂಲಕ ಪ್ರೋತ್ಸಾಹಧನ ನೀಡಲಾಗುತ್ತಿದೆ. ಉದಾ: ಮರುಭೂಮಿ ಅಭಿವೃದ್ಧಿ ಕಾರ್ಯಕ್ರಮ (ಡಿಡಿಪಿ) ಮತ್ತು ಬರಪೀಡಿತ ಪ್ರದೇಶ ಕಾರ್ಯಕ್ರಮ (ಡಿಪಿಎಪಿ) ಅಡಿಯಲ್ಲಿರುವ ಬರುವ ಭೂಪ್ರದೇಶಗಳಿಗೆ ಶೇ. 30ರಷ್ಟು ಅನುದಾನ, ಎಸ್‌ಸಿ, ಎಸ್‌ಟಿ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ವಾಸಿಸುವ ಜನಸಂಖ್ಯೆಗೆ ಶೇ. 10ರಷ್ಟು ಅನುದಾನ. ನಿಯಮಗಳ ಪ್ರಕಾರ ಅನುದಾನ ಹಂಚಿಕೆ ಮಾಡುವಾಗ ಈ ಪ್ರದೇಶಗಳಿಗೆ ಮೊದಲ ಪ್ರಾಶಸ್ತ್ಯ ನೀಡಬೇಕಾಗಿದೆ.

ಇದಲ್ಲದೆ, ನೀರಿನ ಜೆಇ-ಎಇಎಸ್ (JE-AES-Japanese encephalitis)ಅಂದರೆ, ಡೆಂಗ್ಯೂ, ಹಳದಿ ಜ್ವರ, ವೆಸ್ಟ್ ನೈಲ್ ವೈರಸ್‌ಗಳು ಮತ್ತು ಸೊಳ್ಳೆಯಿಂದ ಬರುವ ರೋಗ ಪೀಡಿತ ಜಿಲ್ಲೆಗಳ ಗ್ರಾಮಗಳು ಮತ್ತು ಸಂಸದರ ಆದರ್ಶ ಗ್ರಾಮಗಳಿಗೆ (Sansad Adarsh GM Yojana (SAGY)ಅನುದಾನ ಒದಗಿಸಲು ಆದ್ಯತೆ ನೀಡಲಾಗುತ್ತಿದೆ. ನರೇಗಾ ಯೋಜನೆಯಡಿ ಪಾರಂಪರಿಕ ಜಲಮೂಲಗಳ ಪುನರುಜ್ಜೀವನಕ್ಕೂ ಜೆಜೆಎಂ ಯೋಜನೆಯಡಿ ಅನುದಾನ ನೀಡಲಾಗುತ್ತಿದೆ. ಉದಾ: ಕಲ್ಯಾಣಿಗಳು, ಬಾವಿಗಳು.

15 ನೇ ಹಣಕಾಸು ಆಯೋಗವು ಗ್ರಾಮೀಣ ಸ್ಥಳೀಯ ಸಂಸ್ಥೆ (RLBs)ಗಳ ಮೂಲಕ, ಸಂಯೋಜಿತ ಜಲಾನಯನ ನಿರ್ವಹಣಾ ಕಾರ್ಯಕ್ರಮ (IWMP),ರಾಜ್ಯ ಯೋಜನೆಗಳು, ಜಿಲ್ಲಾ ಖನಿಜ ಅಭಿವೃದ್ಧಿ ನಿಧಿ, ಸಿಎಸ್‌ಆರ್‌ ನಿಧಿಗಳು, ಸಮುದಾಯ ಕೊಡುಗೆ ಇತ್ಯಾದಿಗಳು ಕೂಡ ಜೆಜೆಎಂಗೆ ಅನುದಾನ ಒದಗಿಸುತ್ತಿದೆ.

ಕೇಂದ್ರ ಜಲಶಕ್ತಿ ಸಚಿವಾಲಯದ ಅಧೀನದಲ್ಲಿ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜಲ ಶಕ್ತಿ ಸಚಿವಾಲಯ ಅಥವಾ ಜಲ ಸಂಪನ್ಮೂಲ ಸಚಿವಾಲಯವನ್ನು ಎರಡನೇ ಮೋದಿ ಸರ್ಕಾರ ಅವಧಿಯಲ್ಲಿ ಮೇ 2019 ರಲ್ಲಿ ರಚಿಸಲಾಗಿದೆ. ಇದು ಜಲಸಂಪನ್ಮೂಲ ಸಚಿವಾಲಯ, ನದಿ ಅಭಿವೃದ್ಧಿ, ಗಂಗಾ ಪುನರುಜ್ಜೀವನ ಮತ್ತು ಕುಡಿಯುವ ನೀರು ಹಾಗೂ ನೈರ್ಮಲ್ಯ ಸಚಿವಾಲಯಗಳ ವಿಲೀನದಿಂದ ರೂಪುಗೊಂಡಿದೆ.

ನಮಗೆ ದೊರೆತ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಾನ ಪಾಲಿದೆ. ಯೋಜನೆಗೆ ಕೇಂದ್ರ ಸರ್ಕಾರ ಶೇ.50ರಷ್ಟು ಹಣವನ್ನು ಒದಗಿಸಿದರೆ, ಇನ್ನುಳಿದ ಶೇ.50ರಷ್ಟು ಹಣವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಹಾಗಾಗಿ, ಇದು ಕೇವಲ ಕೇಂದ್ರ ಸರ್ಕಾರ ಯೋಜನೆಯಲ್ಲ, ರಾಜ್ಯ ಸರ್ಕಾರದ ಯೋಜನೆಯೂ ಹೌದು.

ಇದನ್ನೂ ಓದಿ: Fact Check: ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...