Homeಫ್ಯಾಕ್ಟ್‌ಚೆಕ್Fact Check: 'ಜಲ ಜೀವನ್ ಮಿಷನ್‌' ಯೋಜನೆಯಲ್ಲಿ ಕೇಂದ್ರದ್ದಷ್ಟೇ ಅಲ್ಲ, ರಾಜ್ಯದ ಪಾಲೂ ಇದೆ

Fact Check: ‘ಜಲ ಜೀವನ್ ಮಿಷನ್‌’ ಯೋಜನೆಯಲ್ಲಿ ಕೇಂದ್ರದ್ದಷ್ಟೇ ಅಲ್ಲ, ರಾಜ್ಯದ ಪಾಲೂ ಇದೆ

ಜೆಜೆಎಂ ಕೇವಲ ಕೇಂದ್ರದ ಯೋಜನೆ ಎನ್ನಲು ಸಾಧ್ಯವಿಲ್ಲ

- Advertisement -
- Advertisement -

‘ಜಲ ಜೀವನ್ ಮಿಷನ್'(ಜೆಜೆಎಂ) ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ವಿಚಾರದಲ್ಲಿ ರಾಜಕೀಯ ಕಿತ್ತಾಟ ನಡೆಯುತ್ತಿದೆ. ಬಿಜೆಪಿ ಬೆಂಬಲಿಗರು ‘ಮೋದಿ ದುಡ್ಡು ಸಿದ್ದು ಹೆಸರು’ ಎಂಬ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು, ‘ಕೇಂದ್ರದ ಮೋದಿ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯ ನೀರನ್ನು ಸಿದ್ದರಾಮಯ್ಯ ಸರ್ಕಾರ ತನ್ನದೆಂದು ಬಿಂಬಿಸುತ್ತಿದೆ’ ಎಂಬರ್ಥದಲ್ಲಿ ಸುದ್ದಿ ಹಂಚುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಜಲ ಜೀವನ್ ಮಿಷನ್ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭಿಮಾನಿಗಳು ಪರಸ್ಪರ ಕಿತ್ತಾಟದಲ್ಲಿ ನಿರತರಾಗಿದ್ದಾರೆ. ಹಾಗಾಗಿ, ಯೋಜನೆಯ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಜಲ ಜೀವನ್ ಮಿಷನ್ ಯೋಜನೆ ಯಾರದ್ದು? ಇದರ ಉದ್ದೇಶವೇನು? ಈ ಯೋಜನೆಗೆ ಯಾರು ಹಣ ಒದಗಿಸುತ್ತಿದ್ದಾರೆ?, ಯೋಜನೆಯಲ್ಲಿ ಕೇಂದ್ರದ ಪಾಲೆಷ್ಟಿದೆ?, ರಾಜ್ಯದ ಪಾಲೆಷ್ಟಿದೆ? ಇತ್ಯಾದಿ ವಿಷಯಗಳ ಕುರಿತು ನೈಜ ಮಾಹಿತಿಯನ್ನು ನಾವು ಇಲ್ಲಿ ತೆರದಿಟ್ಟಿದ್ದೇವೆ.

ಜಲ ಜೀವನ್ ಮಿಷನ್ ಯೋಜನೆಯ ಕುರಿತು ಮಾಹಿತಿ ಹುಡುಕಿದಾಗ ಕೇಂದ್ರ ಸರ್ಕಾರದ ಅಧಿಕೃತ ಸಂಸ್ಥೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) 21 ಮಾರ್ಚ್ 2022ರಂದು ಜಲ ಜೀವನ್ ಮಿಷನ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು (Share of Union and State Government in JJM)ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ ಮಾಹಿತಿಯೊಂದು ದೊರೆತಿದೆ.

ಪಿಐಬಿ ಪ್ರಕಟನೆಯಲ್ಲಿ ತಿಳಿಸಿದಂತೆ, 2024ರೊಳಗೆ ದೇಶದ ಗ್ರಾಮೀಣ ಪ್ರದೇಶದ ಪ್ರತೀ ಮನೆಗಳಿಗೆ ನಳ್ಳಿ ನೀರು ಒದಗಿಸುವ ಉದ್ದೇಶದಿಂದ ಆಗಸ್ಟ್ 2019ರಲ್ಲಿ ರಾಜ್ಯಗಳ ಸಹಯೋಗದಲ್ಲಿ ಭಾರತ ಸರ್ಕಾರ ಜಾರಿಗೆ ತಂದ ಯೋಜನೆಯಾಗಿದೆ ‘ಜಲ ಜೀವನ್ ಮಿಷನ್’ (ಜೆಜೆಎಂ) ಇದರ ಅಂದಾಜು ವೆಚ್ಚವು ರೂ. 3.60 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಕೇಂದ್ರ ಪಾಲು ರೂ. 2.08 ಲಕ್ಷ ಕೋಟಿ ಆಗಿದೆ.

ಜೆಜೆಎಂ ಯೋಜನೆಗೆ ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಶೇ. 100ರಷ್ಟು ಅನುದಾನ ಒದಗಿಸುತ್ತಿದೆ. ಅಂದರೆ, ಯೋಜನೆಯ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುತ್ತಿದೆ. ಈಶಾನ್ಯ, ಹಿಮಾಲಯ ರಾಜ್ಯಗಳು ಮತ್ತು ಶಾಸಕಾಂಗ ಇರುವ ಕೇಂದ್ರಾಡಳಿತ ಪ್ರದೇಶಗಳಿಗೆ 90:10 ಅನುಪಾತದಲ್ಲಿ, ಅಂದರೆ ಯೋಜನೆಯ ಶೇ. 90ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ಮತ್ತು ಶೇ.10 ಅನುದಾವನ್ನು ಆಯಾ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಭರಿಸುತ್ತಿದೆ. ಕರ್ನಾಟಕ, ಕೇರಳದಂತಹ ಸರ್ಕಾರಗಳು ಇರುವ ರಾಜ್ಯಗಳಲ್ಲಿ 50:50 ಅನುಪಾದಲ್ಲಿ ಅನುದಾನ ಹಂಚಿಕೆಯಾಗುತ್ತಿದೆ. ಅಂದರೆ ಯೋಜನೆಯ ಶೇ. 50ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಉಳಿದ ಶೇ.50ರಷ್ಟು ವೆಚ್ಚವನ್ನು ಆಯಾ ರಾಜ್ಯ ಸರ್ಕಾರಗಳು ಭರಿಸುತ್ತಿವೆ.

ಪೋಸ್ಟ್ ಲಿಂಕ್ ಇಲ್ಲಿದೆ

ಇದಲ್ಲದೆ, ನೀರಿನ ಗುಣಮಟ್ಟ ನಿರ್ವಹಣಾ ವ್ಯವಸ್ಥೆಯಡಿ (WQMS)ಕೇಂದ್ರಾಡಳಿತ ಪ್ರದೇಶಗಳಿಗೆ ಶೇ.100ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಹಿಮಾಲಯ ಹಾಗೂ ಈಶಾನ್ಯ ರಾಜ್ಯಗಳಿಗೆ 90:10 ಅನುಪಾತ ಮತ್ತು ಇತರ ರಾಜ್ಯಗಳಿಗೆ 60:40 ಅನುಪಾತದಲ್ಲಿ ಅನುದಾನ ಹಂಚಿಕೆಯಾಗ್ತಿದೆ.

ಜಲ ಜೀವನ್ ಮಿಷನ್ ಅಡಿಯಲ್ಲಿ ದೇಶದ ಕೆಲ ವಿಶೇಷ ಪ್ರದೇಶಗಳಿಗೆ ಅಲ್ಲಿನ ಪ್ರಾಧಿಕಾರಗಳ ಮೂಲಕ ಪ್ರೋತ್ಸಾಹಧನ ನೀಡಲಾಗುತ್ತಿದೆ. ಉದಾ: ಮರುಭೂಮಿ ಅಭಿವೃದ್ಧಿ ಕಾರ್ಯಕ್ರಮ (ಡಿಡಿಪಿ) ಮತ್ತು ಬರಪೀಡಿತ ಪ್ರದೇಶ ಕಾರ್ಯಕ್ರಮ (ಡಿಪಿಎಪಿ) ಅಡಿಯಲ್ಲಿರುವ ಬರುವ ಭೂಪ್ರದೇಶಗಳಿಗೆ ಶೇ. 30ರಷ್ಟು ಅನುದಾನ, ಎಸ್‌ಸಿ, ಎಸ್‌ಟಿ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ವಾಸಿಸುವ ಜನಸಂಖ್ಯೆಗೆ ಶೇ. 10ರಷ್ಟು ಅನುದಾನ. ನಿಯಮಗಳ ಪ್ರಕಾರ ಅನುದಾನ ಹಂಚಿಕೆ ಮಾಡುವಾಗ ಈ ಪ್ರದೇಶಗಳಿಗೆ ಮೊದಲ ಪ್ರಾಶಸ್ತ್ಯ ನೀಡಬೇಕಾಗಿದೆ.

ಇದಲ್ಲದೆ, ನೀರಿನ ಜೆಇ-ಎಇಎಸ್ (JE-AES-Japanese encephalitis)ಅಂದರೆ, ಡೆಂಗ್ಯೂ, ಹಳದಿ ಜ್ವರ, ವೆಸ್ಟ್ ನೈಲ್ ವೈರಸ್‌ಗಳು ಮತ್ತು ಸೊಳ್ಳೆಯಿಂದ ಬರುವ ರೋಗ ಪೀಡಿತ ಜಿಲ್ಲೆಗಳ ಗ್ರಾಮಗಳು ಮತ್ತು ಸಂಸದರ ಆದರ್ಶ ಗ್ರಾಮಗಳಿಗೆ (Sansad Adarsh GM Yojana (SAGY)ಅನುದಾನ ಒದಗಿಸಲು ಆದ್ಯತೆ ನೀಡಲಾಗುತ್ತಿದೆ. ನರೇಗಾ ಯೋಜನೆಯಡಿ ಪಾರಂಪರಿಕ ಜಲಮೂಲಗಳ ಪುನರುಜ್ಜೀವನಕ್ಕೂ ಜೆಜೆಎಂ ಯೋಜನೆಯಡಿ ಅನುದಾನ ನೀಡಲಾಗುತ್ತಿದೆ. ಉದಾ: ಕಲ್ಯಾಣಿಗಳು, ಬಾವಿಗಳು.

15 ನೇ ಹಣಕಾಸು ಆಯೋಗವು ಗ್ರಾಮೀಣ ಸ್ಥಳೀಯ ಸಂಸ್ಥೆ (RLBs)ಗಳ ಮೂಲಕ, ಸಂಯೋಜಿತ ಜಲಾನಯನ ನಿರ್ವಹಣಾ ಕಾರ್ಯಕ್ರಮ (IWMP),ರಾಜ್ಯ ಯೋಜನೆಗಳು, ಜಿಲ್ಲಾ ಖನಿಜ ಅಭಿವೃದ್ಧಿ ನಿಧಿ, ಸಿಎಸ್‌ಆರ್‌ ನಿಧಿಗಳು, ಸಮುದಾಯ ಕೊಡುಗೆ ಇತ್ಯಾದಿಗಳು ಕೂಡ ಜೆಜೆಎಂಗೆ ಅನುದಾನ ಒದಗಿಸುತ್ತಿದೆ.

ಕೇಂದ್ರ ಜಲಶಕ್ತಿ ಸಚಿವಾಲಯದ ಅಧೀನದಲ್ಲಿ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜಲ ಶಕ್ತಿ ಸಚಿವಾಲಯ ಅಥವಾ ಜಲ ಸಂಪನ್ಮೂಲ ಸಚಿವಾಲಯವನ್ನು ಎರಡನೇ ಮೋದಿ ಸರ್ಕಾರ ಅವಧಿಯಲ್ಲಿ ಮೇ 2019 ರಲ್ಲಿ ರಚಿಸಲಾಗಿದೆ. ಇದು ಜಲಸಂಪನ್ಮೂಲ ಸಚಿವಾಲಯ, ನದಿ ಅಭಿವೃದ್ಧಿ, ಗಂಗಾ ಪುನರುಜ್ಜೀವನ ಮತ್ತು ಕುಡಿಯುವ ನೀರು ಹಾಗೂ ನೈರ್ಮಲ್ಯ ಸಚಿವಾಲಯಗಳ ವಿಲೀನದಿಂದ ರೂಪುಗೊಂಡಿದೆ.

ನಮಗೆ ದೊರೆತ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಾನ ಪಾಲಿದೆ. ಯೋಜನೆಗೆ ಕೇಂದ್ರ ಸರ್ಕಾರ ಶೇ.50ರಷ್ಟು ಹಣವನ್ನು ಒದಗಿಸಿದರೆ, ಇನ್ನುಳಿದ ಶೇ.50ರಷ್ಟು ಹಣವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಹಾಗಾಗಿ, ಇದು ಕೇವಲ ಕೇಂದ್ರ ಸರ್ಕಾರ ಯೋಜನೆಯಲ್ಲ, ರಾಜ್ಯ ಸರ್ಕಾರದ ಯೋಜನೆಯೂ ಹೌದು.

ಇದನ್ನೂ ಓದಿ: Fact Check: ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...