Homeಫ್ಯಾಕ್ಟ್‌ಚೆಕ್Fact Check: 'ಜಲ ಜೀವನ್ ಮಿಷನ್‌' ಯೋಜನೆಯಲ್ಲಿ ಕೇಂದ್ರದ್ದಷ್ಟೇ ಅಲ್ಲ, ರಾಜ್ಯದ ಪಾಲೂ ಇದೆ

Fact Check: ‘ಜಲ ಜೀವನ್ ಮಿಷನ್‌’ ಯೋಜನೆಯಲ್ಲಿ ಕೇಂದ್ರದ್ದಷ್ಟೇ ಅಲ್ಲ, ರಾಜ್ಯದ ಪಾಲೂ ಇದೆ

ಜೆಜೆಎಂ ಕೇವಲ ಕೇಂದ್ರದ ಯೋಜನೆ ಎನ್ನಲು ಸಾಧ್ಯವಿಲ್ಲ

- Advertisement -
- Advertisement -

‘ಜಲ ಜೀವನ್ ಮಿಷನ್'(ಜೆಜೆಎಂ) ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ವಿಚಾರದಲ್ಲಿ ರಾಜಕೀಯ ಕಿತ್ತಾಟ ನಡೆಯುತ್ತಿದೆ. ಬಿಜೆಪಿ ಬೆಂಬಲಿಗರು ‘ಮೋದಿ ದುಡ್ಡು ಸಿದ್ದು ಹೆಸರು’ ಎಂಬ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು, ‘ಕೇಂದ್ರದ ಮೋದಿ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯ ನೀರನ್ನು ಸಿದ್ದರಾಮಯ್ಯ ಸರ್ಕಾರ ತನ್ನದೆಂದು ಬಿಂಬಿಸುತ್ತಿದೆ’ ಎಂಬರ್ಥದಲ್ಲಿ ಸುದ್ದಿ ಹಂಚುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಜಲ ಜೀವನ್ ಮಿಷನ್ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭಿಮಾನಿಗಳು ಪರಸ್ಪರ ಕಿತ್ತಾಟದಲ್ಲಿ ನಿರತರಾಗಿದ್ದಾರೆ. ಹಾಗಾಗಿ, ಯೋಜನೆಯ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಜಲ ಜೀವನ್ ಮಿಷನ್ ಯೋಜನೆ ಯಾರದ್ದು? ಇದರ ಉದ್ದೇಶವೇನು? ಈ ಯೋಜನೆಗೆ ಯಾರು ಹಣ ಒದಗಿಸುತ್ತಿದ್ದಾರೆ?, ಯೋಜನೆಯಲ್ಲಿ ಕೇಂದ್ರದ ಪಾಲೆಷ್ಟಿದೆ?, ರಾಜ್ಯದ ಪಾಲೆಷ್ಟಿದೆ? ಇತ್ಯಾದಿ ವಿಷಯಗಳ ಕುರಿತು ನೈಜ ಮಾಹಿತಿಯನ್ನು ನಾವು ಇಲ್ಲಿ ತೆರದಿಟ್ಟಿದ್ದೇವೆ.

ಜಲ ಜೀವನ್ ಮಿಷನ್ ಯೋಜನೆಯ ಕುರಿತು ಮಾಹಿತಿ ಹುಡುಕಿದಾಗ ಕೇಂದ್ರ ಸರ್ಕಾರದ ಅಧಿಕೃತ ಸಂಸ್ಥೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) 21 ಮಾರ್ಚ್ 2022ರಂದು ಜಲ ಜೀವನ್ ಮಿಷನ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು (Share of Union and State Government in JJM)ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ ಮಾಹಿತಿಯೊಂದು ದೊರೆತಿದೆ.

ಪಿಐಬಿ ಪ್ರಕಟನೆಯಲ್ಲಿ ತಿಳಿಸಿದಂತೆ, 2024ರೊಳಗೆ ದೇಶದ ಗ್ರಾಮೀಣ ಪ್ರದೇಶದ ಪ್ರತೀ ಮನೆಗಳಿಗೆ ನಳ್ಳಿ ನೀರು ಒದಗಿಸುವ ಉದ್ದೇಶದಿಂದ ಆಗಸ್ಟ್ 2019ರಲ್ಲಿ ರಾಜ್ಯಗಳ ಸಹಯೋಗದಲ್ಲಿ ಭಾರತ ಸರ್ಕಾರ ಜಾರಿಗೆ ತಂದ ಯೋಜನೆಯಾಗಿದೆ ‘ಜಲ ಜೀವನ್ ಮಿಷನ್’ (ಜೆಜೆಎಂ) ಇದರ ಅಂದಾಜು ವೆಚ್ಚವು ರೂ. 3.60 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಕೇಂದ್ರ ಪಾಲು ರೂ. 2.08 ಲಕ್ಷ ಕೋಟಿ ಆಗಿದೆ.

ಜೆಜೆಎಂ ಯೋಜನೆಗೆ ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಶೇ. 100ರಷ್ಟು ಅನುದಾನ ಒದಗಿಸುತ್ತಿದೆ. ಅಂದರೆ, ಯೋಜನೆಯ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುತ್ತಿದೆ. ಈಶಾನ್ಯ, ಹಿಮಾಲಯ ರಾಜ್ಯಗಳು ಮತ್ತು ಶಾಸಕಾಂಗ ಇರುವ ಕೇಂದ್ರಾಡಳಿತ ಪ್ರದೇಶಗಳಿಗೆ 90:10 ಅನುಪಾತದಲ್ಲಿ, ಅಂದರೆ ಯೋಜನೆಯ ಶೇ. 90ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ಮತ್ತು ಶೇ.10 ಅನುದಾವನ್ನು ಆಯಾ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಭರಿಸುತ್ತಿದೆ. ಕರ್ನಾಟಕ, ಕೇರಳದಂತಹ ಸರ್ಕಾರಗಳು ಇರುವ ರಾಜ್ಯಗಳಲ್ಲಿ 50:50 ಅನುಪಾದಲ್ಲಿ ಅನುದಾನ ಹಂಚಿಕೆಯಾಗುತ್ತಿದೆ. ಅಂದರೆ ಯೋಜನೆಯ ಶೇ. 50ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಉಳಿದ ಶೇ.50ರಷ್ಟು ವೆಚ್ಚವನ್ನು ಆಯಾ ರಾಜ್ಯ ಸರ್ಕಾರಗಳು ಭರಿಸುತ್ತಿವೆ.

ಪೋಸ್ಟ್ ಲಿಂಕ್ ಇಲ್ಲಿದೆ

ಇದಲ್ಲದೆ, ನೀರಿನ ಗುಣಮಟ್ಟ ನಿರ್ವಹಣಾ ವ್ಯವಸ್ಥೆಯಡಿ (WQMS)ಕೇಂದ್ರಾಡಳಿತ ಪ್ರದೇಶಗಳಿಗೆ ಶೇ.100ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಹಿಮಾಲಯ ಹಾಗೂ ಈಶಾನ್ಯ ರಾಜ್ಯಗಳಿಗೆ 90:10 ಅನುಪಾತ ಮತ್ತು ಇತರ ರಾಜ್ಯಗಳಿಗೆ 60:40 ಅನುಪಾತದಲ್ಲಿ ಅನುದಾನ ಹಂಚಿಕೆಯಾಗ್ತಿದೆ.

ಜಲ ಜೀವನ್ ಮಿಷನ್ ಅಡಿಯಲ್ಲಿ ದೇಶದ ಕೆಲ ವಿಶೇಷ ಪ್ರದೇಶಗಳಿಗೆ ಅಲ್ಲಿನ ಪ್ರಾಧಿಕಾರಗಳ ಮೂಲಕ ಪ್ರೋತ್ಸಾಹಧನ ನೀಡಲಾಗುತ್ತಿದೆ. ಉದಾ: ಮರುಭೂಮಿ ಅಭಿವೃದ್ಧಿ ಕಾರ್ಯಕ್ರಮ (ಡಿಡಿಪಿ) ಮತ್ತು ಬರಪೀಡಿತ ಪ್ರದೇಶ ಕಾರ್ಯಕ್ರಮ (ಡಿಪಿಎಪಿ) ಅಡಿಯಲ್ಲಿರುವ ಬರುವ ಭೂಪ್ರದೇಶಗಳಿಗೆ ಶೇ. 30ರಷ್ಟು ಅನುದಾನ, ಎಸ್‌ಸಿ, ಎಸ್‌ಟಿ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ವಾಸಿಸುವ ಜನಸಂಖ್ಯೆಗೆ ಶೇ. 10ರಷ್ಟು ಅನುದಾನ. ನಿಯಮಗಳ ಪ್ರಕಾರ ಅನುದಾನ ಹಂಚಿಕೆ ಮಾಡುವಾಗ ಈ ಪ್ರದೇಶಗಳಿಗೆ ಮೊದಲ ಪ್ರಾಶಸ್ತ್ಯ ನೀಡಬೇಕಾಗಿದೆ.

ಇದಲ್ಲದೆ, ನೀರಿನ ಜೆಇ-ಎಇಎಸ್ (JE-AES-Japanese encephalitis)ಅಂದರೆ, ಡೆಂಗ್ಯೂ, ಹಳದಿ ಜ್ವರ, ವೆಸ್ಟ್ ನೈಲ್ ವೈರಸ್‌ಗಳು ಮತ್ತು ಸೊಳ್ಳೆಯಿಂದ ಬರುವ ರೋಗ ಪೀಡಿತ ಜಿಲ್ಲೆಗಳ ಗ್ರಾಮಗಳು ಮತ್ತು ಸಂಸದರ ಆದರ್ಶ ಗ್ರಾಮಗಳಿಗೆ (Sansad Adarsh GM Yojana (SAGY)ಅನುದಾನ ಒದಗಿಸಲು ಆದ್ಯತೆ ನೀಡಲಾಗುತ್ತಿದೆ. ನರೇಗಾ ಯೋಜನೆಯಡಿ ಪಾರಂಪರಿಕ ಜಲಮೂಲಗಳ ಪುನರುಜ್ಜೀವನಕ್ಕೂ ಜೆಜೆಎಂ ಯೋಜನೆಯಡಿ ಅನುದಾನ ನೀಡಲಾಗುತ್ತಿದೆ. ಉದಾ: ಕಲ್ಯಾಣಿಗಳು, ಬಾವಿಗಳು.

15 ನೇ ಹಣಕಾಸು ಆಯೋಗವು ಗ್ರಾಮೀಣ ಸ್ಥಳೀಯ ಸಂಸ್ಥೆ (RLBs)ಗಳ ಮೂಲಕ, ಸಂಯೋಜಿತ ಜಲಾನಯನ ನಿರ್ವಹಣಾ ಕಾರ್ಯಕ್ರಮ (IWMP),ರಾಜ್ಯ ಯೋಜನೆಗಳು, ಜಿಲ್ಲಾ ಖನಿಜ ಅಭಿವೃದ್ಧಿ ನಿಧಿ, ಸಿಎಸ್‌ಆರ್‌ ನಿಧಿಗಳು, ಸಮುದಾಯ ಕೊಡುಗೆ ಇತ್ಯಾದಿಗಳು ಕೂಡ ಜೆಜೆಎಂಗೆ ಅನುದಾನ ಒದಗಿಸುತ್ತಿದೆ.

ಕೇಂದ್ರ ಜಲಶಕ್ತಿ ಸಚಿವಾಲಯದ ಅಧೀನದಲ್ಲಿ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜಲ ಶಕ್ತಿ ಸಚಿವಾಲಯ ಅಥವಾ ಜಲ ಸಂಪನ್ಮೂಲ ಸಚಿವಾಲಯವನ್ನು ಎರಡನೇ ಮೋದಿ ಸರ್ಕಾರ ಅವಧಿಯಲ್ಲಿ ಮೇ 2019 ರಲ್ಲಿ ರಚಿಸಲಾಗಿದೆ. ಇದು ಜಲಸಂಪನ್ಮೂಲ ಸಚಿವಾಲಯ, ನದಿ ಅಭಿವೃದ್ಧಿ, ಗಂಗಾ ಪುನರುಜ್ಜೀವನ ಮತ್ತು ಕುಡಿಯುವ ನೀರು ಹಾಗೂ ನೈರ್ಮಲ್ಯ ಸಚಿವಾಲಯಗಳ ವಿಲೀನದಿಂದ ರೂಪುಗೊಂಡಿದೆ.

ನಮಗೆ ದೊರೆತ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಾನ ಪಾಲಿದೆ. ಯೋಜನೆಗೆ ಕೇಂದ್ರ ಸರ್ಕಾರ ಶೇ.50ರಷ್ಟು ಹಣವನ್ನು ಒದಗಿಸಿದರೆ, ಇನ್ನುಳಿದ ಶೇ.50ರಷ್ಟು ಹಣವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಹಾಗಾಗಿ, ಇದು ಕೇವಲ ಕೇಂದ್ರ ಸರ್ಕಾರ ಯೋಜನೆಯಲ್ಲ, ರಾಜ್ಯ ಸರ್ಕಾರದ ಯೋಜನೆಯೂ ಹೌದು.

ಇದನ್ನೂ ಓದಿ: Fact Check: ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...