Homeಕರೋನಾ ತಲ್ಲಣಫ್ಯಾಕ್ಟ್ ಚೆಕ್: ಹರ್ಬಲ್ ಮೈಸೂರ್ ಪಾಕ್ ಕೊರೊನಾವನ್ನು ಗುಣಪಡಿಸಬಹುದೆ? ನಿಜವೇನು?

ಫ್ಯಾಕ್ಟ್ ಚೆಕ್: ಹರ್ಬಲ್ ಮೈಸೂರ್ ಪಾಕ್ ಕೊರೊನಾವನ್ನು ಗುಣಪಡಿಸಬಹುದೆ? ನಿಜವೇನು?

ಮೈಸೂರ್ ಪಾಕ್‌ನಲ್ಲಿ 19 ಬಗೆಯ ವಿವಿಧ ಗಿಡಮೂಲಿಕೆಗಳಿವೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಕೊರೊನಾ ವೈರಸ್ ಅನ್ನು ಕೊಲ್ಲುತ್ತದೆ. ಸೋಂಕನ್ನು ತೊಡೆದು ಹಾಕಲು ಒಂದು ದಿನದಲ್ಲಿ ಮೈಸೂರ್ ಪಾಕಿನ ನಾಲ್ಕು ತುಂಡುಗಳನ್ನು ತಿನ್ನಬೇಕು ಎಂದು ಕರಪತ್ರ ಹೇಳಿದೆ.

- Advertisement -
- Advertisement -

“ಹರ್ಬಲ್ ಮೈಸೂರ್ ಪಾಕ್ ಮೂಲಕ  ಕೊರೊನಾ ರೋಗಿಗಳು ಒಂದೇ ದಿನದಲ್ಲಿ ಗುಣಮುಖರಾಗುತ್ತಾರೆ. ಹೌದು, ಇದು ಒಂದು ಪವಾಡ! ಚಿನ್ನಿಯಂಪಾಳಯಂ ಮತ್ತು ವೆಳ್ಳಲೂರಿನಲ್ಲಿ ಇಂತಹ ಘಟನೆ ಸಂಭವಿಸಿದೆ” ಎಂದು ಹೇಳುವ ತಮಿಳು ಕರಪತ್ರವೊಂದು ವೈರಲ್ ಆಗಿದೆ.

ಕೊಯಮತ್ತೂರಿನಲ್ಲಿರುವ ಸಿಹಿತಿನಿಸು ಅಂಗಡಿಯೊಂದರ ಮಾಲೀಕರು ಮುದ್ರಿಸಿರುವ ತಮಿಳು ಭಾಷೆಯ ಕರಪತ್ರದಲ್ಲಿ “ತನ್ನ ಅಂಗಡಿಯಲ್ಲಿ ತಯಾರಿಸಿದ ಹರ್ಬಲ್ ಮೈಸೂರ್ ಪಾಕ್ ತಿನ್ನುವುದರಿಂದ (ದಕ್ಷಿಣ ಭಾರತದ ಸಿಹಿತಿನಿಸು) ಕೇವಲ ಒಂದು ದಿನದಲ್ಲಿ ಕೊರೊನಾ ಸೋಂಕನ್ನು ಗುಣಪಡಿಸಬಹುದು. ತನ್ನ ಅಜ್ಜ ಸಿದ್ಧೌ‍‍ಷದ ತಜ್ಞ ಹೇಳಿಕೊಟ್ಟ ಪಾಕವಿಧಾನದ ಪ್ರಕಾರ ಈ ಸಿಹಿತಿಂಡಿ ತಯಾರಿಸಲ್ಪಟ್ಟಿದೆ” ಎಂದು ಬರೆಯಲಾಗಿದೆ.

 

ಮೈಸೂರ್ ಪಾಕ್‌ನಲ್ಲಿ 19 ಬಗೆಯ ವಿವಿಧ ಗಿಡಮೂಲಿಕೆಗಳಿವೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಕೊರೊನಾ ವೈರಸ್ ಅನ್ನು ಕೊಲ್ಲುತ್ತದೆ. ಸೋಂಕನ್ನು ತೊಡೆದು ಹಾಕಲು ಒಂದು ದಿನದಲ್ಲಿ ಮೈಸೂರ್ ಪಾಕಿನ ನಾಲ್ಕು ತುಂಡುಗಳನ್ನು ತಿನ್ನಬೇಕು ಎಂದು ಕರಪತ್ರ ಹೇಳಿದೆ.

ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಕರಪತ್ರವನ್ನು ಅಂಗಡಿಯ ವಿಳಾಸ ಮತ್ತು ವಿವರಗಳೊಂದಿಗೆ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್ ಚೆಕ್:

“ಹರ್ಬಲ್ ಮೈಸೂರ್‌ ಪಾಕ್ ಕೊರೊನಾ ವೈರಸ್ ಸೋಂಕನ್ನು ಗುಣಪಡಿಸುತ್ತದೆ” ಎಂಬ ಕೀ ಪದಗಳಿಂದ ಹುಡುಕಿದಾಗ ಹಲವು ಪತ್ರಿಕಾ ವರದಿಗಳು ಕಾಣಸಿಗುತ್ತವೆ. Outlook.comನ ವರದಿಯ ಪ್ರಕಾರ, ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಕೂಡಲೇ ಕೊಯಮತ್ತೂರಿನ ಚಿನ್ನಿಯಂಪಾಲಯಂನ ಅಂಗಡಿಯ ಮೇಲೆ ದಾಳಿ ನಡೆಸಿದೆ. ನಿಯೋಜಿತ ಅಧಿಕಾರಿ ಉತ್ಪನ್ನವನ್ನು FSSAI ಪ್ರಮಾಣೀಕರಿಸಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಇದು ಕೊರೊನಾವನ್ನು ಗುಣಪಡಿಸುತ್ತದೆ ಎಂಬುದು ಅಪ್ಪಟ ಸುಳ್ಳು ಎಂದು ತಿಳಿಸಿದ್ದಾರೆ.

“ಈ ಕರಪತ್ರದ ವಿಚಾರ ಸ್ಥಳೀಯ ಆರೋಗ್ಯ ಅಧಿಕಾರಿಗಳಿಗೆ ತಲುಪಿ, ಆರೋಗ್ಯ ಸೇವೆಗಳ ಉಪನಿರ್ದೇಶಕ ಜಿ. ರಮೇಶ್ ಕುಮಾರ್ ಇದು ಸಾಂಕ್ರಾಮಿಕ ರೋಗ ಕಾಯ್ದೆ, 1897ರ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಹೇಳಿದ್ದಾರೆ. ಹರ್ಬಲ್ ಮೈಸೂರು ಪಾಕ್, ಕೊರೊನಾ ಸೋಂಕಿತ ರೋಗಿಗಳನ್ನು ಗುಣಪಡಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿ ಅಂಗಡಿ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಂದು ಬಣ್ಣದ ಮೈಸೂರ್‌ ಪಾಕ್‌ನ ಪ್ರತಿ 50 ಗ್ರಾಂ ತುಂಡನ್ನು 50 ರೂಗೆ ಮತ್ತು ಒಂದು ಕೆಜಿಗೆ 800 ರೂ.ಗೆ ಮಾರಾಟ ಮಾಡಲಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ 120 ಕೆಜಿ ಹರ್ಬಲ್ ಮೈಸೂರ್‌ ಪಾಕ್‌ಅನ್ನು ವಶಪಡಿಸಿಕೊಂಡು ಅಂಗಡಿಯನ್ನು ಸೀಲ್ ಮಾಡಿ ಅವರ ಪರವಾನಗಿಯನ್ನು ರದ್ದುಗೊಳಿಸಿದ್ದಾರೆ. ಅಲ್ಲದೇ ಆಹಾರ ಸುರಕ್ಷತಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಲವು ಮಾಧ್ಯಮ ವರದಿಗಳು ತಿಳಿಸಿವೆ.

ಆದ್ದರಿಂದ, ಹರ್ಬಲ್ ಮೈಸೂರ್‌ ಪಾಕ್ ಕೊರೊನಾ ಸೋಂಕನ್ನು ಗುಣಪಡಿಸುತ್ತದೆ ಎಂಬ ಹೇಳಿಕೆ ಸುಳ್ಳಾಗಿದೆ.


ಇದನ್ನೂ ಓದಿ: ಕೊರೊನಾ ಲಸಿಕೆ ಏನಿದ್ದರೂ ಮುಂದಿನ ವರ್ಷಕ್ಕೆ ಮಾತ್ರ ಸಾಧ್ಯ : ಆರೋಗ್ಯ ತಜ್ಞ ಆಶಿಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...