Homeಕರೋನಾ ತಲ್ಲಣಫ್ಯಾಕ್ಟ್ ಚೆಕ್: ಹರ್ಬಲ್ ಮೈಸೂರ್ ಪಾಕ್ ಕೊರೊನಾವನ್ನು ಗುಣಪಡಿಸಬಹುದೆ? ನಿಜವೇನು?

ಫ್ಯಾಕ್ಟ್ ಚೆಕ್: ಹರ್ಬಲ್ ಮೈಸೂರ್ ಪಾಕ್ ಕೊರೊನಾವನ್ನು ಗುಣಪಡಿಸಬಹುದೆ? ನಿಜವೇನು?

ಮೈಸೂರ್ ಪಾಕ್‌ನಲ್ಲಿ 19 ಬಗೆಯ ವಿವಿಧ ಗಿಡಮೂಲಿಕೆಗಳಿವೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಕೊರೊನಾ ವೈರಸ್ ಅನ್ನು ಕೊಲ್ಲುತ್ತದೆ. ಸೋಂಕನ್ನು ತೊಡೆದು ಹಾಕಲು ಒಂದು ದಿನದಲ್ಲಿ ಮೈಸೂರ್ ಪಾಕಿನ ನಾಲ್ಕು ತುಂಡುಗಳನ್ನು ತಿನ್ನಬೇಕು ಎಂದು ಕರಪತ್ರ ಹೇಳಿದೆ.

- Advertisement -
- Advertisement -

“ಹರ್ಬಲ್ ಮೈಸೂರ್ ಪಾಕ್ ಮೂಲಕ  ಕೊರೊನಾ ರೋಗಿಗಳು ಒಂದೇ ದಿನದಲ್ಲಿ ಗುಣಮುಖರಾಗುತ್ತಾರೆ. ಹೌದು, ಇದು ಒಂದು ಪವಾಡ! ಚಿನ್ನಿಯಂಪಾಳಯಂ ಮತ್ತು ವೆಳ್ಳಲೂರಿನಲ್ಲಿ ಇಂತಹ ಘಟನೆ ಸಂಭವಿಸಿದೆ” ಎಂದು ಹೇಳುವ ತಮಿಳು ಕರಪತ್ರವೊಂದು ವೈರಲ್ ಆಗಿದೆ.

ಕೊಯಮತ್ತೂರಿನಲ್ಲಿರುವ ಸಿಹಿತಿನಿಸು ಅಂಗಡಿಯೊಂದರ ಮಾಲೀಕರು ಮುದ್ರಿಸಿರುವ ತಮಿಳು ಭಾಷೆಯ ಕರಪತ್ರದಲ್ಲಿ “ತನ್ನ ಅಂಗಡಿಯಲ್ಲಿ ತಯಾರಿಸಿದ ಹರ್ಬಲ್ ಮೈಸೂರ್ ಪಾಕ್ ತಿನ್ನುವುದರಿಂದ (ದಕ್ಷಿಣ ಭಾರತದ ಸಿಹಿತಿನಿಸು) ಕೇವಲ ಒಂದು ದಿನದಲ್ಲಿ ಕೊರೊನಾ ಸೋಂಕನ್ನು ಗುಣಪಡಿಸಬಹುದು. ತನ್ನ ಅಜ್ಜ ಸಿದ್ಧೌ‍‍ಷದ ತಜ್ಞ ಹೇಳಿಕೊಟ್ಟ ಪಾಕವಿಧಾನದ ಪ್ರಕಾರ ಈ ಸಿಹಿತಿಂಡಿ ತಯಾರಿಸಲ್ಪಟ್ಟಿದೆ” ಎಂದು ಬರೆಯಲಾಗಿದೆ.

 

ಮೈಸೂರ್ ಪಾಕ್‌ನಲ್ಲಿ 19 ಬಗೆಯ ವಿವಿಧ ಗಿಡಮೂಲಿಕೆಗಳಿವೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಕೊರೊನಾ ವೈರಸ್ ಅನ್ನು ಕೊಲ್ಲುತ್ತದೆ. ಸೋಂಕನ್ನು ತೊಡೆದು ಹಾಕಲು ಒಂದು ದಿನದಲ್ಲಿ ಮೈಸೂರ್ ಪಾಕಿನ ನಾಲ್ಕು ತುಂಡುಗಳನ್ನು ತಿನ್ನಬೇಕು ಎಂದು ಕರಪತ್ರ ಹೇಳಿದೆ.

ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಕರಪತ್ರವನ್ನು ಅಂಗಡಿಯ ವಿಳಾಸ ಮತ್ತು ವಿವರಗಳೊಂದಿಗೆ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್ ಚೆಕ್:

“ಹರ್ಬಲ್ ಮೈಸೂರ್‌ ಪಾಕ್ ಕೊರೊನಾ ವೈರಸ್ ಸೋಂಕನ್ನು ಗುಣಪಡಿಸುತ್ತದೆ” ಎಂಬ ಕೀ ಪದಗಳಿಂದ ಹುಡುಕಿದಾಗ ಹಲವು ಪತ್ರಿಕಾ ವರದಿಗಳು ಕಾಣಸಿಗುತ್ತವೆ. Outlook.comನ ವರದಿಯ ಪ್ರಕಾರ, ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಕೂಡಲೇ ಕೊಯಮತ್ತೂರಿನ ಚಿನ್ನಿಯಂಪಾಲಯಂನ ಅಂಗಡಿಯ ಮೇಲೆ ದಾಳಿ ನಡೆಸಿದೆ. ನಿಯೋಜಿತ ಅಧಿಕಾರಿ ಉತ್ಪನ್ನವನ್ನು FSSAI ಪ್ರಮಾಣೀಕರಿಸಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಇದು ಕೊರೊನಾವನ್ನು ಗುಣಪಡಿಸುತ್ತದೆ ಎಂಬುದು ಅಪ್ಪಟ ಸುಳ್ಳು ಎಂದು ತಿಳಿಸಿದ್ದಾರೆ.

“ಈ ಕರಪತ್ರದ ವಿಚಾರ ಸ್ಥಳೀಯ ಆರೋಗ್ಯ ಅಧಿಕಾರಿಗಳಿಗೆ ತಲುಪಿ, ಆರೋಗ್ಯ ಸೇವೆಗಳ ಉಪನಿರ್ದೇಶಕ ಜಿ. ರಮೇಶ್ ಕುಮಾರ್ ಇದು ಸಾಂಕ್ರಾಮಿಕ ರೋಗ ಕಾಯ್ದೆ, 1897ರ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಹೇಳಿದ್ದಾರೆ. ಹರ್ಬಲ್ ಮೈಸೂರು ಪಾಕ್, ಕೊರೊನಾ ಸೋಂಕಿತ ರೋಗಿಗಳನ್ನು ಗುಣಪಡಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿ ಅಂಗಡಿ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಂದು ಬಣ್ಣದ ಮೈಸೂರ್‌ ಪಾಕ್‌ನ ಪ್ರತಿ 50 ಗ್ರಾಂ ತುಂಡನ್ನು 50 ರೂಗೆ ಮತ್ತು ಒಂದು ಕೆಜಿಗೆ 800 ರೂ.ಗೆ ಮಾರಾಟ ಮಾಡಲಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ 120 ಕೆಜಿ ಹರ್ಬಲ್ ಮೈಸೂರ್‌ ಪಾಕ್‌ಅನ್ನು ವಶಪಡಿಸಿಕೊಂಡು ಅಂಗಡಿಯನ್ನು ಸೀಲ್ ಮಾಡಿ ಅವರ ಪರವಾನಗಿಯನ್ನು ರದ್ದುಗೊಳಿಸಿದ್ದಾರೆ. ಅಲ್ಲದೇ ಆಹಾರ ಸುರಕ್ಷತಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಲವು ಮಾಧ್ಯಮ ವರದಿಗಳು ತಿಳಿಸಿವೆ.

ಆದ್ದರಿಂದ, ಹರ್ಬಲ್ ಮೈಸೂರ್‌ ಪಾಕ್ ಕೊರೊನಾ ಸೋಂಕನ್ನು ಗುಣಪಡಿಸುತ್ತದೆ ಎಂಬ ಹೇಳಿಕೆ ಸುಳ್ಳಾಗಿದೆ.


ಇದನ್ನೂ ಓದಿ: ಕೊರೊನಾ ಲಸಿಕೆ ಏನಿದ್ದರೂ ಮುಂದಿನ ವರ್ಷಕ್ಕೆ ಮಾತ್ರ ಸಾಧ್ಯ : ಆರೋಗ್ಯ ತಜ್ಞ ಆಶಿಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...