Homeಕರೋನಾ ತಲ್ಲಣಫ್ಯಾಕ್ಟ್ ಚೆಕ್: ಹರ್ಬಲ್ ಮೈಸೂರ್ ಪಾಕ್ ಕೊರೊನಾವನ್ನು ಗುಣಪಡಿಸಬಹುದೆ? ನಿಜವೇನು?

ಫ್ಯಾಕ್ಟ್ ಚೆಕ್: ಹರ್ಬಲ್ ಮೈಸೂರ್ ಪಾಕ್ ಕೊರೊನಾವನ್ನು ಗುಣಪಡಿಸಬಹುದೆ? ನಿಜವೇನು?

ಮೈಸೂರ್ ಪಾಕ್‌ನಲ್ಲಿ 19 ಬಗೆಯ ವಿವಿಧ ಗಿಡಮೂಲಿಕೆಗಳಿವೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಕೊರೊನಾ ವೈರಸ್ ಅನ್ನು ಕೊಲ್ಲುತ್ತದೆ. ಸೋಂಕನ್ನು ತೊಡೆದು ಹಾಕಲು ಒಂದು ದಿನದಲ್ಲಿ ಮೈಸೂರ್ ಪಾಕಿನ ನಾಲ್ಕು ತುಂಡುಗಳನ್ನು ತಿನ್ನಬೇಕು ಎಂದು ಕರಪತ್ರ ಹೇಳಿದೆ.

- Advertisement -
- Advertisement -

“ಹರ್ಬಲ್ ಮೈಸೂರ್ ಪಾಕ್ ಮೂಲಕ  ಕೊರೊನಾ ರೋಗಿಗಳು ಒಂದೇ ದಿನದಲ್ಲಿ ಗುಣಮುಖರಾಗುತ್ತಾರೆ. ಹೌದು, ಇದು ಒಂದು ಪವಾಡ! ಚಿನ್ನಿಯಂಪಾಳಯಂ ಮತ್ತು ವೆಳ್ಳಲೂರಿನಲ್ಲಿ ಇಂತಹ ಘಟನೆ ಸಂಭವಿಸಿದೆ” ಎಂದು ಹೇಳುವ ತಮಿಳು ಕರಪತ್ರವೊಂದು ವೈರಲ್ ಆಗಿದೆ.

ಕೊಯಮತ್ತೂರಿನಲ್ಲಿರುವ ಸಿಹಿತಿನಿಸು ಅಂಗಡಿಯೊಂದರ ಮಾಲೀಕರು ಮುದ್ರಿಸಿರುವ ತಮಿಳು ಭಾಷೆಯ ಕರಪತ್ರದಲ್ಲಿ “ತನ್ನ ಅಂಗಡಿಯಲ್ಲಿ ತಯಾರಿಸಿದ ಹರ್ಬಲ್ ಮೈಸೂರ್ ಪಾಕ್ ತಿನ್ನುವುದರಿಂದ (ದಕ್ಷಿಣ ಭಾರತದ ಸಿಹಿತಿನಿಸು) ಕೇವಲ ಒಂದು ದಿನದಲ್ಲಿ ಕೊರೊನಾ ಸೋಂಕನ್ನು ಗುಣಪಡಿಸಬಹುದು. ತನ್ನ ಅಜ್ಜ ಸಿದ್ಧೌ‍‍ಷದ ತಜ್ಞ ಹೇಳಿಕೊಟ್ಟ ಪಾಕವಿಧಾನದ ಪ್ರಕಾರ ಈ ಸಿಹಿತಿಂಡಿ ತಯಾರಿಸಲ್ಪಟ್ಟಿದೆ” ಎಂದು ಬರೆಯಲಾಗಿದೆ.

 

ಮೈಸೂರ್ ಪಾಕ್‌ನಲ್ಲಿ 19 ಬಗೆಯ ವಿವಿಧ ಗಿಡಮೂಲಿಕೆಗಳಿವೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಕೊರೊನಾ ವೈರಸ್ ಅನ್ನು ಕೊಲ್ಲುತ್ತದೆ. ಸೋಂಕನ್ನು ತೊಡೆದು ಹಾಕಲು ಒಂದು ದಿನದಲ್ಲಿ ಮೈಸೂರ್ ಪಾಕಿನ ನಾಲ್ಕು ತುಂಡುಗಳನ್ನು ತಿನ್ನಬೇಕು ಎಂದು ಕರಪತ್ರ ಹೇಳಿದೆ.

ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಕರಪತ್ರವನ್ನು ಅಂಗಡಿಯ ವಿಳಾಸ ಮತ್ತು ವಿವರಗಳೊಂದಿಗೆ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್ ಚೆಕ್:

“ಹರ್ಬಲ್ ಮೈಸೂರ್‌ ಪಾಕ್ ಕೊರೊನಾ ವೈರಸ್ ಸೋಂಕನ್ನು ಗುಣಪಡಿಸುತ್ತದೆ” ಎಂಬ ಕೀ ಪದಗಳಿಂದ ಹುಡುಕಿದಾಗ ಹಲವು ಪತ್ರಿಕಾ ವರದಿಗಳು ಕಾಣಸಿಗುತ್ತವೆ. Outlook.comನ ವರದಿಯ ಪ್ರಕಾರ, ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಕೂಡಲೇ ಕೊಯಮತ್ತೂರಿನ ಚಿನ್ನಿಯಂಪಾಲಯಂನ ಅಂಗಡಿಯ ಮೇಲೆ ದಾಳಿ ನಡೆಸಿದೆ. ನಿಯೋಜಿತ ಅಧಿಕಾರಿ ಉತ್ಪನ್ನವನ್ನು FSSAI ಪ್ರಮಾಣೀಕರಿಸಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಇದು ಕೊರೊನಾವನ್ನು ಗುಣಪಡಿಸುತ್ತದೆ ಎಂಬುದು ಅಪ್ಪಟ ಸುಳ್ಳು ಎಂದು ತಿಳಿಸಿದ್ದಾರೆ.

“ಈ ಕರಪತ್ರದ ವಿಚಾರ ಸ್ಥಳೀಯ ಆರೋಗ್ಯ ಅಧಿಕಾರಿಗಳಿಗೆ ತಲುಪಿ, ಆರೋಗ್ಯ ಸೇವೆಗಳ ಉಪನಿರ್ದೇಶಕ ಜಿ. ರಮೇಶ್ ಕುಮಾರ್ ಇದು ಸಾಂಕ್ರಾಮಿಕ ರೋಗ ಕಾಯ್ದೆ, 1897ರ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಹೇಳಿದ್ದಾರೆ. ಹರ್ಬಲ್ ಮೈಸೂರು ಪಾಕ್, ಕೊರೊನಾ ಸೋಂಕಿತ ರೋಗಿಗಳನ್ನು ಗುಣಪಡಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿ ಅಂಗಡಿ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಂದು ಬಣ್ಣದ ಮೈಸೂರ್‌ ಪಾಕ್‌ನ ಪ್ರತಿ 50 ಗ್ರಾಂ ತುಂಡನ್ನು 50 ರೂಗೆ ಮತ್ತು ಒಂದು ಕೆಜಿಗೆ 800 ರೂ.ಗೆ ಮಾರಾಟ ಮಾಡಲಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ 120 ಕೆಜಿ ಹರ್ಬಲ್ ಮೈಸೂರ್‌ ಪಾಕ್‌ಅನ್ನು ವಶಪಡಿಸಿಕೊಂಡು ಅಂಗಡಿಯನ್ನು ಸೀಲ್ ಮಾಡಿ ಅವರ ಪರವಾನಗಿಯನ್ನು ರದ್ದುಗೊಳಿಸಿದ್ದಾರೆ. ಅಲ್ಲದೇ ಆಹಾರ ಸುರಕ್ಷತಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಲವು ಮಾಧ್ಯಮ ವರದಿಗಳು ತಿಳಿಸಿವೆ.

ಆದ್ದರಿಂದ, ಹರ್ಬಲ್ ಮೈಸೂರ್‌ ಪಾಕ್ ಕೊರೊನಾ ಸೋಂಕನ್ನು ಗುಣಪಡಿಸುತ್ತದೆ ಎಂಬ ಹೇಳಿಕೆ ಸುಳ್ಳಾಗಿದೆ.


ಇದನ್ನೂ ಓದಿ: ಕೊರೊನಾ ಲಸಿಕೆ ಏನಿದ್ದರೂ ಮುಂದಿನ ವರ್ಷಕ್ಕೆ ಮಾತ್ರ ಸಾಧ್ಯ : ಆರೋಗ್ಯ ತಜ್ಞ ಆಶಿಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...