Homeಕರೋನಾ ತಲ್ಲಣಫ್ಯಾಕ್ಟ್ ಚೆಕ್: ಹರ್ಬಲ್ ಮೈಸೂರ್ ಪಾಕ್ ಕೊರೊನಾವನ್ನು ಗುಣಪಡಿಸಬಹುದೆ? ನಿಜವೇನು?

ಫ್ಯಾಕ್ಟ್ ಚೆಕ್: ಹರ್ಬಲ್ ಮೈಸೂರ್ ಪಾಕ್ ಕೊರೊನಾವನ್ನು ಗುಣಪಡಿಸಬಹುದೆ? ನಿಜವೇನು?

ಮೈಸೂರ್ ಪಾಕ್‌ನಲ್ಲಿ 19 ಬಗೆಯ ವಿವಿಧ ಗಿಡಮೂಲಿಕೆಗಳಿವೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಕೊರೊನಾ ವೈರಸ್ ಅನ್ನು ಕೊಲ್ಲುತ್ತದೆ. ಸೋಂಕನ್ನು ತೊಡೆದು ಹಾಕಲು ಒಂದು ದಿನದಲ್ಲಿ ಮೈಸೂರ್ ಪಾಕಿನ ನಾಲ್ಕು ತುಂಡುಗಳನ್ನು ತಿನ್ನಬೇಕು ಎಂದು ಕರಪತ್ರ ಹೇಳಿದೆ.

- Advertisement -
- Advertisement -

“ಹರ್ಬಲ್ ಮೈಸೂರ್ ಪಾಕ್ ಮೂಲಕ  ಕೊರೊನಾ ರೋಗಿಗಳು ಒಂದೇ ದಿನದಲ್ಲಿ ಗುಣಮುಖರಾಗುತ್ತಾರೆ. ಹೌದು, ಇದು ಒಂದು ಪವಾಡ! ಚಿನ್ನಿಯಂಪಾಳಯಂ ಮತ್ತು ವೆಳ್ಳಲೂರಿನಲ್ಲಿ ಇಂತಹ ಘಟನೆ ಸಂಭವಿಸಿದೆ” ಎಂದು ಹೇಳುವ ತಮಿಳು ಕರಪತ್ರವೊಂದು ವೈರಲ್ ಆಗಿದೆ.

ಕೊಯಮತ್ತೂರಿನಲ್ಲಿರುವ ಸಿಹಿತಿನಿಸು ಅಂಗಡಿಯೊಂದರ ಮಾಲೀಕರು ಮುದ್ರಿಸಿರುವ ತಮಿಳು ಭಾಷೆಯ ಕರಪತ್ರದಲ್ಲಿ “ತನ್ನ ಅಂಗಡಿಯಲ್ಲಿ ತಯಾರಿಸಿದ ಹರ್ಬಲ್ ಮೈಸೂರ್ ಪಾಕ್ ತಿನ್ನುವುದರಿಂದ (ದಕ್ಷಿಣ ಭಾರತದ ಸಿಹಿತಿನಿಸು) ಕೇವಲ ಒಂದು ದಿನದಲ್ಲಿ ಕೊರೊನಾ ಸೋಂಕನ್ನು ಗುಣಪಡಿಸಬಹುದು. ತನ್ನ ಅಜ್ಜ ಸಿದ್ಧೌ‍‍ಷದ ತಜ್ಞ ಹೇಳಿಕೊಟ್ಟ ಪಾಕವಿಧಾನದ ಪ್ರಕಾರ ಈ ಸಿಹಿತಿಂಡಿ ತಯಾರಿಸಲ್ಪಟ್ಟಿದೆ” ಎಂದು ಬರೆಯಲಾಗಿದೆ.

 

ಮೈಸೂರ್ ಪಾಕ್‌ನಲ್ಲಿ 19 ಬಗೆಯ ವಿವಿಧ ಗಿಡಮೂಲಿಕೆಗಳಿವೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಕೊರೊನಾ ವೈರಸ್ ಅನ್ನು ಕೊಲ್ಲುತ್ತದೆ. ಸೋಂಕನ್ನು ತೊಡೆದು ಹಾಕಲು ಒಂದು ದಿನದಲ್ಲಿ ಮೈಸೂರ್ ಪಾಕಿನ ನಾಲ್ಕು ತುಂಡುಗಳನ್ನು ತಿನ್ನಬೇಕು ಎಂದು ಕರಪತ್ರ ಹೇಳಿದೆ.

ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಕರಪತ್ರವನ್ನು ಅಂಗಡಿಯ ವಿಳಾಸ ಮತ್ತು ವಿವರಗಳೊಂದಿಗೆ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್ ಚೆಕ್:

“ಹರ್ಬಲ್ ಮೈಸೂರ್‌ ಪಾಕ್ ಕೊರೊನಾ ವೈರಸ್ ಸೋಂಕನ್ನು ಗುಣಪಡಿಸುತ್ತದೆ” ಎಂಬ ಕೀ ಪದಗಳಿಂದ ಹುಡುಕಿದಾಗ ಹಲವು ಪತ್ರಿಕಾ ವರದಿಗಳು ಕಾಣಸಿಗುತ್ತವೆ. Outlook.comನ ವರದಿಯ ಪ್ರಕಾರ, ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಕೂಡಲೇ ಕೊಯಮತ್ತೂರಿನ ಚಿನ್ನಿಯಂಪಾಲಯಂನ ಅಂಗಡಿಯ ಮೇಲೆ ದಾಳಿ ನಡೆಸಿದೆ. ನಿಯೋಜಿತ ಅಧಿಕಾರಿ ಉತ್ಪನ್ನವನ್ನು FSSAI ಪ್ರಮಾಣೀಕರಿಸಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಇದು ಕೊರೊನಾವನ್ನು ಗುಣಪಡಿಸುತ್ತದೆ ಎಂಬುದು ಅಪ್ಪಟ ಸುಳ್ಳು ಎಂದು ತಿಳಿಸಿದ್ದಾರೆ.

“ಈ ಕರಪತ್ರದ ವಿಚಾರ ಸ್ಥಳೀಯ ಆರೋಗ್ಯ ಅಧಿಕಾರಿಗಳಿಗೆ ತಲುಪಿ, ಆರೋಗ್ಯ ಸೇವೆಗಳ ಉಪನಿರ್ದೇಶಕ ಜಿ. ರಮೇಶ್ ಕುಮಾರ್ ಇದು ಸಾಂಕ್ರಾಮಿಕ ರೋಗ ಕಾಯ್ದೆ, 1897ರ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಹೇಳಿದ್ದಾರೆ. ಹರ್ಬಲ್ ಮೈಸೂರು ಪಾಕ್, ಕೊರೊನಾ ಸೋಂಕಿತ ರೋಗಿಗಳನ್ನು ಗುಣಪಡಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿ ಅಂಗಡಿ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಂದು ಬಣ್ಣದ ಮೈಸೂರ್‌ ಪಾಕ್‌ನ ಪ್ರತಿ 50 ಗ್ರಾಂ ತುಂಡನ್ನು 50 ರೂಗೆ ಮತ್ತು ಒಂದು ಕೆಜಿಗೆ 800 ರೂ.ಗೆ ಮಾರಾಟ ಮಾಡಲಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ 120 ಕೆಜಿ ಹರ್ಬಲ್ ಮೈಸೂರ್‌ ಪಾಕ್‌ಅನ್ನು ವಶಪಡಿಸಿಕೊಂಡು ಅಂಗಡಿಯನ್ನು ಸೀಲ್ ಮಾಡಿ ಅವರ ಪರವಾನಗಿಯನ್ನು ರದ್ದುಗೊಳಿಸಿದ್ದಾರೆ. ಅಲ್ಲದೇ ಆಹಾರ ಸುರಕ್ಷತಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಲವು ಮಾಧ್ಯಮ ವರದಿಗಳು ತಿಳಿಸಿವೆ.

ಆದ್ದರಿಂದ, ಹರ್ಬಲ್ ಮೈಸೂರ್‌ ಪಾಕ್ ಕೊರೊನಾ ಸೋಂಕನ್ನು ಗುಣಪಡಿಸುತ್ತದೆ ಎಂಬ ಹೇಳಿಕೆ ಸುಳ್ಳಾಗಿದೆ.


ಇದನ್ನೂ ಓದಿ: ಕೊರೊನಾ ಲಸಿಕೆ ಏನಿದ್ದರೂ ಮುಂದಿನ ವರ್ಷಕ್ಕೆ ಮಾತ್ರ ಸಾಧ್ಯ : ಆರೋಗ್ಯ ತಜ್ಞ ಆಶಿಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...