Homeಕರೋನಾ ತಲ್ಲಣಫ್ಯಾಕ್ಟ್ ಚೆಕ್: ಹರ್ಬಲ್ ಮೈಸೂರ್ ಪಾಕ್ ಕೊರೊನಾವನ್ನು ಗುಣಪಡಿಸಬಹುದೆ? ನಿಜವೇನು?

ಫ್ಯಾಕ್ಟ್ ಚೆಕ್: ಹರ್ಬಲ್ ಮೈಸೂರ್ ಪಾಕ್ ಕೊರೊನಾವನ್ನು ಗುಣಪಡಿಸಬಹುದೆ? ನಿಜವೇನು?

ಮೈಸೂರ್ ಪಾಕ್‌ನಲ್ಲಿ 19 ಬಗೆಯ ವಿವಿಧ ಗಿಡಮೂಲಿಕೆಗಳಿವೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಕೊರೊನಾ ವೈರಸ್ ಅನ್ನು ಕೊಲ್ಲುತ್ತದೆ. ಸೋಂಕನ್ನು ತೊಡೆದು ಹಾಕಲು ಒಂದು ದಿನದಲ್ಲಿ ಮೈಸೂರ್ ಪಾಕಿನ ನಾಲ್ಕು ತುಂಡುಗಳನ್ನು ತಿನ್ನಬೇಕು ಎಂದು ಕರಪತ್ರ ಹೇಳಿದೆ.

- Advertisement -
- Advertisement -

“ಹರ್ಬಲ್ ಮೈಸೂರ್ ಪಾಕ್ ಮೂಲಕ  ಕೊರೊನಾ ರೋಗಿಗಳು ಒಂದೇ ದಿನದಲ್ಲಿ ಗುಣಮುಖರಾಗುತ್ತಾರೆ. ಹೌದು, ಇದು ಒಂದು ಪವಾಡ! ಚಿನ್ನಿಯಂಪಾಳಯಂ ಮತ್ತು ವೆಳ್ಳಲೂರಿನಲ್ಲಿ ಇಂತಹ ಘಟನೆ ಸಂಭವಿಸಿದೆ” ಎಂದು ಹೇಳುವ ತಮಿಳು ಕರಪತ್ರವೊಂದು ವೈರಲ್ ಆಗಿದೆ.

ಕೊಯಮತ್ತೂರಿನಲ್ಲಿರುವ ಸಿಹಿತಿನಿಸು ಅಂಗಡಿಯೊಂದರ ಮಾಲೀಕರು ಮುದ್ರಿಸಿರುವ ತಮಿಳು ಭಾಷೆಯ ಕರಪತ್ರದಲ್ಲಿ “ತನ್ನ ಅಂಗಡಿಯಲ್ಲಿ ತಯಾರಿಸಿದ ಹರ್ಬಲ್ ಮೈಸೂರ್ ಪಾಕ್ ತಿನ್ನುವುದರಿಂದ (ದಕ್ಷಿಣ ಭಾರತದ ಸಿಹಿತಿನಿಸು) ಕೇವಲ ಒಂದು ದಿನದಲ್ಲಿ ಕೊರೊನಾ ಸೋಂಕನ್ನು ಗುಣಪಡಿಸಬಹುದು. ತನ್ನ ಅಜ್ಜ ಸಿದ್ಧೌ‍‍ಷದ ತಜ್ಞ ಹೇಳಿಕೊಟ್ಟ ಪಾಕವಿಧಾನದ ಪ್ರಕಾರ ಈ ಸಿಹಿತಿಂಡಿ ತಯಾರಿಸಲ್ಪಟ್ಟಿದೆ” ಎಂದು ಬರೆಯಲಾಗಿದೆ.

 

ಮೈಸೂರ್ ಪಾಕ್‌ನಲ್ಲಿ 19 ಬಗೆಯ ವಿವಿಧ ಗಿಡಮೂಲಿಕೆಗಳಿವೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಕೊರೊನಾ ವೈರಸ್ ಅನ್ನು ಕೊಲ್ಲುತ್ತದೆ. ಸೋಂಕನ್ನು ತೊಡೆದು ಹಾಕಲು ಒಂದು ದಿನದಲ್ಲಿ ಮೈಸೂರ್ ಪಾಕಿನ ನಾಲ್ಕು ತುಂಡುಗಳನ್ನು ತಿನ್ನಬೇಕು ಎಂದು ಕರಪತ್ರ ಹೇಳಿದೆ.

ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಕರಪತ್ರವನ್ನು ಅಂಗಡಿಯ ವಿಳಾಸ ಮತ್ತು ವಿವರಗಳೊಂದಿಗೆ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್ ಚೆಕ್:

“ಹರ್ಬಲ್ ಮೈಸೂರ್‌ ಪಾಕ್ ಕೊರೊನಾ ವೈರಸ್ ಸೋಂಕನ್ನು ಗುಣಪಡಿಸುತ್ತದೆ” ಎಂಬ ಕೀ ಪದಗಳಿಂದ ಹುಡುಕಿದಾಗ ಹಲವು ಪತ್ರಿಕಾ ವರದಿಗಳು ಕಾಣಸಿಗುತ್ತವೆ. Outlook.comನ ವರದಿಯ ಪ್ರಕಾರ, ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಕೂಡಲೇ ಕೊಯಮತ್ತೂರಿನ ಚಿನ್ನಿಯಂಪಾಲಯಂನ ಅಂಗಡಿಯ ಮೇಲೆ ದಾಳಿ ನಡೆಸಿದೆ. ನಿಯೋಜಿತ ಅಧಿಕಾರಿ ಉತ್ಪನ್ನವನ್ನು FSSAI ಪ್ರಮಾಣೀಕರಿಸಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಇದು ಕೊರೊನಾವನ್ನು ಗುಣಪಡಿಸುತ್ತದೆ ಎಂಬುದು ಅಪ್ಪಟ ಸುಳ್ಳು ಎಂದು ತಿಳಿಸಿದ್ದಾರೆ.

“ಈ ಕರಪತ್ರದ ವಿಚಾರ ಸ್ಥಳೀಯ ಆರೋಗ್ಯ ಅಧಿಕಾರಿಗಳಿಗೆ ತಲುಪಿ, ಆರೋಗ್ಯ ಸೇವೆಗಳ ಉಪನಿರ್ದೇಶಕ ಜಿ. ರಮೇಶ್ ಕುಮಾರ್ ಇದು ಸಾಂಕ್ರಾಮಿಕ ರೋಗ ಕಾಯ್ದೆ, 1897ರ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಹೇಳಿದ್ದಾರೆ. ಹರ್ಬಲ್ ಮೈಸೂರು ಪಾಕ್, ಕೊರೊನಾ ಸೋಂಕಿತ ರೋಗಿಗಳನ್ನು ಗುಣಪಡಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿ ಅಂಗಡಿ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಂದು ಬಣ್ಣದ ಮೈಸೂರ್‌ ಪಾಕ್‌ನ ಪ್ರತಿ 50 ಗ್ರಾಂ ತುಂಡನ್ನು 50 ರೂಗೆ ಮತ್ತು ಒಂದು ಕೆಜಿಗೆ 800 ರೂ.ಗೆ ಮಾರಾಟ ಮಾಡಲಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ 120 ಕೆಜಿ ಹರ್ಬಲ್ ಮೈಸೂರ್‌ ಪಾಕ್‌ಅನ್ನು ವಶಪಡಿಸಿಕೊಂಡು ಅಂಗಡಿಯನ್ನು ಸೀಲ್ ಮಾಡಿ ಅವರ ಪರವಾನಗಿಯನ್ನು ರದ್ದುಗೊಳಿಸಿದ್ದಾರೆ. ಅಲ್ಲದೇ ಆಹಾರ ಸುರಕ್ಷತಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಲವು ಮಾಧ್ಯಮ ವರದಿಗಳು ತಿಳಿಸಿವೆ.

ಆದ್ದರಿಂದ, ಹರ್ಬಲ್ ಮೈಸೂರ್‌ ಪಾಕ್ ಕೊರೊನಾ ಸೋಂಕನ್ನು ಗುಣಪಡಿಸುತ್ತದೆ ಎಂಬ ಹೇಳಿಕೆ ಸುಳ್ಳಾಗಿದೆ.


ಇದನ್ನೂ ಓದಿ: ಕೊರೊನಾ ಲಸಿಕೆ ಏನಿದ್ದರೂ ಮುಂದಿನ ವರ್ಷಕ್ಕೆ ಮಾತ್ರ ಸಾಧ್ಯ : ಆರೋಗ್ಯ ತಜ್ಞ ಆಶಿಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...