Homeಫ್ಯಾಕ್ಟ್‌ಚೆಕ್FACT CHECK : ಮದರಸದಲ್ಲಿ ಬಾಲಕನನ್ನು ನೇತು ಹಾಕಿ ಹಿಂಸಿಸುತ್ತಿರುವ ವಿಡಿಯೋ ಭಾರತದ್ದಲ್ಲ

FACT CHECK : ಮದರಸದಲ್ಲಿ ಬಾಲಕನನ್ನು ನೇತು ಹಾಕಿ ಹಿಂಸಿಸುತ್ತಿರುವ ವಿಡಿಯೋ ಭಾರತದ್ದಲ್ಲ

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಅದರಲ್ಲಿ ನೀಲಿ ಬಣ್ಣದ ಕುರ್ತಾ, ಪೈಜಾಮ ತೊಟ್ಟಿದ್ದ ಮಗುವಿನ ಕಾಲುಗಳನ್ನು ಹಗ್ಗದಿಂದ ಕಟ್ಟಿ, ತಲೆಕೆಳಗಾಗಿ ನೇತು ಹಾಕಲಾಗಿದೆ. ಮುಸ್ಲಿಂ ಪ್ರಾರ್ಥನೆಯ ಟೋಪಿಯನ್ನು ಧರಿಸಿರುವ ಹಲವಾರು ಹುಡುಗರು ಕುರಾನ್ ಓದುವುದನ್ನು ಕೂಡ ಈ ವಿಡಿಯೋದಲ್ಲಿ ಕಾಣಬಹುದಾಗಿದೆ.

ಭಾರತೀಯ ಮದರಸದಲ್ಲಿ ಬಾಲಕಿಯನ್ನು ಶಿಕ್ಷಿಸುತ್ತಿರುವ ರೀತಿಯನ್ನು ನೋಡಿದರೆ, ಅಲ್ಲಿನ ಕ್ರೂರತೆ ಏನು ಎಂಬುವುದು ಅರ್ಥವಾಗುತ್ತದೆ” ಎಂದು ಪ್ರತಿಪಾದಿಸಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಇದೇ ವಿಡಿಯೋವನ್ನು ಎಕ್ಸ್‌ ಖಾತೆಯ ಬಳಕೆದಾರರೊಬ್ಬರು, ಪೋಸ್ಟ್‌ ಮಾಡಿದ್ದು “ಇದು ಯಾವ ಶಾಲೆ ಎಂದು ನಾನು ನಿಮಗೆ ಹೇಳಬೇಕಾಗಿಲ್ಲ. ಆದರೆ ಚಿಕ್ಕ ಹುಡುಗಿಯನ್ನು ಹೀಗೆ ತಲೆಕೆಳಗಾಗಿ ಕಟ್ಟಿ ಹಾಕಿ ಹೊಡೆದಾಗ, ನಮ್ಮ ದೇಶದಲ್ಲಿ ಕಾನೂನಿನ ಭಯವಿದೆಯೇ? ಈ ತಾಲಿಬಾನಿ ಶಿಕ್ಷೆಗೆ ಕಾರಣವೆಂದರೆ, ಅವಳು ಸ್ವರ್ಗೀಯ ಪುಸ್ತಕವನ್ನು ಅರ್ಥಮಾಡಿಕೊಳ್ಳಲಿಲ್ಲ. ಅಂತಹ ಶಾಲೆಗಳನ್ನು ಭಾರತದಾತ್ಯಂತ ಸಂಪೂರ್ಣವಾಗಿ ನಿಷೇಧಿಸಬೇಕು. ಮತ್ತು ಚಿಕ್ಕ ಹುಡುಗಿಯನ್ನು ಈ ರೀತಿ ಹೊಡೆಯಲು ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ನಾನು ಆಗ್ರಹಿಸುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ. ಹೀಗೆ ವ್ಯಾಪಕವಾಗಿ ಹಲವಾರು ಮಂದಿ ವಿವಿಧ ಬರಹಗಳೊಂದಿಗೆ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

ಹಾಗಿದ್ದರೆ ಪೊಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಲಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಪಾಕಿಸ್ತಾನದ ಸುದ್ದಿ ವಾಹಿನಿಯಾದ ಜಿಯೋ ನ್ಯೂಸ್‌ ಸುದ್ದಿ 30 ಜೂನ್‌ 2019ರಂದು “Rawalpindi ‘qari’ who assaulted student sent on 14-day judicial remand” ಎಂಬ ಶೀರ್ಷಿಕೆಯ ಅಡಿಯಲ್ಲಿ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ಈ ವರದಿಯ ಪ್ರಕಾರ  ಈ ಘಟನೆ ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆದಿದ್ದು, ಬಾಲಕಿಯನ್ನು ತಲೆಕೆಳಗಾಗಿ ನೇತು ಹಾಕಲಾಗಿದೆ ಎಂಬುದು ಸುಳ್ಳು. ಇಲ್ಲಿ ಸಂತ್ರಸ್ಥರಾಗಿರುವುದು ಬಾಲಕ.. ಮದರಸದ  ವಿದ್ಯಾರ್ಥಿಯನ್ನು ತಲೆಕೆಳಗಾಗಿ ಕಟ್ಟಿಹಾಕಿ ಹಲ್ಲೆ ನಡೆಸಿದ ಖಾರಿ ನೂರ್ ಮುಹಮ್ಮದ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಈ ವರದಿಯಲ್ಲಿನ ಆಘಾತಕಾರಿ ಅಂಶ ಎಂದರೆ ಸಂತ್ರಸ್ಥ ಬಾಲಕ ಮತ್ತು ಆತನ ತಂದೆ ಪೊಲೀಸ್‌ ಠಾಣೆಯಲ್ಲಿ ಖಾರಿ ನಿರಾಪರಾಧಿ, ಇದು ತರಗತಿ ಮುಗಿದ ನಂತರ ತಮಾಷೆಗಾಗಿ ಮಾಡಿದ ವಿಡಿಯೋ ಎಂದು ಹೇಳಿಕೆಯನ್ನು ನೀಡಿದ್ದಾರೆ ಎಂಬ ಅಂಶವನ್ನು ಉಲ್ಲೇಖಿಸಲಾಗಿದೆ. ಇನ್ನು ಇದೇ ಘಟನೆಗೆ ಸಂಬಂಧ ಪಟ್ಟಂತೆ ಗಲ್ಫ್‌ ಟುಡೆ ಮತ್ತು ಆರಿ ನ್ಯೂಸ್‌ ಕೂಡ ಈ ಬಗ್ಗೆ ವರದಿಯನ್ನು ಮಾಡಿವೆ.

ಒಟ್ಟಾರೆಯಾಗಿ ಹೇಳುವುದಾದರೆ, ವೈಲರ್‌ ವಿಡಿಯೋದಲ್ಲಿರುವುದು ವಿದ್ಯಾರ್ಥಿನಿ ಅಲ್ಲ ಆತ ಬಾಲಕ ಮತ್ತು ಆತನನ್ನು ಭಾರತದ ಮದರಾಸದಲ್ಲಿ ತಲೆಕೆಳಗಾಗಿ ನೇತಹಾಕಲಾಗಿದೆ ಎಂಬುದು ಸುಳ್ಳು, ಈ ವೈರಲ್‌ ವಿಡಿಯೋದಲ್ಲಿನ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಈ ವಿಡಿಯೋಗೂ ಭಾರತಕ್ಕೂ ಯಾವುದೇ ರೀತಿಯಾದ ಸಂಬಂಧವಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ ಹಳೆಯ ಫೋಟೊ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...