Homeಫ್ಯಾಕ್ಟ್‌ಚೆಕ್FACT CHECK : ಮದರಸದಲ್ಲಿ ಬಾಲಕನನ್ನು ನೇತು ಹಾಕಿ ಹಿಂಸಿಸುತ್ತಿರುವ ವಿಡಿಯೋ ಭಾರತದ್ದಲ್ಲ

FACT CHECK : ಮದರಸದಲ್ಲಿ ಬಾಲಕನನ್ನು ನೇತು ಹಾಕಿ ಹಿಂಸಿಸುತ್ತಿರುವ ವಿಡಿಯೋ ಭಾರತದ್ದಲ್ಲ

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಅದರಲ್ಲಿ ನೀಲಿ ಬಣ್ಣದ ಕುರ್ತಾ, ಪೈಜಾಮ ತೊಟ್ಟಿದ್ದ ಮಗುವಿನ ಕಾಲುಗಳನ್ನು ಹಗ್ಗದಿಂದ ಕಟ್ಟಿ, ತಲೆಕೆಳಗಾಗಿ ನೇತು ಹಾಕಲಾಗಿದೆ. ಮುಸ್ಲಿಂ ಪ್ರಾರ್ಥನೆಯ ಟೋಪಿಯನ್ನು ಧರಿಸಿರುವ ಹಲವಾರು ಹುಡುಗರು ಕುರಾನ್ ಓದುವುದನ್ನು ಕೂಡ ಈ ವಿಡಿಯೋದಲ್ಲಿ ಕಾಣಬಹುದಾಗಿದೆ.

ಭಾರತೀಯ ಮದರಸದಲ್ಲಿ ಬಾಲಕಿಯನ್ನು ಶಿಕ್ಷಿಸುತ್ತಿರುವ ರೀತಿಯನ್ನು ನೋಡಿದರೆ, ಅಲ್ಲಿನ ಕ್ರೂರತೆ ಏನು ಎಂಬುವುದು ಅರ್ಥವಾಗುತ್ತದೆ” ಎಂದು ಪ್ರತಿಪಾದಿಸಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಇದೇ ವಿಡಿಯೋವನ್ನು ಎಕ್ಸ್‌ ಖಾತೆಯ ಬಳಕೆದಾರರೊಬ್ಬರು, ಪೋಸ್ಟ್‌ ಮಾಡಿದ್ದು “ಇದು ಯಾವ ಶಾಲೆ ಎಂದು ನಾನು ನಿಮಗೆ ಹೇಳಬೇಕಾಗಿಲ್ಲ. ಆದರೆ ಚಿಕ್ಕ ಹುಡುಗಿಯನ್ನು ಹೀಗೆ ತಲೆಕೆಳಗಾಗಿ ಕಟ್ಟಿ ಹಾಕಿ ಹೊಡೆದಾಗ, ನಮ್ಮ ದೇಶದಲ್ಲಿ ಕಾನೂನಿನ ಭಯವಿದೆಯೇ? ಈ ತಾಲಿಬಾನಿ ಶಿಕ್ಷೆಗೆ ಕಾರಣವೆಂದರೆ, ಅವಳು ಸ್ವರ್ಗೀಯ ಪುಸ್ತಕವನ್ನು ಅರ್ಥಮಾಡಿಕೊಳ್ಳಲಿಲ್ಲ. ಅಂತಹ ಶಾಲೆಗಳನ್ನು ಭಾರತದಾತ್ಯಂತ ಸಂಪೂರ್ಣವಾಗಿ ನಿಷೇಧಿಸಬೇಕು. ಮತ್ತು ಚಿಕ್ಕ ಹುಡುಗಿಯನ್ನು ಈ ರೀತಿ ಹೊಡೆಯಲು ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ನಾನು ಆಗ್ರಹಿಸುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ. ಹೀಗೆ ವ್ಯಾಪಕವಾಗಿ ಹಲವಾರು ಮಂದಿ ವಿವಿಧ ಬರಹಗಳೊಂದಿಗೆ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

ಹಾಗಿದ್ದರೆ ಪೊಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಲಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಪಾಕಿಸ್ತಾನದ ಸುದ್ದಿ ವಾಹಿನಿಯಾದ ಜಿಯೋ ನ್ಯೂಸ್‌ ಸುದ್ದಿ 30 ಜೂನ್‌ 2019ರಂದು “Rawalpindi ‘qari’ who assaulted student sent on 14-day judicial remand” ಎಂಬ ಶೀರ್ಷಿಕೆಯ ಅಡಿಯಲ್ಲಿ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ಈ ವರದಿಯ ಪ್ರಕಾರ  ಈ ಘಟನೆ ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆದಿದ್ದು, ಬಾಲಕಿಯನ್ನು ತಲೆಕೆಳಗಾಗಿ ನೇತು ಹಾಕಲಾಗಿದೆ ಎಂಬುದು ಸುಳ್ಳು. ಇಲ್ಲಿ ಸಂತ್ರಸ್ಥರಾಗಿರುವುದು ಬಾಲಕ.. ಮದರಸದ  ವಿದ್ಯಾರ್ಥಿಯನ್ನು ತಲೆಕೆಳಗಾಗಿ ಕಟ್ಟಿಹಾಕಿ ಹಲ್ಲೆ ನಡೆಸಿದ ಖಾರಿ ನೂರ್ ಮುಹಮ್ಮದ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಈ ವರದಿಯಲ್ಲಿನ ಆಘಾತಕಾರಿ ಅಂಶ ಎಂದರೆ ಸಂತ್ರಸ್ಥ ಬಾಲಕ ಮತ್ತು ಆತನ ತಂದೆ ಪೊಲೀಸ್‌ ಠಾಣೆಯಲ್ಲಿ ಖಾರಿ ನಿರಾಪರಾಧಿ, ಇದು ತರಗತಿ ಮುಗಿದ ನಂತರ ತಮಾಷೆಗಾಗಿ ಮಾಡಿದ ವಿಡಿಯೋ ಎಂದು ಹೇಳಿಕೆಯನ್ನು ನೀಡಿದ್ದಾರೆ ಎಂಬ ಅಂಶವನ್ನು ಉಲ್ಲೇಖಿಸಲಾಗಿದೆ. ಇನ್ನು ಇದೇ ಘಟನೆಗೆ ಸಂಬಂಧ ಪಟ್ಟಂತೆ ಗಲ್ಫ್‌ ಟುಡೆ ಮತ್ತು ಆರಿ ನ್ಯೂಸ್‌ ಕೂಡ ಈ ಬಗ್ಗೆ ವರದಿಯನ್ನು ಮಾಡಿವೆ.

ಒಟ್ಟಾರೆಯಾಗಿ ಹೇಳುವುದಾದರೆ, ವೈಲರ್‌ ವಿಡಿಯೋದಲ್ಲಿರುವುದು ವಿದ್ಯಾರ್ಥಿನಿ ಅಲ್ಲ ಆತ ಬಾಲಕ ಮತ್ತು ಆತನನ್ನು ಭಾರತದ ಮದರಾಸದಲ್ಲಿ ತಲೆಕೆಳಗಾಗಿ ನೇತಹಾಕಲಾಗಿದೆ ಎಂಬುದು ಸುಳ್ಳು, ಈ ವೈರಲ್‌ ವಿಡಿಯೋದಲ್ಲಿನ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಈ ವಿಡಿಯೋಗೂ ಭಾರತಕ್ಕೂ ಯಾವುದೇ ರೀತಿಯಾದ ಸಂಬಂಧವಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ ಹಳೆಯ ಫೋಟೊ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...