Homeಫ್ಯಾಕ್ಟ್‌ಚೆಕ್FACT CHECK : ಮದರಸದಲ್ಲಿ ಬಾಲಕನನ್ನು ನೇತು ಹಾಕಿ ಹಿಂಸಿಸುತ್ತಿರುವ ವಿಡಿಯೋ ಭಾರತದ್ದಲ್ಲ

FACT CHECK : ಮದರಸದಲ್ಲಿ ಬಾಲಕನನ್ನು ನೇತು ಹಾಕಿ ಹಿಂಸಿಸುತ್ತಿರುವ ವಿಡಿಯೋ ಭಾರತದ್ದಲ್ಲ

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಅದರಲ್ಲಿ ನೀಲಿ ಬಣ್ಣದ ಕುರ್ತಾ, ಪೈಜಾಮ ತೊಟ್ಟಿದ್ದ ಮಗುವಿನ ಕಾಲುಗಳನ್ನು ಹಗ್ಗದಿಂದ ಕಟ್ಟಿ, ತಲೆಕೆಳಗಾಗಿ ನೇತು ಹಾಕಲಾಗಿದೆ. ಮುಸ್ಲಿಂ ಪ್ರಾರ್ಥನೆಯ ಟೋಪಿಯನ್ನು ಧರಿಸಿರುವ ಹಲವಾರು ಹುಡುಗರು ಕುರಾನ್ ಓದುವುದನ್ನು ಕೂಡ ಈ ವಿಡಿಯೋದಲ್ಲಿ ಕಾಣಬಹುದಾಗಿದೆ.

ಭಾರತೀಯ ಮದರಸದಲ್ಲಿ ಬಾಲಕಿಯನ್ನು ಶಿಕ್ಷಿಸುತ್ತಿರುವ ರೀತಿಯನ್ನು ನೋಡಿದರೆ, ಅಲ್ಲಿನ ಕ್ರೂರತೆ ಏನು ಎಂಬುವುದು ಅರ್ಥವಾಗುತ್ತದೆ” ಎಂದು ಪ್ರತಿಪಾದಿಸಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಇದೇ ವಿಡಿಯೋವನ್ನು ಎಕ್ಸ್‌ ಖಾತೆಯ ಬಳಕೆದಾರರೊಬ್ಬರು, ಪೋಸ್ಟ್‌ ಮಾಡಿದ್ದು “ಇದು ಯಾವ ಶಾಲೆ ಎಂದು ನಾನು ನಿಮಗೆ ಹೇಳಬೇಕಾಗಿಲ್ಲ. ಆದರೆ ಚಿಕ್ಕ ಹುಡುಗಿಯನ್ನು ಹೀಗೆ ತಲೆಕೆಳಗಾಗಿ ಕಟ್ಟಿ ಹಾಕಿ ಹೊಡೆದಾಗ, ನಮ್ಮ ದೇಶದಲ್ಲಿ ಕಾನೂನಿನ ಭಯವಿದೆಯೇ? ಈ ತಾಲಿಬಾನಿ ಶಿಕ್ಷೆಗೆ ಕಾರಣವೆಂದರೆ, ಅವಳು ಸ್ವರ್ಗೀಯ ಪುಸ್ತಕವನ್ನು ಅರ್ಥಮಾಡಿಕೊಳ್ಳಲಿಲ್ಲ. ಅಂತಹ ಶಾಲೆಗಳನ್ನು ಭಾರತದಾತ್ಯಂತ ಸಂಪೂರ್ಣವಾಗಿ ನಿಷೇಧಿಸಬೇಕು. ಮತ್ತು ಚಿಕ್ಕ ಹುಡುಗಿಯನ್ನು ಈ ರೀತಿ ಹೊಡೆಯಲು ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ನಾನು ಆಗ್ರಹಿಸುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ. ಹೀಗೆ ವ್ಯಾಪಕವಾಗಿ ಹಲವಾರು ಮಂದಿ ವಿವಿಧ ಬರಹಗಳೊಂದಿಗೆ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

ಹಾಗಿದ್ದರೆ ಪೊಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಲಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಪಾಕಿಸ್ತಾನದ ಸುದ್ದಿ ವಾಹಿನಿಯಾದ ಜಿಯೋ ನ್ಯೂಸ್‌ ಸುದ್ದಿ 30 ಜೂನ್‌ 2019ರಂದು “Rawalpindi ‘qari’ who assaulted student sent on 14-day judicial remand” ಎಂಬ ಶೀರ್ಷಿಕೆಯ ಅಡಿಯಲ್ಲಿ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ಈ ವರದಿಯ ಪ್ರಕಾರ  ಈ ಘಟನೆ ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆದಿದ್ದು, ಬಾಲಕಿಯನ್ನು ತಲೆಕೆಳಗಾಗಿ ನೇತು ಹಾಕಲಾಗಿದೆ ಎಂಬುದು ಸುಳ್ಳು. ಇಲ್ಲಿ ಸಂತ್ರಸ್ಥರಾಗಿರುವುದು ಬಾಲಕ.. ಮದರಸದ  ವಿದ್ಯಾರ್ಥಿಯನ್ನು ತಲೆಕೆಳಗಾಗಿ ಕಟ್ಟಿಹಾಕಿ ಹಲ್ಲೆ ನಡೆಸಿದ ಖಾರಿ ನೂರ್ ಮುಹಮ್ಮದ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಈ ವರದಿಯಲ್ಲಿನ ಆಘಾತಕಾರಿ ಅಂಶ ಎಂದರೆ ಸಂತ್ರಸ್ಥ ಬಾಲಕ ಮತ್ತು ಆತನ ತಂದೆ ಪೊಲೀಸ್‌ ಠಾಣೆಯಲ್ಲಿ ಖಾರಿ ನಿರಾಪರಾಧಿ, ಇದು ತರಗತಿ ಮುಗಿದ ನಂತರ ತಮಾಷೆಗಾಗಿ ಮಾಡಿದ ವಿಡಿಯೋ ಎಂದು ಹೇಳಿಕೆಯನ್ನು ನೀಡಿದ್ದಾರೆ ಎಂಬ ಅಂಶವನ್ನು ಉಲ್ಲೇಖಿಸಲಾಗಿದೆ. ಇನ್ನು ಇದೇ ಘಟನೆಗೆ ಸಂಬಂಧ ಪಟ್ಟಂತೆ ಗಲ್ಫ್‌ ಟುಡೆ ಮತ್ತು ಆರಿ ನ್ಯೂಸ್‌ ಕೂಡ ಈ ಬಗ್ಗೆ ವರದಿಯನ್ನು ಮಾಡಿವೆ.

ಒಟ್ಟಾರೆಯಾಗಿ ಹೇಳುವುದಾದರೆ, ವೈಲರ್‌ ವಿಡಿಯೋದಲ್ಲಿರುವುದು ವಿದ್ಯಾರ್ಥಿನಿ ಅಲ್ಲ ಆತ ಬಾಲಕ ಮತ್ತು ಆತನನ್ನು ಭಾರತದ ಮದರಾಸದಲ್ಲಿ ತಲೆಕೆಳಗಾಗಿ ನೇತಹಾಕಲಾಗಿದೆ ಎಂಬುದು ಸುಳ್ಳು, ಈ ವೈರಲ್‌ ವಿಡಿಯೋದಲ್ಲಿನ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಈ ವಿಡಿಯೋಗೂ ಭಾರತಕ್ಕೂ ಯಾವುದೇ ರೀತಿಯಾದ ಸಂಬಂಧವಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ ಹಳೆಯ ಫೋಟೊ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...