Homeಫ್ಯಾಕ್ಟ್‌ಚೆಕ್FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

- Advertisement -
- Advertisement -

ಕಳೆದ ಕೆಲ ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ತಾಯಿಯೋರ್ವಳು ತನ್ನ ಮಗನಿಗೆ ನಿರ್ಧಯವಾಗಿ ಹೊಡೆಯುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಒಂದು ನಿಮಿಷ ಮೂವತ್ತು ಸೆಕೆಂಡ್‌ನ ವಿಡಿಯೋದಲ್ಲಿ ತಾಯಿ ತನ್ನ ಮಗನ ಎದೆಯ ಮೇಲೆ ಕುಳಿತು ಮುಖಕ್ಕೆ ಹಲ್ಲೆ ಮಾಡುತ್ತಿರುವುದಲ್ಲದೇ, ಎದೆಯ ಭಾಗಕ್ಕೆ ಕಚ್ಚುತ್ತಿರುವುದನ್ನು ಕಾಣಬಹುದಾಗಿದೆ.

ಕೆಲವರು ಈ ವಿಡಿಯೋ ಹಂಚಿಕೊಂಡು “ಇದು ಕರ್ನಾಟಕದ್ದು ಎಂದು ಕಾಣುತ್ತದೆ. ಆ ಕ್ರೂರ ತಾಯಿಯನ್ನು ಪತ್ತೆ ಹಚ್ಚಬೇಕು, ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಈ ವಿಡಿಯೋ ಪೊಲೀಸರಿಗೆ ತಲುಪುವವರೆಗೆ ಶೇರ್ ಮಾಡಿ ಎಂದು ಬರೆದುಕೊಂಡಿದ್ದಾರೆ. ಹಾಗಾದರೆ, ಈ ವೈರಲ್ ವಿಡಿಯೋದಲ್ಲಿರುವಂತಹ ಘಟನೆ ಕರ್ನಾಟಕದಲ್ಲಿ ನಡೆದಿದೆಯೇ? ನಡೆದಿದ್ದರೆ ಎಲ್ಲಿ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಅದು ಕರ್ನಾಟಕದಲ್ಲಿ ನಡೆದ ಘಟನೆಯದ್ದಲ್ಲ. ವಿಡಿಯೋದಲ್ಲಿರುವ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಗೊತ್ತಾಗಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಖುದ್ದು ಮಾಹಿತಿ ನೀಡಿರುವ ಹರಿದ್ವಾರ ಪೊಲೀಸರು, “ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ” ಎಂದು ತಿಳಿಸಿದ್ದರು.

ಹರಿದ್ವಾರ ಪೊಲೀಸರು ತಿಳಿಸಿದ್ದೇನು?

ಈ ಘಟನೆ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯೊಬ್ಬರು ಮಗುವಿಗೆ ಥಳಿಸುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಮಗುವಿಗೆ ಹಲ್ಲೆ ನಡೆಸುತ್ತಿರುವಾಕೆ ಜಬ್ರೇದಾ ನಿವಾಸಿಯಾಗಿದ್ದಾರೆ. ಆಕೆ ಮಗನಿಗೆ ಥಳಿಸುವ ವಿಡಿಯೋ ಮಾಡಿಕೊಂಡು ಅದನ್ನು ಉತ್ತರ ಪ್ರದೇಶದ ಸಹರಾನ್‌ಪುರದ ದೇವಬಂದ್‌ನಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ತನ್ನ ಪತಿ ಮನೋಜ್‌ಗೆ ಕಳುಹಿಸಿದ್ದಾರೆ. ಆ ಬಳಿಕ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಹರಿದ್ವಾರ ಪೊಲೀಸರು ಮಕ್ಕಳ ಆರೈಕೆ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ವಿವರವನ್ನು ಕಲೆ ಹಾಕಿ, ಆಕೆಯನ್ನು ಹರಿದ್ವಾರದ ಸಿಡಬ್ಲ್ಯೂಸಿ (ಮಕ್ಕಳ ಕಲ್ಯಾಣ ಸಮಿತಿ) ಮುಂದೆ ಹಾಜರುಪಡಿಸಲಾಗಿತ್ತು. ಆ ಬಳಿಕ ಈ ರೀತಿ ನಡೆದುಕೊಂಡಿದ್ದು ಏಕೆ ಎಂದು ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ವಿಚಾರಣೆ ನಡೆಸಿದಾಗ ಎಲ್ಲ ವಿವರಗಳನ್ನು ತಿಳಿಸಿರುವುದಾಗಿ ಹರಿದ್ವಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದಂತೆ!

ಘಟನೆಯ ವಿಡಿಯೋ ವೈರಲಾದ ಬಳಿಕ ಮಕ್ಕಳ ಕಲ್ಯಾಣ ಸಮಿತಿಯವರು ಮಕ್ಕಳು ಮತ್ತು ತಾಯಿಯನ್ನು ಕೌನ್ಸೆಲಿಂಗ್‌ ನಡೆಸಿದ್ದರು. ಈ ವೇಳೆ ಹಲವು ವಿಚಾರಗಳು ಬಯಲಿಗೆ ಬಂದಿದೆ. ‘ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದೆ’ ಎಂದು ಮಹಿಳೆ ತಿಳಿಸಿದ್ದಾರೆ.

“ಪತಿ ಮನೆಯ ಖರ್ಚಿಗೆ ಯಾವುದೇ ಹಣವನ್ನು ನೀಡುತ್ತಿಲ್ಲ. ಬಹಳ ಸಮಯದಿಂದ ಮನೆಗೂ ಬರುತ್ತಿಲ್ಲ ಮತ್ತು ಮಾದಕ ದ್ರವ್ಯ ಸೇವಿಸುತ್ತಿದ್ದಾನೆ” ಎಂದು ಮಹಿಳೆ ಕೌನ್ಸೆಲಿಂಗ್ ವೇಳೆ ಮಾಹಿತಿ ನೀಡಿದ್ದಾರೆ.

“ಪತಿ ಖರ್ಚಿಗೆ ಹಣ ನೀಡದ್ದರಿಂದ ಜೀವನ ಸಾಗಿಸಲು ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಾ ತನ್ನ ಮನೆಯ ಖರ್ಚುಗಳನ್ನು ನಿರ್ವಹಿಸುತ್ತಿದ್ದೇನೆ. ತನ್ನ ಪತಿಯನ್ನು ಹೆದರಿಸಲು ಮತ್ತು ಮನೆಯ ಜವಾಬ್ದಾರಿಯನ್ನು ಅರಿತುಕೊಳ್ಳಲು ಮತ್ತು ಬುದ್ಧಿ ಕಲಿಸಲೆಂದು ಸುಮಾರು ಎರಡು ತಿಂಗಳ ಹಿಂದೆ ತನ್ನ ಹಿರಿಯ ಮಗನಿಗೆ ಹಲ್ಲೆ ಮಾಡುವಂತಹ ವಿಡಿಯೋ ಮಾಡಿಕೊಂಡು, ಗಂಡನಿಗೆ ಕಳಿಸಿದ್ದೆ. ಆತ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರಿಂದ ವೈರಲ್ ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಥಳಿಸುವಂತೆ ನಟಿಸಲು ಮಗುವಿನ ಎದೆಯ ಮೇಲೆ ತಲೆ ಇಟ್ಟುಕೊಂಡಿದ್ದೆ. ಆದರೆ ಮಗನ ಎದೆಗೆ ಯಾವುದೇ ರೀತಿಯಲ್ಲಿ ಕಚ್ಚಿಲ್ಲ. ತಂದೆಗೆ ನಟನೆ ಎಂದು ಗೊತ್ತಾಗಬಾರದು ಎಂದು ಮಗನಿಗೂ ಕೂಡ ನೈಜವಾಗಿ ನಟಿಸುವಂತೆ ತಿಳಿಸಿದ್ದೆ ಎಂದು ಮಹಿಳೆ ಹೇಳಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಬಳಿಕ ಜಬ್ರೇದಾ ಪೊಲೀಸ್ ಠಾಣೆಯ ಅಧಿಕಾರಿಗಳು, ನೆರೆಮನೆಗಳಲ್ಲಿ ಮಹಿಳೆಯ ವರ್ತನೆಯ ಬಗ್ಗೆ ಕೂಡ ಮಾಹಿತಿ ಕಲೆ ಹಾಕಿದ್ದಾರೆ. “ಮಹಿಳೆಯು ನೆರೆಮನೆಯ ಜನರೊಂದಿಗೆ ಕಡಿಮೆ ಸಂವಹನ ನಡೆಸುತ್ತಿದ್ದಳು. ಆದರೆ ತನ್ನ ಮಕ್ಕಳೊಂದಿಗೆ ಆಕೆಯ ವರ್ತನೆಯು ಉತ್ತಮವಾಗಿದೆ. ಅಂತಹ ಯಾವುದೇ ಘಟನೆಯು ಮೊದಲು ನಡೆದಿಲ್ಲ” ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಾಟಕೀಯ ಘಟನೆಯನ್ನು (ಹರಿದ್ವಾರ ಪೊಲೀಸರು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ) ಕರ್ನಾಟಕದಲ್ಲಿ ನಡೆದಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...