Homeಫ್ಯಾಕ್ಟ್‌ಚೆಕ್FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

- Advertisement -
- Advertisement -

ಕಳೆದ ಕೆಲ ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ತಾಯಿಯೋರ್ವಳು ತನ್ನ ಮಗನಿಗೆ ನಿರ್ಧಯವಾಗಿ ಹೊಡೆಯುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಒಂದು ನಿಮಿಷ ಮೂವತ್ತು ಸೆಕೆಂಡ್‌ನ ವಿಡಿಯೋದಲ್ಲಿ ತಾಯಿ ತನ್ನ ಮಗನ ಎದೆಯ ಮೇಲೆ ಕುಳಿತು ಮುಖಕ್ಕೆ ಹಲ್ಲೆ ಮಾಡುತ್ತಿರುವುದಲ್ಲದೇ, ಎದೆಯ ಭಾಗಕ್ಕೆ ಕಚ್ಚುತ್ತಿರುವುದನ್ನು ಕಾಣಬಹುದಾಗಿದೆ.

ಕೆಲವರು ಈ ವಿಡಿಯೋ ಹಂಚಿಕೊಂಡು “ಇದು ಕರ್ನಾಟಕದ್ದು ಎಂದು ಕಾಣುತ್ತದೆ. ಆ ಕ್ರೂರ ತಾಯಿಯನ್ನು ಪತ್ತೆ ಹಚ್ಚಬೇಕು, ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಈ ವಿಡಿಯೋ ಪೊಲೀಸರಿಗೆ ತಲುಪುವವರೆಗೆ ಶೇರ್ ಮಾಡಿ ಎಂದು ಬರೆದುಕೊಂಡಿದ್ದಾರೆ. ಹಾಗಾದರೆ, ಈ ವೈರಲ್ ವಿಡಿಯೋದಲ್ಲಿರುವಂತಹ ಘಟನೆ ಕರ್ನಾಟಕದಲ್ಲಿ ನಡೆದಿದೆಯೇ? ನಡೆದಿದ್ದರೆ ಎಲ್ಲಿ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಅದು ಕರ್ನಾಟಕದಲ್ಲಿ ನಡೆದ ಘಟನೆಯದ್ದಲ್ಲ. ವಿಡಿಯೋದಲ್ಲಿರುವ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಗೊತ್ತಾಗಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಖುದ್ದು ಮಾಹಿತಿ ನೀಡಿರುವ ಹರಿದ್ವಾರ ಪೊಲೀಸರು, “ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ” ಎಂದು ತಿಳಿಸಿದ್ದರು.

ಹರಿದ್ವಾರ ಪೊಲೀಸರು ತಿಳಿಸಿದ್ದೇನು?

ಈ ಘಟನೆ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯೊಬ್ಬರು ಮಗುವಿಗೆ ಥಳಿಸುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಮಗುವಿಗೆ ಹಲ್ಲೆ ನಡೆಸುತ್ತಿರುವಾಕೆ ಜಬ್ರೇದಾ ನಿವಾಸಿಯಾಗಿದ್ದಾರೆ. ಆಕೆ ಮಗನಿಗೆ ಥಳಿಸುವ ವಿಡಿಯೋ ಮಾಡಿಕೊಂಡು ಅದನ್ನು ಉತ್ತರ ಪ್ರದೇಶದ ಸಹರಾನ್‌ಪುರದ ದೇವಬಂದ್‌ನಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ತನ್ನ ಪತಿ ಮನೋಜ್‌ಗೆ ಕಳುಹಿಸಿದ್ದಾರೆ. ಆ ಬಳಿಕ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಹರಿದ್ವಾರ ಪೊಲೀಸರು ಮಕ್ಕಳ ಆರೈಕೆ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ವಿವರವನ್ನು ಕಲೆ ಹಾಕಿ, ಆಕೆಯನ್ನು ಹರಿದ್ವಾರದ ಸಿಡಬ್ಲ್ಯೂಸಿ (ಮಕ್ಕಳ ಕಲ್ಯಾಣ ಸಮಿತಿ) ಮುಂದೆ ಹಾಜರುಪಡಿಸಲಾಗಿತ್ತು. ಆ ಬಳಿಕ ಈ ರೀತಿ ನಡೆದುಕೊಂಡಿದ್ದು ಏಕೆ ಎಂದು ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ವಿಚಾರಣೆ ನಡೆಸಿದಾಗ ಎಲ್ಲ ವಿವರಗಳನ್ನು ತಿಳಿಸಿರುವುದಾಗಿ ಹರಿದ್ವಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದಂತೆ!

ಘಟನೆಯ ವಿಡಿಯೋ ವೈರಲಾದ ಬಳಿಕ ಮಕ್ಕಳ ಕಲ್ಯಾಣ ಸಮಿತಿಯವರು ಮಕ್ಕಳು ಮತ್ತು ತಾಯಿಯನ್ನು ಕೌನ್ಸೆಲಿಂಗ್‌ ನಡೆಸಿದ್ದರು. ಈ ವೇಳೆ ಹಲವು ವಿಚಾರಗಳು ಬಯಲಿಗೆ ಬಂದಿದೆ. ‘ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದೆ’ ಎಂದು ಮಹಿಳೆ ತಿಳಿಸಿದ್ದಾರೆ.

“ಪತಿ ಮನೆಯ ಖರ್ಚಿಗೆ ಯಾವುದೇ ಹಣವನ್ನು ನೀಡುತ್ತಿಲ್ಲ. ಬಹಳ ಸಮಯದಿಂದ ಮನೆಗೂ ಬರುತ್ತಿಲ್ಲ ಮತ್ತು ಮಾದಕ ದ್ರವ್ಯ ಸೇವಿಸುತ್ತಿದ್ದಾನೆ” ಎಂದು ಮಹಿಳೆ ಕೌನ್ಸೆಲಿಂಗ್ ವೇಳೆ ಮಾಹಿತಿ ನೀಡಿದ್ದಾರೆ.

“ಪತಿ ಖರ್ಚಿಗೆ ಹಣ ನೀಡದ್ದರಿಂದ ಜೀವನ ಸಾಗಿಸಲು ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಾ ತನ್ನ ಮನೆಯ ಖರ್ಚುಗಳನ್ನು ನಿರ್ವಹಿಸುತ್ತಿದ್ದೇನೆ. ತನ್ನ ಪತಿಯನ್ನು ಹೆದರಿಸಲು ಮತ್ತು ಮನೆಯ ಜವಾಬ್ದಾರಿಯನ್ನು ಅರಿತುಕೊಳ್ಳಲು ಮತ್ತು ಬುದ್ಧಿ ಕಲಿಸಲೆಂದು ಸುಮಾರು ಎರಡು ತಿಂಗಳ ಹಿಂದೆ ತನ್ನ ಹಿರಿಯ ಮಗನಿಗೆ ಹಲ್ಲೆ ಮಾಡುವಂತಹ ವಿಡಿಯೋ ಮಾಡಿಕೊಂಡು, ಗಂಡನಿಗೆ ಕಳಿಸಿದ್ದೆ. ಆತ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರಿಂದ ವೈರಲ್ ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಥಳಿಸುವಂತೆ ನಟಿಸಲು ಮಗುವಿನ ಎದೆಯ ಮೇಲೆ ತಲೆ ಇಟ್ಟುಕೊಂಡಿದ್ದೆ. ಆದರೆ ಮಗನ ಎದೆಗೆ ಯಾವುದೇ ರೀತಿಯಲ್ಲಿ ಕಚ್ಚಿಲ್ಲ. ತಂದೆಗೆ ನಟನೆ ಎಂದು ಗೊತ್ತಾಗಬಾರದು ಎಂದು ಮಗನಿಗೂ ಕೂಡ ನೈಜವಾಗಿ ನಟಿಸುವಂತೆ ತಿಳಿಸಿದ್ದೆ ಎಂದು ಮಹಿಳೆ ಹೇಳಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಬಳಿಕ ಜಬ್ರೇದಾ ಪೊಲೀಸ್ ಠಾಣೆಯ ಅಧಿಕಾರಿಗಳು, ನೆರೆಮನೆಗಳಲ್ಲಿ ಮಹಿಳೆಯ ವರ್ತನೆಯ ಬಗ್ಗೆ ಕೂಡ ಮಾಹಿತಿ ಕಲೆ ಹಾಕಿದ್ದಾರೆ. “ಮಹಿಳೆಯು ನೆರೆಮನೆಯ ಜನರೊಂದಿಗೆ ಕಡಿಮೆ ಸಂವಹನ ನಡೆಸುತ್ತಿದ್ದಳು. ಆದರೆ ತನ್ನ ಮಕ್ಕಳೊಂದಿಗೆ ಆಕೆಯ ವರ್ತನೆಯು ಉತ್ತಮವಾಗಿದೆ. ಅಂತಹ ಯಾವುದೇ ಘಟನೆಯು ಮೊದಲು ನಡೆದಿಲ್ಲ” ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಾಟಕೀಯ ಘಟನೆಯನ್ನು (ಹರಿದ್ವಾರ ಪೊಲೀಸರು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ) ಕರ್ನಾಟಕದಲ್ಲಿ ನಡೆದಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...