Homeಫ್ಯಾಕ್ಟ್‌ಚೆಕ್FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

- Advertisement -
- Advertisement -

ಕಳೆದ ಕೆಲ ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ತಾಯಿಯೋರ್ವಳು ತನ್ನ ಮಗನಿಗೆ ನಿರ್ಧಯವಾಗಿ ಹೊಡೆಯುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಒಂದು ನಿಮಿಷ ಮೂವತ್ತು ಸೆಕೆಂಡ್‌ನ ವಿಡಿಯೋದಲ್ಲಿ ತಾಯಿ ತನ್ನ ಮಗನ ಎದೆಯ ಮೇಲೆ ಕುಳಿತು ಮುಖಕ್ಕೆ ಹಲ್ಲೆ ಮಾಡುತ್ತಿರುವುದಲ್ಲದೇ, ಎದೆಯ ಭಾಗಕ್ಕೆ ಕಚ್ಚುತ್ತಿರುವುದನ್ನು ಕಾಣಬಹುದಾಗಿದೆ.

ಕೆಲವರು ಈ ವಿಡಿಯೋ ಹಂಚಿಕೊಂಡು “ಇದು ಕರ್ನಾಟಕದ್ದು ಎಂದು ಕಾಣುತ್ತದೆ. ಆ ಕ್ರೂರ ತಾಯಿಯನ್ನು ಪತ್ತೆ ಹಚ್ಚಬೇಕು, ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಈ ವಿಡಿಯೋ ಪೊಲೀಸರಿಗೆ ತಲುಪುವವರೆಗೆ ಶೇರ್ ಮಾಡಿ ಎಂದು ಬರೆದುಕೊಂಡಿದ್ದಾರೆ. ಹಾಗಾದರೆ, ಈ ವೈರಲ್ ವಿಡಿಯೋದಲ್ಲಿರುವಂತಹ ಘಟನೆ ಕರ್ನಾಟಕದಲ್ಲಿ ನಡೆದಿದೆಯೇ? ನಡೆದಿದ್ದರೆ ಎಲ್ಲಿ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಅದು ಕರ್ನಾಟಕದಲ್ಲಿ ನಡೆದ ಘಟನೆಯದ್ದಲ್ಲ. ವಿಡಿಯೋದಲ್ಲಿರುವ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಗೊತ್ತಾಗಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಖುದ್ದು ಮಾಹಿತಿ ನೀಡಿರುವ ಹರಿದ್ವಾರ ಪೊಲೀಸರು, “ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ” ಎಂದು ತಿಳಿಸಿದ್ದರು.

ಹರಿದ್ವಾರ ಪೊಲೀಸರು ತಿಳಿಸಿದ್ದೇನು?

ಈ ಘಟನೆ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯೊಬ್ಬರು ಮಗುವಿಗೆ ಥಳಿಸುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಮಗುವಿಗೆ ಹಲ್ಲೆ ನಡೆಸುತ್ತಿರುವಾಕೆ ಜಬ್ರೇದಾ ನಿವಾಸಿಯಾಗಿದ್ದಾರೆ. ಆಕೆ ಮಗನಿಗೆ ಥಳಿಸುವ ವಿಡಿಯೋ ಮಾಡಿಕೊಂಡು ಅದನ್ನು ಉತ್ತರ ಪ್ರದೇಶದ ಸಹರಾನ್‌ಪುರದ ದೇವಬಂದ್‌ನಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ತನ್ನ ಪತಿ ಮನೋಜ್‌ಗೆ ಕಳುಹಿಸಿದ್ದಾರೆ. ಆ ಬಳಿಕ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಹರಿದ್ವಾರ ಪೊಲೀಸರು ಮಕ್ಕಳ ಆರೈಕೆ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ವಿವರವನ್ನು ಕಲೆ ಹಾಕಿ, ಆಕೆಯನ್ನು ಹರಿದ್ವಾರದ ಸಿಡಬ್ಲ್ಯೂಸಿ (ಮಕ್ಕಳ ಕಲ್ಯಾಣ ಸಮಿತಿ) ಮುಂದೆ ಹಾಜರುಪಡಿಸಲಾಗಿತ್ತು. ಆ ಬಳಿಕ ಈ ರೀತಿ ನಡೆದುಕೊಂಡಿದ್ದು ಏಕೆ ಎಂದು ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ವಿಚಾರಣೆ ನಡೆಸಿದಾಗ ಎಲ್ಲ ವಿವರಗಳನ್ನು ತಿಳಿಸಿರುವುದಾಗಿ ಹರಿದ್ವಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದಂತೆ!

ಘಟನೆಯ ವಿಡಿಯೋ ವೈರಲಾದ ಬಳಿಕ ಮಕ್ಕಳ ಕಲ್ಯಾಣ ಸಮಿತಿಯವರು ಮಕ್ಕಳು ಮತ್ತು ತಾಯಿಯನ್ನು ಕೌನ್ಸೆಲಿಂಗ್‌ ನಡೆಸಿದ್ದರು. ಈ ವೇಳೆ ಹಲವು ವಿಚಾರಗಳು ಬಯಲಿಗೆ ಬಂದಿದೆ. ‘ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದೆ’ ಎಂದು ಮಹಿಳೆ ತಿಳಿಸಿದ್ದಾರೆ.

“ಪತಿ ಮನೆಯ ಖರ್ಚಿಗೆ ಯಾವುದೇ ಹಣವನ್ನು ನೀಡುತ್ತಿಲ್ಲ. ಬಹಳ ಸಮಯದಿಂದ ಮನೆಗೂ ಬರುತ್ತಿಲ್ಲ ಮತ್ತು ಮಾದಕ ದ್ರವ್ಯ ಸೇವಿಸುತ್ತಿದ್ದಾನೆ” ಎಂದು ಮಹಿಳೆ ಕೌನ್ಸೆಲಿಂಗ್ ವೇಳೆ ಮಾಹಿತಿ ನೀಡಿದ್ದಾರೆ.

“ಪತಿ ಖರ್ಚಿಗೆ ಹಣ ನೀಡದ್ದರಿಂದ ಜೀವನ ಸಾಗಿಸಲು ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಾ ತನ್ನ ಮನೆಯ ಖರ್ಚುಗಳನ್ನು ನಿರ್ವಹಿಸುತ್ತಿದ್ದೇನೆ. ತನ್ನ ಪತಿಯನ್ನು ಹೆದರಿಸಲು ಮತ್ತು ಮನೆಯ ಜವಾಬ್ದಾರಿಯನ್ನು ಅರಿತುಕೊಳ್ಳಲು ಮತ್ತು ಬುದ್ಧಿ ಕಲಿಸಲೆಂದು ಸುಮಾರು ಎರಡು ತಿಂಗಳ ಹಿಂದೆ ತನ್ನ ಹಿರಿಯ ಮಗನಿಗೆ ಹಲ್ಲೆ ಮಾಡುವಂತಹ ವಿಡಿಯೋ ಮಾಡಿಕೊಂಡು, ಗಂಡನಿಗೆ ಕಳಿಸಿದ್ದೆ. ಆತ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರಿಂದ ವೈರಲ್ ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಥಳಿಸುವಂತೆ ನಟಿಸಲು ಮಗುವಿನ ಎದೆಯ ಮೇಲೆ ತಲೆ ಇಟ್ಟುಕೊಂಡಿದ್ದೆ. ಆದರೆ ಮಗನ ಎದೆಗೆ ಯಾವುದೇ ರೀತಿಯಲ್ಲಿ ಕಚ್ಚಿಲ್ಲ. ತಂದೆಗೆ ನಟನೆ ಎಂದು ಗೊತ್ತಾಗಬಾರದು ಎಂದು ಮಗನಿಗೂ ಕೂಡ ನೈಜವಾಗಿ ನಟಿಸುವಂತೆ ತಿಳಿಸಿದ್ದೆ ಎಂದು ಮಹಿಳೆ ಹೇಳಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಬಳಿಕ ಜಬ್ರೇದಾ ಪೊಲೀಸ್ ಠಾಣೆಯ ಅಧಿಕಾರಿಗಳು, ನೆರೆಮನೆಗಳಲ್ಲಿ ಮಹಿಳೆಯ ವರ್ತನೆಯ ಬಗ್ಗೆ ಕೂಡ ಮಾಹಿತಿ ಕಲೆ ಹಾಕಿದ್ದಾರೆ. “ಮಹಿಳೆಯು ನೆರೆಮನೆಯ ಜನರೊಂದಿಗೆ ಕಡಿಮೆ ಸಂವಹನ ನಡೆಸುತ್ತಿದ್ದಳು. ಆದರೆ ತನ್ನ ಮಕ್ಕಳೊಂದಿಗೆ ಆಕೆಯ ವರ್ತನೆಯು ಉತ್ತಮವಾಗಿದೆ. ಅಂತಹ ಯಾವುದೇ ಘಟನೆಯು ಮೊದಲು ನಡೆದಿಲ್ಲ” ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಾಟಕೀಯ ಘಟನೆಯನ್ನು (ಹರಿದ್ವಾರ ಪೊಲೀಸರು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ) ಕರ್ನಾಟಕದಲ್ಲಿ ನಡೆದಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...