Homeಫ್ಯಾಕ್ಟ್‌ಚೆಕ್FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

- Advertisement -
- Advertisement -

ಕಳೆದ ಕೆಲ ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ತಾಯಿಯೋರ್ವಳು ತನ್ನ ಮಗನಿಗೆ ನಿರ್ಧಯವಾಗಿ ಹೊಡೆಯುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಒಂದು ನಿಮಿಷ ಮೂವತ್ತು ಸೆಕೆಂಡ್‌ನ ವಿಡಿಯೋದಲ್ಲಿ ತಾಯಿ ತನ್ನ ಮಗನ ಎದೆಯ ಮೇಲೆ ಕುಳಿತು ಮುಖಕ್ಕೆ ಹಲ್ಲೆ ಮಾಡುತ್ತಿರುವುದಲ್ಲದೇ, ಎದೆಯ ಭಾಗಕ್ಕೆ ಕಚ್ಚುತ್ತಿರುವುದನ್ನು ಕಾಣಬಹುದಾಗಿದೆ.

ಕೆಲವರು ಈ ವಿಡಿಯೋ ಹಂಚಿಕೊಂಡು “ಇದು ಕರ್ನಾಟಕದ್ದು ಎಂದು ಕಾಣುತ್ತದೆ. ಆ ಕ್ರೂರ ತಾಯಿಯನ್ನು ಪತ್ತೆ ಹಚ್ಚಬೇಕು, ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಈ ವಿಡಿಯೋ ಪೊಲೀಸರಿಗೆ ತಲುಪುವವರೆಗೆ ಶೇರ್ ಮಾಡಿ ಎಂದು ಬರೆದುಕೊಂಡಿದ್ದಾರೆ. ಹಾಗಾದರೆ, ಈ ವೈರಲ್ ವಿಡಿಯೋದಲ್ಲಿರುವಂತಹ ಘಟನೆ ಕರ್ನಾಟಕದಲ್ಲಿ ನಡೆದಿದೆಯೇ? ನಡೆದಿದ್ದರೆ ಎಲ್ಲಿ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಅದು ಕರ್ನಾಟಕದಲ್ಲಿ ನಡೆದ ಘಟನೆಯದ್ದಲ್ಲ. ವಿಡಿಯೋದಲ್ಲಿರುವ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಗೊತ್ತಾಗಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಖುದ್ದು ಮಾಹಿತಿ ನೀಡಿರುವ ಹರಿದ್ವಾರ ಪೊಲೀಸರು, “ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ” ಎಂದು ತಿಳಿಸಿದ್ದರು.

ಹರಿದ್ವಾರ ಪೊಲೀಸರು ತಿಳಿಸಿದ್ದೇನು?

ಈ ಘಟನೆ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯೊಬ್ಬರು ಮಗುವಿಗೆ ಥಳಿಸುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಮಗುವಿಗೆ ಹಲ್ಲೆ ನಡೆಸುತ್ತಿರುವಾಕೆ ಜಬ್ರೇದಾ ನಿವಾಸಿಯಾಗಿದ್ದಾರೆ. ಆಕೆ ಮಗನಿಗೆ ಥಳಿಸುವ ವಿಡಿಯೋ ಮಾಡಿಕೊಂಡು ಅದನ್ನು ಉತ್ತರ ಪ್ರದೇಶದ ಸಹರಾನ್‌ಪುರದ ದೇವಬಂದ್‌ನಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ತನ್ನ ಪತಿ ಮನೋಜ್‌ಗೆ ಕಳುಹಿಸಿದ್ದಾರೆ. ಆ ಬಳಿಕ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಹರಿದ್ವಾರ ಪೊಲೀಸರು ಮಕ್ಕಳ ಆರೈಕೆ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ವಿವರವನ್ನು ಕಲೆ ಹಾಕಿ, ಆಕೆಯನ್ನು ಹರಿದ್ವಾರದ ಸಿಡಬ್ಲ್ಯೂಸಿ (ಮಕ್ಕಳ ಕಲ್ಯಾಣ ಸಮಿತಿ) ಮುಂದೆ ಹಾಜರುಪಡಿಸಲಾಗಿತ್ತು. ಆ ಬಳಿಕ ಈ ರೀತಿ ನಡೆದುಕೊಂಡಿದ್ದು ಏಕೆ ಎಂದು ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ವಿಚಾರಣೆ ನಡೆಸಿದಾಗ ಎಲ್ಲ ವಿವರಗಳನ್ನು ತಿಳಿಸಿರುವುದಾಗಿ ಹರಿದ್ವಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದಂತೆ!

ಘಟನೆಯ ವಿಡಿಯೋ ವೈರಲಾದ ಬಳಿಕ ಮಕ್ಕಳ ಕಲ್ಯಾಣ ಸಮಿತಿಯವರು ಮಕ್ಕಳು ಮತ್ತು ತಾಯಿಯನ್ನು ಕೌನ್ಸೆಲಿಂಗ್‌ ನಡೆಸಿದ್ದರು. ಈ ವೇಳೆ ಹಲವು ವಿಚಾರಗಳು ಬಯಲಿಗೆ ಬಂದಿದೆ. ‘ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದೆ’ ಎಂದು ಮಹಿಳೆ ತಿಳಿಸಿದ್ದಾರೆ.

“ಪತಿ ಮನೆಯ ಖರ್ಚಿಗೆ ಯಾವುದೇ ಹಣವನ್ನು ನೀಡುತ್ತಿಲ್ಲ. ಬಹಳ ಸಮಯದಿಂದ ಮನೆಗೂ ಬರುತ್ತಿಲ್ಲ ಮತ್ತು ಮಾದಕ ದ್ರವ್ಯ ಸೇವಿಸುತ್ತಿದ್ದಾನೆ” ಎಂದು ಮಹಿಳೆ ಕೌನ್ಸೆಲಿಂಗ್ ವೇಳೆ ಮಾಹಿತಿ ನೀಡಿದ್ದಾರೆ.

“ಪತಿ ಖರ್ಚಿಗೆ ಹಣ ನೀಡದ್ದರಿಂದ ಜೀವನ ಸಾಗಿಸಲು ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಾ ತನ್ನ ಮನೆಯ ಖರ್ಚುಗಳನ್ನು ನಿರ್ವಹಿಸುತ್ತಿದ್ದೇನೆ. ತನ್ನ ಪತಿಯನ್ನು ಹೆದರಿಸಲು ಮತ್ತು ಮನೆಯ ಜವಾಬ್ದಾರಿಯನ್ನು ಅರಿತುಕೊಳ್ಳಲು ಮತ್ತು ಬುದ್ಧಿ ಕಲಿಸಲೆಂದು ಸುಮಾರು ಎರಡು ತಿಂಗಳ ಹಿಂದೆ ತನ್ನ ಹಿರಿಯ ಮಗನಿಗೆ ಹಲ್ಲೆ ಮಾಡುವಂತಹ ವಿಡಿಯೋ ಮಾಡಿಕೊಂಡು, ಗಂಡನಿಗೆ ಕಳಿಸಿದ್ದೆ. ಆತ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರಿಂದ ವೈರಲ್ ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಥಳಿಸುವಂತೆ ನಟಿಸಲು ಮಗುವಿನ ಎದೆಯ ಮೇಲೆ ತಲೆ ಇಟ್ಟುಕೊಂಡಿದ್ದೆ. ಆದರೆ ಮಗನ ಎದೆಗೆ ಯಾವುದೇ ರೀತಿಯಲ್ಲಿ ಕಚ್ಚಿಲ್ಲ. ತಂದೆಗೆ ನಟನೆ ಎಂದು ಗೊತ್ತಾಗಬಾರದು ಎಂದು ಮಗನಿಗೂ ಕೂಡ ನೈಜವಾಗಿ ನಟಿಸುವಂತೆ ತಿಳಿಸಿದ್ದೆ ಎಂದು ಮಹಿಳೆ ಹೇಳಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಬಳಿಕ ಜಬ್ರೇದಾ ಪೊಲೀಸ್ ಠಾಣೆಯ ಅಧಿಕಾರಿಗಳು, ನೆರೆಮನೆಗಳಲ್ಲಿ ಮಹಿಳೆಯ ವರ್ತನೆಯ ಬಗ್ಗೆ ಕೂಡ ಮಾಹಿತಿ ಕಲೆ ಹಾಕಿದ್ದಾರೆ. “ಮಹಿಳೆಯು ನೆರೆಮನೆಯ ಜನರೊಂದಿಗೆ ಕಡಿಮೆ ಸಂವಹನ ನಡೆಸುತ್ತಿದ್ದಳು. ಆದರೆ ತನ್ನ ಮಕ್ಕಳೊಂದಿಗೆ ಆಕೆಯ ವರ್ತನೆಯು ಉತ್ತಮವಾಗಿದೆ. ಅಂತಹ ಯಾವುದೇ ಘಟನೆಯು ಮೊದಲು ನಡೆದಿಲ್ಲ” ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಾಟಕೀಯ ಘಟನೆಯನ್ನು (ಹರಿದ್ವಾರ ಪೊಲೀಸರು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ) ಕರ್ನಾಟಕದಲ್ಲಿ ನಡೆದಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...