Homeಫ್ಯಾಕ್ಟ್‌ಚೆಕ್FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

- Advertisement -
- Advertisement -

ಕಳೆದ ಕೆಲ ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ತಾಯಿಯೋರ್ವಳು ತನ್ನ ಮಗನಿಗೆ ನಿರ್ಧಯವಾಗಿ ಹೊಡೆಯುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಒಂದು ನಿಮಿಷ ಮೂವತ್ತು ಸೆಕೆಂಡ್‌ನ ವಿಡಿಯೋದಲ್ಲಿ ತಾಯಿ ತನ್ನ ಮಗನ ಎದೆಯ ಮೇಲೆ ಕುಳಿತು ಮುಖಕ್ಕೆ ಹಲ್ಲೆ ಮಾಡುತ್ತಿರುವುದಲ್ಲದೇ, ಎದೆಯ ಭಾಗಕ್ಕೆ ಕಚ್ಚುತ್ತಿರುವುದನ್ನು ಕಾಣಬಹುದಾಗಿದೆ.

ಕೆಲವರು ಈ ವಿಡಿಯೋ ಹಂಚಿಕೊಂಡು “ಇದು ಕರ್ನಾಟಕದ್ದು ಎಂದು ಕಾಣುತ್ತದೆ. ಆ ಕ್ರೂರ ತಾಯಿಯನ್ನು ಪತ್ತೆ ಹಚ್ಚಬೇಕು, ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಈ ವಿಡಿಯೋ ಪೊಲೀಸರಿಗೆ ತಲುಪುವವರೆಗೆ ಶೇರ್ ಮಾಡಿ ಎಂದು ಬರೆದುಕೊಂಡಿದ್ದಾರೆ. ಹಾಗಾದರೆ, ಈ ವೈರಲ್ ವಿಡಿಯೋದಲ್ಲಿರುವಂತಹ ಘಟನೆ ಕರ್ನಾಟಕದಲ್ಲಿ ನಡೆದಿದೆಯೇ? ನಡೆದಿದ್ದರೆ ಎಲ್ಲಿ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಅದು ಕರ್ನಾಟಕದಲ್ಲಿ ನಡೆದ ಘಟನೆಯದ್ದಲ್ಲ. ವಿಡಿಯೋದಲ್ಲಿರುವ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಗೊತ್ತಾಗಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಖುದ್ದು ಮಾಹಿತಿ ನೀಡಿರುವ ಹರಿದ್ವಾರ ಪೊಲೀಸರು, “ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ” ಎಂದು ತಿಳಿಸಿದ್ದರು.

ಹರಿದ್ವಾರ ಪೊಲೀಸರು ತಿಳಿಸಿದ್ದೇನು?

ಈ ಘಟನೆ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯೊಬ್ಬರು ಮಗುವಿಗೆ ಥಳಿಸುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಮಗುವಿಗೆ ಹಲ್ಲೆ ನಡೆಸುತ್ತಿರುವಾಕೆ ಜಬ್ರೇದಾ ನಿವಾಸಿಯಾಗಿದ್ದಾರೆ. ಆಕೆ ಮಗನಿಗೆ ಥಳಿಸುವ ವಿಡಿಯೋ ಮಾಡಿಕೊಂಡು ಅದನ್ನು ಉತ್ತರ ಪ್ರದೇಶದ ಸಹರಾನ್‌ಪುರದ ದೇವಬಂದ್‌ನಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ತನ್ನ ಪತಿ ಮನೋಜ್‌ಗೆ ಕಳುಹಿಸಿದ್ದಾರೆ. ಆ ಬಳಿಕ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಹರಿದ್ವಾರ ಪೊಲೀಸರು ಮಕ್ಕಳ ಆರೈಕೆ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ವಿವರವನ್ನು ಕಲೆ ಹಾಕಿ, ಆಕೆಯನ್ನು ಹರಿದ್ವಾರದ ಸಿಡಬ್ಲ್ಯೂಸಿ (ಮಕ್ಕಳ ಕಲ್ಯಾಣ ಸಮಿತಿ) ಮುಂದೆ ಹಾಜರುಪಡಿಸಲಾಗಿತ್ತು. ಆ ಬಳಿಕ ಈ ರೀತಿ ನಡೆದುಕೊಂಡಿದ್ದು ಏಕೆ ಎಂದು ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ವಿಚಾರಣೆ ನಡೆಸಿದಾಗ ಎಲ್ಲ ವಿವರಗಳನ್ನು ತಿಳಿಸಿರುವುದಾಗಿ ಹರಿದ್ವಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದಂತೆ!

ಘಟನೆಯ ವಿಡಿಯೋ ವೈರಲಾದ ಬಳಿಕ ಮಕ್ಕಳ ಕಲ್ಯಾಣ ಸಮಿತಿಯವರು ಮಕ್ಕಳು ಮತ್ತು ತಾಯಿಯನ್ನು ಕೌನ್ಸೆಲಿಂಗ್‌ ನಡೆಸಿದ್ದರು. ಈ ವೇಳೆ ಹಲವು ವಿಚಾರಗಳು ಬಯಲಿಗೆ ಬಂದಿದೆ. ‘ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದೆ’ ಎಂದು ಮಹಿಳೆ ತಿಳಿಸಿದ್ದಾರೆ.

“ಪತಿ ಮನೆಯ ಖರ್ಚಿಗೆ ಯಾವುದೇ ಹಣವನ್ನು ನೀಡುತ್ತಿಲ್ಲ. ಬಹಳ ಸಮಯದಿಂದ ಮನೆಗೂ ಬರುತ್ತಿಲ್ಲ ಮತ್ತು ಮಾದಕ ದ್ರವ್ಯ ಸೇವಿಸುತ್ತಿದ್ದಾನೆ” ಎಂದು ಮಹಿಳೆ ಕೌನ್ಸೆಲಿಂಗ್ ವೇಳೆ ಮಾಹಿತಿ ನೀಡಿದ್ದಾರೆ.

“ಪತಿ ಖರ್ಚಿಗೆ ಹಣ ನೀಡದ್ದರಿಂದ ಜೀವನ ಸಾಗಿಸಲು ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಾ ತನ್ನ ಮನೆಯ ಖರ್ಚುಗಳನ್ನು ನಿರ್ವಹಿಸುತ್ತಿದ್ದೇನೆ. ತನ್ನ ಪತಿಯನ್ನು ಹೆದರಿಸಲು ಮತ್ತು ಮನೆಯ ಜವಾಬ್ದಾರಿಯನ್ನು ಅರಿತುಕೊಳ್ಳಲು ಮತ್ತು ಬುದ್ಧಿ ಕಲಿಸಲೆಂದು ಸುಮಾರು ಎರಡು ತಿಂಗಳ ಹಿಂದೆ ತನ್ನ ಹಿರಿಯ ಮಗನಿಗೆ ಹಲ್ಲೆ ಮಾಡುವಂತಹ ವಿಡಿಯೋ ಮಾಡಿಕೊಂಡು, ಗಂಡನಿಗೆ ಕಳಿಸಿದ್ದೆ. ಆತ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರಿಂದ ವೈರಲ್ ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಥಳಿಸುವಂತೆ ನಟಿಸಲು ಮಗುವಿನ ಎದೆಯ ಮೇಲೆ ತಲೆ ಇಟ್ಟುಕೊಂಡಿದ್ದೆ. ಆದರೆ ಮಗನ ಎದೆಗೆ ಯಾವುದೇ ರೀತಿಯಲ್ಲಿ ಕಚ್ಚಿಲ್ಲ. ತಂದೆಗೆ ನಟನೆ ಎಂದು ಗೊತ್ತಾಗಬಾರದು ಎಂದು ಮಗನಿಗೂ ಕೂಡ ನೈಜವಾಗಿ ನಟಿಸುವಂತೆ ತಿಳಿಸಿದ್ದೆ ಎಂದು ಮಹಿಳೆ ಹೇಳಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಬಳಿಕ ಜಬ್ರೇದಾ ಪೊಲೀಸ್ ಠಾಣೆಯ ಅಧಿಕಾರಿಗಳು, ನೆರೆಮನೆಗಳಲ್ಲಿ ಮಹಿಳೆಯ ವರ್ತನೆಯ ಬಗ್ಗೆ ಕೂಡ ಮಾಹಿತಿ ಕಲೆ ಹಾಕಿದ್ದಾರೆ. “ಮಹಿಳೆಯು ನೆರೆಮನೆಯ ಜನರೊಂದಿಗೆ ಕಡಿಮೆ ಸಂವಹನ ನಡೆಸುತ್ತಿದ್ದಳು. ಆದರೆ ತನ್ನ ಮಕ್ಕಳೊಂದಿಗೆ ಆಕೆಯ ವರ್ತನೆಯು ಉತ್ತಮವಾಗಿದೆ. ಅಂತಹ ಯಾವುದೇ ಘಟನೆಯು ಮೊದಲು ನಡೆದಿಲ್ಲ” ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಾಟಕೀಯ ಘಟನೆಯನ್ನು (ಹರಿದ್ವಾರ ಪೊಲೀಸರು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ) ಕರ್ನಾಟಕದಲ್ಲಿ ನಡೆದಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...