Homeಫ್ಯಾಕ್ಟ್‌ಚೆಕ್FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

- Advertisement -
- Advertisement -

ಕಳೆದ ಕೆಲ ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ತಾಯಿಯೋರ್ವಳು ತನ್ನ ಮಗನಿಗೆ ನಿರ್ಧಯವಾಗಿ ಹೊಡೆಯುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಒಂದು ನಿಮಿಷ ಮೂವತ್ತು ಸೆಕೆಂಡ್‌ನ ವಿಡಿಯೋದಲ್ಲಿ ತಾಯಿ ತನ್ನ ಮಗನ ಎದೆಯ ಮೇಲೆ ಕುಳಿತು ಮುಖಕ್ಕೆ ಹಲ್ಲೆ ಮಾಡುತ್ತಿರುವುದಲ್ಲದೇ, ಎದೆಯ ಭಾಗಕ್ಕೆ ಕಚ್ಚುತ್ತಿರುವುದನ್ನು ಕಾಣಬಹುದಾಗಿದೆ.

ಕೆಲವರು ಈ ವಿಡಿಯೋ ಹಂಚಿಕೊಂಡು “ಇದು ಕರ್ನಾಟಕದ್ದು ಎಂದು ಕಾಣುತ್ತದೆ. ಆ ಕ್ರೂರ ತಾಯಿಯನ್ನು ಪತ್ತೆ ಹಚ್ಚಬೇಕು, ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಈ ವಿಡಿಯೋ ಪೊಲೀಸರಿಗೆ ತಲುಪುವವರೆಗೆ ಶೇರ್ ಮಾಡಿ ಎಂದು ಬರೆದುಕೊಂಡಿದ್ದಾರೆ. ಹಾಗಾದರೆ, ಈ ವೈರಲ್ ವಿಡಿಯೋದಲ್ಲಿರುವಂತಹ ಘಟನೆ ಕರ್ನಾಟಕದಲ್ಲಿ ನಡೆದಿದೆಯೇ? ನಡೆದಿದ್ದರೆ ಎಲ್ಲಿ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಅದು ಕರ್ನಾಟಕದಲ್ಲಿ ನಡೆದ ಘಟನೆಯದ್ದಲ್ಲ. ವಿಡಿಯೋದಲ್ಲಿರುವ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಗೊತ್ತಾಗಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಖುದ್ದು ಮಾಹಿತಿ ನೀಡಿರುವ ಹರಿದ್ವಾರ ಪೊಲೀಸರು, “ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ” ಎಂದು ತಿಳಿಸಿದ್ದರು.

ಹರಿದ್ವಾರ ಪೊಲೀಸರು ತಿಳಿಸಿದ್ದೇನು?

ಈ ಘಟನೆ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯೊಬ್ಬರು ಮಗುವಿಗೆ ಥಳಿಸುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಮಗುವಿಗೆ ಹಲ್ಲೆ ನಡೆಸುತ್ತಿರುವಾಕೆ ಜಬ್ರೇದಾ ನಿವಾಸಿಯಾಗಿದ್ದಾರೆ. ಆಕೆ ಮಗನಿಗೆ ಥಳಿಸುವ ವಿಡಿಯೋ ಮಾಡಿಕೊಂಡು ಅದನ್ನು ಉತ್ತರ ಪ್ರದೇಶದ ಸಹರಾನ್‌ಪುರದ ದೇವಬಂದ್‌ನಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ತನ್ನ ಪತಿ ಮನೋಜ್‌ಗೆ ಕಳುಹಿಸಿದ್ದಾರೆ. ಆ ಬಳಿಕ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಹರಿದ್ವಾರ ಪೊಲೀಸರು ಮಕ್ಕಳ ಆರೈಕೆ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ವಿವರವನ್ನು ಕಲೆ ಹಾಕಿ, ಆಕೆಯನ್ನು ಹರಿದ್ವಾರದ ಸಿಡಬ್ಲ್ಯೂಸಿ (ಮಕ್ಕಳ ಕಲ್ಯಾಣ ಸಮಿತಿ) ಮುಂದೆ ಹಾಜರುಪಡಿಸಲಾಗಿತ್ತು. ಆ ಬಳಿಕ ಈ ರೀತಿ ನಡೆದುಕೊಂಡಿದ್ದು ಏಕೆ ಎಂದು ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ವಿಚಾರಣೆ ನಡೆಸಿದಾಗ ಎಲ್ಲ ವಿವರಗಳನ್ನು ತಿಳಿಸಿರುವುದಾಗಿ ಹರಿದ್ವಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದಂತೆ!

ಘಟನೆಯ ವಿಡಿಯೋ ವೈರಲಾದ ಬಳಿಕ ಮಕ್ಕಳ ಕಲ್ಯಾಣ ಸಮಿತಿಯವರು ಮಕ್ಕಳು ಮತ್ತು ತಾಯಿಯನ್ನು ಕೌನ್ಸೆಲಿಂಗ್‌ ನಡೆಸಿದ್ದರು. ಈ ವೇಳೆ ಹಲವು ವಿಚಾರಗಳು ಬಯಲಿಗೆ ಬಂದಿದೆ. ‘ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದೆ’ ಎಂದು ಮಹಿಳೆ ತಿಳಿಸಿದ್ದಾರೆ.

“ಪತಿ ಮನೆಯ ಖರ್ಚಿಗೆ ಯಾವುದೇ ಹಣವನ್ನು ನೀಡುತ್ತಿಲ್ಲ. ಬಹಳ ಸಮಯದಿಂದ ಮನೆಗೂ ಬರುತ್ತಿಲ್ಲ ಮತ್ತು ಮಾದಕ ದ್ರವ್ಯ ಸೇವಿಸುತ್ತಿದ್ದಾನೆ” ಎಂದು ಮಹಿಳೆ ಕೌನ್ಸೆಲಿಂಗ್ ವೇಳೆ ಮಾಹಿತಿ ನೀಡಿದ್ದಾರೆ.

“ಪತಿ ಖರ್ಚಿಗೆ ಹಣ ನೀಡದ್ದರಿಂದ ಜೀವನ ಸಾಗಿಸಲು ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಾ ತನ್ನ ಮನೆಯ ಖರ್ಚುಗಳನ್ನು ನಿರ್ವಹಿಸುತ್ತಿದ್ದೇನೆ. ತನ್ನ ಪತಿಯನ್ನು ಹೆದರಿಸಲು ಮತ್ತು ಮನೆಯ ಜವಾಬ್ದಾರಿಯನ್ನು ಅರಿತುಕೊಳ್ಳಲು ಮತ್ತು ಬುದ್ಧಿ ಕಲಿಸಲೆಂದು ಸುಮಾರು ಎರಡು ತಿಂಗಳ ಹಿಂದೆ ತನ್ನ ಹಿರಿಯ ಮಗನಿಗೆ ಹಲ್ಲೆ ಮಾಡುವಂತಹ ವಿಡಿಯೋ ಮಾಡಿಕೊಂಡು, ಗಂಡನಿಗೆ ಕಳಿಸಿದ್ದೆ. ಆತ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರಿಂದ ವೈರಲ್ ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಥಳಿಸುವಂತೆ ನಟಿಸಲು ಮಗುವಿನ ಎದೆಯ ಮೇಲೆ ತಲೆ ಇಟ್ಟುಕೊಂಡಿದ್ದೆ. ಆದರೆ ಮಗನ ಎದೆಗೆ ಯಾವುದೇ ರೀತಿಯಲ್ಲಿ ಕಚ್ಚಿಲ್ಲ. ತಂದೆಗೆ ನಟನೆ ಎಂದು ಗೊತ್ತಾಗಬಾರದು ಎಂದು ಮಗನಿಗೂ ಕೂಡ ನೈಜವಾಗಿ ನಟಿಸುವಂತೆ ತಿಳಿಸಿದ್ದೆ ಎಂದು ಮಹಿಳೆ ಹೇಳಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಬಳಿಕ ಜಬ್ರೇದಾ ಪೊಲೀಸ್ ಠಾಣೆಯ ಅಧಿಕಾರಿಗಳು, ನೆರೆಮನೆಗಳಲ್ಲಿ ಮಹಿಳೆಯ ವರ್ತನೆಯ ಬಗ್ಗೆ ಕೂಡ ಮಾಹಿತಿ ಕಲೆ ಹಾಕಿದ್ದಾರೆ. “ಮಹಿಳೆಯು ನೆರೆಮನೆಯ ಜನರೊಂದಿಗೆ ಕಡಿಮೆ ಸಂವಹನ ನಡೆಸುತ್ತಿದ್ದಳು. ಆದರೆ ತನ್ನ ಮಕ್ಕಳೊಂದಿಗೆ ಆಕೆಯ ವರ್ತನೆಯು ಉತ್ತಮವಾಗಿದೆ. ಅಂತಹ ಯಾವುದೇ ಘಟನೆಯು ಮೊದಲು ನಡೆದಿಲ್ಲ” ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಾಟಕೀಯ ಘಟನೆಯನ್ನು (ಹರಿದ್ವಾರ ಪೊಲೀಸರು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ) ಕರ್ನಾಟಕದಲ್ಲಿ ನಡೆದಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...