Homeಫ್ಯಾಕ್ಟ್‌ಚೆಕ್FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

FACT CHECK : ತಾಯಿಯೊಬ್ಬಳು ತನ್ನ ಮಗುವಿಗೆ ಅಮಾನುಷವಾಗಿ ಥಳಿಸಿದ್ದಾಳೆ ಎನ್ನಲಾದ ವಿಡಿಯೋ ಕರ್ನಾಟಕದ್ದಲ್ಲ

- Advertisement -
- Advertisement -

ಕಳೆದ ಕೆಲ ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ತಾಯಿಯೋರ್ವಳು ತನ್ನ ಮಗನಿಗೆ ನಿರ್ಧಯವಾಗಿ ಹೊಡೆಯುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಒಂದು ನಿಮಿಷ ಮೂವತ್ತು ಸೆಕೆಂಡ್‌ನ ವಿಡಿಯೋದಲ್ಲಿ ತಾಯಿ ತನ್ನ ಮಗನ ಎದೆಯ ಮೇಲೆ ಕುಳಿತು ಮುಖಕ್ಕೆ ಹಲ್ಲೆ ಮಾಡುತ್ತಿರುವುದಲ್ಲದೇ, ಎದೆಯ ಭಾಗಕ್ಕೆ ಕಚ್ಚುತ್ತಿರುವುದನ್ನು ಕಾಣಬಹುದಾಗಿದೆ.

ಕೆಲವರು ಈ ವಿಡಿಯೋ ಹಂಚಿಕೊಂಡು “ಇದು ಕರ್ನಾಟಕದ್ದು ಎಂದು ಕಾಣುತ್ತದೆ. ಆ ಕ್ರೂರ ತಾಯಿಯನ್ನು ಪತ್ತೆ ಹಚ್ಚಬೇಕು, ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಈ ವಿಡಿಯೋ ಪೊಲೀಸರಿಗೆ ತಲುಪುವವರೆಗೆ ಶೇರ್ ಮಾಡಿ ಎಂದು ಬರೆದುಕೊಂಡಿದ್ದಾರೆ. ಹಾಗಾದರೆ, ಈ ವೈರಲ್ ವಿಡಿಯೋದಲ್ಲಿರುವಂತಹ ಘಟನೆ ಕರ್ನಾಟಕದಲ್ಲಿ ನಡೆದಿದೆಯೇ? ನಡೆದಿದ್ದರೆ ಎಲ್ಲಿ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಅದು ಕರ್ನಾಟಕದಲ್ಲಿ ನಡೆದ ಘಟನೆಯದ್ದಲ್ಲ. ವಿಡಿಯೋದಲ್ಲಿರುವ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಗೊತ್ತಾಗಿದೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಖುದ್ದು ಮಾಹಿತಿ ನೀಡಿರುವ ಹರಿದ್ವಾರ ಪೊಲೀಸರು, “ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ” ಎಂದು ತಿಳಿಸಿದ್ದರು.

ಹರಿದ್ವಾರ ಪೊಲೀಸರು ತಿಳಿಸಿದ್ದೇನು?

ಈ ಘಟನೆ ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯೊಬ್ಬರು ಮಗುವಿಗೆ ಥಳಿಸುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ಸುಮಾರು 2 ತಿಂಗಳ ಹಳೆಯದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಮಗುವಿಗೆ ಹಲ್ಲೆ ನಡೆಸುತ್ತಿರುವಾಕೆ ಜಬ್ರೇದಾ ನಿವಾಸಿಯಾಗಿದ್ದಾರೆ. ಆಕೆ ಮಗನಿಗೆ ಥಳಿಸುವ ವಿಡಿಯೋ ಮಾಡಿಕೊಂಡು ಅದನ್ನು ಉತ್ತರ ಪ್ರದೇಶದ ಸಹರಾನ್‌ಪುರದ ದೇವಬಂದ್‌ನಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ತನ್ನ ಪತಿ ಮನೋಜ್‌ಗೆ ಕಳುಹಿಸಿದ್ದಾರೆ. ಆ ಬಳಿಕ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಹರಿದ್ವಾರ ಪೊಲೀಸರು ಮಕ್ಕಳ ಆರೈಕೆ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ವಿವರವನ್ನು ಕಲೆ ಹಾಕಿ, ಆಕೆಯನ್ನು ಹರಿದ್ವಾರದ ಸಿಡಬ್ಲ್ಯೂಸಿ (ಮಕ್ಕಳ ಕಲ್ಯಾಣ ಸಮಿತಿ) ಮುಂದೆ ಹಾಜರುಪಡಿಸಲಾಗಿತ್ತು. ಆ ಬಳಿಕ ಈ ರೀತಿ ನಡೆದುಕೊಂಡಿದ್ದು ಏಕೆ ಎಂದು ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳು ವಿಚಾರಣೆ ನಡೆಸಿದಾಗ ಎಲ್ಲ ವಿವರಗಳನ್ನು ತಿಳಿಸಿರುವುದಾಗಿ ಹರಿದ್ವಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದಂತೆ!

ಘಟನೆಯ ವಿಡಿಯೋ ವೈರಲಾದ ಬಳಿಕ ಮಕ್ಕಳ ಕಲ್ಯಾಣ ಸಮಿತಿಯವರು ಮಕ್ಕಳು ಮತ್ತು ತಾಯಿಯನ್ನು ಕೌನ್ಸೆಲಿಂಗ್‌ ನಡೆಸಿದ್ದರು. ಈ ವೇಳೆ ಹಲವು ವಿಚಾರಗಳು ಬಯಲಿಗೆ ಬಂದಿದೆ. ‘ಖರ್ಚಿಗೆ ಹಣ ನೀಡದ್ದಕ್ಕೆ ಗಂಡನನ್ನು ಹೆದರಿಸಲು ವಿಡಿಯೋ ಮಾಡಿದ್ದೆ’ ಎಂದು ಮಹಿಳೆ ತಿಳಿಸಿದ್ದಾರೆ.

“ಪತಿ ಮನೆಯ ಖರ್ಚಿಗೆ ಯಾವುದೇ ಹಣವನ್ನು ನೀಡುತ್ತಿಲ್ಲ. ಬಹಳ ಸಮಯದಿಂದ ಮನೆಗೂ ಬರುತ್ತಿಲ್ಲ ಮತ್ತು ಮಾದಕ ದ್ರವ್ಯ ಸೇವಿಸುತ್ತಿದ್ದಾನೆ” ಎಂದು ಮಹಿಳೆ ಕೌನ್ಸೆಲಿಂಗ್ ವೇಳೆ ಮಾಹಿತಿ ನೀಡಿದ್ದಾರೆ.

“ಪತಿ ಖರ್ಚಿಗೆ ಹಣ ನೀಡದ್ದರಿಂದ ಜೀವನ ಸಾಗಿಸಲು ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಾ ತನ್ನ ಮನೆಯ ಖರ್ಚುಗಳನ್ನು ನಿರ್ವಹಿಸುತ್ತಿದ್ದೇನೆ. ತನ್ನ ಪತಿಯನ್ನು ಹೆದರಿಸಲು ಮತ್ತು ಮನೆಯ ಜವಾಬ್ದಾರಿಯನ್ನು ಅರಿತುಕೊಳ್ಳಲು ಮತ್ತು ಬುದ್ಧಿ ಕಲಿಸಲೆಂದು ಸುಮಾರು ಎರಡು ತಿಂಗಳ ಹಿಂದೆ ತನ್ನ ಹಿರಿಯ ಮಗನಿಗೆ ಹಲ್ಲೆ ಮಾಡುವಂತಹ ವಿಡಿಯೋ ಮಾಡಿಕೊಂಡು, ಗಂಡನಿಗೆ ಕಳಿಸಿದ್ದೆ. ಆತ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರಿಂದ ವೈರಲ್ ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಥಳಿಸುವಂತೆ ನಟಿಸಲು ಮಗುವಿನ ಎದೆಯ ಮೇಲೆ ತಲೆ ಇಟ್ಟುಕೊಂಡಿದ್ದೆ. ಆದರೆ ಮಗನ ಎದೆಗೆ ಯಾವುದೇ ರೀತಿಯಲ್ಲಿ ಕಚ್ಚಿಲ್ಲ. ತಂದೆಗೆ ನಟನೆ ಎಂದು ಗೊತ್ತಾಗಬಾರದು ಎಂದು ಮಗನಿಗೂ ಕೂಡ ನೈಜವಾಗಿ ನಟಿಸುವಂತೆ ತಿಳಿಸಿದ್ದೆ ಎಂದು ಮಹಿಳೆ ಹೇಳಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಬಳಿಕ ಜಬ್ರೇದಾ ಪೊಲೀಸ್ ಠಾಣೆಯ ಅಧಿಕಾರಿಗಳು, ನೆರೆಮನೆಗಳಲ್ಲಿ ಮಹಿಳೆಯ ವರ್ತನೆಯ ಬಗ್ಗೆ ಕೂಡ ಮಾಹಿತಿ ಕಲೆ ಹಾಕಿದ್ದಾರೆ. “ಮಹಿಳೆಯು ನೆರೆಮನೆಯ ಜನರೊಂದಿಗೆ ಕಡಿಮೆ ಸಂವಹನ ನಡೆಸುತ್ತಿದ್ದಳು. ಆದರೆ ತನ್ನ ಮಕ್ಕಳೊಂದಿಗೆ ಆಕೆಯ ವರ್ತನೆಯು ಉತ್ತಮವಾಗಿದೆ. ಅಂತಹ ಯಾವುದೇ ಘಟನೆಯು ಮೊದಲು ನಡೆದಿಲ್ಲ” ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಹರಿದ್ವಾರ ಜಿಲ್ಲೆಯ ಜಬ್ರೆದಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಾಟಕೀಯ ಘಟನೆಯನ್ನು (ಹರಿದ್ವಾರ ಪೊಲೀಸರು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ) ಕರ್ನಾಟಕದಲ್ಲಿ ನಡೆದಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...