Homeಫ್ಯಾಕ್ಟ್‌ಚೆಕ್FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

- Advertisement -
- Advertisement -

ಸೇನಾ ಸಿಬ್ಬಂದಿಯಂತೆ ವಸ್ತ್ರ ಧರಿಸಿರುವ ವ್ಯಕ್ತಿಯೊಬ್ಬ ಮತ್ತು ಇತರರು ರಸ್ತೆ ಮಧ್ಯೆ ಯುವತಿಯೊಬ್ಬಳನ್ನು ಹಿಂಸಿಸಿ ಗುಂಡಿಕ್ಕಿ ಕೊಂದಿರುವ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಹರಿದಾಡುತ್ತಿದೆ.

ಕೆಲವರು ಇತ್ತೀಚೆಗೆ ಮಣಿಪುರದಲ್ಲಿ ಈ ಘಟನೆ ನಡೆದಿದೆ ಕುಕಿ ಮಹಿಳೆಯನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ. ಇನ್ನೂ ಕೆಲವರು ಮೈತೇಯಿ ಮಹಿಳೆಯರನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ.

ಇದೇ ವಿಡಿಯೋ ಮುಂದಿಟ್ಟುಕೊಂಡು, ಮಣಿಪುರದಲ್ಲಿ ಹಿಂಸಾಚಾರದ ವೇಳೆ ಈ ಘಟನೆ ನಡೆದಿದೆ ಎಂದು ಅಸ್ಸಾಂನ ಪತ್ರಿಕೆ ‘ಅಮರ್ ಅಸೋಮ್’ ಜೂನ್ 19, 2023 ರಂದು ಮೊದಲ ಪುಟದಲ್ಲಿ ವರದಿ ಪ್ರಕಟಿಸಿತ್ತು.

ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಸ್ಕ್ರೀನ್ ಶಾಟ್ ಬಳಸಿ ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 2022 ರಲ್ಲಿ ಘಟನೆಯ ಕುರಿತು ಬರ್ಮೀಸ್ ಸುದ್ದಿ ಸಂಸ್ಥೆಗಳು ವರದಿ ಮಾಡಿರುವುದು ಕಂಡು ಬಂದಿದೆ.

ಸುದ್ದಿ ವಾಹಿನಿ ಇಲೆವೆನ್ ಮ್ಯಾನ್ಮಾರ್ ಡಿಸೆಂಬರ್ 3, 2022ರಂದು ಈ ಘಟನೆಯ ಕುರಿತು ಸುದ್ದಿ ಪ್ರಕಟಿಸಿತ್ತು. ಸುದ್ದಿ ಪ್ರಕಾರ, “ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಮಾಹಿತಿದಾರೆ ಎಂದು ಒಪ್ಪಿಕೊಳ್ಳಲು ಒತ್ತಾಯಿಸಿ ಯುವತಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ” ಎಂದು ಹೇಳಲಾಗಿದೆ.

ಡಿಸೆಂಬರ್ 6, 2022ರಂದು ಈ ಘಟನೆಯ ಕುರಿತು ವರದಿ ಮಾಡಿದ್ದ ಮ್ಯಾನ್ಮಾರ್‌ನ ವೆಬ್‌ಸೈಟ್‌ myanmar-now.org ಸಾಗಯಿಂಗ್ ಪ್ರದೇಶದ ತಮು ಟೌನ್‌ಶಿಪ್‌ನ ನಿವಾಸಿ 24 ವರ್ಷದ ಆಯೆ ಮರ್ ತುನ್ ಎಂಬಾಕೆಯನ್ನು ಸೇನಾ ಮಾಹಿತಿದಾರಳು ಎಂವ ಶಂಕೆಯ ಮೇಲೆ ಪೀಪಲ್ಸ್ ಡಿಫೆನ್ಸ್ ಫೋರ್ಸ್ (ಪಿಡಿಎಫ್) ಸದಸ್ಯರು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಅನೇಕ ಪಿಡಿಎಫ್ ಸದಸ್ಯರನ್ನು ಬಂಧಿಸಲಾಗಿದೆ. ಪಿಡಿಎಫ್ ಸದಸ್ಯರು ಯುವತಿಯನ್ನು ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡು ಬಂದರೆ ಅವರಿಗೆ ಕಠಿ ಶಿಕ್ಷೆ ವಿಧಿಸುವುದಾಗಿ ಸರ್ಕಾರ ಹೇಳಿದೆ ಎಂದಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ ಯುವತಿಯ ಹತ್ಯೆ ವಿಡಿಯೋ 2022ರಲ್ಲಿ ಮ್ಯಾನ್ಮಾರ್‌ನಲ್ಲಿ ನಡೆದ ಘಟನೆಯದ್ದು ಎಂದು ತಿಳಿದು ಬಂದಿದೆ. ಮಿಲಿಟರಿ ಮಾಹಿತಿದಾರಳು ಎಂಬ ಶಂಕೆ ಮೇಲೆ ಅಲ್ಲಿನ ಬಂಡುಕೋರರ ಗುಂಪು ಪಿಡಿಎಫ್ ಯುವತಿಯನ್ನು ಹತ್ಯೆ ಮಾಡಿದೆ. ಅಲ್ಲದೆ, ಇದು ಮಣಿಪುರದಲ್ಲಿ ನಡೆದ ಘಟನೆಯಲ್ಲ.

ಇದನ್ನೂ ಓದಿ : FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...

ನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕನಿಷ್ಠ 616 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಶನಿವಾರ (ಆ.29) ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಶುಕ್ರವಾರ (ಆ.28) ಪೊಲೀಸರು...

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...