Homeಫ್ಯಾಕ್ಟ್‌ಚೆಕ್FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

- Advertisement -
- Advertisement -

ಸೇನಾ ಸಿಬ್ಬಂದಿಯಂತೆ ವಸ್ತ್ರ ಧರಿಸಿರುವ ವ್ಯಕ್ತಿಯೊಬ್ಬ ಮತ್ತು ಇತರರು ರಸ್ತೆ ಮಧ್ಯೆ ಯುವತಿಯೊಬ್ಬಳನ್ನು ಹಿಂಸಿಸಿ ಗುಂಡಿಕ್ಕಿ ಕೊಂದಿರುವ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಹರಿದಾಡುತ್ತಿದೆ.

ಕೆಲವರು ಇತ್ತೀಚೆಗೆ ಮಣಿಪುರದಲ್ಲಿ ಈ ಘಟನೆ ನಡೆದಿದೆ ಕುಕಿ ಮಹಿಳೆಯನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ. ಇನ್ನೂ ಕೆಲವರು ಮೈತೇಯಿ ಮಹಿಳೆಯರನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ.

ಇದೇ ವಿಡಿಯೋ ಮುಂದಿಟ್ಟುಕೊಂಡು, ಮಣಿಪುರದಲ್ಲಿ ಹಿಂಸಾಚಾರದ ವೇಳೆ ಈ ಘಟನೆ ನಡೆದಿದೆ ಎಂದು ಅಸ್ಸಾಂನ ಪತ್ರಿಕೆ ‘ಅಮರ್ ಅಸೋಮ್’ ಜೂನ್ 19, 2023 ರಂದು ಮೊದಲ ಪುಟದಲ್ಲಿ ವರದಿ ಪ್ರಕಟಿಸಿತ್ತು.

ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಸ್ಕ್ರೀನ್ ಶಾಟ್ ಬಳಸಿ ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 2022 ರಲ್ಲಿ ಘಟನೆಯ ಕುರಿತು ಬರ್ಮೀಸ್ ಸುದ್ದಿ ಸಂಸ್ಥೆಗಳು ವರದಿ ಮಾಡಿರುವುದು ಕಂಡು ಬಂದಿದೆ.

ಸುದ್ದಿ ವಾಹಿನಿ ಇಲೆವೆನ್ ಮ್ಯಾನ್ಮಾರ್ ಡಿಸೆಂಬರ್ 3, 2022ರಂದು ಈ ಘಟನೆಯ ಕುರಿತು ಸುದ್ದಿ ಪ್ರಕಟಿಸಿತ್ತು. ಸುದ್ದಿ ಪ್ರಕಾರ, “ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಮಾಹಿತಿದಾರೆ ಎಂದು ಒಪ್ಪಿಕೊಳ್ಳಲು ಒತ್ತಾಯಿಸಿ ಯುವತಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ” ಎಂದು ಹೇಳಲಾಗಿದೆ.

ಡಿಸೆಂಬರ್ 6, 2022ರಂದು ಈ ಘಟನೆಯ ಕುರಿತು ವರದಿ ಮಾಡಿದ್ದ ಮ್ಯಾನ್ಮಾರ್‌ನ ವೆಬ್‌ಸೈಟ್‌ myanmar-now.org ಸಾಗಯಿಂಗ್ ಪ್ರದೇಶದ ತಮು ಟೌನ್‌ಶಿಪ್‌ನ ನಿವಾಸಿ 24 ವರ್ಷದ ಆಯೆ ಮರ್ ತುನ್ ಎಂಬಾಕೆಯನ್ನು ಸೇನಾ ಮಾಹಿತಿದಾರಳು ಎಂವ ಶಂಕೆಯ ಮೇಲೆ ಪೀಪಲ್ಸ್ ಡಿಫೆನ್ಸ್ ಫೋರ್ಸ್ (ಪಿಡಿಎಫ್) ಸದಸ್ಯರು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಅನೇಕ ಪಿಡಿಎಫ್ ಸದಸ್ಯರನ್ನು ಬಂಧಿಸಲಾಗಿದೆ. ಪಿಡಿಎಫ್ ಸದಸ್ಯರು ಯುವತಿಯನ್ನು ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡು ಬಂದರೆ ಅವರಿಗೆ ಕಠಿ ಶಿಕ್ಷೆ ವಿಧಿಸುವುದಾಗಿ ಸರ್ಕಾರ ಹೇಳಿದೆ ಎಂದಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ ಯುವತಿಯ ಹತ್ಯೆ ವಿಡಿಯೋ 2022ರಲ್ಲಿ ಮ್ಯಾನ್ಮಾರ್‌ನಲ್ಲಿ ನಡೆದ ಘಟನೆಯದ್ದು ಎಂದು ತಿಳಿದು ಬಂದಿದೆ. ಮಿಲಿಟರಿ ಮಾಹಿತಿದಾರಳು ಎಂಬ ಶಂಕೆ ಮೇಲೆ ಅಲ್ಲಿನ ಬಂಡುಕೋರರ ಗುಂಪು ಪಿಡಿಎಫ್ ಯುವತಿಯನ್ನು ಹತ್ಯೆ ಮಾಡಿದೆ. ಅಲ್ಲದೆ, ಇದು ಮಣಿಪುರದಲ್ಲಿ ನಡೆದ ಘಟನೆಯಲ್ಲ.

ಇದನ್ನೂ ಓದಿ : FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...