Homeಫ್ಯಾಕ್ಟ್‌ಚೆಕ್FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

- Advertisement -
- Advertisement -

ಸೇನಾ ಸಿಬ್ಬಂದಿಯಂತೆ ವಸ್ತ್ರ ಧರಿಸಿರುವ ವ್ಯಕ್ತಿಯೊಬ್ಬ ಮತ್ತು ಇತರರು ರಸ್ತೆ ಮಧ್ಯೆ ಯುವತಿಯೊಬ್ಬಳನ್ನು ಹಿಂಸಿಸಿ ಗುಂಡಿಕ್ಕಿ ಕೊಂದಿರುವ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಹರಿದಾಡುತ್ತಿದೆ.

ಕೆಲವರು ಇತ್ತೀಚೆಗೆ ಮಣಿಪುರದಲ್ಲಿ ಈ ಘಟನೆ ನಡೆದಿದೆ ಕುಕಿ ಮಹಿಳೆಯನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ. ಇನ್ನೂ ಕೆಲವರು ಮೈತೇಯಿ ಮಹಿಳೆಯರನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ.

ಇದೇ ವಿಡಿಯೋ ಮುಂದಿಟ್ಟುಕೊಂಡು, ಮಣಿಪುರದಲ್ಲಿ ಹಿಂಸಾಚಾರದ ವೇಳೆ ಈ ಘಟನೆ ನಡೆದಿದೆ ಎಂದು ಅಸ್ಸಾಂನ ಪತ್ರಿಕೆ ‘ಅಮರ್ ಅಸೋಮ್’ ಜೂನ್ 19, 2023 ರಂದು ಮೊದಲ ಪುಟದಲ್ಲಿ ವರದಿ ಪ್ರಕಟಿಸಿತ್ತು.

ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಸ್ಕ್ರೀನ್ ಶಾಟ್ ಬಳಸಿ ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 2022 ರಲ್ಲಿ ಘಟನೆಯ ಕುರಿತು ಬರ್ಮೀಸ್ ಸುದ್ದಿ ಸಂಸ್ಥೆಗಳು ವರದಿ ಮಾಡಿರುವುದು ಕಂಡು ಬಂದಿದೆ.

ಸುದ್ದಿ ವಾಹಿನಿ ಇಲೆವೆನ್ ಮ್ಯಾನ್ಮಾರ್ ಡಿಸೆಂಬರ್ 3, 2022ರಂದು ಈ ಘಟನೆಯ ಕುರಿತು ಸುದ್ದಿ ಪ್ರಕಟಿಸಿತ್ತು. ಸುದ್ದಿ ಪ್ರಕಾರ, “ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಮಾಹಿತಿದಾರೆ ಎಂದು ಒಪ್ಪಿಕೊಳ್ಳಲು ಒತ್ತಾಯಿಸಿ ಯುವತಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ” ಎಂದು ಹೇಳಲಾಗಿದೆ.

ಡಿಸೆಂಬರ್ 6, 2022ರಂದು ಈ ಘಟನೆಯ ಕುರಿತು ವರದಿ ಮಾಡಿದ್ದ ಮ್ಯಾನ್ಮಾರ್‌ನ ವೆಬ್‌ಸೈಟ್‌ myanmar-now.org ಸಾಗಯಿಂಗ್ ಪ್ರದೇಶದ ತಮು ಟೌನ್‌ಶಿಪ್‌ನ ನಿವಾಸಿ 24 ವರ್ಷದ ಆಯೆ ಮರ್ ತುನ್ ಎಂಬಾಕೆಯನ್ನು ಸೇನಾ ಮಾಹಿತಿದಾರಳು ಎಂವ ಶಂಕೆಯ ಮೇಲೆ ಪೀಪಲ್ಸ್ ಡಿಫೆನ್ಸ್ ಫೋರ್ಸ್ (ಪಿಡಿಎಫ್) ಸದಸ್ಯರು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಅನೇಕ ಪಿಡಿಎಫ್ ಸದಸ್ಯರನ್ನು ಬಂಧಿಸಲಾಗಿದೆ. ಪಿಡಿಎಫ್ ಸದಸ್ಯರು ಯುವತಿಯನ್ನು ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡು ಬಂದರೆ ಅವರಿಗೆ ಕಠಿ ಶಿಕ್ಷೆ ವಿಧಿಸುವುದಾಗಿ ಸರ್ಕಾರ ಹೇಳಿದೆ ಎಂದಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ ಯುವತಿಯ ಹತ್ಯೆ ವಿಡಿಯೋ 2022ರಲ್ಲಿ ಮ್ಯಾನ್ಮಾರ್‌ನಲ್ಲಿ ನಡೆದ ಘಟನೆಯದ್ದು ಎಂದು ತಿಳಿದು ಬಂದಿದೆ. ಮಿಲಿಟರಿ ಮಾಹಿತಿದಾರಳು ಎಂಬ ಶಂಕೆ ಮೇಲೆ ಅಲ್ಲಿನ ಬಂಡುಕೋರರ ಗುಂಪು ಪಿಡಿಎಫ್ ಯುವತಿಯನ್ನು ಹತ್ಯೆ ಮಾಡಿದೆ. ಅಲ್ಲದೆ, ಇದು ಮಣಿಪುರದಲ್ಲಿ ನಡೆದ ಘಟನೆಯಲ್ಲ.

ಇದನ್ನೂ ಓದಿ : FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...