Homeಫ್ಯಾಕ್ಟ್‌ಚೆಕ್FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

- Advertisement -
- Advertisement -

ಸೇನಾ ಸಿಬ್ಬಂದಿಯಂತೆ ವಸ್ತ್ರ ಧರಿಸಿರುವ ವ್ಯಕ್ತಿಯೊಬ್ಬ ಮತ್ತು ಇತರರು ರಸ್ತೆ ಮಧ್ಯೆ ಯುವತಿಯೊಬ್ಬಳನ್ನು ಹಿಂಸಿಸಿ ಗುಂಡಿಕ್ಕಿ ಕೊಂದಿರುವ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಹರಿದಾಡುತ್ತಿದೆ.

ಕೆಲವರು ಇತ್ತೀಚೆಗೆ ಮಣಿಪುರದಲ್ಲಿ ಈ ಘಟನೆ ನಡೆದಿದೆ ಕುಕಿ ಮಹಿಳೆಯನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ. ಇನ್ನೂ ಕೆಲವರು ಮೈತೇಯಿ ಮಹಿಳೆಯರನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ.

ಇದೇ ವಿಡಿಯೋ ಮುಂದಿಟ್ಟುಕೊಂಡು, ಮಣಿಪುರದಲ್ಲಿ ಹಿಂಸಾಚಾರದ ವೇಳೆ ಈ ಘಟನೆ ನಡೆದಿದೆ ಎಂದು ಅಸ್ಸಾಂನ ಪತ್ರಿಕೆ ‘ಅಮರ್ ಅಸೋಮ್’ ಜೂನ್ 19, 2023 ರಂದು ಮೊದಲ ಪುಟದಲ್ಲಿ ವರದಿ ಪ್ರಕಟಿಸಿತ್ತು.

ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಸ್ಕ್ರೀನ್ ಶಾಟ್ ಬಳಸಿ ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 2022 ರಲ್ಲಿ ಘಟನೆಯ ಕುರಿತು ಬರ್ಮೀಸ್ ಸುದ್ದಿ ಸಂಸ್ಥೆಗಳು ವರದಿ ಮಾಡಿರುವುದು ಕಂಡು ಬಂದಿದೆ.

ಸುದ್ದಿ ವಾಹಿನಿ ಇಲೆವೆನ್ ಮ್ಯಾನ್ಮಾರ್ ಡಿಸೆಂಬರ್ 3, 2022ರಂದು ಈ ಘಟನೆಯ ಕುರಿತು ಸುದ್ದಿ ಪ್ರಕಟಿಸಿತ್ತು. ಸುದ್ದಿ ಪ್ರಕಾರ, “ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಮಾಹಿತಿದಾರೆ ಎಂದು ಒಪ್ಪಿಕೊಳ್ಳಲು ಒತ್ತಾಯಿಸಿ ಯುವತಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ” ಎಂದು ಹೇಳಲಾಗಿದೆ.

ಡಿಸೆಂಬರ್ 6, 2022ರಂದು ಈ ಘಟನೆಯ ಕುರಿತು ವರದಿ ಮಾಡಿದ್ದ ಮ್ಯಾನ್ಮಾರ್‌ನ ವೆಬ್‌ಸೈಟ್‌ myanmar-now.org ಸಾಗಯಿಂಗ್ ಪ್ರದೇಶದ ತಮು ಟೌನ್‌ಶಿಪ್‌ನ ನಿವಾಸಿ 24 ವರ್ಷದ ಆಯೆ ಮರ್ ತುನ್ ಎಂಬಾಕೆಯನ್ನು ಸೇನಾ ಮಾಹಿತಿದಾರಳು ಎಂವ ಶಂಕೆಯ ಮೇಲೆ ಪೀಪಲ್ಸ್ ಡಿಫೆನ್ಸ್ ಫೋರ್ಸ್ (ಪಿಡಿಎಫ್) ಸದಸ್ಯರು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಅನೇಕ ಪಿಡಿಎಫ್ ಸದಸ್ಯರನ್ನು ಬಂಧಿಸಲಾಗಿದೆ. ಪಿಡಿಎಫ್ ಸದಸ್ಯರು ಯುವತಿಯನ್ನು ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡು ಬಂದರೆ ಅವರಿಗೆ ಕಠಿ ಶಿಕ್ಷೆ ವಿಧಿಸುವುದಾಗಿ ಸರ್ಕಾರ ಹೇಳಿದೆ ಎಂದಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ ಯುವತಿಯ ಹತ್ಯೆ ವಿಡಿಯೋ 2022ರಲ್ಲಿ ಮ್ಯಾನ್ಮಾರ್‌ನಲ್ಲಿ ನಡೆದ ಘಟನೆಯದ್ದು ಎಂದು ತಿಳಿದು ಬಂದಿದೆ. ಮಿಲಿಟರಿ ಮಾಹಿತಿದಾರಳು ಎಂಬ ಶಂಕೆ ಮೇಲೆ ಅಲ್ಲಿನ ಬಂಡುಕೋರರ ಗುಂಪು ಪಿಡಿಎಫ್ ಯುವತಿಯನ್ನು ಹತ್ಯೆ ಮಾಡಿದೆ. ಅಲ್ಲದೆ, ಇದು ಮಣಿಪುರದಲ್ಲಿ ನಡೆದ ಘಟನೆಯಲ್ಲ.

ಇದನ್ನೂ ಓದಿ : FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....