Homeಫ್ಯಾಕ್ಟ್‌ಚೆಕ್FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

- Advertisement -
- Advertisement -

ಸೇನಾ ಸಿಬ್ಬಂದಿಯಂತೆ ವಸ್ತ್ರ ಧರಿಸಿರುವ ವ್ಯಕ್ತಿಯೊಬ್ಬ ಮತ್ತು ಇತರರು ರಸ್ತೆ ಮಧ್ಯೆ ಯುವತಿಯೊಬ್ಬಳನ್ನು ಹಿಂಸಿಸಿ ಗುಂಡಿಕ್ಕಿ ಕೊಂದಿರುವ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಹರಿದಾಡುತ್ತಿದೆ.

ಕೆಲವರು ಇತ್ತೀಚೆಗೆ ಮಣಿಪುರದಲ್ಲಿ ಈ ಘಟನೆ ನಡೆದಿದೆ ಕುಕಿ ಮಹಿಳೆಯನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ. ಇನ್ನೂ ಕೆಲವರು ಮೈತೇಯಿ ಮಹಿಳೆಯರನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ.

ಇದೇ ವಿಡಿಯೋ ಮುಂದಿಟ್ಟುಕೊಂಡು, ಮಣಿಪುರದಲ್ಲಿ ಹಿಂಸಾಚಾರದ ವೇಳೆ ಈ ಘಟನೆ ನಡೆದಿದೆ ಎಂದು ಅಸ್ಸಾಂನ ಪತ್ರಿಕೆ ‘ಅಮರ್ ಅಸೋಮ್’ ಜೂನ್ 19, 2023 ರಂದು ಮೊದಲ ಪುಟದಲ್ಲಿ ವರದಿ ಪ್ರಕಟಿಸಿತ್ತು.

ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಸ್ಕ್ರೀನ್ ಶಾಟ್ ಬಳಸಿ ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 2022 ರಲ್ಲಿ ಘಟನೆಯ ಕುರಿತು ಬರ್ಮೀಸ್ ಸುದ್ದಿ ಸಂಸ್ಥೆಗಳು ವರದಿ ಮಾಡಿರುವುದು ಕಂಡು ಬಂದಿದೆ.

ಸುದ್ದಿ ವಾಹಿನಿ ಇಲೆವೆನ್ ಮ್ಯಾನ್ಮಾರ್ ಡಿಸೆಂಬರ್ 3, 2022ರಂದು ಈ ಘಟನೆಯ ಕುರಿತು ಸುದ್ದಿ ಪ್ರಕಟಿಸಿತ್ತು. ಸುದ್ದಿ ಪ್ರಕಾರ, “ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಮಾಹಿತಿದಾರೆ ಎಂದು ಒಪ್ಪಿಕೊಳ್ಳಲು ಒತ್ತಾಯಿಸಿ ಯುವತಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ” ಎಂದು ಹೇಳಲಾಗಿದೆ.

ಡಿಸೆಂಬರ್ 6, 2022ರಂದು ಈ ಘಟನೆಯ ಕುರಿತು ವರದಿ ಮಾಡಿದ್ದ ಮ್ಯಾನ್ಮಾರ್‌ನ ವೆಬ್‌ಸೈಟ್‌ myanmar-now.org ಸಾಗಯಿಂಗ್ ಪ್ರದೇಶದ ತಮು ಟೌನ್‌ಶಿಪ್‌ನ ನಿವಾಸಿ 24 ವರ್ಷದ ಆಯೆ ಮರ್ ತುನ್ ಎಂಬಾಕೆಯನ್ನು ಸೇನಾ ಮಾಹಿತಿದಾರಳು ಎಂವ ಶಂಕೆಯ ಮೇಲೆ ಪೀಪಲ್ಸ್ ಡಿಫೆನ್ಸ್ ಫೋರ್ಸ್ (ಪಿಡಿಎಫ್) ಸದಸ್ಯರು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಅನೇಕ ಪಿಡಿಎಫ್ ಸದಸ್ಯರನ್ನು ಬಂಧಿಸಲಾಗಿದೆ. ಪಿಡಿಎಫ್ ಸದಸ್ಯರು ಯುವತಿಯನ್ನು ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡು ಬಂದರೆ ಅವರಿಗೆ ಕಠಿ ಶಿಕ್ಷೆ ವಿಧಿಸುವುದಾಗಿ ಸರ್ಕಾರ ಹೇಳಿದೆ ಎಂದಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ ಯುವತಿಯ ಹತ್ಯೆ ವಿಡಿಯೋ 2022ರಲ್ಲಿ ಮ್ಯಾನ್ಮಾರ್‌ನಲ್ಲಿ ನಡೆದ ಘಟನೆಯದ್ದು ಎಂದು ತಿಳಿದು ಬಂದಿದೆ. ಮಿಲಿಟರಿ ಮಾಹಿತಿದಾರಳು ಎಂಬ ಶಂಕೆ ಮೇಲೆ ಅಲ್ಲಿನ ಬಂಡುಕೋರರ ಗುಂಪು ಪಿಡಿಎಫ್ ಯುವತಿಯನ್ನು ಹತ್ಯೆ ಮಾಡಿದೆ. ಅಲ್ಲದೆ, ಇದು ಮಣಿಪುರದಲ್ಲಿ ನಡೆದ ಘಟನೆಯಲ್ಲ.

ಇದನ್ನೂ ಓದಿ : FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...

ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ...

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದ ಮಹಿಳೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿರುವ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏ.10) ತಿರಸ್ಕರಿಸಿದೆ ಎಂದು ಕಾನೂನು...