Homeಫ್ಯಾಕ್ಟ್‌ಚೆಕ್FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

- Advertisement -
- Advertisement -

ಅಪಾರ್ಟ್‌ಮೆಂಟ್ ಒಂದರ ಮುಂಭಾಗದಲ್ಲಿ ನೂರಾರು ಜಾನುವಾರುಗಳನ್ನು ಹತ್ಯೆ ಮಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ‘ಪಶ್ಚಿಮ ಬಂಗಾಳದಲ್ಲಿ ಬಕ್ರೀದ್ ಪ್ರಯುಕ್ತ ಜಾನುವಾರುಗಳ ಹತ್ಯೆ ಮಾಡಲಾಗಿದೆ’ ಎಂದು ಬರೆದುಕೊಳ್ಳಲಾಗಿದೆ.

“ಮಮತಾ ಬ್ಯಾನರ್ಜಿಗೆ ಯಾರಾದರೂ ಬೀಫ್ ಖಾದ್ಯವನ್ನು ಉಡುಗೊರೆಯಾಗಿ ನೀಡಿದ್ರಾ?
ಪಶ್ಚಿಮ ಬಂಗಾಳವನ್ನು ನೋಡಿ. ಇದು ಪಶ್ಚಿಮ ಬಂಗಾಳದಲ್ಲಿ ಈದ್ ಆಚರಿಸಿರುವುದು” ಎಂದು
Gayatri (@changu311) ಎಂಬ ಎಕ್ಸ್ ಬಳಕೆದಾರರು ವಿಡಿಯೋ ಸಹಿತ ಪೋಸ್ಟ್ ಹಾಕಿದ್ದಾರೆ.

JIX5A (@changu311) ಎಂಬ ಮತ್ತೊಬ್ಬರು ಬಳಕೆದಾರರು ಕೂಡ “ಇದು ಹಾಲಿವುಡ್ ಸಿನಿಮಾದ ಹಾರರ್ ದೃಶ್ಯಗಳು ಎಂದು ತಪ್ಪಾಗಿ ಗ್ರಹಿಸಬಹುದು. ವಾಸ್ತವದಲ್ಲಿ, ಇದು ಪಶ್ಚಿಮ ಬಂಗಾಳದ ಬೀದಿಗಳು ಮುಗ್ಧ ಜೀವಿಗಳ ಹತ್ಯೆಯಿಂದ ರಕ್ತಸಿಕ್ತವಾಗಿರುವುದು. ಮಮತಾ ಜಿ-ಹದನ್ ಅವರ ಮತ ಬ್ಯಾಂಕ್” ಎಂದು ಬರೆದುಕೊಂಡು ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಹಾಕಿ ಸರ್ಚ್ ಮಾಡಿದಾಗ Ashwini Shrivastava (@AshwiniSahaya) ಎಂಬ ಎಕ್ಸ್‌ ಬಳಕೆದಾರರು ಜುಲೈ 1,2023ರಲ್ಲಿ ಇದೇ ವೈರಲ್ ವಿಡಿಯೋ ಪೋಸ್ಟ್ ಮಾಡಿ “ಇದು ಭಾರತದಲ್ಲಿ ಹಿಂದೂಗಳು ಬಣ್ಣದ ಹಬ್ಬ ಹೋಳಿ ಆಚರಿಸುತ್ತಿರುವುದು? ಅಲ್ಲ, ಈ ದೃಶ್ಯ ಬಾಂಗ್ಲಾ ದೇಶದ ಢಾಕಾದಲ್ಲಿರುವ ವಸತಿ ಸಂಕೀರ್ಣದ ಈದುಲ್ ಅದ್ಹಾದ (ಬಕ್ರೀದ್ 2023) ದೃಶ್ಯವಾಗಿದೆ” ಎಂದು ಬರೆದುಕೊಂಡಿದ್ದಾರೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ಅಕ್ಟೋಬರ್ 24,2022 ರಂದು ‘ಅಮರ್ ಚೋಖ್‘ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋ ಲಭ್ಯವಾಗಿದೆ. ಆ ವಿಡಿಯೋದಲ್ಲಿ ಜಾನುವಾರುಗಳನ್ನು ಹತ್ಯೆ ಮಾಡಿರುವ ವಸತಿ ಸಂಕೀರ್ಣವನ್ನು ಕಾಣಬಹುದು.

ವಿಡಿಯೋದಲ್ಲಿ ಬಂಗಾಳಿ ಭಾಷೆಯಲ್ಲಿ ‘ದೃಷ್ಟಿನಂದನ್ ಮಿರ್ಪುರ್ ಸಗುಫ್ತಾ ಸ್ವಪ್ನಾನಗರ ರೆಸಿಡೆನ್ಶಿಯಲ್ ಫ್ಲಾಟ್ ಪ್ರಾಜೆಕ್ಟ್‌ನ ಡ್ರೀಮ್ ಸಿಟಿ ವಸತಿ ಯೋಜನೆ” ಎಂದು ಕ್ಯಾಪ್ಶನ್ ಕೊಡಲಾಗಿದೆ.

ಒಟ್ಟು 3 ನಿಮಿಷ 43 ಸೆಕೆಂಡ್‌ನ ಯೂಟ್ಯೂಬ್‌ ವಿಡಿಯೋದಲ್ಲಿ 1 ನಿಮಿಷ 6 ಸೆಕೆಂಡ್‌ನಿಂದ 3 ನಿಮಿಷದ ನಡುವೆ ನಾವು ವೈರಲ್ ವಿಡಿಯೋದಲ್ಲಿರುವ ವಸತಿ ಸಂಕೀರ್ಣವನ್ನು ನೋಡಬಹುದು. ಅಲ್ಲದೆ, ವೈರಲ್ ವಿಡಿಯೋದಲ್ಲಿ ಕಟ್ಟಡದ ಮುಂದೆ ಕೆಂಪು ಬಣ್ಣದ ಟೈಲ್ಸ್ ಹಾಕಲಾಗಿದೆ. ಅದೇ ಬಣ್ಣದ ಟೈಲ್ಸ್ ಯೂಟ್ಯೂಬ್ ವಿಡಿಯೋದಲ್ಲೂ ಇದೆ.

ಅಷ್ಟೇ ಅಲ್ಲದೆ ಗೂಗಲ್ ಮ್ಯಾಪ್‌ನಲ್ಲೂ ಸಂಪೂರ್ಣ ವಸತಿ ಸಮುಚ್ಚಯದ ಫೋಟೋಗಳನ್ನು ನೋಡಬಹುದು.

ಗೂಗಲ್ ಅರ್ಥ್‌ನಲ್ಲೂ ಕಟ್ಟಡದ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಅದು ವೈರಲ್ ವಿಡಿಯೋದಲ್ಲಿರುವ ಕಟ್ಟಡದ ಮುಂಭಾಗದ ಮೈದಾನವನ್ನು ಬಾಂಗ್ಲಾದೇಶದ ರಾಜಧಾನಿ ಢಾಕಾದ ಸ್ವಪ್ನ ನಗರ ರೆಸಿಡೆನ್ಶಿಯಲ್ ಏರಿಯಾದ ಆಟದ ಮೈದಾನ ಎಂದು ತೋರಿಸಿದೆ.

ನಾವು ವಿವಿಧ ಆಯಾಮಗಳಲ್ಲಿ ನಡೆಸಿದ ಪರಿಶೀಲನೆಯಲ್ಲಿ, ಜಾನುವಾರುಗಳನ್ನು ಹತ್ಯೆ ಮಾಡಿರುವ ವೈರಲ್ ವಿಡಿಯೋದಲ್ಲಿರುವ ಕಾಣಿಸಿಕೊಂಡಿರುವ ಕಟ್ಟಡ ಬಾಂಗ್ಲಾದೇಶದ್ದು ಎಂದು ತಿಳಿದು ಬಂದಿದೆ. ಹಾಗಾಗಿ, ಜಾನುವಾರುಗಳ ಹತ್ಯೆಯ ವಿಡಿಯೋ ಕೂಡ ಪಶ್ಚಿಮ ಬಂಗಾಳದಲ್ಲ ಬಾಂಗ್ಲಾದೇಶದ್ದು ಎಂದು ಖಚಿತಪಡಿಸಬಹುದು.

ಇದನ್ನೂ ಓದಿ : FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...