Homeಫ್ಯಾಕ್ಟ್‌ಚೆಕ್FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

- Advertisement -
- Advertisement -

ಅಪಾರ್ಟ್‌ಮೆಂಟ್ ಒಂದರ ಮುಂಭಾಗದಲ್ಲಿ ನೂರಾರು ಜಾನುವಾರುಗಳನ್ನು ಹತ್ಯೆ ಮಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ‘ಪಶ್ಚಿಮ ಬಂಗಾಳದಲ್ಲಿ ಬಕ್ರೀದ್ ಪ್ರಯುಕ್ತ ಜಾನುವಾರುಗಳ ಹತ್ಯೆ ಮಾಡಲಾಗಿದೆ’ ಎಂದು ಬರೆದುಕೊಳ್ಳಲಾಗಿದೆ.

“ಮಮತಾ ಬ್ಯಾನರ್ಜಿಗೆ ಯಾರಾದರೂ ಬೀಫ್ ಖಾದ್ಯವನ್ನು ಉಡುಗೊರೆಯಾಗಿ ನೀಡಿದ್ರಾ?
ಪಶ್ಚಿಮ ಬಂಗಾಳವನ್ನು ನೋಡಿ. ಇದು ಪಶ್ಚಿಮ ಬಂಗಾಳದಲ್ಲಿ ಈದ್ ಆಚರಿಸಿರುವುದು” ಎಂದು
Gayatri (@changu311) ಎಂಬ ಎಕ್ಸ್ ಬಳಕೆದಾರರು ವಿಡಿಯೋ ಸಹಿತ ಪೋಸ್ಟ್ ಹಾಕಿದ್ದಾರೆ.

JIX5A (@changu311) ಎಂಬ ಮತ್ತೊಬ್ಬರು ಬಳಕೆದಾರರು ಕೂಡ “ಇದು ಹಾಲಿವುಡ್ ಸಿನಿಮಾದ ಹಾರರ್ ದೃಶ್ಯಗಳು ಎಂದು ತಪ್ಪಾಗಿ ಗ್ರಹಿಸಬಹುದು. ವಾಸ್ತವದಲ್ಲಿ, ಇದು ಪಶ್ಚಿಮ ಬಂಗಾಳದ ಬೀದಿಗಳು ಮುಗ್ಧ ಜೀವಿಗಳ ಹತ್ಯೆಯಿಂದ ರಕ್ತಸಿಕ್ತವಾಗಿರುವುದು. ಮಮತಾ ಜಿ-ಹದನ್ ಅವರ ಮತ ಬ್ಯಾಂಕ್” ಎಂದು ಬರೆದುಕೊಂಡು ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಹಾಕಿ ಸರ್ಚ್ ಮಾಡಿದಾಗ Ashwini Shrivastava (@AshwiniSahaya) ಎಂಬ ಎಕ್ಸ್‌ ಬಳಕೆದಾರರು ಜುಲೈ 1,2023ರಲ್ಲಿ ಇದೇ ವೈರಲ್ ವಿಡಿಯೋ ಪೋಸ್ಟ್ ಮಾಡಿ “ಇದು ಭಾರತದಲ್ಲಿ ಹಿಂದೂಗಳು ಬಣ್ಣದ ಹಬ್ಬ ಹೋಳಿ ಆಚರಿಸುತ್ತಿರುವುದು? ಅಲ್ಲ, ಈ ದೃಶ್ಯ ಬಾಂಗ್ಲಾ ದೇಶದ ಢಾಕಾದಲ್ಲಿರುವ ವಸತಿ ಸಂಕೀರ್ಣದ ಈದುಲ್ ಅದ್ಹಾದ (ಬಕ್ರೀದ್ 2023) ದೃಶ್ಯವಾಗಿದೆ” ಎಂದು ಬರೆದುಕೊಂಡಿದ್ದಾರೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ಅಕ್ಟೋಬರ್ 24,2022 ರಂದು ‘ಅಮರ್ ಚೋಖ್‘ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋ ಲಭ್ಯವಾಗಿದೆ. ಆ ವಿಡಿಯೋದಲ್ಲಿ ಜಾನುವಾರುಗಳನ್ನು ಹತ್ಯೆ ಮಾಡಿರುವ ವಸತಿ ಸಂಕೀರ್ಣವನ್ನು ಕಾಣಬಹುದು.

ವಿಡಿಯೋದಲ್ಲಿ ಬಂಗಾಳಿ ಭಾಷೆಯಲ್ಲಿ ‘ದೃಷ್ಟಿನಂದನ್ ಮಿರ್ಪುರ್ ಸಗುಫ್ತಾ ಸ್ವಪ್ನಾನಗರ ರೆಸಿಡೆನ್ಶಿಯಲ್ ಫ್ಲಾಟ್ ಪ್ರಾಜೆಕ್ಟ್‌ನ ಡ್ರೀಮ್ ಸಿಟಿ ವಸತಿ ಯೋಜನೆ” ಎಂದು ಕ್ಯಾಪ್ಶನ್ ಕೊಡಲಾಗಿದೆ.

ಒಟ್ಟು 3 ನಿಮಿಷ 43 ಸೆಕೆಂಡ್‌ನ ಯೂಟ್ಯೂಬ್‌ ವಿಡಿಯೋದಲ್ಲಿ 1 ನಿಮಿಷ 6 ಸೆಕೆಂಡ್‌ನಿಂದ 3 ನಿಮಿಷದ ನಡುವೆ ನಾವು ವೈರಲ್ ವಿಡಿಯೋದಲ್ಲಿರುವ ವಸತಿ ಸಂಕೀರ್ಣವನ್ನು ನೋಡಬಹುದು. ಅಲ್ಲದೆ, ವೈರಲ್ ವಿಡಿಯೋದಲ್ಲಿ ಕಟ್ಟಡದ ಮುಂದೆ ಕೆಂಪು ಬಣ್ಣದ ಟೈಲ್ಸ್ ಹಾಕಲಾಗಿದೆ. ಅದೇ ಬಣ್ಣದ ಟೈಲ್ಸ್ ಯೂಟ್ಯೂಬ್ ವಿಡಿಯೋದಲ್ಲೂ ಇದೆ.

ಅಷ್ಟೇ ಅಲ್ಲದೆ ಗೂಗಲ್ ಮ್ಯಾಪ್‌ನಲ್ಲೂ ಸಂಪೂರ್ಣ ವಸತಿ ಸಮುಚ್ಚಯದ ಫೋಟೋಗಳನ್ನು ನೋಡಬಹುದು.

ಗೂಗಲ್ ಅರ್ಥ್‌ನಲ್ಲೂ ಕಟ್ಟಡದ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಅದು ವೈರಲ್ ವಿಡಿಯೋದಲ್ಲಿರುವ ಕಟ್ಟಡದ ಮುಂಭಾಗದ ಮೈದಾನವನ್ನು ಬಾಂಗ್ಲಾದೇಶದ ರಾಜಧಾನಿ ಢಾಕಾದ ಸ್ವಪ್ನ ನಗರ ರೆಸಿಡೆನ್ಶಿಯಲ್ ಏರಿಯಾದ ಆಟದ ಮೈದಾನ ಎಂದು ತೋರಿಸಿದೆ.

ನಾವು ವಿವಿಧ ಆಯಾಮಗಳಲ್ಲಿ ನಡೆಸಿದ ಪರಿಶೀಲನೆಯಲ್ಲಿ, ಜಾನುವಾರುಗಳನ್ನು ಹತ್ಯೆ ಮಾಡಿರುವ ವೈರಲ್ ವಿಡಿಯೋದಲ್ಲಿರುವ ಕಾಣಿಸಿಕೊಂಡಿರುವ ಕಟ್ಟಡ ಬಾಂಗ್ಲಾದೇಶದ್ದು ಎಂದು ತಿಳಿದು ಬಂದಿದೆ. ಹಾಗಾಗಿ, ಜಾನುವಾರುಗಳ ಹತ್ಯೆಯ ವಿಡಿಯೋ ಕೂಡ ಪಶ್ಚಿಮ ಬಂಗಾಳದಲ್ಲ ಬಾಂಗ್ಲಾದೇಶದ್ದು ಎಂದು ಖಚಿತಪಡಿಸಬಹುದು.

ಇದನ್ನೂ ಓದಿ : FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...